Sign In

By signing in or creating an account, you agree with Associated Broadcasting Company's Terms & Conditions and Privacy Policy.

Ben Stokes: 2 ಬಾರಿ ನಿವೃತ್ತಿ ಘೋಷಿಸಿ 3ನೇ ಬಾರಿ ಕಣಕ್ಕಿಳಿಯುವ ಸೂಚನೆ ನೀಡಿದ ಬೆನ್ ಸ್ಟೋಕ್ಸ್..!

Ben Stokes: ಇಂಗ್ಲೆಂಡ್ ಪರ 114 ಏಕದಿನ ಪಂದ್ಯಗಳನ್ನಾಡಿರುವ ಬೆನ್ ಸ್ಟೋಕ್ಸ್ ಇದುವರೆಗೆ 3463 ರನ್ ​ಗಳಿಸಿದ್ದಾರೆ. ಈ ವೇಳೆ ಅವರ ಬ್ಯಾಟ್​ನಿಂದ 5 ಶತಕ ಹಾಗೂ 24 ಅರ್ಧಶತಕಗಳು ಮೂಡಿಬಂದಿವೆ. ಹಾಗೆಯೇ 88 ಇನಿಂಗ್ಸ್​ನಲ್ಲಿ ಬೌಲಿಂಗ್ ಮಾಡಿರುವ ಅವರು ಒಟ್ಟು 74 ವಿಕೆಟ್​ಗಳನ್ನು ಕಬಳಿಸಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್

Updated on: Sep 25, 2024 | 11:04 AM

 ಇಂಗ್ಲೆಂಡ್ ತಂಡದ ಸ್ಟಾರ್ ಆಲ್​ರೌಂಡರ್ ಬೆನ್ ಸ್ಟೋಕ್ಸ್ (Ben Stokes) ಮತ್ತೆ​ ಏಕದಿನ ಕ್ರಿಕೆಟ್​​ ಮರಳುವ ಸೂಚನೆ ನೀಡಿದ್ದಾರೆ. ಅದು ಸಹ ಇಂಗ್ಲೆಂಡ್ ತಂಡದ ಕೋಚ್ ಬ್ರೆಂಡನ್ ಮೆಕಲಂ ಸಾರಥ್ಯದಲ್ಲಿ ಎಂಬುದು ವಿಶೇಷ. 2025ರ ಚಾಂಪಿಯನ್ಸ್​ ಟ್ರೋಫಿಗೂ ಮುನ್ನ ಮೆಕಲಂ ಇಂಗ್ಲೆಂಡ್ ಏಕದಿನ ತಂಡದ ಹೆಡ್ ಕೋಚ್ ಹುದ್ದೆಯನ್ನು ಅಲಂಕರಿಸಲಿದ್ದಾರೆ.

ಇಂಗ್ಲೆಂಡ್ ತಂಡದ ಸ್ಟಾರ್ ಆಲ್​ರೌಂಡರ್ ಬೆನ್ ಸ್ಟೋಕ್ಸ್ (Ben Stokes) ಮತ್ತೆ​ ಏಕದಿನ ಕ್ರಿಕೆಟ್​​ ಮರಳುವ ಸೂಚನೆ ನೀಡಿದ್ದಾರೆ. ಅದು ಸಹ ಇಂಗ್ಲೆಂಡ್ ತಂಡದ ಕೋಚ್ ಬ್ರೆಂಡನ್ ಮೆಕಲಂ ಸಾರಥ್ಯದಲ್ಲಿ ಎಂಬುದು ವಿಶೇಷ. 2025ರ ಚಾಂಪಿಯನ್ಸ್​ ಟ್ರೋಫಿಗೂ ಮುನ್ನ ಮೆಕಲಂ ಇಂಗ್ಲೆಂಡ್ ಏಕದಿನ ತಂಡದ ಹೆಡ್ ಕೋಚ್ ಹುದ್ದೆಯನ್ನು ಅಲಂಕರಿಸಲಿದ್ದಾರೆ.

