IND vs NED, ICC World Cup: ಭಾರತ-ನೆದರ್ಲೆಂಡ್ಸ್ ಪಂದ್ಯಕ್ಕೆ ಮಳೆ ಅಡ್ಡಿ?: ಇಂದು ಬೆಂಗಳೂರು ಹವಾಮಾನ ಹೇಗಿರಲಿದೆ?

Updated on: Nov 12, 2023 | 7:32 AM

India vs Netherlands, Bengaluru Weather Reports: ಇಂದಿನ ಭಾರತ-ನೆದರ್ಲೆಂಡ್ಸ್ ಪಂದ್ಯಕ್ಕೆ ಮಳೆ ಅಡ್ಡಿ ಪಡಿಸುತ್ತಾ ಎಂಬುದನ್ನು ನೋಡುವುದಾದರೆ, ಬೆಂಗಳೂರಿನಲ್ಲಿ ಇಂದು ಕನಿಷ್ಠ 16 ಡಿಗ್ರಿ ಸೆಲ್ಸಿಯಸ್ ತಾಪಮಾನ ನಿರೀಕ್ಷಿಸಲಾಗಿದೆ. ಹವಾಮಾನ ವರದಿಯ ಪ್ರಕಾರ ಯಾವುದೇ ಮಳೆಯ ಸೂಚನೆ ಇಲ್ಲ. ಮೋಡ ಕವಿದ ವಾತಾವರಣ ಇರಬಹುದು.

1 / 6
ಐಸಿಸಿ ಏಕದಿನ ವಿಶ್ವಕಪ್ 2023 ರಲ್ಲಿಂದು ಲೀಗ್ ಸುತ್ತಿನ ಕೊನೆಯ ಪಂದ್ಯ ನಡೆಯಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ರೋಹಿತ್ ಶರ್ಮಾ ನಾಯಕತ್ವದ ಭಾರತ ಹಾಗೂ ಸ್ಕಾಟ್ ಎಡ್ವರ್ಡ್ಸ್ ನೇತೃತ್ವದ ನೆದರ್ಲೆಂಡ್ಸ್ ತಂಡಗಳು ಮುಖಾಮುಖಿ ಆಗಲಿದೆ. ಪಾಯಿಂಟ್ ಟೇಬಲ್​ನಲ್ಲಿ ಅಗ್ರಸ್ಥಾನ ಪಡೆದು ಈಗಾಗಲೇ ಸೆಮಿ ಫೈನಲ್​ಗೇರಿರುವ ಟೀಮ್ ಇಂಡಿಯಾಕ್ಕೆ ಇದೊಂದು ಔಪಚಾರಿಕ ಪಂದ್ಯ.

ಐಸಿಸಿ ಏಕದಿನ ವಿಶ್ವಕಪ್ 2023 ರಲ್ಲಿಂದು ಲೀಗ್ ಸುತ್ತಿನ ಕೊನೆಯ ಪಂದ್ಯ ನಡೆಯಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ರೋಹಿತ್ ಶರ್ಮಾ ನಾಯಕತ್ವದ ಭಾರತ ಹಾಗೂ ಸ್ಕಾಟ್ ಎಡ್ವರ್ಡ್ಸ್ ನೇತೃತ್ವದ ನೆದರ್ಲೆಂಡ್ಸ್ ತಂಡಗಳು ಮುಖಾಮುಖಿ ಆಗಲಿದೆ. ಪಾಯಿಂಟ್ ಟೇಬಲ್​ನಲ್ಲಿ ಅಗ್ರಸ್ಥಾನ ಪಡೆದು ಈಗಾಗಲೇ ಸೆಮಿ ಫೈನಲ್​ಗೇರಿರುವ ಟೀಮ್ ಇಂಡಿಯಾಕ್ಕೆ ಇದೊಂದು ಔಪಚಾರಿಕ ಪಂದ್ಯ.

2 / 6
ಇಂದಿನ ಭಾರತ-ನೆದರ್ಲೆಂಡ್ಸ್ ಪಂದ್ಯಕ್ಕೆ ಮಳೆ ಅಡ್ಡಿ ಪಡಿಸುತ್ತಾ ಎಂಬುದನ್ನು ನೋಡುವುದಾದರೆ, ಬೆಂಗಳೂರಿನಲ್ಲಿ ಇಂದು ಕನಿಷ್ಠ 16 ಡಿಗ್ರಿ ಸೆಲ್ಸಿಯಸ್ ತಾಪಮಾನ ನಿರೀಕ್ಷಿಸಲಾಗಿದೆ. ಹವಾಮಾನ ವರದಿಯ ಪ್ರಕಾರ ಯಾವುದೇ ಮಳೆಯ ಸೂಚನೆ ಇಲ್ಲ. ಮೋಡ ಕವಿದ ವಾತಾವರಣ ಇರಬಹುದು.

