Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs PAK: ಹೀಗಾದ್ರೆ ಭಾರತ ಮತ್ತು ಪಾಕಿಸ್ತಾನ್ ಮತ್ತೆ ಮುಖಾಮುಖಿ

India vs Pakistan: ಬಹುನಿರೀಕ್ಷಿತ ಭಾರತ ಮತ್ತು ಪಾಕಿಸ್ತಾನ್ ನಡುವಣ ಪಂದ್ಯ ಮುಗಿದೆ. ನಿರೀಕ್ಷೆಯಂತೆ ಈ ಬಾರಿ ಕೂಡ ಪಾಕ್ ಪಡೆಯನ್ನು ಟೀಮ್ ಇಂಡಿಯಾ ಬಗ್ಗು ಬಡಿದಿದೆ. ಈ ಗೆಲುವಿನೊಂದಿಗೆ ಭಾರತ ತಂಡ ಸೆಮಿಫೈನಲ್​ಗೇರುವುದನ್ನು ಖಚಿತಪಡಿಸಿಕೊಂಡರೆ, ಅತ್ತ ಪಾಕಿಸ್ತಾನ್, ನ್ಯೂಝಿಲೆಂಡ್ ಮತ್ತು ಬಾಂಗ್ಲಾದೇಶ್ ವಿರುದ್ಧದ ಪಂದ್ಯದ ಫಲಿತಾಂಶವನ್ನು ಎದುರು ನೋಡುತ್ತಿದೆ.

ಝಾಹಿರ್ ಯೂಸುಫ್
|

Updated on:Feb 24, 2025 | 9:55 AM

ಭಾರತ ಮತ್ತು ಪಾಕಿಸ್ತಾನ್ ನಡುವಣ ಹೈವೋಲ್ಟೇಜ್ ಮ್ಯಾಚ್​ನಲ್ಲಿ ಟೀಮ್ ಇಂಡಿಯಾ ಅಮೋಘ ಜಯ ಸಾಧಿಸಿದೆ. ದುಬೈನ ಇಂಟರ್​ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ ತಂಡವು 49.4 ಓವರ್​ಗಳಲ್ಲಿ 241 ರನ್ ಕಲೆಹಾಕಿದರೆ, ಭಾರತ ತಂಡವು ಈ ಗುರಿಯನ್ನು ಕೇವಲ 42.3 ಓವರ್​ಗಳಲ್ಲಿ ಚೇಸ್ ಮಾಡಿದೆ. ಈ ಮೂಲಕ ಟೀಮ್ ಇಂಡಿಯಾ 6 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

ಭಾರತ ಮತ್ತು ಪಾಕಿಸ್ತಾನ್ ನಡುವಣ ಹೈವೋಲ್ಟೇಜ್ ಮ್ಯಾಚ್​ನಲ್ಲಿ ಟೀಮ್ ಇಂಡಿಯಾ ಅಮೋಘ ಜಯ ಸಾಧಿಸಿದೆ. ದುಬೈನ ಇಂಟರ್​ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ ತಂಡವು 49.4 ಓವರ್​ಗಳಲ್ಲಿ 241 ರನ್ ಕಲೆಹಾಕಿದರೆ, ಭಾರತ ತಂಡವು ಈ ಗುರಿಯನ್ನು ಕೇವಲ 42.3 ಓವರ್​ಗಳಲ್ಲಿ ಚೇಸ್ ಮಾಡಿದೆ. ಈ ಮೂಲಕ ಟೀಮ್ ಇಂಡಿಯಾ 6 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

