AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ರೈಡನ್ ಕಾರ್ಸ್ ಮಿಂಚಿಂಗ್… ಕಾವ್ಯ ಮಾರನ್​ ಫುಲ್​ ಖುಷ್..!

IPL 2025: ಈ ಬಾರಿಯ ಐಪಿಎಲ್ ಮೆಗಾ ಹರಾಜಿನಲ್ಲಿ 29 ವರ್ಷದ ಬ್ರೈಡನ್ ಕಾರ್ಸ್ ಅವರನ್ನು ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ಬರೋಬ್ಬರಿ 1 ಕೋಟಿ ರೂ. ನೀಡಿ ಖರೀದಿಸಿತ್ತು. ಕೇವಲ 4 ಪಂದ್ಯವಾಡಿದ್ದ ಇಂಗ್ಲೆಂಡ್ ಆಟಗಾರನನ್ನು ಕೋಟಿ ನೀಡಿ ಖರೀದಿಸಿದ ಕಾವ್ಯ ಮಾರನ್ ಅವರ ನಿರ್ಧಾರವು ಅಚ್ಚರಿಗೆ ಕಾರಣವಾಗಿತ್ತು. ಆದರೀಗ ಬ್ರೈಡನ್ ಕಾರ್ಸ್ ಸ್ಪಿನ್ ಸ್ನೇಹಿ ಪಿಚ್​ನಲ್ಲೇ ತಾನೆಂತಹ ಆಟಗಾರ ಎಂಬುದನ್ನು ನಿರೂಪಿಸಿದ್ದಾರೆ. ಅಲ್ಲದೆ ಕಾವ್ಯ ಮಾರನ್ ಅವರ ನಿರ್ಧಾರ ಸರಿಯಾಗಿದೆ ಎಂಬುದನ್ನು ಒತ್ತಿ ಹೇಳಿದ್ದಾರೆ.

ಝಾಹಿರ್ ಯೂಸುಫ್
|

Updated on: Jan 26, 2025 | 2:23 PM

Share
ಟೀಮ್ ಇಂಡಿಯಾ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಇಂಗ್ಲೆಂಡ್ ಸೋಲನುಭವಿಸಿದೆ. ಈ ಸೋಲಿನ ನಡುವೆ ಇಂಗ್ಲೆಂಡ್ ಪಾಲಿನ ಸಕಾರಾತ್ಮಕ ವಿಷಯ ಎಂದರೆ ಬ್ರೈಡನ್ ಕಾರ್ಸ್ ​ಪ್ರದರ್ಶನ. ಮೊದಲ ಪಂದ್ಯದಲ್ಲಿ ಬೆಂಚ್ ಕಾದಿದ್ದ ಕಾರ್ಸ್ ಅವರನ್ನು ಈ ಬಾರಿ ಗಸ್ ಗಸ್ ಅಟ್ಕಿನ್ಸನ್ ಅವರ ಬದಲಿಯಾಗಿ ಕಣಕ್ಕಿಳಿಸಲಾಗಿತ್ತು.

ಟೀಮ್ ಇಂಡಿಯಾ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಇಂಗ್ಲೆಂಡ್ ಸೋಲನುಭವಿಸಿದೆ. ಈ ಸೋಲಿನ ನಡುವೆ ಇಂಗ್ಲೆಂಡ್ ಪಾಲಿನ ಸಕಾರಾತ್ಮಕ ವಿಷಯ ಎಂದರೆ ಬ್ರೈಡನ್ ಕಾರ್ಸ್ ​ಪ್ರದರ್ಶನ. ಮೊದಲ ಪಂದ್ಯದಲ್ಲಿ ಬೆಂಚ್ ಕಾದಿದ್ದ ಕಾರ್ಸ್ ಅವರನ್ನು ಈ ಬಾರಿ ಗಸ್ ಗಸ್ ಅಟ್ಕಿನ್ಸನ್ ಅವರ ಬದಲಿಯಾಗಿ ಕಣಕ್ಕಿಳಿಸಲಾಗಿತ್ತು.

1 / 5
ಅದರಂತೆ ಭಾರತದಲ್ಲಿ ಚೊಚ್ಚಲ ಪಂದ್ಯವಾಡಿದ ಬ್ರೈಡನ್ ಕಾರ್ಸ್ ಆಲ್​ರೌಂಡರ್ ಆಟದೊಂದಿಗೆ ಮಿಂಚಿದ್ದಾರೆ. ಇಂಗ್ಲೆಂಡ್ ಪರ 8ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಕಾರ್ಸ್ 17 ಎಸೆತಗಳಲ್ಲಿ 3 ಭರ್ಜರಿ ಸಿಕ್ಸ್ ಹಾಗೂ 1 ಫೋರ್​ಗಳೊಂದಿಗೆ 31 ರನ್ ಸಿಡಿಸಿ ಅಪಾಯಕಾರಿಯಾಗುವ ಸೂಚನೆ ನೀಡಿದ್ದರು. ಆದರೆ ದುರಾದೃಷ್ಟವಶಾತ್ ಜೋಫ್ರಾ ಆರ್ಚರ್ ಮಾಡಿದ ತಪ್ಪಿನಿಂದಾಗಿ ಕಾರ್ಸ್​ ರನೌಟ್​ಗೆ ಬಲಿಯಾದರು.