1 / 5
ಅತ್ತ ಇಂಗ್ಲೆಂಡ್ ಟೆಸ್ಟ್ ತಂಡದ ಕೋಚ್ ಬ್ರೆಂಡನ್ ಮೆಕಲಂ ಏಕದಿನ ಮತ್ತು ಟಿ20 ತಂಡಗಳ ತರಬೇತುದಾರನಾಗಿ ಆಯ್ಕೆಯಾಗುತ್ತಿದ್ದಂತೆ, ಇತ್ತ ಬೆನ್ ಸ್ಟೋಕ್ಸ್ ನಿವೃತ್ತಿ ಹಿಂಪಡೆದು ಮತ್ತೆ ಏಕದಿನ ಕ್ರಿಕೆಟ್​ನಲ್ಲಿ ತೊಡಗಿಸಿಕೊಳ್ಳಲು ಆಸಕ್ತಿ ತೋರಿದ್ದಾರೆ.

ಅತ್ತ ಇಂಗ್ಲೆಂಡ್ ಟೆಸ್ಟ್ ತಂಡದ ಕೋಚ್ ಬ್ರೆಂಡನ್ ಮೆಕಲಂ ಏಕದಿನ ಮತ್ತು ಟಿ20 ತಂಡಗಳ ತರಬೇತುದಾರನಾಗಿ ಆಯ್ಕೆಯಾಗುತ್ತಿದ್ದಂತೆ, ಇತ್ತ ಬೆನ್ ಸ್ಟೋಕ್ಸ್ ನಿವೃತ್ತಿ ಹಿಂಪಡೆದು ಮತ್ತೆ ಏಕದಿನ ಕ್ರಿಕೆಟ್​ನಲ್ಲಿ ತೊಡಗಿಸಿಕೊಳ್ಳಲು ಆಸಕ್ತಿ ತೋರಿದ್ದಾರೆ.

2 / 5
ವಿಶೇಷ ಎಂದರೆ ಬೆನ್ ಸ್ಟೋಕ್ಸ್ 2022 ರಲ್ಲಿ ಒನ್​ಡೇ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದರು. ಇದಾದ ಬಳಿಕ 2023ರ ಏಕದಿನ ವಿಶ್ವಕಪ್​ಗಾಗಿ ತಮ್ಮ ನಿರ್ಧಾರವನ್ನು ಬದಲಿಸಿ ಮತ್ತೆ ಕಣಕ್ಕಿಳಿದಿದ್ದರು. ಏಕದಿನ ವಿಶ್ವಕಪ್ ಬೆನ್ನಲ್ಲೇ ನಿವೃತ್ತರಾಗಿದ್ದ ಬೆನ್ ಸ್ಟೋಕ್ಸ್ ಇದೀಗ ಮತ್ತೆ ಒನ್​ ಡೇ ಕ್ರಿಕೆಟ್​ನಲ್ಲಿ ಕಣಕ್ಕಿಳಿಯುವ ಸೂಚನೆ ನೀಡಿದ್ದಾರೆ.

ವಿಶೇಷ ಎಂದರೆ ಬೆನ್ ಸ್ಟೋಕ್ಸ್ 2022 ರಲ್ಲಿ ಒನ್​ಡೇ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದರು. ಇದಾದ ಬಳಿಕ 2023ರ ಏಕದಿನ ವಿಶ್ವಕಪ್​ಗಾಗಿ ತಮ್ಮ ನಿರ್ಧಾರವನ್ನು ಬದಲಿಸಿ ಮತ್ತೆ ಕಣಕ್ಕಿಳಿದಿದ್ದರು. ಏಕದಿನ ವಿಶ್ವಕಪ್ ಬೆನ್ನಲ್ಲೇ ನಿವೃತ್ತರಾಗಿದ್ದ ಬೆನ್ ಸ್ಟೋಕ್ಸ್ ಇದೀಗ ಮತ್ತೆ ಒನ್​ ಡೇ ಕ್ರಿಕೆಟ್​ನಲ್ಲಿ ಕಣಕ್ಕಿಳಿಯುವ ಸೂಚನೆ ನೀಡಿದ್ದಾರೆ.

