AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಪರ್ತ್​ ಟೆಸ್ಟ್ ಮುಗಿಯುವ ಮುನ್ನವೇ ತಂಡ ಸೇರಿಕೊಳ್ಳಲಿದ್ದಾರೆ ರೋಹಿತ್

Rohit Sharma: ಎರಡನೇ ಮಗುವಿನ ಜನನದ ಕಾರಣದಿಂದ ಪರ್ತ್‌ನಲ್ಲಿ ನಡೆಯುವ ಮೊದಲ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರು ನವೆಂಬರ್ 24 ರಂದು ಆಸ್ಟ್ರೇಲಿಯಾ ತಲುಪುವ ನಿರೀಕ್ಷೆಯಿದೆ. ಇದರೊಂದಿಗೆ ಅವರು ಅಡಿಲೇಡ್‌ನಲ್ಲಿ ನಡೆಯುವ ಎರಡನೇ ಪಂದ್ಯಕ್ಕೆ ಸಿದ್ಧರಾಗಲಿದ್ದಾರೆ.

ಪೃಥ್ವಿಶಂಕರ
|

Updated on: Nov 21, 2024 | 6:21 PM

Share
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್ ಗವಾಸ್ಕರ್ ಟ್ರೋಫಿಯ ಮೊದಲ ಪಂದ್ಯ ನಾಳೆಯಿಂದ ಪರ್ತ್‌ನ ಆಪ್ಟಸ್ ಕ್ರೀಡಾಂಗಣದಲ್ಲಿ ಆರಂಭವಾಗಲಿದೆ. ಈ ಸರಣಿಯ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಆಡುತ್ತಿಲ್ಲ. ಎರಡನೇ ಮಗುವಿನ ಜನನದ ಕಾರಣದಿಂದ ಅವರು ಭಾರತ ತಂಡದೊಂದಿಗೆ ಆಸ್ಟ್ರೇಲಿಯಾಕ್ಕೆ ಹೋಗಲಿಲ್ಲ. ಇದೀಗ ಕುಟುಂಬದೊಂದಿಗೆ ಕಾಲ ಕಳೆದಿರುವ ರೋಹಿತ್ ಆಸ್ಟ್ರೇಲಿಯಾಕ್ಕೆ ಹಾರಲು ಸಜ್ಜಾಗಿದ್ದಾರೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್ ಗವಾಸ್ಕರ್ ಟ್ರೋಫಿಯ ಮೊದಲ ಪಂದ್ಯ ನಾಳೆಯಿಂದ ಪರ್ತ್‌ನ ಆಪ್ಟಸ್ ಕ್ರೀಡಾಂಗಣದಲ್ಲಿ ಆರಂಭವಾಗಲಿದೆ. ಈ ಸರಣಿಯ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಆಡುತ್ತಿಲ್ಲ. ಎರಡನೇ ಮಗುವಿನ ಜನನದ ಕಾರಣದಿಂದ ಅವರು ಭಾರತ ತಂಡದೊಂದಿಗೆ ಆಸ್ಟ್ರೇಲಿಯಾಕ್ಕೆ ಹೋಗಲಿಲ್ಲ. ಇದೀಗ ಕುಟುಂಬದೊಂದಿಗೆ ಕಾಲ ಕಳೆದಿರುವ ರೋಹಿತ್ ಆಸ್ಟ್ರೇಲಿಯಾಕ್ಕೆ ಹಾರಲು ಸಜ್ಜಾಗಿದ್ದಾರೆ.

