AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Champions Trophy 2025: ಚಾಂಪಿಯನ್ಸ್ ಟ್ರೋಫಿ ಟೂರ್ನಿಯಿಂದ 13 ಆಟಗಾರರು ಔಟ್

Champions Trophy 2025: ಚಾಂಪಿಯನ್ಸ್ ಟ್ರೋಫಿ ಏಕದಿನ ಟೂರ್ನಿಯು ಫೆಬ್ರವರಿ 19 ರಿಂದ ಮಾರ್ಚ್ 9 ರವರೆಗೆ ನಡೆಯಲಿದೆ. ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಆಯೋಜಿಸುತ್ತಿರುವ ಈ ಟೂರ್ನಿಯಿಂದ ಒಟ್ಟು 13 ಆಟಗಾರರು ಹೊರಗುಳಿದಿದ್ದಾರೆ. ಇವರಲ್ಲಿ 9 ಮಂದಿ ಬೌಲರ್​ಗಳು ಎಂಬುದು ವಿಶೇಷ. ಈ ಬಾರಿಯ ಚಾಂಪಿಯನ್ಸ್ ಟ್ರೋಫಿಗೆ ಅಲಭ್ಯರಾಗಿರುವ ಪ್ರಮುಖ ಆಟಗಾರರ ಪಟ್ಟಿ ಈ ಕೆಳಗಿನಂತಿದೆ...

ಝಾಹಿರ್ ಯೂಸುಫ್
|

Updated on:Feb 18, 2025 | 1:29 PM

Share
ಈ ಬಾರಿಯ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಿಂದ ಈವರೆಗೆ 15 ಆಟಗಾರರು ಹೊರಗುಳಿದಿದ್ದಾರೆ. ಈ ಪಟ್ಟಿಗೆ ಕೊನೆಯ ಸೇರ್ಪಡೆ ಇಂಗ್ಲೆಂಡ್ ತಂಡದ ಆಟಗಾರ ಬ್ರೈಡನ್ ಕಾರ್ಸ್​. ಕಾಲ್ಬೆರಳಿನ ಗಾಯದ ಕಾರಣ ಕಾರ್ಸ್​ ಇಂಗ್ಲೆಂಡ್ ತಂಡದ ಮುಂದಿನ ಪಂದ್ಯಗಳಿಗೆ ಅಲಭ್ಯರಾಗಿದ್ದಾರೆ. ಹೀಗೆ ಗಾಯಗೊಂಡು ಹಾಗೂ ಇನ್ನಿತರೆ ಕಾರಣಗಳಿಂದ ಈ ಬಾರಿಯ ಚಾಂಪಿಯನ್ಸ್ ಟ್ರೋಫಿಯಿಂದ ಹಿಂದೆ ಸರಿದಿರುವ ಆಟಗಾರರ ಸಂಪೂರ್ಣ ಪಟ್ಟಿ ಇಲ್ಲಿದೆ...

ಈ ಬಾರಿಯ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಿಂದ ಈವರೆಗೆ 15 ಆಟಗಾರರು ಹೊರಗುಳಿದಿದ್ದಾರೆ. ಈ ಪಟ್ಟಿಗೆ ಕೊನೆಯ ಸೇರ್ಪಡೆ ಇಂಗ್ಲೆಂಡ್ ತಂಡದ ಆಟಗಾರ ಬ್ರೈಡನ್ ಕಾರ್ಸ್​. ಕಾಲ್ಬೆರಳಿನ ಗಾಯದ ಕಾರಣ ಕಾರ್ಸ್​ ಇಂಗ್ಲೆಂಡ್ ತಂಡದ ಮುಂದಿನ ಪಂದ್ಯಗಳಿಗೆ ಅಲಭ್ಯರಾಗಿದ್ದಾರೆ. ಹೀಗೆ ಗಾಯಗೊಂಡು ಹಾಗೂ ಇನ್ನಿತರೆ ಕಾರಣಗಳಿಂದ ಈ ಬಾರಿಯ ಚಾಂಪಿಯನ್ಸ್ ಟ್ರೋಫಿಯಿಂದ ಹಿಂದೆ ಸರಿದಿರುವ ಆಟಗಾರರ ಸಂಪೂರ್ಣ ಪಟ್ಟಿ ಇಲ್ಲಿದೆ...

