Sign In

By signing in or creating an account, you agree with Associated Broadcasting Company's Terms & Conditions and Privacy Policy.

Champions Trophy 2025: ಚಾಂಪಿಯನ್ಸ್ ಟ್ರೋಫಿ ಟೂರ್ನಿಯಿಂದ 13 ಆಟಗಾರರು ಔಟ್

Champions Trophy 2025: ಚಾಂಪಿಯನ್ಸ್ ಟ್ರೋಫಿ ಏಕದಿನ ಟೂರ್ನಿಯು ಫೆಬ್ರವರಿ 19 ರಿಂದ ಮಾರ್ಚ್ 9 ರವರೆಗೆ ನಡೆಯಲಿದೆ. ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಆಯೋಜಿಸುತ್ತಿರುವ ಈ ಟೂರ್ನಿಯಿಂದ ಒಟ್ಟು 13 ಆಟಗಾರರು ಹೊರಗುಳಿದಿದ್ದಾರೆ. ಇವರಲ್ಲಿ 9 ಮಂದಿ ಬೌಲರ್​ಗಳು ಎಂಬುದು ವಿಶೇಷ. ಈ ಬಾರಿಯ ಚಾಂಪಿಯನ್ಸ್ ಟ್ರೋಫಿಗೆ ಅಲಭ್ಯರಾಗಿರುವ ಪ್ರಮುಖ ಆಟಗಾರರ ಪಟ್ಟಿ ಈ ಕೆಳಗಿನಂತಿದೆ...

ಝಾಹಿರ್ ಯೂಸುಫ್
|

Updated on:Feb 18, 2025 | 1:29 PM

ಈ ಬಾರಿಯ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಿಂದ ಈವರೆಗೆ 15 ಆಟಗಾರರು ಹೊರಗುಳಿದಿದ್ದಾರೆ. ಈ ಪಟ್ಟಿಗೆ ಕೊನೆಯ ಸೇರ್ಪಡೆ ಇಂಗ್ಲೆಂಡ್ ತಂಡದ ಆಟಗಾರ ಬ್ರೈಡನ್ ಕಾರ್ಸ್​. ಕಾಲ್ಬೆರಳಿನ ಗಾಯದ ಕಾರಣ ಕಾರ್ಸ್​ ಇಂಗ್ಲೆಂಡ್ ತಂಡದ ಮುಂದಿನ ಪಂದ್ಯಗಳಿಗೆ ಅಲಭ್ಯರಾಗಿದ್ದಾರೆ. ಹೀಗೆ ಗಾಯಗೊಂಡು ಹಾಗೂ ಇನ್ನಿತರೆ ಕಾರಣಗಳಿಂದ ಈ ಬಾರಿಯ ಚಾಂಪಿಯನ್ಸ್ ಟ್ರೋಫಿಯಿಂದ ಹಿಂದೆ ಸರಿದಿರುವ ಆಟಗಾರರ ಸಂಪೂರ್ಣ ಪಟ್ಟಿ ಇಲ್ಲಿದೆ...

ಈ ಬಾರಿಯ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಿಂದ ಈವರೆಗೆ 15 ಆಟಗಾರರು ಹೊರಗುಳಿದಿದ್ದಾರೆ. ಈ ಪಟ್ಟಿಗೆ ಕೊನೆಯ ಸೇರ್ಪಡೆ ಇಂಗ್ಲೆಂಡ್ ತಂಡದ ಆಟಗಾರ ಬ್ರೈಡನ್ ಕಾರ್ಸ್​. ಕಾಲ್ಬೆರಳಿನ ಗಾಯದ ಕಾರಣ ಕಾರ್ಸ್​ ಇಂಗ್ಲೆಂಡ್ ತಂಡದ ಮುಂದಿನ ಪಂದ್ಯಗಳಿಗೆ ಅಲಭ್ಯರಾಗಿದ್ದಾರೆ. ಹೀಗೆ ಗಾಯಗೊಂಡು ಹಾಗೂ ಇನ್ನಿತರೆ ಕಾರಣಗಳಿಂದ ಈ ಬಾರಿಯ ಚಾಂಪಿಯನ್ಸ್ ಟ್ರೋಫಿಯಿಂದ ಹಿಂದೆ ಸರಿದಿರುವ ಆಟಗಾರರ ಸಂಪೂರ್ಣ ಪಟ್ಟಿ ಇಲ್ಲಿದೆ...