1 / 6
ಕ್ರಿಕ್‌ಬಜ್‌ನ ವರದಿಯ ಪ್ರಕಾರ, ರೋಹಿತ್ ನವೆಂಬರ್ 24 ರಂದು ಆಸ್ಟ್ರೇಲಿಯಾಕ್ಕೆ ತಲುಪುವ ಸಾಧ್ಯತೆಗಳಿವೆ. ಅಂದರೆ ಪರ್ತ್‌ನಲ್ಲಿ ನಡೆಯಲ್ಲಿರುವ ಮೊದಲ ಟೆಸ್ಟ್‌ನ ಮೂರನೇ ದಿನದಂದು ರೋಹಿತ್ ಭಾರತ ತಂಡವನ್ನು ಸೇರಿಕೊಳ್ಳಬಹುದು. ಈ ಮೊದಲು, ಸರಣಿಯ ಆರಂಭಿಕ ಪಂದ್ಯಕ್ಕೂ ಮುಂಚೆಯೇ ರೋಹಿತ್ ತಂಡವನ್ನು ಸೇರಿಕೊಳ್ಳಬಹುದು ಎಂದು ವರದಿಯಾಗಿತ್ತು.

ಕ್ರಿಕ್‌ಬಜ್‌ನ ವರದಿಯ ಪ್ರಕಾರ, ರೋಹಿತ್ ನವೆಂಬರ್ 24 ರಂದು ಆಸ್ಟ್ರೇಲಿಯಾಕ್ಕೆ ತಲುಪುವ ಸಾಧ್ಯತೆಗಳಿವೆ. ಅಂದರೆ ಪರ್ತ್‌ನಲ್ಲಿ ನಡೆಯಲ್ಲಿರುವ ಮೊದಲ ಟೆಸ್ಟ್‌ನ ಮೂರನೇ ದಿನದಂದು ರೋಹಿತ್ ಭಾರತ ತಂಡವನ್ನು ಸೇರಿಕೊಳ್ಳಬಹುದು. ಈ ಮೊದಲು, ಸರಣಿಯ ಆರಂಭಿಕ ಪಂದ್ಯಕ್ಕೂ ಮುಂಚೆಯೇ ರೋಹಿತ್ ತಂಡವನ್ನು ಸೇರಿಕೊಳ್ಳಬಹುದು ಎಂದು ವರದಿಯಾಗಿತ್ತು.

2 / 6
ಆದರೆ ಎರಡನೇ ಮಗುವಿನ ಜನನದ ನಂತರ ಮಡದಿ ಹಾಗೂ ಕುಟುಂಬದೊಂದಿಗೆ ಇನ್ನಷ್ಟು ಸಮಯ ಇರಬೇಕೆಂದು ರೋಹಿತ್ ಬಯಸಿದ್ದರು. ಹೀಗಾಗಿ ರೋಹಿತ್ ಅವರನ್ನು ಮೊದಲ ಟೆಸ್ಟ್​ನಿಂದ ಹೊರಗಿಡಲಾಗಿತ್ತು. ಇದೀಗ ರೋಹಿತ್ ನವೆಂಬರ್ 22 ರ ಬೆಳಿಗ್ಗೆ ಆಸ್ಟ್ರೇಲಿಯಾವನ್ನು ತಲುಪುವ ಸಾಧ್ಯತೆಗಳಿದ್ದು, ಎರಡನೇ ಟೆಸ್ಟ್​ನಲ್ಲಿ ಆಡುವುದನ್ನು ಕಾಣಬಹುದಾಗಿದೆ.

ಆದರೆ ಎರಡನೇ ಮಗುವಿನ ಜನನದ ನಂತರ ಮಡದಿ ಹಾಗೂ ಕುಟುಂಬದೊಂದಿಗೆ ಇನ್ನಷ್ಟು ಸಮಯ ಇರಬೇಕೆಂದು ರೋಹಿತ್ ಬಯಸಿದ್ದರು. ಹೀಗಾಗಿ ರೋಹಿತ್ ಅವರನ್ನು ಮೊದಲ ಟೆಸ್ಟ್​ನಿಂದ ಹೊರಗಿಡಲಾಗಿತ್ತು. ಇದೀಗ ರೋಹಿತ್ ನವೆಂಬರ್ 22 ರ ಬೆಳಿಗ್ಗೆ ಆಸ್ಟ್ರೇಲಿಯಾವನ್ನು ತಲುಪುವ ಸಾಧ್ಯತೆಗಳಿದ್ದು, ಎರಡನೇ ಟೆಸ್ಟ್​ನಲ್ಲಿ ಆಡುವುದನ್ನು ಕಾಣಬಹುದಾಗಿದೆ.