1 / 14
ಪ್ಯಾಟ್ ಕಮಿನ್ಸ್: ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಮುಂಬರುವ ಚಾಂಪಿಯನ್ಸ್ ಟ್ರೋಫಿಯಲ್ಲಿ ಕಣಕ್ಕಿಳಿಯುತ್ತಿಲ್ಲ. ಪಾದದ ನೋವಿನ ಕಾರಣ ಅವರು ಚಾಂಪಿಯನ್ಸ್ ಟ್ರೋಫಿಯಿಂದ ಹೊರಗುಳಿದಿದ್ದಾರೆ.

ಪ್ಯಾಟ್ ಕಮಿನ್ಸ್: ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಮುಂಬರುವ ಚಾಂಪಿಯನ್ಸ್ ಟ್ರೋಫಿಯಲ್ಲಿ ಕಣಕ್ಕಿಳಿಯುತ್ತಿಲ್ಲ. ಪಾದದ ನೋವಿನ ಕಾರಣ ಅವರು ಚಾಂಪಿಯನ್ಸ್ ಟ್ರೋಫಿಯಿಂದ ಹೊರಗುಳಿದಿದ್ದಾರೆ.

2 / 14
ಜೆರಾಲ್ಡ್ ಕೋಟ್ಝಿ: ಸೌತ್ ಆಫ್ರಿಕಾ ತಂಡದ ಬಲಗೈ ವೇಗದ ಬೌಲರ್ ಜೆರಾಲ್ಡ್ ಕೋಟ್ಝಿ ಸಹ ಚಾಂಪಿಯನ್ಸ್ ಟ್ರೋಫಿಯಲ್ಲಿ ಕಾಣಿಸಿಕೊಳ್ಳುವುದಿಲ್ಲ. ತೊಡೆಸಂದು ಬಿಗಿತದ ಸಮಸ್ಯೆಯಿಂದ ಬಳಲುತ್ತಿರುವ ಅವರು ಟೂರ್ನಿಯಿಂದ ಹಿಂದೆ ಸರಿದಿದ್ದಾರೆ.

ಜೆರಾಲ್ಡ್ ಕೋಟ್ಝಿ: ಸೌತ್ ಆಫ್ರಿಕಾ ತಂಡದ ಬಲಗೈ ವೇಗದ ಬೌಲರ್ ಜೆರಾಲ್ಡ್ ಕೋಟ್ಝಿ ಸಹ ಚಾಂಪಿಯನ್ಸ್ ಟ್ರೋಫಿಯಲ್ಲಿ ಕಾಣಿಸಿಕೊಳ್ಳುವುದಿಲ್ಲ. ತೊಡೆಸಂದು ಬಿಗಿತದ ಸಮಸ್ಯೆಯಿಂದ ಬಳಲುತ್ತಿರುವ ಅವರು ಟೂರ್ನಿಯಿಂದ ಹಿಂದೆ ಸರಿದಿದ್ದಾರೆ.

3 / 14
ಸೈಮ್ ಅಯ್ಯೂಬ್: ಪಾಕಿಸ್ತಾನ್ ತಂಡದ ಆರಂಭಿಕ ಆಟಗಾರ ಸೈಮ್ ಅಯ್ಯೂಬ್ ಕಣಕಾಲು ಗಾಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಚಾಂಪಿಯನ್ಸ್ ಟ್ರೋಫಿ ಪಾಕ್​ ತಂಡದಿಂದ ಸೈಮ್ ಅವರನ್ನು ಕೈ ಬಿಡಲಾಗಿದೆ.