ಅದರಂತೆ ಭಾರತದಲ್ಲಿ ಚೊಚ್ಚಲ ಪಂದ್ಯವಾಡಿದ ಬ್ರೈಡನ್ ಕಾರ್ಸ್ ಆಲ್​ರೌಂಡರ್ ಆಟದೊಂದಿಗೆ ಮಿಂಚಿದ್ದಾರೆ. ಇಂಗ್ಲೆಂಡ್ ಪರ 8ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಕಾರ್ಸ್ 17 ಎಸೆತಗಳಲ್ಲಿ 3 ಭರ್ಜರಿ ಸಿಕ್ಸ್ ಹಾಗೂ 1 ಫೋರ್​ಗಳೊಂದಿಗೆ 31 ರನ್ ಸಿಡಿಸಿ ಅಪಾಯಕಾರಿಯಾಗುವ ಸೂಚನೆ ನೀಡಿದ್ದರು. ಆದರೆ ದುರಾದೃಷ್ಟವಶಾತ್ ಜೋಫ್ರಾ ಆರ್ಚರ್ ಮಾಡಿದ ತಪ್ಪಿನಿಂದಾಗಿ ಕಾರ್ಸ್​ ರನೌಟ್​ಗೆ ಬಲಿಯಾದರು.

2 / 5
ಇತ್ತ ಬ್ಯಾಟಿಂಗ್​ನಲ್ಲಿ ಮಿಂಚಿ ಬೌಲಿಂಗ್​ಗೆ ಬಂದ ಬ್ರೈಡನ್ ಕಾರ್ಸ್ ಬೌನ್ಸರ್ ಎಸೆತಗಳ ಮೂಲಕ ಗಮನ ಸೆಳೆದರು. ಅದರಲ್ಲೂ ತಮ್ಮ ಮೊದಲ ಓವರ್​ನಲ್ಲೇ ಡೇಂಜರಸ್ ಸಂಜು ಸ್ಯಾಮ್ಸನ್ (5) ವಿಕೆಟ್ ಕಬಳಿಸಿದರು. ಇನ್ನು ಸ್ಪೋಟಕ ದಾಂಡಿಗ ಸೂರ್ಯಕುಮಾರ್ ಯಾದವ್ (5) ಅವರನ್ನು ಕ್ಲೀನ್ ಬೌಲ್ಡ್ ಮಾಡಿದರು. ಆ ಬಳಿಕ ವಾಷಿಂಗ್ಟನ್ ಸುಂದರ್​ (26) ಅವರನ್ನು ಬೌಲ್ಡ್ ಮಾಡಿ ಪೆವಿಲಿಯನ್​ಗೆ ಕಳುಹಿಸಿದರು.

ಇತ್ತ ಬ್ಯಾಟಿಂಗ್​ನಲ್ಲಿ ಮಿಂಚಿ ಬೌಲಿಂಗ್​ಗೆ ಬಂದ ಬ್ರೈಡನ್ ಕಾರ್ಸ್ ಬೌನ್ಸರ್ ಎಸೆತಗಳ ಮೂಲಕ ಗಮನ ಸೆಳೆದರು. ಅದರಲ್ಲೂ ತಮ್ಮ ಮೊದಲ ಓವರ್​ನಲ್ಲೇ ಡೇಂಜರಸ್ ಸಂಜು ಸ್ಯಾಮ್ಸನ್ (5) ವಿಕೆಟ್ ಕಬಳಿಸಿದರು. ಇನ್ನು ಸ್ಪೋಟಕ ದಾಂಡಿಗ ಸೂರ್ಯಕುಮಾರ್ ಯಾದವ್ (5) ಅವರನ್ನು ಕ್ಲೀನ್ ಬೌಲ್ಡ್ ಮಾಡಿದರು. ಆ ಬಳಿಕ ವಾಷಿಂಗ್ಟನ್ ಸುಂದರ್​ (26) ಅವರನ್ನು ಬೌಲ್ಡ್ ಮಾಡಿ ಪೆವಿಲಿಯನ್​ಗೆ ಕಳುಹಿಸಿದರು.

