AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

3 ಪಂದ್ಯವಾಡಿ ಮರೆಯಾದ ಮಯಾಂಕ್ ಯಾದವ್ ಬಗ್ಗೆ ಬಿಗ್ ಅಪ್​ಡೇಟ್

Mayank Yadav: ಮಯಾಂಕ್ ಯಾದವ್ ಐಪಿಎಲ್​ನಲ್ಲಿ ಸ್ಥಿರವಾಗಿ 150 ಕಿ.ಮೀ ವೇಗದಲ್ಲಿ ಚೆಂಡೆಸೆಯುವ ಮೂಲಕ ರಾಜಧಾನಿ ಎಕ್ಸ್​ಪ್ರೆಸ್ ಎಂದು ಖ್ಯಾತಿ ಪಡೆದಿದ್ದರು. ಅಲ್ಲದೆ ಟೀಮ್ ಇಂಡಿಯಾ ಪರ ಆಡಿದ 3 ಪಂದ್ಯಗಳಲ್ಲಿ 4 ವಿಕೆಟ್ ಕಬಳಿಸಿದರೆ, ಐಪಿಎಲ್​ನಲ್ಲಿ 4 ಪಂದ್ಯಗಳಿಂದ 7 ವಿಕೆಟ್ ಉರುಳಿಸಿ ಮಿಂಚಿದ್ದರು. ಆದರೆ ಈ ಮಿಂಚಿನ ಬೆನ್ನಲ್ಲೇ ಮಯಾಂಕ್ ಮರೆಯಾಗಿದ್ದರು.

ಝಾಹಿರ್ ಯೂಸುಫ್
|

Updated on: Feb 05, 2025 | 11:54 AM

Share
ಮಯಾಂಕ್ ಯಾದವ್, ಐಪಿಎಲ್​ನಲ್ಲಿ ಆಡಿದ್ದು 4 ಪಂದ್ಯಗಳು. ಈ ನಾಲ್ಕು ಪಂದ್ಯಗಳಲ್ಲಿ 150+ ಕಿ.ಮೀ ವೇಗದಲ್ಲಿ ಚೆಂಡೆಸೆಯುವ ಮೂಲಕ ಸಂಚಲನ ಸೃಷ್ಟಿಸಿದ್ದರು. ಈ ಸಂಚಲನದ ಬೆನ್ನಲ್ಲೇ ಟೀಮ್ ಇಂಡಿಯಾದಲ್ಲಿ ಅವಕಾಶ ಲಭಿಸಿತು. ಭಾರತ ಪರ 3 ಟಿ20 ಪಂದ್ಯಗಳನ್ನಾಡಿದ ಬಳಿಕ ಮಯಾಂಕ್ ಯಾದವ್ ಗಾಯಗೊಂಡು ತೆರೆಮರೆಗೆ ಸರಿದರು.

ಮಯಾಂಕ್ ಯಾದವ್, ಐಪಿಎಲ್​ನಲ್ಲಿ ಆಡಿದ್ದು 4 ಪಂದ್ಯಗಳು. ಈ ನಾಲ್ಕು ಪಂದ್ಯಗಳಲ್ಲಿ 150+ ಕಿ.ಮೀ ವೇಗದಲ್ಲಿ ಚೆಂಡೆಸೆಯುವ ಮೂಲಕ ಸಂಚಲನ ಸೃಷ್ಟಿಸಿದ್ದರು. ಈ ಸಂಚಲನದ ಬೆನ್ನಲ್ಲೇ ಟೀಮ್ ಇಂಡಿಯಾದಲ್ಲಿ ಅವಕಾಶ ಲಭಿಸಿತು. ಭಾರತ ಪರ 3 ಟಿ20 ಪಂದ್ಯಗಳನ್ನಾಡಿದ ಬಳಿಕ ಮಯಾಂಕ್ ಯಾದವ್ ಗಾಯಗೊಂಡು ತೆರೆಮರೆಗೆ ಸರಿದರು.