3 / 5
ಈ ಬಗ್ಗೆ ಮಾತನಾಡಿರುವ ಬೆನ್ ಸ್ಟೋಕ್ಸ್, ವೈಟ್​ ಬಾಲ್​ ಕ್ರಿಕೆಟ್​ನಲ್ಲಿ ಮುಂದುವರೆಯಲು ನನಗೆ ಅವಕಾಶ ಸಿಕ್ಕರೆ ಖಂಡಿತವಾಗಿಯೂ ನಾನು ಮತ್ತೆ ಕಣಕ್ಕಿಳಿಯುತ್ತೇನೆ. ಕೋಚ್ ಬ್ರೆಂಡನ್ ಮೆಕಲಂ ಕರೆ ಮಾಡಿ ಆಡುವಂತೆ ಕೇಳಿಕೊಂಡರೆ ನಾನು ನೋ ಅನ್ನುವುದಿಲ್ಲ. ಅಲ್ಲದೆ ಅವರ ಗರಡಿಯಲ್ಲಿ ಇಂಗ್ಲೆಂಡ್ ಪರ ಮತ್ತೆ ಏಕದಿನ ಕ್ರಿಕೆಟ್ ಆಡಲು ಎಸ್ ಅನ್ನುತ್ತೇನೆ ಎಂದು ತಿಳಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ಬೆನ್ ಸ್ಟೋಕ್ಸ್, ವೈಟ್​ ಬಾಲ್​ ಕ್ರಿಕೆಟ್​ನಲ್ಲಿ ಮುಂದುವರೆಯಲು ನನಗೆ ಅವಕಾಶ ಸಿಕ್ಕರೆ ಖಂಡಿತವಾಗಿಯೂ ನಾನು ಮತ್ತೆ ಕಣಕ್ಕಿಳಿಯುತ್ತೇನೆ. ಕೋಚ್ ಬ್ರೆಂಡನ್ ಮೆಕಲಂ ಕರೆ ಮಾಡಿ ಆಡುವಂತೆ ಕೇಳಿಕೊಂಡರೆ ನಾನು ನೋ ಅನ್ನುವುದಿಲ್ಲ. ಅಲ್ಲದೆ ಅವರ ಗರಡಿಯಲ್ಲಿ ಇಂಗ್ಲೆಂಡ್ ಪರ ಮತ್ತೆ ಏಕದಿನ ಕ್ರಿಕೆಟ್ ಆಡಲು ಎಸ್ ಅನ್ನುತ್ತೇನೆ ಎಂದು ತಿಳಿಸಿದ್ದಾರೆ.

4 / 5
ಈ ಮೂಲಕ ನಿವೃತ್ತಿಯಿಂದ ಹೊರಬರಲು ಮನಸ್ಸು ಮಾಡಿರುವುದನ್ನು ಬೆನ್ ಸ್ಟೋಕ್ಸ್ ಬಹಿರಂಗಪಡಿಸಿದ್ದಾರೆ. ಇದೀಗ ಸ್ಟೋಕ್ಸ್ ಅವರ ಏಕದಿನ ಕ್ರಿಕೆಟ್ ಭವಿಷ್ಯ ನೂತನ ಕೋಚ್ ಮೆಕಲಂ ಕೈಯಲ್ಲಿದೆ. ಈಗಾಗಲೇ ಟೆಸ್ಟ್ ಕ್ರಿಕೆಟ್​ನಲ್ಲಿ ಬೆನ್ ಸ್ಟೋಕ್ಸ್ ಜೊತೆಗೂಡಿ ಅಭೂತಪೂರ್ವ ಯಶಸ್ಸು ಸಾಧಿಸಿರುವ ಬ್ರೆಂಡನ್ ಮೆಕಲಂ, ಸ್ಟಾರ್ ಆಲ್​ರೌಂಡರ್​ಗೆ ಮತ್ತೆ ಬುಲಾವ್ ನೀಡುವ ಸಾಧ್ಯತೆಯಿದೆ. ಅದರಂತೆ ಮುಂಬರುವ ಚಾಂಪಿಯನ್ಸ್ ಟ್ರೋಫಿಯಲ್ಲಿ ಬೆನ್ ಸ್ಟೋಕ್ಸ್  ಕಣಕ್ಕಿಳಿದರೂ ಅಚ್ಚರಿಪಡಬೇಕಿಲ್ಲ.