ಸೈಮ್ ಅಯ್ಯೂಬ್: ಪಾಕಿಸ್ತಾನ್ ತಂಡದ ಆರಂಭಿಕ ಆಟಗಾರ ಸೈಮ್ ಅಯ್ಯೂಬ್ ಕಣಕಾಲು ಗಾಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಚಾಂಪಿಯನ್ಸ್ ಟ್ರೋಫಿ ಪಾಕ್​ ತಂಡದಿಂದ ಸೈಮ್ ಅವರನ್ನು ಕೈ ಬಿಡಲಾಗಿದೆ.

4 / 14
ಜೋಶ್ ಹ್ಯಾಝಲ್​ವುಡ್​: ಆಸ್ಟ್ರೇಲಿಯಾ ತಂಡದ ಪ್ರಮುಖ ವೇಗಿ ಜೋಶ್ ಹ್ಯಾಝಲ್​ವುಡ್ ಕೂಡ ಚಾಂಪಿಯನ್ಸ್ ಟ್ರೋಫಿಯಿಂದ ಹಿಂದೆ ಸರಿದಿದ್ದಾರೆ. ಕಣಕಾಲಿನ ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಅವರು ಟೂರ್ನಿಗೆ ಅಲಭ್ಯರಾಗಿದ್ದಾರೆ.

ಜೋಶ್ ಹ್ಯಾಝಲ್​ವುಡ್​: ಆಸ್ಟ್ರೇಲಿಯಾ ತಂಡದ ಪ್ರಮುಖ ವೇಗಿ ಜೋಶ್ ಹ್ಯಾಝಲ್​ವುಡ್ ಕೂಡ ಚಾಂಪಿಯನ್ಸ್ ಟ್ರೋಫಿಯಿಂದ ಹಿಂದೆ ಸರಿದಿದ್ದಾರೆ. ಕಣಕಾಲಿನ ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಅವರು ಟೂರ್ನಿಗೆ ಅಲಭ್ಯರಾಗಿದ್ದಾರೆ.

5 / 14
ಬೆನ್ ಸಿಯರ್ಸ್: ನ್ಯೂಝಿಲೆಂಡ್ ತಂಡದ ವೇಗಿ ಬೆನ್ ಸಿಯರ್ಸ್ ಅವರು ಮಂಡಿರಜ್ಜು ಗಾಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಈ ಬಾರಿಯ ಚಾಂಪಿಯನ್ಸ್ ಟ್ರೋಫಿಯಿಂದ ಕಿವೀಸ್ ವೇಗಿ ಹಿಂದೆ ಸರಿದಿದ್ದಾರೆ.

ಬೆನ್ ಸಿಯರ್ಸ್: ನ್ಯೂಝಿಲೆಂಡ್ ತಂಡದ ವೇಗಿ ಬೆನ್ ಸಿಯರ್ಸ್ ಅವರು ಮಂಡಿರಜ್ಜು ಗಾಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಈ ಬಾರಿಯ ಚಾಂಪಿಯನ್ಸ್ ಟ್ರೋಫಿಯಿಂದ ಕಿವೀಸ್ ವೇಗಿ ಹಿಂದೆ ಸರಿದಿದ್ದಾರೆ.

6 / 14
ಮಿಚೆಲ್ ಸ್ಟಾರ್ಕ್​: ಆಸ್ಟ್ರೇಲಿಯಾ ತಂಡದ ಎಡಗೈ ವೇಗಿ ಮಿಚೆಲ್ ಸ್ಟಾರ್ಕ್ ಸಹ ಚಾಂಪಿಯನ್ಸ್ ಟ್ರೋಫಿಯಲ್ಲಿ ಕಾಣಿಸಿಕೊಳ್ಳುವುದಿಲ್ಲ. ವೈಯುಕ್ತಿಕ ಕಾರಣಗಳಿಂದಾಗಿ ಅವರು ಟೂರ್ನಿಯಿಂದ ಹಿಂದೆ ಸರಿದಿದ್ದಾರೆ.

