AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs PAK: ಹೀಗಾದ್ರೆ ಭಾರತ ಮತ್ತು ಪಾಕಿಸ್ತಾನ್ ಮತ್ತೆ ಮುಖಾಮುಖಿ

India vs Pakistan: ಬಹುನಿರೀಕ್ಷಿತ ಭಾರತ ಮತ್ತು ಪಾಕಿಸ್ತಾನ್ ನಡುವಣ ಪಂದ್ಯ ಮುಗಿದೆ. ನಿರೀಕ್ಷೆಯಂತೆ ಈ ಬಾರಿ ಕೂಡ ಪಾಕ್ ಪಡೆಯನ್ನು ಟೀಮ್ ಇಂಡಿಯಾ ಬಗ್ಗು ಬಡಿದಿದೆ. ಈ ಗೆಲುವಿನೊಂದಿಗೆ ಭಾರತ ತಂಡ ಸೆಮಿಫೈನಲ್​ಗೇರುವುದನ್ನು ಖಚಿತಪಡಿಸಿಕೊಂಡರೆ, ಅತ್ತ ಪಾಕಿಸ್ತಾನ್, ನ್ಯೂಝಿಲೆಂಡ್ ಮತ್ತು ಬಾಂಗ್ಲಾದೇಶ್ ವಿರುದ್ಧದ ಪಂದ್ಯದ ಫಲಿತಾಂಶವನ್ನು ಎದುರು ನೋಡುತ್ತಿದೆ.

ಝಾಹಿರ್ ಯೂಸುಫ್
|

Updated on:Feb 24, 2025 | 9:55 AM

Share
ಭಾರತ ಮತ್ತು ಪಾಕಿಸ್ತಾನ್ ನಡುವಣ ಹೈವೋಲ್ಟೇಜ್ ಮ್ಯಾಚ್​ನಲ್ಲಿ ಟೀಮ್ ಇಂಡಿಯಾ ಅಮೋಘ ಜಯ ಸಾಧಿಸಿದೆ. ದುಬೈನ ಇಂಟರ್​ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ ತಂಡವು 49.4 ಓವರ್​ಗಳಲ್ಲಿ 241 ರನ್ ಕಲೆಹಾಕಿದರೆ, ಭಾರತ ತಂಡವು ಈ ಗುರಿಯನ್ನು ಕೇವಲ 42.3 ಓವರ್​ಗಳಲ್ಲಿ ಚೇಸ್ ಮಾಡಿದೆ. ಈ ಮೂಲಕ ಟೀಮ್ ಇಂಡಿಯಾ 6 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

ಭಾರತ ಮತ್ತು ಪಾಕಿಸ್ತಾನ್ ನಡುವಣ ಹೈವೋಲ್ಟೇಜ್ ಮ್ಯಾಚ್​ನಲ್ಲಿ ಟೀಮ್ ಇಂಡಿಯಾ ಅಮೋಘ ಜಯ ಸಾಧಿಸಿದೆ. ದುಬೈನ ಇಂಟರ್​ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ ತಂಡವು 49.4 ಓವರ್​ಗಳಲ್ಲಿ 241 ರನ್ ಕಲೆಹಾಕಿದರೆ, ಭಾರತ ತಂಡವು ಈ ಗುರಿಯನ್ನು ಕೇವಲ 42.3 ಓವರ್​ಗಳಲ್ಲಿ ಚೇಸ್ ಮಾಡಿದೆ. ಈ ಮೂಲಕ ಟೀಮ್ ಇಂಡಿಯಾ 6 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

1 / 5
ಈ ಗೆಲುವಿನೊಂದಿಗೆ ಭಾರತ ತಂಡವು ಸೆಮಿಫೈನಲ್​ಗೇರುವುದು ಖಚಿತವಾಗಿದೆ. ಆದರೆ ಟೀಮ್ ಇಂಡಿಯಾ ವಿರುದ್ಧ ಸೋತಿರುವ ಪಾಕಿಸ್ತಾನ್ ತಂಡದ ಭವಿಷ್ಯ ನ್ಯೂಝಿಲೆಂಡ್-ಬಾಂಗ್ಲಾದೇಶ್​ ತಂಡಗಳ ಕೈಯಲ್ಲಿದೆ. ಅಂದರೆ ನ್ಯೂಝಿಲೆಂಡ್ ವಿರುದ್ಧದ ಮ್ಯಾಚ್​ನಲ್ಲಿ ಬಾಂಗ್ಲಾದೇಶ್ ತಂಡ ಜಯ ಸಾಧಿಸಿದರೆ, ಪಾಕಿಸ್ತಾನ್ ತಂಡದ ಸೆಮಿಫೈನಲ್ ಕನಸು ಜೀವಂತವಿರಲಿದೆ.

