AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿ20 ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ ಹರ್ಮನ್​ಪ್ರೀತ್ ಕೌರ್​

India Women vs Sri Lanka Women: ತಿರುವನಂತಪುರದ ಗ್ರೀನ್​ಫೀಲ್ಡ್​ ಸ್ಟೇಡಿಯಂನಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಮೂರನೇ ಪಂದ್ಯದಲ್ಲಿ ಭಾರತ ತಂಡ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ 20 ಓವರ್​ಗಳಲ್ಲಿ 112 ರನ್​ ಕಲೆಹಾಕಿದರೆ, ಟೀಮ್ ಇಂಡಿಯಾ 13.2 ಓವರ್​​ಗಳಲ್ಲಿ ಈ ಗುರಿ ಚೇಸಿಂಗ್ ಮಾಡುವ ಮೂಲಕ 8 ವಿಕೆಟ್​ಗಳ ಗೆಲುವು ದಾಖಲಿಸಿದೆ.

ಝಾಹಿರ್ ಯೂಸುಫ್
|

Updated on: Dec 27, 2025 | 8:53 AM

Share
ಶ್ರೀಲಂಕಾ ಮಹಿಳಾ ತಂಡದ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯನ್ನು ಭಾರತ ಮಹಿಳಾ ತಂಡ 3-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿಕೊಂಡಿದೆ. ಈ ಸರಣಿಯ ಮೊದಲೆರಡು ಪಂದ್ಯಗಳಲ್ಲಿ ಕ್ರಮವಾಗಿ 8 ಮತ್ತು 7 ವಿಕೆಟ್​ಗಳ ಜಯ ಸಾಧಿಸಿದ್ದ ಟೀಮ್ ಇಂಡಿಯಾ ಮೂರನೇ ಮ್ಯಾಚ್​ನಲ್ಲಿ 8 ವಿಕೆಟ್​ಗಳ ಗೆಲುವು ದಾಖಲಿಸಿದೆ.

ಶ್ರೀಲಂಕಾ ಮಹಿಳಾ ತಂಡದ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯನ್ನು ಭಾರತ ಮಹಿಳಾ ತಂಡ 3-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿಕೊಂಡಿದೆ. ಈ ಸರಣಿಯ ಮೊದಲೆರಡು ಪಂದ್ಯಗಳಲ್ಲಿ ಕ್ರಮವಾಗಿ 8 ಮತ್ತು 7 ವಿಕೆಟ್​ಗಳ ಜಯ ಸಾಧಿಸಿದ್ದ ಟೀಮ್ ಇಂಡಿಯಾ ಮೂರನೇ ಮ್ಯಾಚ್​ನಲ್ಲಿ 8 ವಿಕೆಟ್​ಗಳ ಗೆಲುವು ದಾಖಲಿಸಿದೆ.

1 / 5
ಈ ಗೆಲುವಿನೊಂದಿಗೆ ಮಹಿಳಾ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನ ಅತ್ಯಂತ ಯಶಸ್ವಿ ನಾಯಕಿ ಎಂಬ ವಿಶ್ವ ದಾಖಲೆಯೊಂದು ಹರ್ಮನ್​ಪ್ರೀತ್ ಕೌರ್ ಪಾಲಾಗಿದೆ. ಅಂದರೆ ಟಿ20 ಕ್ರಿಕೆಟ್​ನಲ್ಲಿ ಅತೀ ಹೆಚ್ಚು ಗೆಲುವು ತಂಡ ನಾಯಕಿ ಎಂಬ ಹೆಗ್ಗಳಿಕೆಯನ್ನು ಹರ್ಮನ್​ಪ್ರೀತ್ ತಮ್ಮದಾಗಿಸಿಕೊಂಡಿದ್ದಾರೆ.

