AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

3 ಪಂದ್ಯವಾಡಿ ಮರೆಯಾದ ಮಯಾಂಕ್ ಯಾದವ್ ಬಗ್ಗೆ ಬಿಗ್ ಅಪ್​ಡೇಟ್

Mayank Yadav: ಮಯಾಂಕ್ ಯಾದವ್ ಐಪಿಎಲ್​ನಲ್ಲಿ ಸ್ಥಿರವಾಗಿ 150 ಕಿ.ಮೀ ವೇಗದಲ್ಲಿ ಚೆಂಡೆಸೆಯುವ ಮೂಲಕ ರಾಜಧಾನಿ ಎಕ್ಸ್​ಪ್ರೆಸ್ ಎಂದು ಖ್ಯಾತಿ ಪಡೆದಿದ್ದರು. ಅಲ್ಲದೆ ಟೀಮ್ ಇಂಡಿಯಾ ಪರ ಆಡಿದ 3 ಪಂದ್ಯಗಳಲ್ಲಿ 4 ವಿಕೆಟ್ ಕಬಳಿಸಿದರೆ, ಐಪಿಎಲ್​ನಲ್ಲಿ 4 ಪಂದ್ಯಗಳಿಂದ 7 ವಿಕೆಟ್ ಉರುಳಿಸಿ ಮಿಂಚಿದ್ದರು. ಆದರೆ ಈ ಮಿಂಚಿನ ಬೆನ್ನಲ್ಲೇ ಮಯಾಂಕ್ ಮರೆಯಾಗಿದ್ದರು.

ಝಾಹಿರ್ ಯೂಸುಫ್
|

Updated on: Feb 05, 2025 | 11:54 AM

Share
ಮಯಾಂಕ್ ಯಾದವ್, ಐಪಿಎಲ್​ನಲ್ಲಿ ಆಡಿದ್ದು 4 ಪಂದ್ಯಗಳು. ಈ ನಾಲ್ಕು ಪಂದ್ಯಗಳಲ್ಲಿ 150+ ಕಿ.ಮೀ ವೇಗದಲ್ಲಿ ಚೆಂಡೆಸೆಯುವ ಮೂಲಕ ಸಂಚಲನ ಸೃಷ್ಟಿಸಿದ್ದರು. ಈ ಸಂಚಲನದ ಬೆನ್ನಲ್ಲೇ ಟೀಮ್ ಇಂಡಿಯಾದಲ್ಲಿ ಅವಕಾಶ ಲಭಿಸಿತು. ಭಾರತ ಪರ 3 ಟಿ20 ಪಂದ್ಯಗಳನ್ನಾಡಿದ ಬಳಿಕ ಮಯಾಂಕ್ ಯಾದವ್ ಗಾಯಗೊಂಡು ತೆರೆಮರೆಗೆ ಸರಿದರು.

ಮಯಾಂಕ್ ಯಾದವ್, ಐಪಿಎಲ್​ನಲ್ಲಿ ಆಡಿದ್ದು 4 ಪಂದ್ಯಗಳು. ಈ ನಾಲ್ಕು ಪಂದ್ಯಗಳಲ್ಲಿ 150+ ಕಿ.ಮೀ ವೇಗದಲ್ಲಿ ಚೆಂಡೆಸೆಯುವ ಮೂಲಕ ಸಂಚಲನ ಸೃಷ್ಟಿಸಿದ್ದರು. ಈ ಸಂಚಲನದ ಬೆನ್ನಲ್ಲೇ ಟೀಮ್ ಇಂಡಿಯಾದಲ್ಲಿ ಅವಕಾಶ ಲಭಿಸಿತು. ಭಾರತ ಪರ 3 ಟಿ20 ಪಂದ್ಯಗಳನ್ನಾಡಿದ ಬಳಿಕ ಮಯಾಂಕ್ ಯಾದವ್ ಗಾಯಗೊಂಡು ತೆರೆಮರೆಗೆ ಸರಿದರು.

1 / 6
ಆ ಬಳಿಕ ಅವರೇನು ಮಾಡುತ್ತಿದ್ದಾರೆ? ಎಲ್ಲಿದ್ದಾರೆ ಎಂಬುದರ ಬಗ್ಗೆ ಯಾವುದೇ ಮಾಹಿತಿ ಹೊರಬಿದ್ದಿರಲಿಲ್ಲ. ಇದೀಗ ಭಾರತ ತಂಡದಿಂದ ಹೊರಗುಳಿದಿರುವ ಆಟಗಾರರು ಐಪಿಎಲ್​ಗಾಗಿ ಸಿದ್ಧತೆಗಳನ್ನು ಆರಂಭಿಸಿದ್ದಾರೆ. ಇದರ ಬೆನ್ನಲ್ಲೇ ಮಯಾಂಕ್ ಯಾದವ್ ಅವರ ಬಿಗ್ ಅಪ್​ಡೇಟ್​ ಒಂದು ಹೊರಬಿದ್ದಿದೆ.