1 / 14
ಪ್ಯಾಟ್ ಕಮಿನ್ಸ್: ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಮುಂಬರುವ ಚಾಂಪಿಯನ್ಸ್ ಟ್ರೋಫಿಯಲ್ಲಿ ಕಣಕ್ಕಿಳಿಯುತ್ತಿಲ್ಲ. ಪಾದದ ನೋವಿನ ಕಾರಣ ಅವರು ಚಾಂಪಿಯನ್ಸ್ ಟ್ರೋಫಿಯಿಂದ ಹೊರಗುಳಿದಿದ್ದಾರೆ.

ಪ್ಯಾಟ್ ಕಮಿನ್ಸ್: ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಮುಂಬರುವ ಚಾಂಪಿಯನ್ಸ್ ಟ್ರೋಫಿಯಲ್ಲಿ ಕಣಕ್ಕಿಳಿಯುತ್ತಿಲ್ಲ. ಪಾದದ ನೋವಿನ ಕಾರಣ ಅವರು ಚಾಂಪಿಯನ್ಸ್ ಟ್ರೋಫಿಯಿಂದ ಹೊರಗುಳಿದಿದ್ದಾರೆ.

2 / 14
ಜೆರಾಲ್ಡ್ ಕೋಟ್ಝಿ: ಸೌತ್ ಆಫ್ರಿಕಾ ತಂಡದ ಬಲಗೈ ವೇಗದ ಬೌಲರ್ ಜೆರಾಲ್ಡ್ ಕೋಟ್ಝಿ ಸಹ ಚಾಂಪಿಯನ್ಸ್ ಟ್ರೋಫಿಯಲ್ಲಿ ಕಾಣಿಸಿಕೊಳ್ಳುವುದಿಲ್ಲ. ತೊಡೆಸಂದು ಬಿಗಿತದ ಸಮಸ್ಯೆಯಿಂದ ಬಳಲುತ್ತಿರುವ ಅವರು ಟೂರ್ನಿಯಿಂದ ಹಿಂದೆ ಸರಿದಿದ್ದಾರೆ.

ಜೆರಾಲ್ಡ್ ಕೋಟ್ಝಿ: ಸೌತ್ ಆಫ್ರಿಕಾ ತಂಡದ ಬಲಗೈ ವೇಗದ ಬೌಲರ್ ಜೆರಾಲ್ಡ್ ಕೋಟ್ಝಿ ಸಹ ಚಾಂಪಿಯನ್ಸ್ ಟ್ರೋಫಿಯಲ್ಲಿ ಕಾಣಿಸಿಕೊಳ್ಳುವುದಿಲ್ಲ. ತೊಡೆಸಂದು ಬಿಗಿತದ ಸಮಸ್ಯೆಯಿಂದ ಬಳಲುತ್ತಿರುವ ಅವರು ಟೂರ್ನಿಯಿಂದ ಹಿಂದೆ ಸರಿದಿದ್ದಾರೆ.

3 / 14
ಸೈಮ್ ಅಯ್ಯೂಬ್: ಪಾಕಿಸ್ತಾನ್ ತಂಡದ ಆರಂಭಿಕ ಆಟಗಾರ ಸೈಮ್ ಅಯ್ಯೂಬ್ ಕಣಕಾಲು ಗಾಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಚಾಂಪಿಯನ್ಸ್ ಟ್ರೋಫಿ ಪಾಕ್​ ತಂಡದಿಂದ ಸೈಮ್ ಅವರನ್ನು ಕೈ ಬಿಡಲಾಗಿದೆ.