3 / 6
ಕ್ರಿಕ್‌ಬಜ್ ವರದಿಯ ಪ್ರಕಾರ, ರೋಹಿತ್ ಅವರು ಭಾನುವಾರ ತಂಡವನ್ನು ಸೇರಿಕೊಳ್ಳುವುದಾಗಿ ಬಿಸಿಸಿಐಗೆ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಇದರರ್ಥ, ಡಿಸೆಂಬರ್ 6 ರಿಂದ ಅಡಿಲೇಡ್‌ನಲ್ಲಿ ನಡೆಯಲಿರುವ ಈ ಸರಣಿಯ ಎರಡನೇ ಪಂದ್ಯಕ್ಕೆ ರೋಹಿತ್ ಲಭ್ಯವಿರುತ್ತಾರೆ. ಪರ್ತ್ ಟೆಸ್ಟ್ ನಂತರ ಕ್ಯಾನ್‌ಬೆರಾದಲ್ಲಿ ಪ್ರೈಮ್ ಮಿನಿಸ್ಟರ್ 11ರ ವಿರುದ್ಧ ಟೀಂ ಇಂಡಿಯಾ ಅಭ್ಯಾಸ ಪಂದ್ಯವನ್ನು ಆಡಬೇಕಾಗಿದೆ. ಹೀಗಾಗಿ ರೋಹಿತ್ ಕೂಡ ಈ ಪಂದ್ಯದಲ್ಲಿ ಆಡುವುದನ್ನು ಕಾಣಬಹುದು.

ಕ್ರಿಕ್‌ಬಜ್ ವರದಿಯ ಪ್ರಕಾರ, ರೋಹಿತ್ ಅವರು ಭಾನುವಾರ ತಂಡವನ್ನು ಸೇರಿಕೊಳ್ಳುವುದಾಗಿ ಬಿಸಿಸಿಐಗೆ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಇದರರ್ಥ, ಡಿಸೆಂಬರ್ 6 ರಿಂದ ಅಡಿಲೇಡ್‌ನಲ್ಲಿ ನಡೆಯಲಿರುವ ಈ ಸರಣಿಯ ಎರಡನೇ ಪಂದ್ಯಕ್ಕೆ ರೋಹಿತ್ ಲಭ್ಯವಿರುತ್ತಾರೆ. ಪರ್ತ್ ಟೆಸ್ಟ್ ನಂತರ ಕ್ಯಾನ್‌ಬೆರಾದಲ್ಲಿ ಪ್ರೈಮ್ ಮಿನಿಸ್ಟರ್ 11ರ ವಿರುದ್ಧ ಟೀಂ ಇಂಡಿಯಾ ಅಭ್ಯಾಸ ಪಂದ್ಯವನ್ನು ಆಡಬೇಕಾಗಿದೆ. ಹೀಗಾಗಿ ರೋಹಿತ್ ಕೂಡ ಈ ಪಂದ್ಯದಲ್ಲಿ ಆಡುವುದನ್ನು ಕಾಣಬಹುದು.