ಆ ಬಳಿಕ ಅವರೇನು ಮಾಡುತ್ತಿದ್ದಾರೆ? ಎಲ್ಲಿದ್ದಾರೆ ಎಂಬುದರ ಬಗ್ಗೆ ಯಾವುದೇ ಮಾಹಿತಿ ಹೊರಬಿದ್ದಿರಲಿಲ್ಲ. ಇದೀಗ ಭಾರತ ತಂಡದಿಂದ ಹೊರಗುಳಿದಿರುವ ಆಟಗಾರರು ಐಪಿಎಲ್​ಗಾಗಿ ಸಿದ್ಧತೆಗಳನ್ನು ಆರಂಭಿಸಿದ್ದಾರೆ. ಇದರ ಬೆನ್ನಲ್ಲೇ ಮಯಾಂಕ್ ಯಾದವ್ ಅವರ ಬಿಗ್ ಅಪ್​ಡೇಟ್​ ಒಂದು ಹೊರಬಿದ್ದಿದೆ.

2 / 6
ಲಕ್ನೋ ಸೂಪರ್ ಜೈಂಟ್ಸ್ ತಂಡದ ಆಟಗಾರನಾಗಿರುವ ಮಯಾಂಕ್ ಯಾದವ್ ಮುಂಬರುವ ಐಪಿಎಲ್​ನಲ್ಲಿ ಕಣಕ್ಕಿಳಿಯಲಿದ್ದಾರಾ ಎಂಬ ಪ್ರಶ್ನೆಯನ್ನು LSG ಮೆಂಟರ್ ಝಹೀರ್ ಖಾನ್ ಅವರ ಮುಂದಿಡಲಾಗಿದೆ. ಈ ಪ್ರಶ್ನೆಗೆ ಉತ್ತರಿಸಿದ ಝಹೀರ್ ಖಾನ್, ಅವರು ಇನ್ನೂ ಕೂಡ ಚೇತರಿಕೆಯ ಹಂತದಲ್ಲಿದ್ದಾರೆ ಎಂದು ತಿಳಿಸಿದ್ದಾರೆ.

ಲಕ್ನೋ ಸೂಪರ್ ಜೈಂಟ್ಸ್ ತಂಡದ ಆಟಗಾರನಾಗಿರುವ ಮಯಾಂಕ್ ಯಾದವ್ ಮುಂಬರುವ ಐಪಿಎಲ್​ನಲ್ಲಿ ಕಣಕ್ಕಿಳಿಯಲಿದ್ದಾರಾ ಎಂಬ ಪ್ರಶ್ನೆಯನ್ನು LSG ಮೆಂಟರ್ ಝಹೀರ್ ಖಾನ್ ಅವರ ಮುಂದಿಡಲಾಗಿದೆ. ಈ ಪ್ರಶ್ನೆಗೆ ಉತ್ತರಿಸಿದ ಝಹೀರ್ ಖಾನ್, ಅವರು ಇನ್ನೂ ಕೂಡ ಚೇತರಿಕೆಯ ಹಂತದಲ್ಲಿದ್ದಾರೆ ಎಂದು ತಿಳಿಸಿದ್ದಾರೆ.

3 / 6
ಮಯಾಂಕ್ ಯಾದವ್ ನ್ಯಾಷನಲ್ ಕ್ರಿಕೆಟ್ ಅಕಾಡೆಮಿ (ಎನ್​ಸಿಎ) ಯಲ್ಲಿ ಫಿಟ್​ನೆಸ್​ಗಾಗಿ​ ಶ್ರಮಿಸುತ್ತಿದ್ದಾರೆ. ಅವರು ಎಲ್‌ಎಸ್‌ಜಿ ತಂಡಕ್ಕೆ ಮಾತ್ರವಲ್ಲದೆ ಭಾರತೀಯ ಕ್ರಿಕೆಟ್‌ಗೂ ಸಹ ಮುಖ್ಯ. ಉತ್ತಮ ಸಾಮರ್ಥ್ಯದ ಬೌಲರ್ ದೀರ್ಘಕಾಲದವರೆಗೆ ಸ್ಥಿರವಾಗಿ ಆಡಬೇಕು ಎಂಬುದು ನಮ್ಮೆಲ್ಲರ ಬಯಕೆ. ಹೀಗಾಗಿ ಸಂಪೂರ್ಣ ಫಿಟ್​ನೆಸ್ ಸಾಧಿಸಿದ ಬಳಿಕ ಕಣಕ್ಕಿಳಿಯಬೇಕೆಂದು ನಾನು ಬಯಸುತ್ತೇನೆ ಎಂದು ಝಹೀರ್ ಖಾನ್ ತಿಳಿಸಿದ್ದಾರೆ.

