AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Women’s Asia Cup 2024: 7 ಸಿಕ್ಸರ್, 119 ರನ್; ಏಷ್ಯಾಕಪ್​ನಲ್ಲಿ ಇತಿಹಾಸ ಸೃಷ್ಟಿಸಿದ ಚಾಮರಿ ಅಟಪಟ್ಟು

Chamari Atapattu, Women’s Asia Cup 2024: ಸಿಡಿಲಬ್ಬರದ ಶತಕದೊಂದಿಗೆ ಚಾಮರಿ ಅಟಪಟ್ಟು ಟಿ20 ಮಾದರಿಯಲ್ಲಿ ನಡೆಯುತ್ತಿರುವ ಈ ಟೂರ್ನಿಯಲ್ಲಿ ಶತಕ ಸಿಡಿಸಿದ ಮೊದಲ ಆಟಗಾರ್ತಿ ಎನಿಸಿಕೊಂಡಿದ್ದಾರೆ. ಈ ಮೊದಲು ಟಿ20 ಏಷ್ಯಾಕಪ್‌ನಲ್ಲಿ ಯಾವುದೇ ಮಹಿಳಾ ಆಟಗಾರ್ತಿ ಶತಕ ಸಿಡಿಸಿರಲಿಲ್ಲ.

ಪೃಥ್ವಿಶಂಕರ
|

Updated on: Jul 22, 2024 | 9:50 PM

Share
ಶ್ರೀಲಂಕಾದಲ್ಲಿ ನಡೆಯುತ್ತಿರುವ ಮಹಿಳಾ ಏಷ್ಯಾಕಪ್​ನಲ್ಲಿ ಇಂದು ನಡೆದ ಪಂದ್ಯದಲ್ಲಿ ಆತಿಥೇಯ ಶ್ರೀಲಂಕಾ ತಂಡ, ಮಲೇಷ್ಯಾ ತಂಡವನ್ನು ಬರೋಬ್ಬರಿ 144 ರನ್​ಗಳ ಬೃಹತ್ ಅಂತರದಿಂದ ಪಣಿಸಿದೆ. ಲಂಕಾ ನೀಡಿದ 184 ರನ್​​ಗಳ ಗುರಿ ಬೆನ್ನಟ್ಟಿದ ಮಲೇಷ್ಯಾ ತಂಡ ಕೇವಲ 40 ರನ್​ಗಳಿಗೆ ಆಲೌಟ್ ಆಯಿತು.

ಶ್ರೀಲಂಕಾದಲ್ಲಿ ನಡೆಯುತ್ತಿರುವ ಮಹಿಳಾ ಏಷ್ಯಾಕಪ್​ನಲ್ಲಿ ಇಂದು ನಡೆದ ಪಂದ್ಯದಲ್ಲಿ ಆತಿಥೇಯ ಶ್ರೀಲಂಕಾ ತಂಡ, ಮಲೇಷ್ಯಾ ತಂಡವನ್ನು ಬರೋಬ್ಬರಿ 144 ರನ್​ಗಳ ಬೃಹತ್ ಅಂತರದಿಂದ ಪಣಿಸಿದೆ. ಲಂಕಾ ನೀಡಿದ 184 ರನ್​​ಗಳ ಗುರಿ ಬೆನ್ನಟ್ಟಿದ ಮಲೇಷ್ಯಾ ತಂಡ ಕೇವಲ 40 ರನ್​ಗಳಿಗೆ ಆಲೌಟ್ ಆಯಿತು.