1 / 6
ಆ ಬಳಿಕ ಅವರೇನು ಮಾಡುತ್ತಿದ್ದಾರೆ? ಎಲ್ಲಿದ್ದಾರೆ ಎಂಬುದರ ಬಗ್ಗೆ ಯಾವುದೇ ಮಾಹಿತಿ ಹೊರಬಿದ್ದಿರಲಿಲ್ಲ. ಇದೀಗ ಭಾರತ ತಂಡದಿಂದ ಹೊರಗುಳಿದಿರುವ ಆಟಗಾರರು ಐಪಿಎಲ್​ಗಾಗಿ ಸಿದ್ಧತೆಗಳನ್ನು ಆರಂಭಿಸಿದ್ದಾರೆ. ಇದರ ಬೆನ್ನಲ್ಲೇ ಮಯಾಂಕ್ ಯಾದವ್ ಅವರ ಬಿಗ್ ಅಪ್​ಡೇಟ್​ ಒಂದು ಹೊರಬಿದ್ದಿದೆ.

ಆ ಬಳಿಕ ಅವರೇನು ಮಾಡುತ್ತಿದ್ದಾರೆ? ಎಲ್ಲಿದ್ದಾರೆ ಎಂಬುದರ ಬಗ್ಗೆ ಯಾವುದೇ ಮಾಹಿತಿ ಹೊರಬಿದ್ದಿರಲಿಲ್ಲ. ಇದೀಗ ಭಾರತ ತಂಡದಿಂದ ಹೊರಗುಳಿದಿರುವ ಆಟಗಾರರು ಐಪಿಎಲ್​ಗಾಗಿ ಸಿದ್ಧತೆಗಳನ್ನು ಆರಂಭಿಸಿದ್ದಾರೆ. ಇದರ ಬೆನ್ನಲ್ಲೇ ಮಯಾಂಕ್ ಯಾದವ್ ಅವರ ಬಿಗ್ ಅಪ್​ಡೇಟ್​ ಒಂದು ಹೊರಬಿದ್ದಿದೆ.

2 / 6
ಲಕ್ನೋ ಸೂಪರ್ ಜೈಂಟ್ಸ್ ತಂಡದ ಆಟಗಾರನಾಗಿರುವ ಮಯಾಂಕ್ ಯಾದವ್ ಮುಂಬರುವ ಐಪಿಎಲ್​ನಲ್ಲಿ ಕಣಕ್ಕಿಳಿಯಲಿದ್ದಾರಾ ಎಂಬ ಪ್ರಶ್ನೆಯನ್ನು LSG ಮೆಂಟರ್ ಝಹೀರ್ ಖಾನ್ ಅವರ ಮುಂದಿಡಲಾಗಿದೆ. ಈ ಪ್ರಶ್ನೆಗೆ ಉತ್ತರಿಸಿದ ಝಹೀರ್ ಖಾನ್, ಅವರು ಇನ್ನೂ ಕೂಡ ಚೇತರಿಕೆಯ ಹಂತದಲ್ಲಿದ್ದಾರೆ ಎಂದು ತಿಳಿಸಿದ್ದಾರೆ.

ಲಕ್ನೋ ಸೂಪರ್ ಜೈಂಟ್ಸ್ ತಂಡದ ಆಟಗಾರನಾಗಿರುವ ಮಯಾಂಕ್ ಯಾದವ್ ಮುಂಬರುವ ಐಪಿಎಲ್​ನಲ್ಲಿ ಕಣಕ್ಕಿಳಿಯಲಿದ್ದಾರಾ ಎಂಬ ಪ್ರಶ್ನೆಯನ್ನು LSG ಮೆಂಟರ್ ಝಹೀರ್ ಖಾನ್ ಅವರ ಮುಂದಿಡಲಾಗಿದೆ. ಈ ಪ್ರಶ್ನೆಗೆ ಉತ್ತರಿಸಿದ ಝಹೀರ್ ಖಾನ್, ಅವರು ಇನ್ನೂ ಕೂಡ ಚೇತರಿಕೆಯ ಹಂತದಲ್ಲಿದ್ದಾರೆ ಎಂದು ತಿಳಿಸಿದ್ದಾರೆ.