ಈ ಗೆಲುವಿನೊಂದಿಗೆ ಮಹಿಳಾ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನ ಅತ್ಯಂತ ಯಶಸ್ವಿ ನಾಯಕಿ ಎಂಬ ವಿಶ್ವ ದಾಖಲೆಯೊಂದು ಹರ್ಮನ್​ಪ್ರೀತ್ ಕೌರ್ ಪಾಲಾಗಿದೆ. ಅಂದರೆ ಟಿ20 ಕ್ರಿಕೆಟ್​ನಲ್ಲಿ ಅತೀ ಹೆಚ್ಚು ಗೆಲುವು ತಂಡ ನಾಯಕಿ ಎಂಬ ಹೆಗ್ಗಳಿಕೆಯನ್ನು ಹರ್ಮನ್​ಪ್ರೀತ್ ತಮ್ಮದಾಗಿಸಿಕೊಂಡಿದ್ದಾರೆ.

2 / 5
ಇದಕ್ಕೂ ಮುನ್ನ ಈ ವಿಶ್ವ ದಾಖಲೆ ಆಸ್ಟ್ರೇಲಿಯಾ ತಂಡದ ಮಾಜಿ ನಾಯಕಿ ಮೆಗ್ ಲ್ಯಾನಿಂಗ್​ ಹೆಸರಿನಲ್ಲಿತ್ತು. 2014 ರಿಂದ 2023 ರವರೆಗೆ ಆಸ್ಟ್ರೇಲಿಯಾ ತಂಡವನ್ನು 100 ಪಂದ್ಯಗಳಲ್ಲಿ ಮುನ್ನಡೆಸಿದ್ದ ಲ್ಯಾನಿಂಗ್ 76 ಮ್ಯಾಚ್​ಗಳಲ್ಲಿ ಗೆಲುವು ಸಾಧಿಸಿದ್ದರು. ಈ ಮೂಲಕ ಮಹಿಳಾ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನ ಅತ್ಯಂತ ಯಶಸ್ವಿ ನಾಯಕಿ ಎನಿಸಿಕೊಂಡಿದ್ದರು.

ಇದಕ್ಕೂ ಮುನ್ನ ಈ ವಿಶ್ವ ದಾಖಲೆ ಆಸ್ಟ್ರೇಲಿಯಾ ತಂಡದ ಮಾಜಿ ನಾಯಕಿ ಮೆಗ್ ಲ್ಯಾನಿಂಗ್​ ಹೆಸರಿನಲ್ಲಿತ್ತು. 2014 ರಿಂದ 2023 ರವರೆಗೆ ಆಸ್ಟ್ರೇಲಿಯಾ ತಂಡವನ್ನು 100 ಪಂದ್ಯಗಳಲ್ಲಿ ಮುನ್ನಡೆಸಿದ್ದ ಲ್ಯಾನಿಂಗ್ 76 ಮ್ಯಾಚ್​ಗಳಲ್ಲಿ ಗೆಲುವು ಸಾಧಿಸಿದ್ದರು. ಈ ಮೂಲಕ ಮಹಿಳಾ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನ ಅತ್ಯಂತ ಯಶಸ್ವಿ ನಾಯಕಿ ಎನಿಸಿಕೊಂಡಿದ್ದರು.

3 / 5
ಇದೀಗ ಈ ದಾಖಲೆಯನ್ನು ಮುರಿಯುವಲ್ಲಿ ಟೀಮ್ ಇಂಡಿಯಾ ನಾಯಕಿ ಹರ್ಮನ್​​ಪ್ರೀತ್ ಕೌರ್​ ಯಶಸ್ವಿಯಾಗಿದ್ದಾರೆ. ಭಾರತ ತಂಡವನ್ನು ಈವರೆಗೆ 131 ಪಂದ್ಯಗಳಲ್ಲಿ ಮುನ್ನಡೆಸಿರುವ ಹರ್ಮನ್​ಪ್ರೀತ್ ಒಟ್ಟು 77 ಮ್ಯಾಚ್​ಗಳಲ್ಲಿ ಗೆಲುವು ತಂದುಕೊಟ್ಟಿದ್ದಾರೆ. 

