AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs PAK: ಹೀಗಾದ್ರೆ ಭಾರತ ಮತ್ತು ಪಾಕಿಸ್ತಾನ್ ಮತ್ತೆ ಮುಖಾಮುಖಿ

India vs Pakistan: ಬಹುನಿರೀಕ್ಷಿತ ಭಾರತ ಮತ್ತು ಪಾಕಿಸ್ತಾನ್ ನಡುವಣ ಪಂದ್ಯ ಮುಗಿದೆ. ನಿರೀಕ್ಷೆಯಂತೆ ಈ ಬಾರಿ ಕೂಡ ಪಾಕ್ ಪಡೆಯನ್ನು ಟೀಮ್ ಇಂಡಿಯಾ ಬಗ್ಗು ಬಡಿದಿದೆ. ಈ ಗೆಲುವಿನೊಂದಿಗೆ ಭಾರತ ತಂಡ ಸೆಮಿಫೈನಲ್​ಗೇರುವುದನ್ನು ಖಚಿತಪಡಿಸಿಕೊಂಡರೆ, ಅತ್ತ ಪಾಕಿಸ್ತಾನ್, ನ್ಯೂಝಿಲೆಂಡ್ ಮತ್ತು ಬಾಂಗ್ಲಾದೇಶ್ ವಿರುದ್ಧದ ಪಂದ್ಯದ ಫಲಿತಾಂಶವನ್ನು ಎದುರು ನೋಡುತ್ತಿದೆ.

ಝಾಹಿರ್ ಯೂಸುಫ್
|

Updated on:Feb 24, 2025 | 9:55 AM

Share
ಭಾರತ ಮತ್ತು ಪಾಕಿಸ್ತಾನ್ ನಡುವಣ ಹೈವೋಲ್ಟೇಜ್ ಮ್ಯಾಚ್​ನಲ್ಲಿ ಟೀಮ್ ಇಂಡಿಯಾ ಅಮೋಘ ಜಯ ಸಾಧಿಸಿದೆ. ದುಬೈನ ಇಂಟರ್​ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ ತಂಡವು 49.4 ಓವರ್​ಗಳಲ್ಲಿ 241 ರನ್ ಕಲೆಹಾಕಿದರೆ, ಭಾರತ ತಂಡವು ಈ ಗುರಿಯನ್ನು ಕೇವಲ 42.3 ಓವರ್​ಗಳಲ್ಲಿ ಚೇಸ್ ಮಾಡಿದೆ. ಈ ಮೂಲಕ ಟೀಮ್ ಇಂಡಿಯಾ 6 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

ಭಾರತ ಮತ್ತು ಪಾಕಿಸ್ತಾನ್ ನಡುವಣ ಹೈವೋಲ್ಟೇಜ್ ಮ್ಯಾಚ್​ನಲ್ಲಿ ಟೀಮ್ ಇಂಡಿಯಾ ಅಮೋಘ ಜಯ ಸಾಧಿಸಿದೆ. ದುಬೈನ ಇಂಟರ್​ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ ತಂಡವು 49.4 ಓವರ್​ಗಳಲ್ಲಿ 241 ರನ್ ಕಲೆಹಾಕಿದರೆ, ಭಾರತ ತಂಡವು ಈ ಗುರಿಯನ್ನು ಕೇವಲ 42.3 ಓವರ್​ಗಳಲ್ಲಿ ಚೇಸ್ ಮಾಡಿದೆ. ಈ ಮೂಲಕ ಟೀಮ್ ಇಂಡಿಯಾ 6 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

1 / 5
ಈ ಗೆಲುವಿನೊಂದಿಗೆ ಭಾರತ ತಂಡವು ಸೆಮಿಫೈನಲ್​ಗೇರುವುದು ಖಚಿತವಾಗಿದೆ. ಆದರೆ ಟೀಮ್ ಇಂಡಿಯಾ ವಿರುದ್ಧ ಸೋತಿರುವ ಪಾಕಿಸ್ತಾನ್ ತಂಡದ ಭವಿಷ್ಯ ನ್ಯೂಝಿಲೆಂಡ್-ಬಾಂಗ್ಲಾದೇಶ್​ ತಂಡಗಳ ಕೈಯಲ್ಲಿದೆ. ಅಂದರೆ ನ್ಯೂಝಿಲೆಂಡ್ ವಿರುದ್ಧದ ಮ್ಯಾಚ್​ನಲ್ಲಿ ಬಾಂಗ್ಲಾದೇಶ್ ತಂಡ ಜಯ ಸಾಧಿಸಿದರೆ, ಪಾಕಿಸ್ತಾನ್ ತಂಡದ ಸೆಮಿಫೈನಲ್ ಕನಸು ಜೀವಂತವಿರಲಿದೆ.