1 / 5
ಈ ಗೆಲುವಿನೊಂದಿಗೆ ಭಾರತ ತಂಡವು ಸೆಮಿಫೈನಲ್​ಗೇರುವುದು ಖಚಿತವಾಗಿದೆ. ಆದರೆ ಟೀಮ್ ಇಂಡಿಯಾ ವಿರುದ್ಧ ಸೋತಿರುವ ಪಾಕಿಸ್ತಾನ್ ತಂಡದ ಭವಿಷ್ಯ ನ್ಯೂಝಿಲೆಂಡ್-ಬಾಂಗ್ಲಾದೇಶ್​ ತಂಡಗಳ ಕೈಯಲ್ಲಿದೆ. ಅಂದರೆ ನ್ಯೂಝಿಲೆಂಡ್ ವಿರುದ್ಧದ ಮ್ಯಾಚ್​ನಲ್ಲಿ ಬಾಂಗ್ಲಾದೇಶ್ ತಂಡ ಜಯ ಸಾಧಿಸಿದರೆ, ಪಾಕಿಸ್ತಾನ್ ತಂಡದ ಸೆಮಿಫೈನಲ್ ಕನಸು ಜೀವಂತವಿರಲಿದೆ.

ಈ ಗೆಲುವಿನೊಂದಿಗೆ ಭಾರತ ತಂಡವು ಸೆಮಿಫೈನಲ್​ಗೇರುವುದು ಖಚಿತವಾಗಿದೆ. ಆದರೆ ಟೀಮ್ ಇಂಡಿಯಾ ವಿರುದ್ಧ ಸೋತಿರುವ ಪಾಕಿಸ್ತಾನ್ ತಂಡದ ಭವಿಷ್ಯ ನ್ಯೂಝಿಲೆಂಡ್-ಬಾಂಗ್ಲಾದೇಶ್​ ತಂಡಗಳ ಕೈಯಲ್ಲಿದೆ. ಅಂದರೆ ನ್ಯೂಝಿಲೆಂಡ್ ವಿರುದ್ಧದ ಮ್ಯಾಚ್​ನಲ್ಲಿ ಬಾಂಗ್ಲಾದೇಶ್ ತಂಡ ಜಯ ಸಾಧಿಸಿದರೆ, ಪಾಕಿಸ್ತಾನ್ ತಂಡದ ಸೆಮಿಫೈನಲ್ ಕನಸು ಜೀವಂತವಿರಲಿದೆ.

2 / 5
ಇಲ್ಲಿ ನ್ಯೂಝಿಲೆಂಡ್ ವಿರುದ್ಧ ಬಾಂಗ್ಲಾದೇಶ್ ಹಾಗೂ ಭಾರತ ತಂಡಗಳು ಗೆಲ್ಲಬೇಕು. ಹಾಗೆಯೇ ಪಾಕಿಸ್ತಾನ್ ತಂಡ ಬಾಂಗ್ಲಾದೇಶ್ ವಿರುದ್ಧ ಭರ್ಜರಿ ಜಯ ಸಾಧಿಸಬೇಕು. ಹೀಗಾದಲ್ಲಿ ಪಾಕಿಸ್ತಾನ್ ತಂಡವು ಉತ್ತಮ ನೆಟ್ ರನ್ ರೇಟ್ ಪಡೆದು ಗ್ರೂಪ್-ಎ ನಿಂದ 2ನೇ ತಂಡವಾಗಿ ಸೆಮಿಫೈನಲ್​ಗೇರಬಹುದು.

ಇಲ್ಲಿ ನ್ಯೂಝಿಲೆಂಡ್ ವಿರುದ್ಧ ಬಾಂಗ್ಲಾದೇಶ್ ಹಾಗೂ ಭಾರತ ತಂಡಗಳು ಗೆಲ್ಲಬೇಕು. ಹಾಗೆಯೇ ಪಾಕಿಸ್ತಾನ್ ತಂಡ ಬಾಂಗ್ಲಾದೇಶ್ ವಿರುದ್ಧ ಭರ್ಜರಿ ಜಯ ಸಾಧಿಸಬೇಕು. ಹೀಗಾದಲ್ಲಿ ಪಾಕಿಸ್ತಾನ್ ತಂಡವು ಉತ್ತಮ ನೆಟ್ ರನ್ ರೇಟ್ ಪಡೆದು ಗ್ರೂಪ್-ಎ ನಿಂದ 2ನೇ ತಂಡವಾಗಿ ಸೆಮಿಫೈನಲ್​ಗೇರಬಹುದು.