ಮಯಾಂಕ್ ಯಾದವ್ ನ್ಯಾಷನಲ್ ಕ್ರಿಕೆಟ್ ಅಕಾಡೆಮಿ (ಎನ್​ಸಿಎ) ಯಲ್ಲಿ ಫಿಟ್​ನೆಸ್​ಗಾಗಿ​ ಶ್ರಮಿಸುತ್ತಿದ್ದಾರೆ. ಅವರು ಎಲ್‌ಎಸ್‌ಜಿ ತಂಡಕ್ಕೆ ಮಾತ್ರವಲ್ಲದೆ ಭಾರತೀಯ ಕ್ರಿಕೆಟ್‌ಗೂ ಸಹ ಮುಖ್ಯ. ಉತ್ತಮ ಸಾಮರ್ಥ್ಯದ ಬೌಲರ್ ದೀರ್ಘಕಾಲದವರೆಗೆ ಸ್ಥಿರವಾಗಿ ಆಡಬೇಕು ಎಂಬುದು ನಮ್ಮೆಲ್ಲರ ಬಯಕೆ. ಹೀಗಾಗಿ ಸಂಪೂರ್ಣ ಫಿಟ್​ನೆಸ್ ಸಾಧಿಸಿದ ಬಳಿಕ ಕಣಕ್ಕಿಳಿಯಬೇಕೆಂದು ನಾನು ಬಯಸುತ್ತೇನೆ ಎಂದು ಝಹೀರ್ ಖಾನ್ ತಿಳಿಸಿದ್ದಾರೆ.

4 / 6
ಮಯಾಂಕ್ ಯಾದವ್​ ಅವರಿಗೆ ಹೆಚ್ಚು ಕಾಲ ಆಡಲು ಉತ್ತಮ ವಾತಾವರಣವನ್ನು ನಿರ್ಮಿಸುತ್ತಿದ್ದೇನೆ. ಅವರು 150% ಫಿಟ್ ಆಗಬೇಕೆಂದು ನಾವು ಬಯಸುತ್ತೇವೆ. ಆದ್ದರಿಂದ ಅವರನ್ನು ಉತ್ತಮ ಫಿಟ್‌ನೆಸ್‌ಗೆ ತರಲು ನಾವು ಎಲ್ಲವನ್ನೂ ಮಾಡುತ್ತಿದ್ದೇವೆ ಎಂದು ಝಹೀರ್ ಖಾನ್ ಹೇಳಿದ್ದಾರೆ.

ಮಯಾಂಕ್ ಯಾದವ್​ ಅವರಿಗೆ ಹೆಚ್ಚು ಕಾಲ ಆಡಲು ಉತ್ತಮ ವಾತಾವರಣವನ್ನು ನಿರ್ಮಿಸುತ್ತಿದ್ದೇನೆ. ಅವರು 150% ಫಿಟ್ ಆಗಬೇಕೆಂದು ನಾವು ಬಯಸುತ್ತೇವೆ. ಆದ್ದರಿಂದ ಅವರನ್ನು ಉತ್ತಮ ಫಿಟ್‌ನೆಸ್‌ಗೆ ತರಲು ನಾವು ಎಲ್ಲವನ್ನೂ ಮಾಡುತ್ತಿದ್ದೇವೆ ಎಂದು ಝಹೀರ್ ಖಾನ್ ಹೇಳಿದ್ದಾರೆ.

5 / 6
ಈ ಮೂಲಕ ಸಂಪೂರ್ಣ ಫಿಟ್​ನೆಸ್​ನೊಂದಿಗೆ ಮಯಾಂಕ್ ಯಾದವ್ ಮುಂಬರುವ ಐಪಿಎಲ್​ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಪರ ಕಣಕ್ಕಿಳಿಯುವ ವಿಶ್ವಾಸವನ್ನು ಝಹೀರ್ ಖಾನ್ ವ್ಯಕ್ತಪಡಿಸಿದ್ದಾರೆ. ಅದರಂತೆ ಐಪಿಎಲ್​ ಸೀಸನ್-18 ರಲ್ಲಿ ರಾಜಧಾನಿ ಎಕ್ಸ್​ಪ್ರೆಸ್ ಕಡೆಯಿಂದ ಬೆಂಕಿ ಚೆಂಡುಗಳು ತೂರಿ ಬರುವುದನ್ನು ಎದುರು ನೋಡಬಹುದು.

ಈ ಮೂಲಕ ಸಂಪೂರ್ಣ ಫಿಟ್​ನೆಸ್​ನೊಂದಿಗೆ ಮಯಾಂಕ್ ಯಾದವ್ ಮುಂಬರುವ ಐಪಿಎಲ್​ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಪರ ಕಣಕ್ಕಿಳಿಯುವ ವಿಶ್ವಾಸವನ್ನು ಝಹೀರ್ ಖಾನ್ ವ್ಯಕ್ತಪಡಿಸಿದ್ದಾರೆ. ಅದರಂತೆ ಐಪಿಎಲ್​ ಸೀಸನ್-18 ರಲ್ಲಿ ರಾಜಧಾನಿ ಎಕ್ಸ್​ಪ್ರೆಸ್ ಕಡೆಯಿಂದ ಬೆಂಕಿ ಚೆಂಡುಗಳು ತೂರಿ ಬರುವುದನ್ನು ಎದುರು ನೋಡಬಹುದು.

6 / 6
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