3 / 6
ಮಯಾಂಕ್ ಯಾದವ್ ನ್ಯಾಷನಲ್ ಕ್ರಿಕೆಟ್ ಅಕಾಡೆಮಿ (ಎನ್​ಸಿಎ) ಯಲ್ಲಿ ಫಿಟ್​ನೆಸ್​ಗಾಗಿ​ ಶ್ರಮಿಸುತ್ತಿದ್ದಾರೆ. ಅವರು ಎಲ್‌ಎಸ್‌ಜಿ ತಂಡಕ್ಕೆ ಮಾತ್ರವಲ್ಲದೆ ಭಾರತೀಯ ಕ್ರಿಕೆಟ್‌ಗೂ ಸಹ ಮುಖ್ಯ. ಉತ್ತಮ ಸಾಮರ್ಥ್ಯದ ಬೌಲರ್ ದೀರ್ಘಕಾಲದವರೆಗೆ ಸ್ಥಿರವಾಗಿ ಆಡಬೇಕು ಎಂಬುದು ನಮ್ಮೆಲ್ಲರ ಬಯಕೆ. ಹೀಗಾಗಿ ಸಂಪೂರ್ಣ ಫಿಟ್​ನೆಸ್ ಸಾಧಿಸಿದ ಬಳಿಕ ಕಣಕ್ಕಿಳಿಯಬೇಕೆಂದು ನಾನು ಬಯಸುತ್ತೇನೆ ಎಂದು ಝಹೀರ್ ಖಾನ್ ತಿಳಿಸಿದ್ದಾರೆ.

ಮಯಾಂಕ್ ಯಾದವ್ ನ್ಯಾಷನಲ್ ಕ್ರಿಕೆಟ್ ಅಕಾಡೆಮಿ (ಎನ್​ಸಿಎ) ಯಲ್ಲಿ ಫಿಟ್​ನೆಸ್​ಗಾಗಿ​ ಶ್ರಮಿಸುತ್ತಿದ್ದಾರೆ. ಅವರು ಎಲ್‌ಎಸ್‌ಜಿ ತಂಡಕ್ಕೆ ಮಾತ್ರವಲ್ಲದೆ ಭಾರತೀಯ ಕ್ರಿಕೆಟ್‌ಗೂ ಸಹ ಮುಖ್ಯ. ಉತ್ತಮ ಸಾಮರ್ಥ್ಯದ ಬೌಲರ್ ದೀರ್ಘಕಾಲದವರೆಗೆ ಸ್ಥಿರವಾಗಿ ಆಡಬೇಕು ಎಂಬುದು ನಮ್ಮೆಲ್ಲರ ಬಯಕೆ. ಹೀಗಾಗಿ ಸಂಪೂರ್ಣ ಫಿಟ್​ನೆಸ್ ಸಾಧಿಸಿದ ಬಳಿಕ ಕಣಕ್ಕಿಳಿಯಬೇಕೆಂದು ನಾನು ಬಯಸುತ್ತೇನೆ ಎಂದು ಝಹೀರ್ ಖಾನ್ ತಿಳಿಸಿದ್ದಾರೆ.

4 / 6
ಮಯಾಂಕ್ ಯಾದವ್​ ಅವರಿಗೆ ಹೆಚ್ಚು ಕಾಲ ಆಡಲು ಉತ್ತಮ ವಾತಾವರಣವನ್ನು ನಿರ್ಮಿಸುತ್ತಿದ್ದೇನೆ. ಅವರು 150% ಫಿಟ್ ಆಗಬೇಕೆಂದು ನಾವು ಬಯಸುತ್ತೇವೆ. ಆದ್ದರಿಂದ ಅವರನ್ನು ಉತ್ತಮ ಫಿಟ್‌ನೆಸ್‌ಗೆ ತರಲು ನಾವು ಎಲ್ಲವನ್ನೂ ಮಾಡುತ್ತಿದ್ದೇವೆ ಎಂದು ಝಹೀರ್ ಖಾನ್ ಹೇಳಿದ್ದಾರೆ.