3 / 5
ಇಂತಹದೊಂದು ಪವಾಡ ಸಂಭವಿಸಿದರೆ, ಭಾರತ ಮತ್ತು ಪಾಕಿಸ್ತಾನ್ ತಂಡಗಳು ಮತ್ತೆ ಮುಖಾಮುಖಿ ಕೂಡ ಆಗಬಹುದು. ಅಂದರೆ ಗ್ರೂಪ್-ಎ ನಿಂದ ಭಾರತ ಮತ್ತು ಪಾಕಿಸ್ತಾನ್ ಸೆಮಿಫೈನಲ್​ಗೇರಿದರೆ, ಉಭಯ ತಂಡಗಳು ಗ್ರೂಪ್-ಬಿ ನಲ್ಲಿರುವ ತಂಡಗಳ ವಿರುದ್ಧ ಸೆಣಸಲಿದೆ.

ಇಂತಹದೊಂದು ಪವಾಡ ಸಂಭವಿಸಿದರೆ, ಭಾರತ ಮತ್ತು ಪಾಕಿಸ್ತಾನ್ ತಂಡಗಳು ಮತ್ತೆ ಮುಖಾಮುಖಿ ಕೂಡ ಆಗಬಹುದು. ಅಂದರೆ ಗ್ರೂಪ್-ಎ ನಿಂದ ಭಾರತ ಮತ್ತು ಪಾಕಿಸ್ತಾನ್ ಸೆಮಿಫೈನಲ್​ಗೇರಿದರೆ, ಉಭಯ ತಂಡಗಳು ಗ್ರೂಪ್-ಬಿ ನಲ್ಲಿರುವ ತಂಡಗಳ ವಿರುದ್ಧ ಸೆಣಸಲಿದೆ.

4 / 5
ಈ ಸೆಮಿಫೈನಲ್ ಪಂದ್ಯಗಳಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಜಯ ಸಾಧಿಸಿದರೆ, ಉಭಯ ತಂಡಗಳು ಫೈನಲ್​ನಲ್ಲಿ ಮತ್ತೆ ಮುಖಾಮುಖಿಯಾಬಹುದು. ಆದರೆ ಅದಕ್ಕೂ ಮುನ್ನ ನ್ಯೂಝಿಲೆಂಡ್ ವಿರುದ್ಧ ಬಾಂಗ್ಲಾದೇಶ್ ತಂಡದ ಗೆಲುವನ್ನು ಪಾಕಿಸ್ತಾನ್ ಎದುರು ನೋಡಬೇಕಿದೆ. ಒಂದು ವೇಳೆ ಬಾಂಗ್ಲಾ ವಿರುದ್ಧ ನ್ಯೂಝಿಲೆಂಡ್ ಗೆದ್ದರೆ, ಪಾಕಿಸ್ತಾನ್ ತಂಡ ಅಧಿಕೃತವಾಗಿ ಚಾಂಪಿಯನ್ಸ್ ಟ್ರೋಫಿಯಿಂದ ಹೊರಬೀಳಲಿದೆ.

ಈ ಸೆಮಿಫೈನಲ್ ಪಂದ್ಯಗಳಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಜಯ ಸಾಧಿಸಿದರೆ, ಉಭಯ ತಂಡಗಳು ಫೈನಲ್​ನಲ್ಲಿ ಮತ್ತೆ ಮುಖಾಮುಖಿಯಾಬಹುದು. ಆದರೆ ಅದಕ್ಕೂ ಮುನ್ನ ನ್ಯೂಝಿಲೆಂಡ್ ವಿರುದ್ಧ ಬಾಂಗ್ಲಾದೇಶ್ ತಂಡದ ಗೆಲುವನ್ನು ಪಾಕಿಸ್ತಾನ್ ಎದುರು ನೋಡಬೇಕಿದೆ. ಒಂದು ವೇಳೆ ಬಾಂಗ್ಲಾ ವಿರುದ್ಧ ನ್ಯೂಝಿಲೆಂಡ್ ಗೆದ್ದರೆ, ಪಾಕಿಸ್ತಾನ್ ತಂಡ ಅಧಿಕೃತವಾಗಿ ಚಾಂಪಿಯನ್ಸ್ ಟ್ರೋಫಿಯಿಂದ ಹೊರಬೀಳಲಿದೆ.

