AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಆಸೀಸ್ ಪ್ರವಾಸದಲ್ಲಿ ಟೀಂ ಇಂಡಿಯಾ ಎಡವಿದ್ದೇಲ್ಲಿ? ಸರಣಿ ಸೋಲಿಗೆ ಕಾರಣಗಳೇನು?

Team India's Australia Tour Debacle: ಭಾರತ ತಂಡವು ಆಸ್ಟ್ರೇಲಿಯಾ ಪ್ರವಾಸದಲ್ಲಿ 1-3 ಅಂತರದಿಂದ ಸೋಲುಂಡಿದ್ದು, ಅದಕ್ಕೆ ಹಲವು ಕಾರಣಗಳಿವೆ. ಸಮತೋಲಿತ ತಂಡದ ಕೊರತೆ, ಅನುಭವಿ ಆಟಗಾರರ ನಿರಾಶಾದಾಯಕ ಪ್ರದರ್ಶನ, ಕಳಪೆ ನಾಯಕತ್ವ, ಜಸ್ಪ್ರೀತ್ ಬುಮ್ರಾ ಅವರ ಏಕಾಂಗಿ ಹೋರಾಟ, ಮತ್ತು ತಂಡದ ಸಂಯೋಜನೆಯಲ್ಲಿನ ಲೋಪಗಳು ಸೋಲಿಗೆ ಪ್ರಮುಖ ಕಾರಣಗಳಾಗಿವೆ.

ಪೃಥ್ವಿಶಂಕರ
|

Updated on: Jan 05, 2025 | 5:37 PM

ಐದು ಪಂದ್ಯಗಳ ಬಾರ್ಡರ್ ಗವಾಸ್ಕರ್‌ ಟ್ರೋಫಿ ಟೆಸ್ಟ್ ಸರಣಿಗಾಗಿ ಆಸ್ಟ್ರೇಲಿಯಾ ಪ್ರವಾಸ ಮಾಡಿದ್ದ ಟೀಂ ಇಂಡಿಯಾ 1-3 ಅಂತರದಲ್ಲಿ ಸರಣಿಯನ್ನು ಕಳೆದುಕೊಂಡಿದೆ. ಮೊದಲ ಪಂದ್ಯವನ್ನು ಗೆಲ್ಲುವ ಮೂಲಕ ಶುಭಾರಂಭ ಮಾಡಿದ್ದ ತಂಡಕ್ಕೆ ಆ ಬಳಿಕ ಗೆಲುವು ಎಂಬುದು ಮರಿಚಿಕೆಯಾಯಿತು. ತಂಡದ ಈ ಹೀನಾಯ ಪ್ರದರ್ಶನಕ್ಕೆ ಹಲವು ಕಾರಣಗಳಿವೆ. ಅದರಲ್ಲೂ ಪ್ರಮುಖವಾಗಿ ಈ ಐದು ತಪ್ಪುಗಳು ತಂಡದ ಸರಣಿ ಸೋಲಿಗೆ ಕಾರಣವಾದವು.

ಐದು ಪಂದ್ಯಗಳ ಬಾರ್ಡರ್ ಗವಾಸ್ಕರ್‌ ಟ್ರೋಫಿ ಟೆಸ್ಟ್ ಸರಣಿಗಾಗಿ ಆಸ್ಟ್ರೇಲಿಯಾ ಪ್ರವಾಸ ಮಾಡಿದ್ದ ಟೀಂ ಇಂಡಿಯಾ 1-3 ಅಂತರದಲ್ಲಿ ಸರಣಿಯನ್ನು ಕಳೆದುಕೊಂಡಿದೆ. ಮೊದಲ ಪಂದ್ಯವನ್ನು ಗೆಲ್ಲುವ ಮೂಲಕ ಶುಭಾರಂಭ ಮಾಡಿದ್ದ ತಂಡಕ್ಕೆ ಆ ಬಳಿಕ ಗೆಲುವು ಎಂಬುದು ಮರಿಚಿಕೆಯಾಯಿತು. ತಂಡದ ಈ ಹೀನಾಯ ಪ್ರದರ್ಶನಕ್ಕೆ ಹಲವು ಕಾರಣಗಳಿವೆ. ಅದರಲ್ಲೂ ಪ್ರಮುಖವಾಗಿ ಈ ಐದು ತಪ್ಪುಗಳು ತಂಡದ ಸರಣಿ ಸೋಲಿಗೆ ಕಾರಣವಾದವು.