ಈ ಮೂಲಕ ನಿವೃತ್ತಿಯಿಂದ ಹೊರಬರಲು ಮನಸ್ಸು ಮಾಡಿರುವುದನ್ನು ಬೆನ್ ಸ್ಟೋಕ್ಸ್ ಬಹಿರಂಗಪಡಿಸಿದ್ದಾರೆ. ಇದೀಗ ಸ್ಟೋಕ್ಸ್ ಅವರ ಏಕದಿನ ಕ್ರಿಕೆಟ್ ಭವಿಷ್ಯ ನೂತನ ಕೋಚ್ ಮೆಕಲಂ ಕೈಯಲ್ಲಿದೆ. ಈಗಾಗಲೇ ಟೆಸ್ಟ್ ಕ್ರಿಕೆಟ್​ನಲ್ಲಿ ಬೆನ್ ಸ್ಟೋಕ್ಸ್ ಜೊತೆಗೂಡಿ ಅಭೂತಪೂರ್ವ ಯಶಸ್ಸು ಸಾಧಿಸಿರುವ ಬ್ರೆಂಡನ್ ಮೆಕಲಂ, ಸ್ಟಾರ್ ಆಲ್​ರೌಂಡರ್​ಗೆ ಮತ್ತೆ ಬುಲಾವ್ ನೀಡುವ ಸಾಧ್ಯತೆಯಿದೆ. ಅದರಂತೆ ಮುಂಬರುವ ಚಾಂಪಿಯನ್ಸ್ ಟ್ರೋಫಿಯಲ್ಲಿ ಬೆನ್ ಸ್ಟೋಕ್ಸ್ ಕಣಕ್ಕಿಳಿದರೂ ಅಚ್ಚರಿಪಡಬೇಕಿಲ್ಲ.