ಮಿಚೆಲ್ ಸ್ಟಾರ್ಕ್​: ಆಸ್ಟ್ರೇಲಿಯಾ ತಂಡದ ಎಡಗೈ ವೇಗಿ ಮಿಚೆಲ್ ಸ್ಟಾರ್ಕ್ ಸಹ ಚಾಂಪಿಯನ್ಸ್ ಟ್ರೋಫಿಯಲ್ಲಿ ಕಾಣಿಸಿಕೊಳ್ಳುವುದಿಲ್ಲ. ವೈಯುಕ್ತಿಕ ಕಾರಣಗಳಿಂದಾಗಿ ಅವರು ಟೂರ್ನಿಯಿಂದ ಹಿಂದೆ ಸರಿದಿದ್ದಾರೆ.

7 / 14
ಜೇಕಬ್ ಬೆಥೆಲ್: ಇಂಗ್ಲೆಂಡ್ ತಂಡದ ಯುವ ಆಲ್​ರೌಂಡರ್ ಜೇಕಬ್ ಬೆಥೆಲ್ ಕೂಡ ಚಾಂಪಿಯನ್ಸ್ ಟ್ರೋಫಿಯಿಂದ ಹೊರಗುಳಿದಿದ್ದಾರೆ. ಮಂಡಿರಜ್ಜು ಗಾಯದ ಸಮಸ್ಯೆಯ ಕಾರಣ ಚಾಂಪಿಯನ್ಸ್ ಟ್ರೋಫಿಗೆ ಅಲಭ್ಯರಾಗಿದ್ದಾರೆ.

ಜೇಕಬ್ ಬೆಥೆಲ್: ಇಂಗ್ಲೆಂಡ್ ತಂಡದ ಯುವ ಆಲ್​ರೌಂಡರ್ ಜೇಕಬ್ ಬೆಥೆಲ್ ಕೂಡ ಚಾಂಪಿಯನ್ಸ್ ಟ್ರೋಫಿಯಿಂದ ಹೊರಗುಳಿದಿದ್ದಾರೆ. ಮಂಡಿರಜ್ಜು ಗಾಯದ ಸಮಸ್ಯೆಯ ಕಾರಣ ಚಾಂಪಿಯನ್ಸ್ ಟ್ರೋಫಿಗೆ ಅಲಭ್ಯರಾಗಿದ್ದಾರೆ.

8 / 14
ಅನ್ರಿಕ್ ನೋಕಿಯ: ಸೌತ್ ಆಫ್ರಿಕಾ ತಂಡದ ವೇಗದ ಬೌಲರ್ ಅನ್ರಿಕ್ ನೋಕಿಯ ಕೂಡ ಚಾಂಪಿಯನ್ಸ್ ಟ್ರೋಫಿಗೆ ಅಲಭ್ಯರಾಗಿದ್ದಾರೆ. ಬೆನ್ನು ನೋವಿನ ಕಾರಣ ಅವರು ಟೂರ್ನಿಯಿಂದ ಹಿಂದೆ ಸರಿದಿದ್ದಾರೆ.

ಅನ್ರಿಕ್ ನೋಕಿಯ: ಸೌತ್ ಆಫ್ರಿಕಾ ತಂಡದ ವೇಗದ ಬೌಲರ್ ಅನ್ರಿಕ್ ನೋಕಿಯ ಕೂಡ ಚಾಂಪಿಯನ್ಸ್ ಟ್ರೋಫಿಗೆ ಅಲಭ್ಯರಾಗಿದ್ದಾರೆ. ಬೆನ್ನು ನೋವಿನ ಕಾರಣ ಅವರು ಟೂರ್ನಿಯಿಂದ ಹಿಂದೆ ಸರಿದಿದ್ದಾರೆ.