ಈ ಗೆಲುವಿನೊಂದಿಗೆ ಭಾರತ ತಂಡವು ಸೆಮಿಫೈನಲ್​ಗೇರುವುದು ಖಚಿತವಾಗಿದೆ. ಆದರೆ ಟೀಮ್ ಇಂಡಿಯಾ ವಿರುದ್ಧ ಸೋತಿರುವ ಪಾಕಿಸ್ತಾನ್ ತಂಡದ ಭವಿಷ್ಯ ನ್ಯೂಝಿಲೆಂಡ್-ಬಾಂಗ್ಲಾದೇಶ್​ ತಂಡಗಳ ಕೈಯಲ್ಲಿದೆ. ಅಂದರೆ ನ್ಯೂಝಿಲೆಂಡ್ ವಿರುದ್ಧದ ಮ್ಯಾಚ್​ನಲ್ಲಿ ಬಾಂಗ್ಲಾದೇಶ್ ತಂಡ ಜಯ ಸಾಧಿಸಿದರೆ, ಪಾಕಿಸ್ತಾನ್ ತಂಡದ ಸೆಮಿಫೈನಲ್ ಕನಸು ಜೀವಂತವಿರಲಿದೆ.

2 / 5
ಇಲ್ಲಿ ನ್ಯೂಝಿಲೆಂಡ್ ವಿರುದ್ಧ ಬಾಂಗ್ಲಾದೇಶ್ ಹಾಗೂ ಭಾರತ ತಂಡಗಳು ಗೆಲ್ಲಬೇಕು. ಹಾಗೆಯೇ ಪಾಕಿಸ್ತಾನ್ ತಂಡ ಬಾಂಗ್ಲಾದೇಶ್ ವಿರುದ್ಧ ಭರ್ಜರಿ ಜಯ ಸಾಧಿಸಬೇಕು. ಹೀಗಾದಲ್ಲಿ ಪಾಕಿಸ್ತಾನ್ ತಂಡವು ಉತ್ತಮ ನೆಟ್ ರನ್ ರೇಟ್ ಪಡೆದು ಗ್ರೂಪ್-ಎ ನಿಂದ 2ನೇ ತಂಡವಾಗಿ ಸೆಮಿಫೈನಲ್​ಗೇರಬಹುದು.

ಇಲ್ಲಿ ನ್ಯೂಝಿಲೆಂಡ್ ವಿರುದ್ಧ ಬಾಂಗ್ಲಾದೇಶ್ ಹಾಗೂ ಭಾರತ ತಂಡಗಳು ಗೆಲ್ಲಬೇಕು. ಹಾಗೆಯೇ ಪಾಕಿಸ್ತಾನ್ ತಂಡ ಬಾಂಗ್ಲಾದೇಶ್ ವಿರುದ್ಧ ಭರ್ಜರಿ ಜಯ ಸಾಧಿಸಬೇಕು. ಹೀಗಾದಲ್ಲಿ ಪಾಕಿಸ್ತಾನ್ ತಂಡವು ಉತ್ತಮ ನೆಟ್ ರನ್ ರೇಟ್ ಪಡೆದು ಗ್ರೂಪ್-ಎ ನಿಂದ 2ನೇ ತಂಡವಾಗಿ ಸೆಮಿಫೈನಲ್​ಗೇರಬಹುದು.