1 / 6
ಸಮತೋಲಿತ ತಂಡ ಕಟ್ಟಲಿಲ್ಲ: ಸರಣಿ ಸೋಲಿಗೆ ಪ್ರಮುಖ ಕಾರಣ ಟೀಂ ಇಂಡಿಯಾ ಸಮತೋಲಿತವಾಗಿರಲಿಲ್ಲ. ಅದರಲ್ಲೂ ಬ್ಯಾಟಿಂಗ್ ವಿಭಾಗದಲ್ಲಿ ಟೆಸ್ಟ್ ಸ್ಪೆಷಲಿಸ್ಟ್​ಗಳ ಕೊರತೆ ಎದ್ದು ಕಾಣುತ್ತಿತ್ತು. ತಂಡದಲ್ಲಿ ಆಡಿದವರಲ್ಲಿ ಯಾರೊಬ್ಬರು ಕ್ರೀಸ್​ನಲ್ಲಿ ಹೆಚ್ಚು ನಿಂತು ಬೌಲರ್​ಗಳನ್ನು ಸುಸ್ತು ಮಾಡುವ ಕೆಲಸವನ್ನು ಮಾಡಲಿಲ್ಲ. ಇದು ಎದುರಾಳಿ ತಂಡಕ್ಕೆ ಪ್ಲಸ್ ಪಾಯಿಂಟ್ ಆಯಿತು.

ಸಮತೋಲಿತ ತಂಡ ಕಟ್ಟಲಿಲ್ಲ: ಸರಣಿ ಸೋಲಿಗೆ ಪ್ರಮುಖ ಕಾರಣ ಟೀಂ ಇಂಡಿಯಾ ಸಮತೋಲಿತವಾಗಿರಲಿಲ್ಲ. ಅದರಲ್ಲೂ ಬ್ಯಾಟಿಂಗ್ ವಿಭಾಗದಲ್ಲಿ ಟೆಸ್ಟ್ ಸ್ಪೆಷಲಿಸ್ಟ್​ಗಳ ಕೊರತೆ ಎದ್ದು ಕಾಣುತ್ತಿತ್ತು. ತಂಡದಲ್ಲಿ ಆಡಿದವರಲ್ಲಿ ಯಾರೊಬ್ಬರು ಕ್ರೀಸ್​ನಲ್ಲಿ ಹೆಚ್ಚು ನಿಂತು ಬೌಲರ್​ಗಳನ್ನು ಸುಸ್ತು ಮಾಡುವ ಕೆಲಸವನ್ನು ಮಾಡಲಿಲ್ಲ. ಇದು ಎದುರಾಳಿ ತಂಡಕ್ಕೆ ಪ್ಲಸ್ ಪಾಯಿಂಟ್ ಆಯಿತು.

2 / 6
ಅನುಭವಿಗಳ ಫ್ಲಾಪ್ ಶೋ: ಒಂದೆಡೆ ತಂಡದಲ್ಲಿ ಟೆಸ್ಟ್ ಸ್ಪೆಷಲಿಸ್ಟ್​ಗಳ ಕೊರತೆ ಇದ್ದರೆ, ಇನ್ನೊಂದೆಡೆ ಅನುಭವಿಗಳು ಕೂಡ ನಿರೀಕ್ಷಿತ ಪ್ರದರ್ಶನ ನೀಡಲಿಲ್ಲ. ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಹಾಗೂ ಕೆಎಲ್ ರಾಹುಲ್​ರಂತಹ ಬ್ಯಾಟ್ಸ್‌ಮನ್​ಗಳು ನಿರೀಕ್ಷೆಗೆ ತಕ್ಕಂತ ಪ್ರದರ್ಶನ ನೀಡಲಿಲ್ಲ. ಇತ್ತ ಕಳೆದ ಪ್ರವಾಸದಲ್ಲಿ ಮಿಂಚಿದ್ದ ರಿಷಬ್​ ಪಂತ್​ಗೂ ವಿಶೇಷವಾಗಿ ಏನನ್ನು ಮಾಡಲು ಸಾಧ್ಯವಾಗಲಿಲ್ಲ.