ಸೈಮ್ ಅಯ್ಯೂಬ್: ಪಾಕಿಸ್ತಾನ್ ತಂಡದ ಆರಂಭಿಕ ಆಟಗಾರ ಸೈಮ್ ಅಯ್ಯೂಬ್ ಕಣಕಾಲು ಗಾಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಚಾಂಪಿಯನ್ಸ್ ಟ್ರೋಫಿ ಪಾಕ್​ ತಂಡದಿಂದ ಸೈಮ್ ಅವರನ್ನು ಕೈ ಬಿಡಲಾಗಿದೆ.

4 / 14
ಜೋಶ್ ಹ್ಯಾಝಲ್​ವುಡ್​: ಆಸ್ಟ್ರೇಲಿಯಾ ತಂಡದ ಪ್ರಮುಖ ವೇಗಿ ಜೋಶ್ ಹ್ಯಾಝಲ್​ವುಡ್ ಕೂಡ ಚಾಂಪಿಯನ್ಸ್ ಟ್ರೋಫಿಯಿಂದ ಹಿಂದೆ ಸರಿದಿದ್ದಾರೆ. ಕಣಕಾಲಿನ ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಅವರು ಟೂರ್ನಿಗೆ ಅಲಭ್ಯರಾಗಿದ್ದಾರೆ.

ಜೋಶ್ ಹ್ಯಾಝಲ್​ವುಡ್​: ಆಸ್ಟ್ರೇಲಿಯಾ ತಂಡದ ಪ್ರಮುಖ ವೇಗಿ ಜೋಶ್ ಹ್ಯಾಝಲ್​ವುಡ್ ಕೂಡ ಚಾಂಪಿಯನ್ಸ್ ಟ್ರೋಫಿಯಿಂದ ಹಿಂದೆ ಸರಿದಿದ್ದಾರೆ. ಕಣಕಾಲಿನ ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಅವರು ಟೂರ್ನಿಗೆ ಅಲಭ್ಯರಾಗಿದ್ದಾರೆ.

5 / 14
ಬೆನ್ ಸಿಯರ್ಸ್: ನ್ಯೂಝಿಲೆಂಡ್ ತಂಡದ ವೇಗಿ ಬೆನ್ ಸಿಯರ್ಸ್ ಅವರು ಮಂಡಿರಜ್ಜು ಗಾಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಈ ಬಾರಿಯ ಚಾಂಪಿಯನ್ಸ್ ಟ್ರೋಫಿಯಿಂದ ಕಿವೀಸ್ ವೇಗಿ ಹಿಂದೆ ಸರಿದಿದ್ದಾರೆ.

ಬೆನ್ ಸಿಯರ್ಸ್: ನ್ಯೂಝಿಲೆಂಡ್ ತಂಡದ ವೇಗಿ ಬೆನ್ ಸಿಯರ್ಸ್ ಅವರು ಮಂಡಿರಜ್ಜು ಗಾಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಈ ಬಾರಿಯ ಚಾಂಪಿಯನ್ಸ್ ಟ್ರೋಫಿಯಿಂದ ಕಿವೀಸ್ ವೇಗಿ ಹಿಂದೆ ಸರಿದಿದ್ದಾರೆ.

6 / 14
ಮಿಚೆಲ್ ಸ್ಟಾರ್ಕ್​: ಆಸ್ಟ್ರೇಲಿಯಾ ತಂಡದ ಎಡಗೈ ವೇಗಿ ಮಿಚೆಲ್ ಸ್ಟಾರ್ಕ್ ಸಹ ಚಾಂಪಿಯನ್ಸ್ ಟ್ರೋಫಿಯಲ್ಲಿ ಕಾಣಿಸಿಕೊಳ್ಳುವುದಿಲ್ಲ. ವೈಯುಕ್ತಿಕ ಕಾರಣಗಳಿಂದಾಗಿ ಅವರು ಟೂರ್ನಿಯಿಂದ ಹಿಂದೆ ಸರಿದಿದ್ದಾರೆ.