ಇಂದಿನ ಭಾರತ-ನೆದರ್ಲೆಂಡ್ಸ್ ಪಂದ್ಯಕ್ಕೆ ಮಳೆ ಅಡ್ಡಿ ಪಡಿಸುತ್ತಾ ಎಂಬುದನ್ನು ನೋಡುವುದಾದರೆ, ಬೆಂಗಳೂರಿನಲ್ಲಿ ಇಂದು ಕನಿಷ್ಠ 16 ಡಿಗ್ರಿ ಸೆಲ್ಸಿಯಸ್ ತಾಪಮಾನ ನಿರೀಕ್ಷಿಸಲಾಗಿದೆ. ಹವಾಮಾನ ವರದಿಯ ಪ್ರಕಾರ ಯಾವುದೇ ಮಳೆಯ ಸೂಚನೆ ಇಲ್ಲ. ಮೋಡ ಕವಿದ ವಾತಾವರಣ ಇರಬಹುದು.

3 / 6
ಇಂದು ಬೆಂಗಳೂರಿನಲ್ಲಿ ಶೇ. 71 ರಷ್ಟು ಮೋಡ ಕವಿದ ವಾತಾವರಣ ಇರಲಿದೆ. ಶೇ. 3 ರಷ್ಟು ಮಳೆಯ ಸಂಭವ ಇದೆಯಷ್ಟೆ. ಸಂಜೆಯ ವೇಳೆಗೆ ತಾಪಮಾನವು 12 ಡಿಗ್ರಿ ಸೆಲ್ಸಿಯಸ್​ಗೆ ಬರಲಿದೆ. ಆರ್ದ್ರತೆಯು ಶೇ. 66 ರಷ್ಟು ಇರಬಹುದು ಎನ್ನಲಾಗಿದೆ. ಒಟ್ಟಾರೆ ಭಾರತ-ನೆದರ್ಲೆಂಡ್ಸ್ ಪಂದ್ಯಕ್ಕೆ ಮಳೆ ಅಡ್ಡಿ ಪಡಿಸುವ ಸಾಧ್ಯತೆ ಇಲ್ಲ.

ಇಂದು ಬೆಂಗಳೂರಿನಲ್ಲಿ ಶೇ. 71 ರಷ್ಟು ಮೋಡ ಕವಿದ ವಾತಾವರಣ ಇರಲಿದೆ. ಶೇ. 3 ರಷ್ಟು ಮಳೆಯ ಸಂಭವ ಇದೆಯಷ್ಟೆ. ಸಂಜೆಯ ವೇಳೆಗೆ ತಾಪಮಾನವು 12 ಡಿಗ್ರಿ ಸೆಲ್ಸಿಯಸ್​ಗೆ ಬರಲಿದೆ. ಆರ್ದ್ರತೆಯು ಶೇ. 66 ರಷ್ಟು ಇರಬಹುದು ಎನ್ನಲಾಗಿದೆ. ಒಟ್ಟಾರೆ ಭಾರತ-ನೆದರ್ಲೆಂಡ್ಸ್ ಪಂದ್ಯಕ್ಕೆ ಮಳೆ ಅಡ್ಡಿ ಪಡಿಸುವ ಸಾಧ್ಯತೆ ಇಲ್ಲ.

4 / 6
ಟೂರ್ನಿಯಿಂದ ಹೊರಬಿದ್ದರೂ ಇಂದಿನ ಪಂದ್ಯ ನೆದರ್ಲೆಂಡ್ಸ್ ತಂಡಕ್ಕೆ ಮುಖ್ಯವಾಗಿದೆ. ಚಾಂಪಿಯನ್ಸ್ ಟ್ರೋಫಿ 2025 ರಲ್ಲಿ ಸ್ಥಾನ ಪಡೆಯುವ ಡಚ್ಚರಿಗಿದೆ. ಮೂರನೇ ಜಯ ಸಾಧಿಸುವ ಮೂಲಕ ಮತ್ತು ವಿಶ್ವಕಪ್ ಪಾಯಿಂಟ್ ಪಟ್ಟಿಯಲ್ಲಿ ಅಗ್ರ 8 ರೊಳಗೆ ಸ್ಥಾನವನ್ನು ಪಡೆದುಕೊಳ್ಳುವ ಮೂಲಕ, ಚಾಂಪಿಯನ್ಸ್ ಟ್ರೋಫಿ 2025ಕ್ಕೆ ಪ್ರವೇಶ ಪಡೆಯಬಹುದು.

ಟೂರ್ನಿಯಿಂದ ಹೊರಬಿದ್ದರೂ ಇಂದಿನ ಪಂದ್ಯ ನೆದರ್ಲೆಂಡ್ಸ್ ತಂಡಕ್ಕೆ ಮುಖ್ಯವಾಗಿದೆ. ಚಾಂಪಿಯನ್ಸ್ ಟ್ರೋಫಿ 2025 ರಲ್ಲಿ ಸ್ಥಾನ ಪಡೆಯುವ ಡಚ್ಚರಿಗಿದೆ. ಮೂರನೇ ಜಯ ಸಾಧಿಸುವ ಮೂಲಕ ಮತ್ತು ವಿಶ್ವಕಪ್ ಪಾಯಿಂಟ್ ಪಟ್ಟಿಯಲ್ಲಿ ಅಗ್ರ 8 ರೊಳಗೆ ಸ್ಥಾನವನ್ನು ಪಡೆದುಕೊಳ್ಳುವ ಮೂಲಕ, ಚಾಂಪಿಯನ್ಸ್ ಟ್ರೋಫಿ 2025ಕ್ಕೆ ಪ್ರವೇಶ ಪಡೆಯಬಹುದು.