1 / 7
ಇದಕ್ಕೂ ಮುನ್ನ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಶ್ರೀಲಂಕಾ ತಂಡ 20 ಓವರ್‌ಗಳಲ್ಲಿ 4 ವಿಕೆಟ್‌ಗೆ 184 ರನ್ ಗಳಿಸಿತು. ತಂಡದ ಪರ ಸಿಡಿಲಬ್ಬರದ ಬ್ಯಾಟಿಂಗ್ ಮಾಡಿದ ನಾಯಕಿ ಚಾಮರಿ ಅಟಪಟ್ಟು ಕೇವಲ 69 ಎಸೆತಗಳಲ್ಲಿ 119 ರನ್‌ಗಳ ಅಜೇಯ ಇನ್ನಿಂಗ್ಸ್‌ ಆಡಿದರು. ಅಟಪಟ್ಟು ಅವರ ಇನ್ನಿಂಗ್ಸ್​ನಲ್ಲಿ 14 ಬೌಂಡರಿ ಹಾಗೂ 7 ಸಿಕ್ಸರ್‌ಗಳು ಸೇರಿದ್ದವು.

ಇದಕ್ಕೂ ಮುನ್ನ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಶ್ರೀಲಂಕಾ ತಂಡ 20 ಓವರ್‌ಗಳಲ್ಲಿ 4 ವಿಕೆಟ್‌ಗೆ 184 ರನ್ ಗಳಿಸಿತು. ತಂಡದ ಪರ ಸಿಡಿಲಬ್ಬರದ ಬ್ಯಾಟಿಂಗ್ ಮಾಡಿದ ನಾಯಕಿ ಚಾಮರಿ ಅಟಪಟ್ಟು ಕೇವಲ 69 ಎಸೆತಗಳಲ್ಲಿ 119 ರನ್‌ಗಳ ಅಜೇಯ ಇನ್ನಿಂಗ್ಸ್‌ ಆಡಿದರು. ಅಟಪಟ್ಟು ಅವರ ಇನ್ನಿಂಗ್ಸ್​ನಲ್ಲಿ 14 ಬೌಂಡರಿ ಹಾಗೂ 7 ಸಿಕ್ಸರ್‌ಗಳು ಸೇರಿದ್ದವು.

2 / 7
ಈ ಸಿಡಿಲಬ್ಬರದ ಶತಕದೊಂದಿಗೆ ಚಾಮರಿ ಅಟಪಟ್ಟು ಟಿ20 ಮಾದರಿಯಲ್ಲಿ ನಡೆಯುತ್ತಿರುವ ಈ ಟೂರ್ನಿಯಲ್ಲಿ ಶತಕ ಸಿಡಿಸಿದ ಮೊದಲ ಆಟಗಾರ್ತಿ ಎನಿಸಿಕೊಂಡಿದ್ದಾರೆ. ಈ ಮೊದಲು ಟಿ20 ಏಷ್ಯಾಕಪ್‌ನಲ್ಲಿ ಯಾವುದೇ ಮಹಿಳಾ ಆಟಗಾರ್ತಿ ಶತಕ ಸಿಡಿಸಿರಲಿಲ್ಲ.

ಈ ಸಿಡಿಲಬ್ಬರದ ಶತಕದೊಂದಿಗೆ ಚಾಮರಿ ಅಟಪಟ್ಟು ಟಿ20 ಮಾದರಿಯಲ್ಲಿ ನಡೆಯುತ್ತಿರುವ ಈ ಟೂರ್ನಿಯಲ್ಲಿ ಶತಕ ಸಿಡಿಸಿದ ಮೊದಲ ಆಟಗಾರ್ತಿ ಎನಿಸಿಕೊಂಡಿದ್ದಾರೆ. ಈ ಮೊದಲು ಟಿ20 ಏಷ್ಯಾಕಪ್‌ನಲ್ಲಿ ಯಾವುದೇ ಮಹಿಳಾ ಆಟಗಾರ್ತಿ ಶತಕ ಸಿಡಿಸಿರಲಿಲ್ಲ.

3 / 7
ಈ ಶತಕದೊಂದಿಗೆ ಅಟಪಟ್ಟು ಟಿ20 ವೃತ್ತಿಜೀವನದಲ್ಲಿ ಮೂರನೇ ಶತಕ ದಾಖಲಿಸಿದರು. ಇಲ್ಲಿಯವರೆಗೆ ಅವರು 136 ಪಂದ್ಯಗಳಲ್ಲಿ 24.44 ರ ಸರಾಸರಿಯಲ್ಲಿ 3153 ರನ್ ಗಳಿಸಿದ್ದಾರೆ. ಈ ಹಿಂದೆ ಆಸ್ಟ್ರೇಲಿಯಾ ಮತ್ತು ಸ್ಕಾಟ್ಲೆಂಡ್ ವಿರುದ್ಧವೂ ಅವರು ಶತಕ ಬಾರಿಸಿದ್ದರು.