ಮಿಚೆಲ್ ಸ್ಟಾರ್ಕ್​: ಆಸ್ಟ್ರೇಲಿಯಾ ತಂಡದ ಎಡಗೈ ವೇಗಿ ಮಿಚೆಲ್ ಸ್ಟಾರ್ಕ್ ಸಹ ಚಾಂಪಿಯನ್ಸ್ ಟ್ರೋಫಿಯಲ್ಲಿ ಕಾಣಿಸಿಕೊಳ್ಳುವುದಿಲ್ಲ. ವೈಯುಕ್ತಿಕ ಕಾರಣಗಳಿಂದಾಗಿ ಅವರು ಟೂರ್ನಿಯಿಂದ ಹಿಂದೆ ಸರಿದಿದ್ದಾರೆ.

7 / 14
ಜೇಕಬ್ ಬೆಥೆಲ್: ಇಂಗ್ಲೆಂಡ್ ತಂಡದ ಯುವ ಆಲ್​ರೌಂಡರ್ ಜೇಕಬ್ ಬೆಥೆಲ್ ಕೂಡ ಚಾಂಪಿಯನ್ಸ್ ಟ್ರೋಫಿಯಿಂದ ಹೊರಗುಳಿದಿದ್ದಾರೆ. ಮಂಡಿರಜ್ಜು ಗಾಯದ ಸಮಸ್ಯೆಯ ಕಾರಣ ಚಾಂಪಿಯನ್ಸ್ ಟ್ರೋಫಿಗೆ ಅಲಭ್ಯರಾಗಿದ್ದಾರೆ.

ಜೇಕಬ್ ಬೆಥೆಲ್: ಇಂಗ್ಲೆಂಡ್ ತಂಡದ ಯುವ ಆಲ್​ರೌಂಡರ್ ಜೇಕಬ್ ಬೆಥೆಲ್ ಕೂಡ ಚಾಂಪಿಯನ್ಸ್ ಟ್ರೋಫಿಯಿಂದ ಹೊರಗುಳಿದಿದ್ದಾರೆ. ಮಂಡಿರಜ್ಜು ಗಾಯದ ಸಮಸ್ಯೆಯ ಕಾರಣ ಚಾಂಪಿಯನ್ಸ್ ಟ್ರೋಫಿಗೆ ಅಲಭ್ಯರಾಗಿದ್ದಾರೆ.

8 / 14
ಅನ್ರಿಕ್ ನೋಕಿಯ: ಸೌತ್ ಆಫ್ರಿಕಾ ತಂಡದ ವೇಗದ ಬೌಲರ್ ಅನ್ರಿಕ್ ನೋಕಿಯ ಕೂಡ ಚಾಂಪಿಯನ್ಸ್ ಟ್ರೋಫಿಗೆ ಅಲಭ್ಯರಾಗಿದ್ದಾರೆ. ಬೆನ್ನು ನೋವಿನ ಕಾರಣ ಅವರು ಟೂರ್ನಿಯಿಂದ ಹಿಂದೆ ಸರಿದಿದ್ದಾರೆ.

ಅನ್ರಿಕ್ ನೋಕಿಯ: ಸೌತ್ ಆಫ್ರಿಕಾ ತಂಡದ ವೇಗದ ಬೌಲರ್ ಅನ್ರಿಕ್ ನೋಕಿಯ ಕೂಡ ಚಾಂಪಿಯನ್ಸ್ ಟ್ರೋಫಿಗೆ ಅಲಭ್ಯರಾಗಿದ್ದಾರೆ. ಬೆನ್ನು ನೋವಿನ ಕಾರಣ ಅವರು ಟೂರ್ನಿಯಿಂದ ಹಿಂದೆ ಸರಿದಿದ್ದಾರೆ.