ಇದೀಗ ಈ ದಾಖಲೆಯನ್ನು ಮುರಿಯುವಲ್ಲಿ ಟೀಮ್ ಇಂಡಿಯಾ ನಾಯಕಿ ಹರ್ಮನ್​​ಪ್ರೀತ್ ಕೌರ್​ ಯಶಸ್ವಿಯಾಗಿದ್ದಾರೆ. ಭಾರತ ತಂಡವನ್ನು ಈವರೆಗೆ 131 ಪಂದ್ಯಗಳಲ್ಲಿ ಮುನ್ನಡೆಸಿರುವ ಹರ್ಮನ್​ಪ್ರೀತ್ ಒಟ್ಟು 77 ಮ್ಯಾಚ್​ಗಳಲ್ಲಿ ಗೆಲುವು ತಂದುಕೊಟ್ಟಿದ್ದಾರೆ. 

4 / 5
ಈ ಗೆಲುವುಗಳೊಂದಿಗೆ ಮಹಿಳಾ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತ್ಯಧಿಕ ಗೆಲುವು ಕಂಡ ನಾಯಕಿ ಎಂಬ ವಿಶ್ವ ದಾಖಲೆಯನ್ನು ಹರ್ಮನ್​ಪ್ರೀತ್ ಕೌರ್ ತಮ್ಮದಾಗಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೆ ಮುಂಬರುವ ಟಿ20 ವಿಶ್ವಕಪ್​ವರೆಗೆ ಹರ್ಮನ್​ಪ್ರೀತ್ ಭಾರತ ಟಿ20 ತಂಡದ ನಾಯಕಿಯಾಗಿ ಮುಂದುವರೆಯಲಿದ್ದಾರೆ. ಹೀಗಾಗಿ ಅವರ ಕಡೆಯಿಂದ ಮತ್ತಷ್ಟು ದಾಖಲೆಗಳನ್ನು ನಿರೀಕ್ಷಿಸಬಹುದು.

ಈ ಗೆಲುವುಗಳೊಂದಿಗೆ ಮಹಿಳಾ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತ್ಯಧಿಕ ಗೆಲುವು ಕಂಡ ನಾಯಕಿ ಎಂಬ ವಿಶ್ವ ದಾಖಲೆಯನ್ನು ಹರ್ಮನ್​ಪ್ರೀತ್ ಕೌರ್ ತಮ್ಮದಾಗಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೆ ಮುಂಬರುವ ಟಿ20 ವಿಶ್ವಕಪ್​ವರೆಗೆ ಹರ್ಮನ್​ಪ್ರೀತ್ ಭಾರತ ಟಿ20 ತಂಡದ ನಾಯಕಿಯಾಗಿ ಮುಂದುವರೆಯಲಿದ್ದಾರೆ. ಹೀಗಾಗಿ ಅವರ ಕಡೆಯಿಂದ ಮತ್ತಷ್ಟು ದಾಖಲೆಗಳನ್ನು ನಿರೀಕ್ಷಿಸಬಹುದು.

5 / 5
Follow Us
ಸ್ವದೇಶಿ ನಿರ್ಮಿತ ಮಾಲ್ವಾಣ್ ಯುದ್ಧನೌಕೆ ಹೇಗಿದೆ? ವಿಶೇಷಗಳೇನು?
ಸ್ವದೇಶಿ ನಿರ್ಮಿತ ಮಾಲ್ವಾಣ್ ಯುದ್ಧನೌಕೆ ಹೇಗಿದೆ? ವಿಶೇಷಗಳೇನು?
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೃಷ್ಣಾ ನದಿಗೆ ಹರಿದುಬಂತು 60,000 ಕ್ಯೂಸೆಕ್ ನೀರು
ಕೃಷ್ಣಾ ನದಿಗೆ ಹರಿದುಬಂತು 60,000 ಕ್ಯೂಸೆಕ್ ನೀರು
ಪ್ರಧಾನಿ ಮನೆ ಮುಂದೆ ಕರ್ನಾಟಕದ ಸಿಎಂ ಡಿ.ಕೆ. ಶಿವಕುಮಾರ್ ಕೂಡ ಧರಣಿ
ಪ್ರಧಾನಿ ಮನೆ ಮುಂದೆ ಕರ್ನಾಟಕದ ಸಿಎಂ ಡಿ.ಕೆ. ಶಿವಕುಮಾರ್ ಕೂಡ ಧರಣಿ