3 / 5
ಹೀಗೆ ಬ್ಯಾಟಿಂಗ್​​ನಲ್ಲಿ 17 ಎಸೆತಗಳಲ್ಲಿ ಸ್ಪೋಟಕ 31 ರನ್ ಹಾಗೂ ಬೌಲಿಂಗ್​ನಲ್ಲಿ 4 ಓವರ್​ಗಳಲ್ಲಿ 29 ರನ್ ನೀಡಿ 3 ವಿಕೆಟ್ ಕಬಳಿಸಿ ಬ್ರೈಡನ್ ಕಾರ್ಸ್ ಮಿಂಚಿದ್ದಾರೆ. ಇತ್ತ ಕಾರ್ಸ್ ಅವರ ಈ ಭರ್ಜರಿ ಪ್ರದರ್ಶನದಿಂದಾಗಿ ಸನ್​ರೈಸರ್ಸ್ ಹೈದರಾಬಾದ್ ಓನರ್ ಕಾವ್ಯ ಮಾರನ್ ಫುಲ್ ಖುಷಿಯಾಗಿದ್ದಾರೆ.

ಹೀಗೆ ಬ್ಯಾಟಿಂಗ್​​ನಲ್ಲಿ 17 ಎಸೆತಗಳಲ್ಲಿ ಸ್ಪೋಟಕ 31 ರನ್ ಹಾಗೂ ಬೌಲಿಂಗ್​ನಲ್ಲಿ 4 ಓವರ್​ಗಳಲ್ಲಿ 29 ರನ್ ನೀಡಿ 3 ವಿಕೆಟ್ ಕಬಳಿಸಿ ಬ್ರೈಡನ್ ಕಾರ್ಸ್ ಮಿಂಚಿದ್ದಾರೆ. ಇತ್ತ ಕಾರ್ಸ್ ಅವರ ಈ ಭರ್ಜರಿ ಪ್ರದರ್ಶನದಿಂದಾಗಿ ಸನ್​ರೈಸರ್ಸ್ ಹೈದರಾಬಾದ್ ಓನರ್ ಕಾವ್ಯ ಮಾರನ್ ಫುಲ್ ಖುಷಿಯಾಗಿದ್ದಾರೆ.

4 / 5
ಏಕೆಂದರೆ ಮುಂಬರುವ ಐಪಿಎಲ್​ನಲ್ಲಿ ಬ್ರೈಡನ್ ಕಾರ್ಸ್ ಸನ್​ರೈಸರ್ಸ್ ಹೈದರಾಬಾದ್ ಪರ ಕಣಕ್ಕಿಳಿಯಲಿದ್ದಾರೆ. ಈ ಬಾರಿಯ ಐಪಿಎಲ್ ಮೆಗಾ ಹರಾಜಿನ ಮೂಲಕ ಎಸ್​ಆರ್​ಹೆಚ್ ಫ್ರಾಂಚೈಸಿ ಬ್ರೈಡನ್ ಕಾರ್ಸ್ ಅವರನ್ನು 1 ಕೋಟಿ ರೂ.ಗೆ ಖರೀದಿಸಿದೆ. ಇದೀಗ ಭಾರತೀಯ ಪಿಚ್​ನಲ್ಲಿ ಅದ್ಭುತ ಆಲ್​ರೌಂಡರ್ ಪ್ರದರ್ಶನ ನೀಡುವ ಮೂಲಕ ಬ್ರೈಡನ್ ಕಾರ್ಸ್ ಸನ್​ರೈಸರ್ಸ್ ಹೈದರಾಬಾದ್ ಪರ ಕೂಡ ಸಂಚಲನ ಸೃಷ್ಟಿಸುವ ಸೂಚನೆ ನೀಡಿದ್ದಾರೆ.

ಏಕೆಂದರೆ ಮುಂಬರುವ ಐಪಿಎಲ್​ನಲ್ಲಿ ಬ್ರೈಡನ್ ಕಾರ್ಸ್ ಸನ್​ರೈಸರ್ಸ್ ಹೈದರಾಬಾದ್ ಪರ ಕಣಕ್ಕಿಳಿಯಲಿದ್ದಾರೆ. ಈ ಬಾರಿಯ ಐಪಿಎಲ್ ಮೆಗಾ ಹರಾಜಿನ ಮೂಲಕ ಎಸ್​ಆರ್​ಹೆಚ್ ಫ್ರಾಂಚೈಸಿ ಬ್ರೈಡನ್ ಕಾರ್ಸ್ ಅವರನ್ನು 1 ಕೋಟಿ ರೂ.ಗೆ ಖರೀದಿಸಿದೆ. ಇದೀಗ ಭಾರತೀಯ ಪಿಚ್​ನಲ್ಲಿ ಅದ್ಭುತ ಆಲ್​ರೌಂಡರ್ ಪ್ರದರ್ಶನ ನೀಡುವ ಮೂಲಕ ಬ್ರೈಡನ್ ಕಾರ್ಸ್ ಸನ್​ರೈಸರ್ಸ್ ಹೈದರಾಬಾದ್ ಪರ ಕೂಡ ಸಂಚಲನ ಸೃಷ್ಟಿಸುವ ಸೂಚನೆ ನೀಡಿದ್ದಾರೆ.

5 / 5
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