ಈ ಗೆಲುವಿನೊಂದಿಗೆ ಭಾರತ ತಂಡವು ಸೆಮಿಫೈನಲ್​ಗೇರುವುದು ಖಚಿತವಾಗಿದೆ. ಆದರೆ ಟೀಮ್ ಇಂಡಿಯಾ ವಿರುದ್ಧ ಸೋತಿರುವ ಪಾಕಿಸ್ತಾನ್ ತಂಡದ ಭವಿಷ್ಯ ನ್ಯೂಝಿಲೆಂಡ್-ಬಾಂಗ್ಲಾದೇಶ್​ ತಂಡಗಳ ಕೈಯಲ್ಲಿದೆ. ಅಂದರೆ ನ್ಯೂಝಿಲೆಂಡ್ ವಿರುದ್ಧದ ಮ್ಯಾಚ್​ನಲ್ಲಿ ಬಾಂಗ್ಲಾದೇಶ್ ತಂಡ ಜಯ ಸಾಧಿಸಿದರೆ, ಪಾಕಿಸ್ತಾನ್ ತಂಡದ ಸೆಮಿಫೈನಲ್ ಕನಸು ಜೀವಂತವಿರಲಿದೆ.

2 / 5
ಇಲ್ಲಿ ನ್ಯೂಝಿಲೆಂಡ್ ವಿರುದ್ಧ ಬಾಂಗ್ಲಾದೇಶ್ ಹಾಗೂ ಭಾರತ ತಂಡಗಳು ಗೆಲ್ಲಬೇಕು. ಹಾಗೆಯೇ ಪಾಕಿಸ್ತಾನ್ ತಂಡ ಬಾಂಗ್ಲಾದೇಶ್ ವಿರುದ್ಧ ಭರ್ಜರಿ ಜಯ ಸಾಧಿಸಬೇಕು. ಹೀಗಾದಲ್ಲಿ ಪಾಕಿಸ್ತಾನ್ ತಂಡವು ಉತ್ತಮ ನೆಟ್ ರನ್ ರೇಟ್ ಪಡೆದು ಗ್ರೂಪ್-ಎ ನಿಂದ 2ನೇ ತಂಡವಾಗಿ ಸೆಮಿಫೈನಲ್​ಗೇರಬಹುದು.

ಇಲ್ಲಿ ನ್ಯೂಝಿಲೆಂಡ್ ವಿರುದ್ಧ ಬಾಂಗ್ಲಾದೇಶ್ ಹಾಗೂ ಭಾರತ ತಂಡಗಳು ಗೆಲ್ಲಬೇಕು. ಹಾಗೆಯೇ ಪಾಕಿಸ್ತಾನ್ ತಂಡ ಬಾಂಗ್ಲಾದೇಶ್ ವಿರುದ್ಧ ಭರ್ಜರಿ ಜಯ ಸಾಧಿಸಬೇಕು. ಹೀಗಾದಲ್ಲಿ ಪಾಕಿಸ್ತಾನ್ ತಂಡವು ಉತ್ತಮ ನೆಟ್ ರನ್ ರೇಟ್ ಪಡೆದು ಗ್ರೂಪ್-ಎ ನಿಂದ 2ನೇ ತಂಡವಾಗಿ ಸೆಮಿಫೈನಲ್​ಗೇರಬಹುದು.