9 / 14
ಮಿಚೆಲ್ ಮಾರ್ಷ್: ಆಸ್ಟ್ರೇಲಿಯಾ ತಂಡದ ಆಲ್​ರೌಂಡರ್ ಮಿಚೆಲ್ ಮಾರ್ಷ್ ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರು ಸಹ ಆಸ್ಟ್ರೇಲಿಯಾ ಚಾಂಪಿಯನ್ಸ್​ ಟ್ರೋಫಿ ತಂಡದಿಂದ ಹೊರಗುಳಿದಿದ್ದಾರೆ.

ಮಿಚೆಲ್ ಮಾರ್ಷ್: ಆಸ್ಟ್ರೇಲಿಯಾ ತಂಡದ ಆಲ್​ರೌಂಡರ್ ಮಿಚೆಲ್ ಮಾರ್ಷ್ ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರು ಸಹ ಆಸ್ಟ್ರೇಲಿಯಾ ಚಾಂಪಿಯನ್ಸ್​ ಟ್ರೋಫಿ ತಂಡದಿಂದ ಹೊರಗುಳಿದಿದ್ದಾರೆ.

10 / 14
ಅಲ್ಲಾ ಗಝನ್‌ಫರ್: ಅಫ್ಘಾನಿಸ್ತಾನ್ ತಂಡದ ಯುವ ಸ್ಪಿನ್ನರ್ ಅಲ್ಲಾ ಗಝನ್‌ಫರ್ ಅವರು ಸಹ ಗಾಯಗೊಂಡಿದ್ದು, ಹೀಗಾಗಿ ಚಾಂಪಿಯನ್ಸ್ ಟ್ರೋಫಿ ಹಾಗೂ ಐಪಿಎಲ್​ನಿಂದ ಹಿಂದೆ ಸರಿದಿದ್ದಾರೆ.

ಅಲ್ಲಾ ಗಝನ್‌ಫರ್: ಅಫ್ಘಾನಿಸ್ತಾನ್ ತಂಡದ ಯುವ ಸ್ಪಿನ್ನರ್ ಅಲ್ಲಾ ಗಝನ್‌ಫರ್ ಅವರು ಸಹ ಗಾಯಗೊಂಡಿದ್ದು, ಹೀಗಾಗಿ ಚಾಂಪಿಯನ್ಸ್ ಟ್ರೋಫಿ ಹಾಗೂ ಐಪಿಎಲ್​ನಿಂದ ಹಿಂದೆ ಸರಿದಿದ್ದಾರೆ.

11 / 14
ಲಾಕಿ ಫರ್ಗುಸನ್: ನ್ಯೂಝಿಲೆಂಡ್‌ ತಂಡದ ವೇಗದ ಬೌಲರ್ ಲಾಕಿ ಫರ್ಗುಸನ್ ಕೂಡ ಚಾಂಪಿಯನ್ಸ್ ಟ್ರೋಫಿಯಿಂದ ಹೊರಗುಳಿದಿದ್ದಾರೆ. ಪಾದದ ಗಾಯದ ಕಾರಣ ಫರ್ಗುಸನ್ ತಂಡದಿಂದ ಹೊರಬಿದ್ದಿದ್ದು, ಹೀಗಾಗಿ ಈ ಬಾರಿಯ ಚಾಂಪಿಯನ್ಸ್​ ಟ್ರೋಫಿಯಲ್ಲಿ ಲಾಕಿ ಕಾಣಿಸಿಕೊಳ್ಳುತ್ತಿಲ್ಲ.

ಲಾಕಿ ಫರ್ಗುಸನ್: ನ್ಯೂಝಿಲೆಂಡ್‌ ತಂಡದ ವೇಗದ ಬೌಲರ್ ಲಾಕಿ ಫರ್ಗುಸನ್ ಕೂಡ ಚಾಂಪಿಯನ್ಸ್ ಟ್ರೋಫಿಯಿಂದ ಹೊರಗುಳಿದಿದ್ದಾರೆ. ಪಾದದ ಗಾಯದ ಕಾರಣ ಫರ್ಗುಸನ್ ತಂಡದಿಂದ ಹೊರಬಿದ್ದಿದ್ದು, ಹೀಗಾಗಿ ಈ ಬಾರಿಯ ಚಾಂಪಿಯನ್ಸ್​ ಟ್ರೋಫಿಯಲ್ಲಿ ಲಾಕಿ ಕಾಣಿಸಿಕೊಳ್ಳುತ್ತಿಲ್ಲ.