ಅನುಭವಿಗಳ ಫ್ಲಾಪ್ ಶೋ: ಒಂದೆಡೆ ತಂಡದಲ್ಲಿ ಟೆಸ್ಟ್ ಸ್ಪೆಷಲಿಸ್ಟ್​ಗಳ ಕೊರತೆ ಇದ್ದರೆ, ಇನ್ನೊಂದೆಡೆ ಅನುಭವಿಗಳು ಕೂಡ ನಿರೀಕ್ಷಿತ ಪ್ರದರ್ಶನ ನೀಡಲಿಲ್ಲ. ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಹಾಗೂ ಕೆಎಲ್ ರಾಹುಲ್​ರಂತಹ ಬ್ಯಾಟ್ಸ್‌ಮನ್​ಗಳು ನಿರೀಕ್ಷೆಗೆ ತಕ್ಕಂತ ಪ್ರದರ್ಶನ ನೀಡಲಿಲ್ಲ. ಇತ್ತ ಕಳೆದ ಪ್ರವಾಸದಲ್ಲಿ ಮಿಂಚಿದ್ದ ರಿಷಬ್​ ಪಂತ್​ಗೂ ವಿಶೇಷವಾಗಿ ಏನನ್ನು ಮಾಡಲು ಸಾಧ್ಯವಾಗಲಿಲ್ಲ.

3 / 6
ಕಳಪೆ ನಾಯಕತ್ವ: ಬುಮ್ರಾ ನಾಯಕತ್ವದಲ್ಲಿ ಮೊದಲ ಟೆಸ್ಟ್ ಪಂದ್ಯವನ್ನು ಆಡಿದ್ದ ಟೀಂ ಇಂಡಿಯಾದ ಬೃಹತ್ ಗೆಲುವು ದಾಖಲಿಸಿತ್ತು. ಆದರೆ ರೋಹಿತ್ ಶರ್ಮಾ ನಾಯಕತ್ವವಹಿಸಿಕೊಂಡ ನಂತರ ತಂಡ ಸೋಲಿಗೆ ಸುಳಿಗೆ ಸಿಲುಕಿಕೊಂಡಿತು. ಯಾವ ಸಂದರ್ಭದಲ್ಲಿ ಯಾವ ವೇಗಿಯನ್ನು ಕಣಕ್ಕಿಳಿಸಬೇಕು. ಫೀಲ್ಡ್ ಪ್ಲೇಸ್​ಮೆಂಟ್ ಹೇಗಿರಬೇಕು ಎಂಬುದನ್ನು ನಿರ್ಧರಿಸುವಲ್ಲಿ ರೋಹಿತ್ ವಿಫಲರಾದರು. ಹಾಗೆಯೇ ಆಟಗಾರನಾಗಿಯೂ ರೋಹಿತ್ ರನ್ ಬರ ಎದುರಿಸಬೇಕಾಯಿತು.

ಕಳಪೆ ನಾಯಕತ್ವ: ಬುಮ್ರಾ ನಾಯಕತ್ವದಲ್ಲಿ ಮೊದಲ ಟೆಸ್ಟ್ ಪಂದ್ಯವನ್ನು ಆಡಿದ್ದ ಟೀಂ ಇಂಡಿಯಾದ ಬೃಹತ್ ಗೆಲುವು ದಾಖಲಿಸಿತ್ತು. ಆದರೆ ರೋಹಿತ್ ಶರ್ಮಾ ನಾಯಕತ್ವವಹಿಸಿಕೊಂಡ ನಂತರ ತಂಡ ಸೋಲಿಗೆ ಸುಳಿಗೆ ಸಿಲುಕಿಕೊಂಡಿತು. ಯಾವ ಸಂದರ್ಭದಲ್ಲಿ ಯಾವ ವೇಗಿಯನ್ನು ಕಣಕ್ಕಿಳಿಸಬೇಕು. ಫೀಲ್ಡ್ ಪ್ಲೇಸ್​ಮೆಂಟ್ ಹೇಗಿರಬೇಕು ಎಂಬುದನ್ನು ನಿರ್ಧರಿಸುವಲ್ಲಿ ರೋಹಿತ್ ವಿಫಲರಾದರು. ಹಾಗೆಯೇ ಆಟಗಾರನಾಗಿಯೂ ರೋಹಿತ್ ರನ್ ಬರ ಎದುರಿಸಬೇಕಾಯಿತು.