ಈ ಶತಕದೊಂದಿಗೆ ಅಟಪಟ್ಟು ಟಿ20 ವೃತ್ತಿಜೀವನದಲ್ಲಿ ಮೂರನೇ ಶತಕ ದಾಖಲಿಸಿದರು. ಇಲ್ಲಿಯವರೆಗೆ ಅವರು 136 ಪಂದ್ಯಗಳಲ್ಲಿ 24.44 ರ ಸರಾಸರಿಯಲ್ಲಿ 3153 ರನ್ ಗಳಿಸಿದ್ದಾರೆ. ಈ ಹಿಂದೆ ಆಸ್ಟ್ರೇಲಿಯಾ ಮತ್ತು ಸ್ಕಾಟ್ಲೆಂಡ್ ವಿರುದ್ಧವೂ ಅವರು ಶತಕ ಬಾರಿಸಿದ್ದರು.

4 / 7
ಇದಲ್ಲದೆ ಮಲೇಷ್ಯಾ ವಿರುದ್ಧ ತನ್ನ ಇನ್ನಿಂಗ್ಸ್‌ನಲ್ಲಿ 7 ಸಿಕ್ಸರ್‌ಗಳನ್ನು ಬಾರಿಸಿದ ಅಟಪಟ್ಟು, ಏಷ್ಯಾಕಪ್ ಪಂದ್ಯವೊಂದರಲ್ಲಿ ಅತ್ಯಧಿಕ ಸಿಕ್ಸರ್ ಬಾರಿಸಿದ ದಾಖಲೆ ಕೂಡ ನಿರ್ಮಿಸಿದರು. ಇವರಿಗೂ ಮುನ್ನ ಯಾವುದೇ ಮಹಿಳಾ ಆಟಗಾರ್ತಿ ಏಷ್ಯಾಕಪ್ ಪಂದ್ಯವೊಂದರಲ್ಲಿ ಇಷ್ಟು ಸಿಕ್ಸರ್ ಬಾರಿಸಿಲ್ಲ.

ಇದಲ್ಲದೆ ಮಲೇಷ್ಯಾ ವಿರುದ್ಧ ತನ್ನ ಇನ್ನಿಂಗ್ಸ್‌ನಲ್ಲಿ 7 ಸಿಕ್ಸರ್‌ಗಳನ್ನು ಬಾರಿಸಿದ ಅಟಪಟ್ಟು, ಏಷ್ಯಾಕಪ್ ಪಂದ್ಯವೊಂದರಲ್ಲಿ ಅತ್ಯಧಿಕ ಸಿಕ್ಸರ್ ಬಾರಿಸಿದ ದಾಖಲೆ ಕೂಡ ನಿರ್ಮಿಸಿದರು. ಇವರಿಗೂ ಮುನ್ನ ಯಾವುದೇ ಮಹಿಳಾ ಆಟಗಾರ್ತಿ ಏಷ್ಯಾಕಪ್ ಪಂದ್ಯವೊಂದರಲ್ಲಿ ಇಷ್ಟು ಸಿಕ್ಸರ್ ಬಾರಿಸಿಲ್ಲ.