12 / 14
ಮಾರ್ಕಸ್ ಸ್ಟೊಯಿನಿಸ್: ಆಸೀಸ್ ಪಡೆಯ ಆಲ್​ರೌಂಡರ್ ಮಾರ್ಕಸ್ ಸ್ಟೊಯಿನಿಸ್ ಅಚ್ಚರಿ ಎಂಬಂತೆ ಕೆಲ ದಿನಗಳ ಹಿಂದೆ ಏಕದಿನ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ಹೀಗಾಗಿ ಈ ಬಾರಿಯ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಮಾರ್ಕಸ್ ಸ್ಟೊಯಿನಿಸ್ ಕಾಣಿಸಿಕೊಂಡಿಲ್ಲ.

ಮಾರ್ಕಸ್ ಸ್ಟೊಯಿನಿಸ್: ಆಸೀಸ್ ಪಡೆಯ ಆಲ್​ರೌಂಡರ್ ಮಾರ್ಕಸ್ ಸ್ಟೊಯಿನಿಸ್ ಅಚ್ಚರಿ ಎಂಬಂತೆ ಕೆಲ ದಿನಗಳ ಹಿಂದೆ ಏಕದಿನ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ಹೀಗಾಗಿ ಈ ಬಾರಿಯ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಮಾರ್ಕಸ್ ಸ್ಟೊಯಿನಿಸ್ ಕಾಣಿಸಿಕೊಂಡಿಲ್ಲ.

13 / 14
ಜಸ್​ಪ್ರೀತ್ ಬುಮ್ರಾ: ಬೆನ್ನು ನೋವಿನ ಸಮಸ್ಯೆಯ ಕಾರಣ ಟೀಮ್ ಇಂಡಿಯಾ ವೇಗಿ ಜಸ್​ಪ್ರೀತ್ ಬುಮ್ರಾ ಸಹ ಚಾಂಪಿಯನ್ಸ್ ಟ್ರೋಫಿಯಿಂದ ಹೊರಗುಳಿದಿದ್ದಾರೆ. ಬುಮ್ರಾ ಅವರ ಅನುಪಸ್ಥಿತಿಯ ನಡುವೆಯೂ ಟೀಮ್ ಇಂಡಿಯಾ ಚಾಂಪಿಯನ್ಸ್​ ಟ್ರೋಫಿಯಲ್ಲಿ ಉತ್ತಮ ಪ್ರದರ್ಶನ ಮುಂದುವರೆಸಿದೆ.

ಜಸ್​ಪ್ರೀತ್ ಬುಮ್ರಾ: ಬೆನ್ನು ನೋವಿನ ಸಮಸ್ಯೆಯ ಕಾರಣ ಟೀಮ್ ಇಂಡಿಯಾ ವೇಗಿ ಜಸ್​ಪ್ರೀತ್ ಬುಮ್ರಾ ಸಹ ಚಾಂಪಿಯನ್ಸ್ ಟ್ರೋಫಿಯಿಂದ ಹೊರಗುಳಿದಿದ್ದಾರೆ. ಬುಮ್ರಾ ಅವರ ಅನುಪಸ್ಥಿತಿಯ ನಡುವೆಯೂ ಟೀಮ್ ಇಂಡಿಯಾ ಚಾಂಪಿಯನ್ಸ್​ ಟ್ರೋಫಿಯಲ್ಲಿ ಉತ್ತಮ ಪ್ರದರ್ಶನ ಮುಂದುವರೆಸಿದೆ.

14 / 14

Published On - 12:53 pm, Tue, 18 February 25

Follow us
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