4 / 6
ಏಕಾಂಗಿಯಾದ ಬುಮ್ರಾ: ಆಸ್ಟ್ರೇಲಿಯಾ ಪ್ರವಾಸದಲ್ಲಿ ಟೀಂ ಇಂಡಿಯಾ ಪರ ಸ್ಥಿರ ಪ್ರದರ್ಶನ ನೀಡಿದ ಏಕೈಕ ಆಟಗಾರನೆಂದರೆ ಅದು ಜಸ್ಪ್ರೀತ್ ಬುಮ್ರಾ ಮಾತ್ರ. ಅವರನ್ನು ಹೊರತುಪಡಿಸಿ ಯಾರೊಬ್ಬರು ಆಸೀಸ್ ಆಟಗಾರರಿಗೆ ತೊಂದರೆ ನೀಡುವ ಕೆಲಸವನ್ನು ಮಾಡಲಿಲ್ಲ. ಅನುಭವಿಗಳಾದ ಜಡೇಜಾ ಹಾಗೂ ಅಶ್ವಿನ್​ಗೂ ಈ ಪ್ರವಾಸದಲ್ಲಿ ಮಿಂಚಲು ಸಾಧ್ಯವಾಗಲಿಲ್ಲ. ಇತ್ತ ಉಳಿದ ವೇಗಿಗಳು ಕೂಡ ಬುಮ್ರಾಗೆ ಸಾಥ್ ನೀಡಲಿಲ್ಲ.

ಏಕಾಂಗಿಯಾದ ಬುಮ್ರಾ: ಆಸ್ಟ್ರೇಲಿಯಾ ಪ್ರವಾಸದಲ್ಲಿ ಟೀಂ ಇಂಡಿಯಾ ಪರ ಸ್ಥಿರ ಪ್ರದರ್ಶನ ನೀಡಿದ ಏಕೈಕ ಆಟಗಾರನೆಂದರೆ ಅದು ಜಸ್ಪ್ರೀತ್ ಬುಮ್ರಾ ಮಾತ್ರ. ಅವರನ್ನು ಹೊರತುಪಡಿಸಿ ಯಾರೊಬ್ಬರು ಆಸೀಸ್ ಆಟಗಾರರಿಗೆ ತೊಂದರೆ ನೀಡುವ ಕೆಲಸವನ್ನು ಮಾಡಲಿಲ್ಲ. ಅನುಭವಿಗಳಾದ ಜಡೇಜಾ ಹಾಗೂ ಅಶ್ವಿನ್​ಗೂ ಈ ಪ್ರವಾಸದಲ್ಲಿ ಮಿಂಚಲು ಸಾಧ್ಯವಾಗಲಿಲ್ಲ. ಇತ್ತ ಉಳಿದ ವೇಗಿಗಳು ಕೂಡ ಬುಮ್ರಾಗೆ ಸಾಥ್ ನೀಡಲಿಲ್ಲ.

5 / 6
ತಂಡದ ಸಂಯೋಜನೆಯಲ್ಲಿ ಲೋಪ:  ಬಾರ್ಡರ್-ಗಾವಸ್ಕರ್ ಸರಣಿಯ ಪ್ರತಿ ಪಂದ್ಯದಲ್ಲೂ ಭಾರತ ತಂಡ ಬಹುತೇಕ ವಿಭಿನ್ನ ಸಂಯೋಜನೆಯೊಂದಿಗೆ ಮೈದಾನಕ್ಕಿಳಿಯಿತು. ಬ್ಯಾಟಿಂಗ್ ಕ್ರಮಾಂಕದ ಬಗ್ಗೆ ಟೀಮ್ ಮ್ಯಾನೇಜ್‌ಮೆಂಟ್ ಸಂಪೂರ್ಣವಾಗಿ ಗೊಂದಲಕ್ಕೊಳಗಾಗಿತ್ತು. ಕೆಎಲ್ ರಾಹುಲ್ ಅವರ ಬ್ಯಾಟಿಂಗ್ ಸ್ಥಾನವನ್ನು ಪದೇ ಪದೇ ಬದಲಿಸಲಾಯಿತು. ಹಾಗೆಯೇ ನಾಲ್ಕನೇ ಟೆಸ್ಟ್‌ನಲ್ಲಿ ಶುಭ್​ಮನ್ ಗಿಲ್ ಅವರನ್ನು ತಂಡದಿಂದ ಕೈಬಿಡಲಾಯಿತು. ಸಿಡ್ನಿ ಟೆಸ್ಟ್‌ನಲ್ಲಿ ಆರು ವಿಕೆಟ್‌ಗಳನ್ನು ಪಡೆದ ಪ್ರಸಿದ್ಧ ಕೃಷ್ಣ ಅವರನ್ನು ಆರಂಭಿಕ ಪಂದ್ಯಗಳಲ್ಲಿ ಆಡಿಸದೆ ಮ್ಯಾನೇಜ್‌ಮೆಂಟ್ ದೊಡ್ಡ ತಪ್ಪು ಮಾಡಿತು.