3 / 5
ಇಂತಹದೊಂದು ಪವಾಡ ಸಂಭವಿಸಿದರೆ, ಭಾರತ ಮತ್ತು ಪಾಕಿಸ್ತಾನ್ ತಂಡಗಳು ಮತ್ತೆ ಮುಖಾಮುಖಿ ಕೂಡ ಆಗಬಹುದು. ಅಂದರೆ ಗ್ರೂಪ್-ಎ ನಿಂದ ಭಾರತ ಮತ್ತು ಪಾಕಿಸ್ತಾನ್ ಸೆಮಿಫೈನಲ್​ಗೇರಿದರೆ, ಉಭಯ ತಂಡಗಳು ಗ್ರೂಪ್-ಬಿ ನಲ್ಲಿರುವ ತಂಡಗಳ ವಿರುದ್ಧ ಸೆಣಸಲಿದೆ.

ಇಂತಹದೊಂದು ಪವಾಡ ಸಂಭವಿಸಿದರೆ, ಭಾರತ ಮತ್ತು ಪಾಕಿಸ್ತಾನ್ ತಂಡಗಳು ಮತ್ತೆ ಮುಖಾಮುಖಿ ಕೂಡ ಆಗಬಹುದು. ಅಂದರೆ ಗ್ರೂಪ್-ಎ ನಿಂದ ಭಾರತ ಮತ್ತು ಪಾಕಿಸ್ತಾನ್ ಸೆಮಿಫೈನಲ್​ಗೇರಿದರೆ, ಉಭಯ ತಂಡಗಳು ಗ್ರೂಪ್-ಬಿ ನಲ್ಲಿರುವ ತಂಡಗಳ ವಿರುದ್ಧ ಸೆಣಸಲಿದೆ.

4 / 5
ಈ ಸೆಮಿಫೈನಲ್ ಪಂದ್ಯಗಳಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಜಯ ಸಾಧಿಸಿದರೆ, ಉಭಯ ತಂಡಗಳು ಫೈನಲ್​ನಲ್ಲಿ ಮತ್ತೆ ಮುಖಾಮುಖಿಯಾಬಹುದು. ಆದರೆ ಅದಕ್ಕೂ ಮುನ್ನ ನ್ಯೂಝಿಲೆಂಡ್ ವಿರುದ್ಧ ಬಾಂಗ್ಲಾದೇಶ್ ತಂಡದ ಗೆಲುವನ್ನು ಪಾಕಿಸ್ತಾನ್ ಎದುರು ನೋಡಬೇಕಿದೆ. ಒಂದು ವೇಳೆ ಬಾಂಗ್ಲಾ ವಿರುದ್ಧ ನ್ಯೂಝಿಲೆಂಡ್ ಗೆದ್ದರೆ, ಪಾಕಿಸ್ತಾನ್ ತಂಡ ಅಧಿಕೃತವಾಗಿ ಚಾಂಪಿಯನ್ಸ್ ಟ್ರೋಫಿಯಿಂದ ಹೊರಬೀಳಲಿದೆ.

ಈ ಸೆಮಿಫೈನಲ್ ಪಂದ್ಯಗಳಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಜಯ ಸಾಧಿಸಿದರೆ, ಉಭಯ ತಂಡಗಳು ಫೈನಲ್​ನಲ್ಲಿ ಮತ್ತೆ ಮುಖಾಮುಖಿಯಾಬಹುದು. ಆದರೆ ಅದಕ್ಕೂ ಮುನ್ನ ನ್ಯೂಝಿಲೆಂಡ್ ವಿರುದ್ಧ ಬಾಂಗ್ಲಾದೇಶ್ ತಂಡದ ಗೆಲುವನ್ನು ಪಾಕಿಸ್ತಾನ್ ಎದುರು ನೋಡಬೇಕಿದೆ. ಒಂದು ವೇಳೆ ಬಾಂಗ್ಲಾ ವಿರುದ್ಧ ನ್ಯೂಝಿಲೆಂಡ್ ಗೆದ್ದರೆ, ಪಾಕಿಸ್ತಾನ್ ತಂಡ ಅಧಿಕೃತವಾಗಿ ಚಾಂಪಿಯನ್ಸ್ ಟ್ರೋಫಿಯಿಂದ ಹೊರಬೀಳಲಿದೆ.

5 / 5

Published On - 9:54 am, Mon, 24 February 25

Follow Us
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