9 / 14
ಮಿಚೆಲ್ ಮಾರ್ಷ್: ಆಸ್ಟ್ರೇಲಿಯಾ ತಂಡದ ಆಲ್​ರೌಂಡರ್ ಮಿಚೆಲ್ ಮಾರ್ಷ್ ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರು ಸಹ ಆಸ್ಟ್ರೇಲಿಯಾ ಚಾಂಪಿಯನ್ಸ್​ ಟ್ರೋಫಿ ತಂಡದಿಂದ ಹೊರಗುಳಿದಿದ್ದಾರೆ.

ಮಿಚೆಲ್ ಮಾರ್ಷ್: ಆಸ್ಟ್ರೇಲಿಯಾ ತಂಡದ ಆಲ್​ರೌಂಡರ್ ಮಿಚೆಲ್ ಮಾರ್ಷ್ ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರು ಸಹ ಆಸ್ಟ್ರೇಲಿಯಾ ಚಾಂಪಿಯನ್ಸ್​ ಟ್ರೋಫಿ ತಂಡದಿಂದ ಹೊರಗುಳಿದಿದ್ದಾರೆ.

10 / 14
ಅಲ್ಲಾ ಗಝನ್‌ಫರ್: ಅಫ್ಘಾನಿಸ್ತಾನ್ ತಂಡದ ಯುವ ಸ್ಪಿನ್ನರ್ ಅಲ್ಲಾ ಗಝನ್‌ಫರ್ ಅವರು ಸಹ ಗಾಯಗೊಂಡಿದ್ದು, ಹೀಗಾಗಿ ಚಾಂಪಿಯನ್ಸ್ ಟ್ರೋಫಿ ಹಾಗೂ ಐಪಿಎಲ್​ನಿಂದ ಹಿಂದೆ ಸರಿದಿದ್ದಾರೆ.

ಅಲ್ಲಾ ಗಝನ್‌ಫರ್: ಅಫ್ಘಾನಿಸ್ತಾನ್ ತಂಡದ ಯುವ ಸ್ಪಿನ್ನರ್ ಅಲ್ಲಾ ಗಝನ್‌ಫರ್ ಅವರು ಸಹ ಗಾಯಗೊಂಡಿದ್ದು, ಹೀಗಾಗಿ ಚಾಂಪಿಯನ್ಸ್ ಟ್ರೋಫಿ ಹಾಗೂ ಐಪಿಎಲ್​ನಿಂದ ಹಿಂದೆ ಸರಿದಿದ್ದಾರೆ.

11 / 14
ಲಾಕಿ ಫರ್ಗುಸನ್: ನ್ಯೂಝಿಲೆಂಡ್‌ ತಂಡದ ವೇಗದ ಬೌಲರ್ ಲಾಕಿ ಫರ್ಗುಸನ್ ಕೂಡ ಚಾಂಪಿಯನ್ಸ್ ಟ್ರೋಫಿಯಿಂದ ಹೊರಗುಳಿದಿದ್ದಾರೆ. ಪಾದದ ಗಾಯದ ಕಾರಣ ಫರ್ಗುಸನ್ ತಂಡದಿಂದ ಹೊರಬಿದ್ದಿದ್ದು, ಹೀಗಾಗಿ ಈ ಬಾರಿಯ ಚಾಂಪಿಯನ್ಸ್​ ಟ್ರೋಫಿಯಲ್ಲಿ ಲಾಕಿ ಕಾಣಿಸಿಕೊಳ್ಳುತ್ತಿಲ್ಲ.

ಲಾಕಿ ಫರ್ಗುಸನ್: ನ್ಯೂಝಿಲೆಂಡ್‌ ತಂಡದ ವೇಗದ ಬೌಲರ್ ಲಾಕಿ ಫರ್ಗುಸನ್ ಕೂಡ ಚಾಂಪಿಯನ್ಸ್ ಟ್ರೋಫಿಯಿಂದ ಹೊರಗುಳಿದಿದ್ದಾರೆ. ಪಾದದ ಗಾಯದ ಕಾರಣ ಫರ್ಗುಸನ್ ತಂಡದಿಂದ ಹೊರಬಿದ್ದಿದ್ದು, ಹೀಗಾಗಿ ಈ ಬಾರಿಯ ಚಾಂಪಿಯನ್ಸ್​ ಟ್ರೋಫಿಯಲ್ಲಿ ಲಾಕಿ ಕಾಣಿಸಿಕೊಳ್ಳುತ್ತಿಲ್ಲ.