ತಂಡದ ಸಂಯೋಜನೆಯಲ್ಲಿ ಲೋಪ: ಬಾರ್ಡರ್-ಗಾವಸ್ಕರ್ ಸರಣಿಯ ಪ್ರತಿ ಪಂದ್ಯದಲ್ಲೂ ಭಾರತ ತಂಡ ಬಹುತೇಕ ವಿಭಿನ್ನ ಸಂಯೋಜನೆಯೊಂದಿಗೆ ಮೈದಾನಕ್ಕಿಳಿಯಿತು. ಬ್ಯಾಟಿಂಗ್ ಕ್ರಮಾಂಕದ ಬಗ್ಗೆ ಟೀಮ್ ಮ್ಯಾನೇಜ್‌ಮೆಂಟ್ ಸಂಪೂರ್ಣವಾಗಿ ಗೊಂದಲಕ್ಕೊಳಗಾಗಿತ್ತು. ಕೆಎಲ್ ರಾಹುಲ್ ಅವರ ಬ್ಯಾಟಿಂಗ್ ಸ್ಥಾನವನ್ನು ಪದೇ ಪದೇ ಬದಲಿಸಲಾಯಿತು. ಹಾಗೆಯೇ ನಾಲ್ಕನೇ ಟೆಸ್ಟ್‌ನಲ್ಲಿ ಶುಭ್​ಮನ್ ಗಿಲ್ ಅವರನ್ನು ತಂಡದಿಂದ ಕೈಬಿಡಲಾಯಿತು. ಸಿಡ್ನಿ ಟೆಸ್ಟ್‌ನಲ್ಲಿ ಆರು ವಿಕೆಟ್‌ಗಳನ್ನು ಪಡೆದ ಪ್ರಸಿದ್ಧ ಕೃಷ್ಣ ಅವರನ್ನು ಆರಂಭಿಕ ಪಂದ್ಯಗಳಲ್ಲಿ ಆಡಿಸದೆ ಮ್ಯಾನೇಜ್‌ಮೆಂಟ್ ದೊಡ್ಡ ತಪ್ಪು ಮಾಡಿತು.

6 / 6
Follow us
ನೀರು ಕುಡಿಯಲು ಬಂದ ಜಿಂಕೆಯನ್ನು ಬೇಟೆಯಾಡಿದ ಹುಲಿ: ವಿಡಿಯೋ ನೋಡಿ
ನೀರು ಕುಡಿಯಲು ಬಂದ ಜಿಂಕೆಯನ್ನು ಬೇಟೆಯಾಡಿದ ಹುಲಿ: ವಿಡಿಯೋ ನೋಡಿ
ತುಮಕೂರು ಸಿದ್ಧಗಂಗಾ ಶ್ರೀಗಳ ಆಶೀರ್ವಾದ ಪಡೆದ ನಟ ಯುವರಾಜ್ ಕುಮಾರ್
ತುಮಕೂರು ಸಿದ್ಧಗಂಗಾ ಶ್ರೀಗಳ ಆಶೀರ್ವಾದ ಪಡೆದ ನಟ ಯುವರಾಜ್ ಕುಮಾರ್
ಗಂಡನ ಮನೆಯಿಂದ ಮಗಳನ್ನ ಹೊತ್ತೊಯ್ದ ಪೋಷಕರು, ಮುಂದೇನಾಯ್ತು?
ಗಂಡನ ಮನೆಯಿಂದ ಮಗಳನ್ನ ಹೊತ್ತೊಯ್ದ ಪೋಷಕರು, ಮುಂದೇನಾಯ್ತು?
ನೀಟ್​ ನಲ್ಲಿ ಫಸ್ಟ್ ರ‍್ಯಾಂಕ್: ತಂದೆಗೆ ಫಾದರ್ಸ್ ಡೇ ಗಿಫ್ಟ್ ಕೊಟ್ಟ ಮಗ
ನೀಟ್​ ನಲ್ಲಿ ಫಸ್ಟ್ ರ‍್ಯಾಂಕ್: ತಂದೆಗೆ ಫಾದರ್ಸ್ ಡೇ ಗಿಫ್ಟ್ ಕೊಟ್ಟ ಮಗ
‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ಅವಘಡ, ನಿಜಕ್ಕೂ ನಡೆದಿದ್ದೇನು?
‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ಅವಘಡ, ನಿಜಕ್ಕೂ ನಡೆದಿದ್ದೇನು?
ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