5 / 6
ಭಾರತಕ್ಕೆ ನೆದರ್ಲೆಂಡ್ಸ್ ವಿರುದ್ಧದ ಇಂದಿನ ಪಂದ್ಯ ಲೆಕ್ಕಕ್ಕಿಲ್ಲದ ಕಾರಣ ಕೆಲ ಆಟಗಾರರಿಗೆ ವಿಶ್ರಾಂತಿ ನೀಡುವ ಸಾಧ್ಯತೆ ಇದೆ. ನಾಯಕ ರೋಹಿತ್ ಶರ್ಮಾ, ಕುಲ್ದೀಪ್ ಯಾದವ್ ಹಾಗೂ ಜಸ್​ಪ್ರಿತ್ ಬುಮ್ರಾ ಹೊರಗುಳಿಯಬಹುದು. ಕೆಎಲ್ ರಾಹುಲ್ ನಾಯಕನಾಗಿ ತಂಡವನ್ನು ಮುನ್ನಡೆಸುವ ಸಾಧ್ಯತೆ ಇದೆ. ರೋಹಿತ್ ಜಾಗಕ್ಕೆ ಇಶಾನ್ ಕಿಶನ್ ಬರಬಹುದು.

ಭಾರತಕ್ಕೆ ನೆದರ್ಲೆಂಡ್ಸ್ ವಿರುದ್ಧದ ಇಂದಿನ ಪಂದ್ಯ ಲೆಕ್ಕಕ್ಕಿಲ್ಲದ ಕಾರಣ ಕೆಲ ಆಟಗಾರರಿಗೆ ವಿಶ್ರಾಂತಿ ನೀಡುವ ಸಾಧ್ಯತೆ ಇದೆ. ನಾಯಕ ರೋಹಿತ್ ಶರ್ಮಾ, ಕುಲ್ದೀಪ್ ಯಾದವ್ ಹಾಗೂ ಜಸ್​ಪ್ರಿತ್ ಬುಮ್ರಾ ಹೊರಗುಳಿಯಬಹುದು. ಕೆಎಲ್ ರಾಹುಲ್ ನಾಯಕನಾಗಿ ತಂಡವನ್ನು ಮುನ್ನಡೆಸುವ ಸಾಧ್ಯತೆ ಇದೆ. ರೋಹಿತ್ ಜಾಗಕ್ಕೆ ಇಶಾನ್ ಕಿಶನ್ ಬರಬಹುದು.

6 / 6
ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣ ಚಿಕ್ಕ ಕ್ರೀಡಾಂಗಣವಾಗಿದ್ದು ಬ್ಯಾಟಿಂಗ್ ಪಿಚ್​ಗೆ ಹೇಳಿಮಾಡಿಸಿದ್ದಾಗಿದೆ. ಇಲ್ಲಿ ಬೌಂಡರಿ, ಸಿಕ್ಸರ್​ಗಳ ಮಳೆಸುರಿಯುವುದು ಖಚಿತ. ಈ ಹಿಂದೆ ಈ ಮೈದಾನದಲ್ಲಿ ನಡೆದ ಪಂದ್ಯಗಳು ಸಹ ಇದಕ್ಕೆ ಸಾಕ್ಷಿಯಾಗಿವೆ. ಹೀಗಾಗಿ ಈ ಪಿಚ್ ಬ್ಯಾಟರ್‌ಗಳಿಗೆ ಉತ್ತಮ ಸ್ಕೋರ್ ಮಾಡಲು ಸಹಕಾರಿಯಾಗಿದೆ.

ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣ ಚಿಕ್ಕ ಕ್ರೀಡಾಂಗಣವಾಗಿದ್ದು ಬ್ಯಾಟಿಂಗ್ ಪಿಚ್​ಗೆ ಹೇಳಿಮಾಡಿಸಿದ್ದಾಗಿದೆ. ಇಲ್ಲಿ ಬೌಂಡರಿ, ಸಿಕ್ಸರ್​ಗಳ ಮಳೆಸುರಿಯುವುದು ಖಚಿತ. ಈ ಹಿಂದೆ ಈ ಮೈದಾನದಲ್ಲಿ ನಡೆದ ಪಂದ್ಯಗಳು ಸಹ ಇದಕ್ಕೆ ಸಾಕ್ಷಿಯಾಗಿವೆ. ಹೀಗಾಗಿ ಈ ಪಿಚ್ ಬ್ಯಾಟರ್‌ಗಳಿಗೆ ಉತ್ತಮ ಸ್ಕೋರ್ ಮಾಡಲು ಸಹಕಾರಿಯಾಗಿದೆ.

Follow Us