ಮಯಾಂಕ್ ಯಾದವ್​ ಅವರಿಗೆ ಹೆಚ್ಚು ಕಾಲ ಆಡಲು ಉತ್ತಮ ವಾತಾವರಣವನ್ನು ನಿರ್ಮಿಸುತ್ತಿದ್ದೇನೆ. ಅವರು 150% ಫಿಟ್ ಆಗಬೇಕೆಂದು ನಾವು ಬಯಸುತ್ತೇವೆ. ಆದ್ದರಿಂದ ಅವರನ್ನು ಉತ್ತಮ ಫಿಟ್‌ನೆಸ್‌ಗೆ ತರಲು ನಾವು ಎಲ್ಲವನ್ನೂ ಮಾಡುತ್ತಿದ್ದೇವೆ ಎಂದು ಝಹೀರ್ ಖಾನ್ ಹೇಳಿದ್ದಾರೆ.

5 / 6
ಈ ಮೂಲಕ ಸಂಪೂರ್ಣ ಫಿಟ್​ನೆಸ್​ನೊಂದಿಗೆ ಮಯಾಂಕ್ ಯಾದವ್ ಮುಂಬರುವ ಐಪಿಎಲ್​ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಪರ ಕಣಕ್ಕಿಳಿಯುವ ವಿಶ್ವಾಸವನ್ನು ಝಹೀರ್ ಖಾನ್ ವ್ಯಕ್ತಪಡಿಸಿದ್ದಾರೆ. ಅದರಂತೆ ಐಪಿಎಲ್​ ಸೀಸನ್-18 ರಲ್ಲಿ ರಾಜಧಾನಿ ಎಕ್ಸ್​ಪ್ರೆಸ್ ಕಡೆಯಿಂದ ಬೆಂಕಿ ಚೆಂಡುಗಳು ತೂರಿ ಬರುವುದನ್ನು ಎದುರು ನೋಡಬಹುದು.

ಈ ಮೂಲಕ ಸಂಪೂರ್ಣ ಫಿಟ್​ನೆಸ್​ನೊಂದಿಗೆ ಮಯಾಂಕ್ ಯಾದವ್ ಮುಂಬರುವ ಐಪಿಎಲ್​ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಪರ ಕಣಕ್ಕಿಳಿಯುವ ವಿಶ್ವಾಸವನ್ನು ಝಹೀರ್ ಖಾನ್ ವ್ಯಕ್ತಪಡಿಸಿದ್ದಾರೆ. ಅದರಂತೆ ಐಪಿಎಲ್​ ಸೀಸನ್-18 ರಲ್ಲಿ ರಾಜಧಾನಿ ಎಕ್ಸ್​ಪ್ರೆಸ್ ಕಡೆಯಿಂದ ಬೆಂಕಿ ಚೆಂಡುಗಳು ತೂರಿ ಬರುವುದನ್ನು ಎದುರು ನೋಡಬಹುದು.

6 / 6
Follow Us
RSS, ಬಿಜೆಪಿ ಹಿಂದೂ ರಾಷ್ಟ್ರ ಮಾಡಲು ಹೊರಟಿಲ್ಲ, ಈಗಾಗಲೇ ಇದೆ: ಜೋಶಿ
RSS, ಬಿಜೆಪಿ ಹಿಂದೂ ರಾಷ್ಟ್ರ ಮಾಡಲು ಹೊರಟಿಲ್ಲ, ಈಗಾಗಲೇ ಇದೆ: ಜೋಶಿ
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್