5 / 5
Follow us
ಹೆಂಡತಿಯ ಪೋಸ್ಟಿಂಗ್​ಗಾಗಿ ಪಟ್ಟ ಪಡಿಪಾಟಲು ಹೇಳಿಕೊಂಡ: ಶರಣು ಸಲಗರ
ಹೆಂಡತಿಯ ಪೋಸ್ಟಿಂಗ್​ಗಾಗಿ ಪಟ್ಟ ಪಡಿಪಾಟಲು ಹೇಳಿಕೊಂಡ: ಶರಣು ಸಲಗರ
ಶ್ರೇಯಸ್ ಡ್ಯಾನ್ಸ್, ರಾಹುಲ್ ಗಿಫ್ಟ್; ಭಾರತದ ಸಂಭ್ರಮಾಚರಣೆಯ ಝಲಕ್ ಇಲ್ಲಿದೆ
ಶ್ರೇಯಸ್ ಡ್ಯಾನ್ಸ್, ರಾಹುಲ್ ಗಿಫ್ಟ್; ಭಾರತದ ಸಂಭ್ರಮಾಚರಣೆಯ ಝಲಕ್ ಇಲ್ಲಿದೆ
ಸರ್ಕಾರದ ಗ್ರೇಟರ್ ಬೆಂಗಳೂರು ತಯಾರಿ ಗೇಲಿ ಮಾಡಿದ ಮುನಿರತ್ನ
ಸರ್ಕಾರದ ಗ್ರೇಟರ್ ಬೆಂಗಳೂರು ತಯಾರಿ ಗೇಲಿ ಮಾಡಿದ ಮುನಿರತ್ನ
ಬೆಂಗಳೂರನ್ನು ವಿಭಜನೆ ಮಾಡಿದ್ದಕ್ಕೆ ಕಾರಣ ವಿವರಿಸಿದ ಶಿವಕುಮಾರ್
ಬೆಂಗಳೂರನ್ನು ವಿಭಜನೆ ಮಾಡಿದ್ದಕ್ಕೆ ಕಾರಣ ವಿವರಿಸಿದ ಶಿವಕುಮಾರ್
ಕಾಪು ಹೊಸ ಮಾರಿಯಮ್ಮ ಸನ್ನಿಧಾನಕ್ಕೆ ನಟ ರಕ್ಷಿತ್ ಶೆಟ್ಟಿ ಭೇಟಿ
ಕಾಪು ಹೊಸ ಮಾರಿಯಮ್ಮ ಸನ್ನಿಧಾನಕ್ಕೆ ನಟ ರಕ್ಷಿತ್ ಶೆಟ್ಟಿ ಭೇಟಿ
ಜಲ್ಲಿಕಟ್ಟು ಸ್ಪರ್ಧೆ ವೇಳೆ ಮೇಲೆರಗಿದ ಗೂಳಿ: 30ಕ್ಕೂ ಹೆಚ್ಚು ಜನಕ್ಕೆ ಗಾಯ
ಜಲ್ಲಿಕಟ್ಟು ಸ್ಪರ್ಧೆ ವೇಳೆ ಮೇಲೆರಗಿದ ಗೂಳಿ: 30ಕ್ಕೂ ಹೆಚ್ಚು ಜನಕ್ಕೆ ಗಾಯ
ಶಾಮೀಲಾಗಿರುವ ಸಚಿವರ ಹೆಸರುಗಳು ಸಿಎಂಗೆ ಮೊದಲು ಗೊತ್ತಾಗುತ್ತದೆ: ವಿಜಯೇಂದ್ರ
ಶಾಮೀಲಾಗಿರುವ ಸಚಿವರ ಹೆಸರುಗಳು ಸಿಎಂಗೆ ಮೊದಲು ಗೊತ್ತಾಗುತ್ತದೆ: ವಿಜಯೇಂದ್ರ
ಕಾಂಗ್ರೆಸ್ ಅಧಿಕಾರದಲ್ಲಿ ಅಪರಾಧಗಳ ಸಂಖ್ಯೆ ಅಪರಿಮಿತವಾಗಿದೆ: ರವಿ
ಕಾಂಗ್ರೆಸ್ ಅಧಿಕಾರದಲ್ಲಿ ಅಪರಾಧಗಳ ಸಂಖ್ಯೆ ಅಪರಿಮಿತವಾಗಿದೆ: ರವಿ
ಸದನದಲ್ಲಿ ಬಿಬಿಎಂಪಿಯ ಬೆಳವಣಿಗೆ ವಿವರಿಸಿದ ಶಿವಕುಮಾರ್
ಸದನದಲ್ಲಿ ಬಿಬಿಎಂಪಿಯ ಬೆಳವಣಿಗೆ ವಿವರಿಸಿದ ಶಿವಕುಮಾರ್
ಮಧ್ಯವರ್ತಿಗಳ ಮಾತುಕೇಳಿ ದಾರಿ ತಪ್ಪಿದ್ದೆವು ಎಂದ ದಂಪತಿ
ಮಧ್ಯವರ್ತಿಗಳ ಮಾತುಕೇಳಿ ದಾರಿ ತಪ್ಪಿದ್ದೆವು ಎಂದ ದಂಪತಿ