12 / 14
ಮಾರ್ಕಸ್ ಸ್ಟೊಯಿನಿಸ್: ಆಸೀಸ್ ಪಡೆಯ ಆಲ್​ರೌಂಡರ್ ಮಾರ್ಕಸ್ ಸ್ಟೊಯಿನಿಸ್ ಅಚ್ಚರಿ ಎಂಬಂತೆ ಕೆಲ ದಿನಗಳ ಹಿಂದೆ ಏಕದಿನ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ಹೀಗಾಗಿ ಈ ಬಾರಿಯ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಮಾರ್ಕಸ್ ಸ್ಟೊಯಿನಿಸ್ ಕಾಣಿಸಿಕೊಂಡಿಲ್ಲ.

ಮಾರ್ಕಸ್ ಸ್ಟೊಯಿನಿಸ್: ಆಸೀಸ್ ಪಡೆಯ ಆಲ್​ರೌಂಡರ್ ಮಾರ್ಕಸ್ ಸ್ಟೊಯಿನಿಸ್ ಅಚ್ಚರಿ ಎಂಬಂತೆ ಕೆಲ ದಿನಗಳ ಹಿಂದೆ ಏಕದಿನ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ಹೀಗಾಗಿ ಈ ಬಾರಿಯ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಮಾರ್ಕಸ್ ಸ್ಟೊಯಿನಿಸ್ ಕಾಣಿಸಿಕೊಂಡಿಲ್ಲ.

13 / 14
ಜಸ್​ಪ್ರೀತ್ ಬುಮ್ರಾ: ಬೆನ್ನು ನೋವಿನ ಸಮಸ್ಯೆಯ ಕಾರಣ ಟೀಮ್ ಇಂಡಿಯಾ ವೇಗಿ ಜಸ್​ಪ್ರೀತ್ ಬುಮ್ರಾ ಸಹ ಚಾಂಪಿಯನ್ಸ್ ಟ್ರೋಫಿಯಿಂದ ಹೊರಗುಳಿದಿದ್ದಾರೆ. ಬುಮ್ರಾ ಅವರ ಅನುಪಸ್ಥಿತಿಯ ನಡುವೆಯೂ ಟೀಮ್ ಇಂಡಿಯಾ ಚಾಂಪಿಯನ್ಸ್​ ಟ್ರೋಫಿಯಲ್ಲಿ ಉತ್ತಮ ಪ್ರದರ್ಶನ ಮುಂದುವರೆಸಿದೆ.

ಜಸ್​ಪ್ರೀತ್ ಬುಮ್ರಾ: ಬೆನ್ನು ನೋವಿನ ಸಮಸ್ಯೆಯ ಕಾರಣ ಟೀಮ್ ಇಂಡಿಯಾ ವೇಗಿ ಜಸ್​ಪ್ರೀತ್ ಬುಮ್ರಾ ಸಹ ಚಾಂಪಿಯನ್ಸ್ ಟ್ರೋಫಿಯಿಂದ ಹೊರಗುಳಿದಿದ್ದಾರೆ. ಬುಮ್ರಾ ಅವರ ಅನುಪಸ್ಥಿತಿಯ ನಡುವೆಯೂ ಟೀಮ್ ಇಂಡಿಯಾ ಚಾಂಪಿಯನ್ಸ್​ ಟ್ರೋಫಿಯಲ್ಲಿ ಉತ್ತಮ ಪ್ರದರ್ಶನ ಮುಂದುವರೆಸಿದೆ.

14 / 14

Published On - 12:53 pm, Tue, 18 February 25

Follow Us
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