5 / 7
ಈ ಟೂರ್ನಿಯಲ್ಲಿ ಇನ್ನಿಂಗ್ಸ್‌ನಲ್ಲಿ ಗರಿಷ್ಠ 3 ಸಿಕ್ಸರ್‌ಗಳನ್ನು ಬಾರಿಸಿರುವುದು ಇಲ್ಲಿಯವರೆಗಿನ ದಾಖಲೆಯಾಗಿತ್ತು. 2022ರ ಏಷ್ಯಾಕಪ್‌ನಲ್ಲಿ ಭಾರತದ ಶೆಫಾಲಿ ವರ್ಮಾ ಮಲೇಷ್ಯಾ ವಿರುದ್ಧ 3 ಸಿಕ್ಸರ್‌ಗಳನ್ನು ಬಾರಿಸಿದ್ದರು. ಹಾಗೆಯೇ ಭಾರತದ ರಿಚಾ ಘೋಷ್ ಕೂಡ ಪಾಕಿಸ್ತಾನದ ವಿರುದ್ಧ ಮೂರು ಸಿಕ್ಸರ್‌ಗಳನ್ನು ಬಾರಿಸಿದ್ದರು.

ಈ ಟೂರ್ನಿಯಲ್ಲಿ ಇನ್ನಿಂಗ್ಸ್‌ನಲ್ಲಿ ಗರಿಷ್ಠ 3 ಸಿಕ್ಸರ್‌ಗಳನ್ನು ಬಾರಿಸಿರುವುದು ಇಲ್ಲಿಯವರೆಗಿನ ದಾಖಲೆಯಾಗಿತ್ತು. 2022ರ ಏಷ್ಯಾಕಪ್‌ನಲ್ಲಿ ಭಾರತದ ಶೆಫಾಲಿ ವರ್ಮಾ ಮಲೇಷ್ಯಾ ವಿರುದ್ಧ 3 ಸಿಕ್ಸರ್‌ಗಳನ್ನು ಬಾರಿಸಿದ್ದರು. ಹಾಗೆಯೇ ಭಾರತದ ರಿಚಾ ಘೋಷ್ ಕೂಡ ಪಾಕಿಸ್ತಾನದ ವಿರುದ್ಧ ಮೂರು ಸಿಕ್ಸರ್‌ಗಳನ್ನು ಬಾರಿಸಿದ್ದರು.

6 / 7
ಇವರಲ್ಲದೆ ಪಾಕಿಸ್ತಾನದ ಅಲಿಯಾ ರಿಯಾಜ್ 2022 ರ ಏಷ್ಯಾಕಪ್‌ನಲ್ಲಿ ಯುಎಇ ವಿರುದ್ಧ ಮೂರು ಸಿಕ್ಸರ್‌ಗಳನ್ನು ಬಾರಿಸಿದ್ದರು. ಭಾರತದ ಸ್ಮೃತಿ ಮಂಧಾನ ಕೂಡ 2022 ರಲ್ಲಿ ಶ್ರೀಲಂಕಾ ವಿರುದ್ಧ ಮೂರು ಸಿಕ್ಸರ್‌ಗಳನ್ನು ಬಾರಿಸುವಲ್ಲಿ ಯಶಸ್ವಿಯಾಗಿದ್ದರು. ಆದರೆ ಈಗ ಈ ಎಲ್ಲಾ ದಾಖಲೆಗಳನ್ನು ಅಟಪಟ್ಟು ಮುರಿದಿದ್ದಾರೆ.

ಇವರಲ್ಲದೆ ಪಾಕಿಸ್ತಾನದ ಅಲಿಯಾ ರಿಯಾಜ್ 2022 ರ ಏಷ್ಯಾಕಪ್‌ನಲ್ಲಿ ಯುಎಇ ವಿರುದ್ಧ ಮೂರು ಸಿಕ್ಸರ್‌ಗಳನ್ನು ಬಾರಿಸಿದ್ದರು. ಭಾರತದ ಸ್ಮೃತಿ ಮಂಧಾನ ಕೂಡ 2022 ರಲ್ಲಿ ಶ್ರೀಲಂಕಾ ವಿರುದ್ಧ ಮೂರು ಸಿಕ್ಸರ್‌ಗಳನ್ನು ಬಾರಿಸುವಲ್ಲಿ ಯಶಸ್ವಿಯಾಗಿದ್ದರು. ಆದರೆ ಈಗ ಈ ಎಲ್ಲಾ ದಾಖಲೆಗಳನ್ನು ಅಟಪಟ್ಟು ಮುರಿದಿದ್ದಾರೆ.

7 / 7
Follow Us
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