3 / 5
ಇಂತಹದೊಂದು ಪವಾಡ ಸಂಭವಿಸಿದರೆ, ಭಾರತ ಮತ್ತು ಪಾಕಿಸ್ತಾನ್ ತಂಡಗಳು ಮತ್ತೆ ಮುಖಾಮುಖಿ ಕೂಡ ಆಗಬಹುದು. ಅಂದರೆ ಗ್ರೂಪ್-ಎ ನಿಂದ ಭಾರತ ಮತ್ತು ಪಾಕಿಸ್ತಾನ್ ಸೆಮಿಫೈನಲ್​ಗೇರಿದರೆ, ಉಭಯ ತಂಡಗಳು ಗ್ರೂಪ್-ಬಿ ನಲ್ಲಿರುವ ತಂಡಗಳ ವಿರುದ್ಧ ಸೆಣಸಲಿದೆ.

ಇಂತಹದೊಂದು ಪವಾಡ ಸಂಭವಿಸಿದರೆ, ಭಾರತ ಮತ್ತು ಪಾಕಿಸ್ತಾನ್ ತಂಡಗಳು ಮತ್ತೆ ಮುಖಾಮುಖಿ ಕೂಡ ಆಗಬಹುದು. ಅಂದರೆ ಗ್ರೂಪ್-ಎ ನಿಂದ ಭಾರತ ಮತ್ತು ಪಾಕಿಸ್ತಾನ್ ಸೆಮಿಫೈನಲ್​ಗೇರಿದರೆ, ಉಭಯ ತಂಡಗಳು ಗ್ರೂಪ್-ಬಿ ನಲ್ಲಿರುವ ತಂಡಗಳ ವಿರುದ್ಧ ಸೆಣಸಲಿದೆ.

4 / 5
ಈ ಸೆಮಿಫೈನಲ್ ಪಂದ್ಯಗಳಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಜಯ ಸಾಧಿಸಿದರೆ, ಉಭಯ ತಂಡಗಳು ಫೈನಲ್​ನಲ್ಲಿ ಮತ್ತೆ ಮುಖಾಮುಖಿಯಾಬಹುದು. ಆದರೆ ಅದಕ್ಕೂ ಮುನ್ನ ನ್ಯೂಝಿಲೆಂಡ್ ವಿರುದ್ಧ ಬಾಂಗ್ಲಾದೇಶ್ ತಂಡದ ಗೆಲುವನ್ನು ಪಾಕಿಸ್ತಾನ್ ಎದುರು ನೋಡಬೇಕಿದೆ. ಒಂದು ವೇಳೆ ಬಾಂಗ್ಲಾ ವಿರುದ್ಧ ನ್ಯೂಝಿಲೆಂಡ್ ಗೆದ್ದರೆ, ಪಾಕಿಸ್ತಾನ್ ತಂಡ ಅಧಿಕೃತವಾಗಿ ಚಾಂಪಿಯನ್ಸ್ ಟ್ರೋಫಿಯಿಂದ ಹೊರಬೀಳಲಿದೆ.

ಈ ಸೆಮಿಫೈನಲ್ ಪಂದ್ಯಗಳಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಜಯ ಸಾಧಿಸಿದರೆ, ಉಭಯ ತಂಡಗಳು ಫೈನಲ್​ನಲ್ಲಿ ಮತ್ತೆ ಮುಖಾಮುಖಿಯಾಬಹುದು. ಆದರೆ ಅದಕ್ಕೂ ಮುನ್ನ ನ್ಯೂಝಿಲೆಂಡ್ ವಿರುದ್ಧ ಬಾಂಗ್ಲಾದೇಶ್ ತಂಡದ ಗೆಲುವನ್ನು ಪಾಕಿಸ್ತಾನ್ ಎದುರು ನೋಡಬೇಕಿದೆ. ಒಂದು ವೇಳೆ ಬಾಂಗ್ಲಾ ವಿರುದ್ಧ ನ್ಯೂಝಿಲೆಂಡ್ ಗೆದ್ದರೆ, ಪಾಕಿಸ್ತಾನ್ ತಂಡ ಅಧಿಕೃತವಾಗಿ ಚಾಂಪಿಯನ್ಸ್ ಟ್ರೋಫಿಯಿಂದ ಹೊರಬೀಳಲಿದೆ.

5 / 5

Published On - 9:54 am, Mon, 24 February 25

Follow Us
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