5 / 5

Published On - 9:54 am, Mon, 24 February 25

Follow us
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ
ವೇದಿಕೆಯ ಗಾಂಭೀರ್ಯತೆಯನ್ನು ಶಾಸಕರು ಅರ್ಥಮಾಡಿಕೊಳ್ಳಬೇಕು: ಶಿವಕುಮಾರ್
ವೇದಿಕೆಯ ಗಾಂಭೀರ್ಯತೆಯನ್ನು ಶಾಸಕರು ಅರ್ಥಮಾಡಿಕೊಳ್ಳಬೇಕು: ಶಿವಕುಮಾರ್
ಹೋರಿ ಹಬ್ಬ ಅವಳಿಗೆ ಪಂಚಪ್ರಾಣ: ಕೊಲೆಯಾದ ಸ್ವಾತಿ ನೆನೆದು ಗೆಳತಿ ಕಣ್ಣೀರು
ಹೋರಿ ಹಬ್ಬ ಅವಳಿಗೆ ಪಂಚಪ್ರಾಣ: ಕೊಲೆಯಾದ ಸ್ವಾತಿ ನೆನೆದು ಗೆಳತಿ ಕಣ್ಣೀರು
ಚಕ್ರಗಳನ್ನು ಕದಿಯಲು ಕಳ್ಳರು ಬಂದಿದ್ದು ಇನ್ನೋವಾ ಕಾರಲ್ಲಂತೆ!
ಚಕ್ರಗಳನ್ನು ಕದಿಯಲು ಕಳ್ಳರು ಬಂದಿದ್ದು ಇನ್ನೋವಾ ಕಾರಲ್ಲಂತೆ!
ಅಯ್ಯೋ ಕರ್ಮವೇ..ನಿಂತ ಕಾರಿನ ನಾಲ್ಕು ಟೈರ್ ಬಿಚ್ಚಿಕೊಂಡು ಹೋದ ಖದೀಮರು!
ಅಯ್ಯೋ ಕರ್ಮವೇ..ನಿಂತ ಕಾರಿನ ನಾಲ್ಕು ಟೈರ್ ಬಿಚ್ಚಿಕೊಂಡು ಹೋದ ಖದೀಮರು!
ಪುನೀತ್ ಸಮಾಧಿಗೆ ಶಿವಣ್ಣ-ಗೀತಕ್ಕ ಭೇಟಿ; ಭಾವುಕರಾದ ದಂಪತಿ
ಪುನೀತ್ ಸಮಾಧಿಗೆ ಶಿವಣ್ಣ-ಗೀತಕ್ಕ ಭೇಟಿ; ಭಾವುಕರಾದ ದಂಪತಿ
ಯುವ ಪದಾಧಿಕಾರಿಗಳಿಗೆ ಶಿಸ್ತಿನ ಮಹತ್ವ ಬೋಧಿಸಿದ ಶಿವಕುಮಾರ್
ಯುವ ಪದಾಧಿಕಾರಿಗಳಿಗೆ ಶಿಸ್ತಿನ ಮಹತ್ವ ಬೋಧಿಸಿದ ಶಿವಕುಮಾರ್
ಉಪ ಚುನಾವಣೆಯಲ್ಲಿ ಎಲ್ಲ ಸಮುದಾಯ ಕಾಂಗ್ರೆಸ್​ಗೆ ಮತ ನೀಡಿದೆ: ಸಿದ್ದರಾಮಯ್ಯ
ಉಪ ಚುನಾವಣೆಯಲ್ಲಿ ಎಲ್ಲ ಸಮುದಾಯ ಕಾಂಗ್ರೆಸ್​ಗೆ ಮತ ನೀಡಿದೆ: ಸಿದ್ದರಾಮಯ್ಯ