4 / 6
ರೋಹಿತ್ ಶರ್ಮಾ ಅವರ ಪತ್ನಿ ರಿತಿಕಾ ಸಜ್ದೆ ಅವರು ನವೆಂಬರ್ 15 ರಂದು ತಡರಾತ್ರಿ ಗಂಡು ಮಗುವಿಗೆ ಜನ್ಮ ನೀಡಿದ್ದರು. ಆ ಬಳಿಕ ಮೊದಲ ಟೆಸ್ಟ್​ಗೂ ಮುನ್ನ ರೋಹಿತ್ ತಂಡವನ್ನು ಸೇರಿಕೊಳ್ಳಬಹುದು ಎಂದು ವರದಿಯಾಗಿತ್ತು. ಆದರೆ ಈ ಬಗ್ಗೆ ಮಾಹಿತಿ ನೀಡಿದ್ದ ಕೋಚ್ ಗಂಭೀರ್, ರೋಹಿತ್ ಮೊದಲ ಟೆಸ್ಟ್​ಗೆ  ಅಲಭ್ಯರಾಗಲಿದ್ದು, ಅವರ ಸ್ಥಾನದಲ್ಲಿ ಜಸ್ಪ್ರೀತ್ ಬುಮ್ರಾ ಟೀಂ ಇಂಡಿಯಾವನ್ನು ಮುನ್ನಡೆಸಲಿದ್ದಾರೆ ಎಂದಿದ್ದರು.

ರೋಹಿತ್ ಶರ್ಮಾ ಅವರ ಪತ್ನಿ ರಿತಿಕಾ ಸಜ್ದೆ ಅವರು ನವೆಂಬರ್ 15 ರಂದು ತಡರಾತ್ರಿ ಗಂಡು ಮಗುವಿಗೆ ಜನ್ಮ ನೀಡಿದ್ದರು. ಆ ಬಳಿಕ ಮೊದಲ ಟೆಸ್ಟ್​ಗೂ ಮುನ್ನ ರೋಹಿತ್ ತಂಡವನ್ನು ಸೇರಿಕೊಳ್ಳಬಹುದು ಎಂದು ವರದಿಯಾಗಿತ್ತು. ಆದರೆ ಈ ಬಗ್ಗೆ ಮಾಹಿತಿ ನೀಡಿದ್ದ ಕೋಚ್ ಗಂಭೀರ್, ರೋಹಿತ್ ಮೊದಲ ಟೆಸ್ಟ್​ಗೆ ಅಲಭ್ಯರಾಗಲಿದ್ದು, ಅವರ ಸ್ಥಾನದಲ್ಲಿ ಜಸ್ಪ್ರೀತ್ ಬುಮ್ರಾ ಟೀಂ ಇಂಡಿಯಾವನ್ನು ಮುನ್ನಡೆಸಲಿದ್ದಾರೆ ಎಂದಿದ್ದರು.

5 / 6
ಪರ್ತ್ ಟೆಸ್ಟ್‌ಗೆ ಟೀಂ ಇಂಡಿಯಾ: ಜಸ್ಪ್ರೀತ್ ಬುಮ್ರಾ (ನಾಯಕ), ಯಶಸ್ವಿ ಜೈಸ್ವಾಲ್, ಅಭಿಮನ್ಯು ಈಶ್ವರನ್, ದೇವದತ್ ಪಡಿಕ್ಕಲ್, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಸರ್ಫರಾಜ್ ಖಾನ್, ಧ್ರುವ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಸಿಡೇಜಾ, ಪ್ರಸಿದ್ಧ್ ಕೃಷ್ಣ, ಹರ್ಷಿತ್ ರಾಣಾ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್.

ಪರ್ತ್ ಟೆಸ್ಟ್‌ಗೆ ಟೀಂ ಇಂಡಿಯಾ: ಜಸ್ಪ್ರೀತ್ ಬುಮ್ರಾ (ನಾಯಕ), ಯಶಸ್ವಿ ಜೈಸ್ವಾಲ್, ಅಭಿಮನ್ಯು ಈಶ್ವರನ್, ದೇವದತ್ ಪಡಿಕ್ಕಲ್, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಸರ್ಫರಾಜ್ ಖಾನ್, ಧ್ರುವ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಸಿಡೇಜಾ, ಪ್ರಸಿದ್ಧ್ ಕೃಷ್ಣ, ಹರ್ಷಿತ್ ರಾಣಾ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್.

6 / 6
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