Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಂಪಿಯನ್ಸ್ ಟ್ರೋಫಿಗೂ ಮುನ್ನ ಆಸ್ಟ್ರೇಲಿಯಾ ತಂಡದಿಂದ ಐವರು ಸ್ಟಾರ್ ಆಟಗಾರರು ಔಟ್

Champions Trophy 2025: 2025 ರ ಚಾಂಪಿಯನ್ಸ್ ಟ್ರೋಫಿ ಫೆಬ್ರವರಿ 19 ರಿಂದ ಪ್ರಾರಂಭವಾಗಲಿದೆ. ಟೂರ್ನಿ ಆರಂಭವಾಗುವ ಮುನ್ನ ಆಸ್ಟ್ರೇಲಿಯಾ ತಂಡದ 5 ಆಟಗಾರರು ತಂಡದಿಂದ ಹೊರಬಿದ್ದಿದ್ದಾರೆ. ಚಾಂಪಿಯನ್ಸ್ ಟ್ರೋಫಿಯಿಂದ ನಾಯಕ ಪ್ಯಾಟ್ ಕಮ್ಮಿನ್ಸ್, ಮಿಚೆಲ್ ಮಾರ್ಷ್, ವೇಗಿ ಜೋಶ್ ಹ್ಯಾಜಲ್‌ವುಡ್, ಕ್ಯಾಮರೂನ್ ಗ್ರೀನ್ ಮತ್ತು ಮಾರ್ಕಸ್ ಸ್ಟೊಯಿನಿಸ್ ಹೊರಗುಳಿದಿದ್ದಾರೆ.

ಪೃಥ್ವಿಶಂಕರ
|

Updated on: Feb 06, 2025 | 4:11 PM

2025 ರ ಚಾಂಪಿಯನ್ಸ್ ಟ್ರೋಫಿ ಆರಂಭವಾಗಲು ಎರಡು ವಾರಗಳಿಗಿಂತ ಕಡಿಮೆ ಸಮಯ ಉಳಿದಿದೆ. ಆದರೆ ವಿಶ್ವ ಚಾಂಪಿಯನ್ ಆಸ್ಟ್ರೇಲಿಯಾ ತಂಡಕ್ಕೆ ಮಾತ್ರ ಒಂದಾದ ಮೇಲೆ ಒಂದರಂತೆ ಆಘಾತಗಳು ಎದುರಾಗುತ್ತಿವೆ. ಈ ಐಸಿಸಿ ಟೂರ್ನಿಯಿಂದ ಆಸ್ಟ್ರೇಲಿಯಾ ತಂಡದ ಐವರು ಸ್ಟಾರ್ ಆಟಗಾರರು ಹೊರಗುಳಿದಿದ್ದು, ಟೂರ್ನಿ ಆರಂಭಕ್ಕೂ ಮುನ್ನವೇ ಆಸೀಸ್ ಪಡೆ ಸಂಕಷ್ಟಕ್ಕೆ ಸಿಲುಕಿದೆ.

2025 ರ ಚಾಂಪಿಯನ್ಸ್ ಟ್ರೋಫಿ ಆರಂಭವಾಗಲು ಎರಡು ವಾರಗಳಿಗಿಂತ ಕಡಿಮೆ ಸಮಯ ಉಳಿದಿದೆ. ಆದರೆ ವಿಶ್ವ ಚಾಂಪಿಯನ್ ಆಸ್ಟ್ರೇಲಿಯಾ ತಂಡಕ್ಕೆ ಮಾತ್ರ ಒಂದಾದ ಮೇಲೆ ಒಂದರಂತೆ ಆಘಾತಗಳು ಎದುರಾಗುತ್ತಿವೆ. ಈ ಐಸಿಸಿ ಟೂರ್ನಿಯಿಂದ ಆಸ್ಟ್ರೇಲಿಯಾ ತಂಡದ ಐವರು ಸ್ಟಾರ್ ಆಟಗಾರರು ಹೊರಗುಳಿದಿದ್ದು, ಟೂರ್ನಿ ಆರಂಭಕ್ಕೂ ಮುನ್ನವೇ ಆಸೀಸ್ ಪಡೆ ಸಂಕಷ್ಟಕ್ಕೆ ಸಿಲುಕಿದೆ.

1 / 5
ಆಸ್ಟ್ರೇಲಿಯಾ ತಂಡದ ಐವರು ಸ್ಟಾರ್ ಆಟಗಾರರಾದ ನಾಯಕ ಪ್ಯಾಟ್ ಕಮ್ಮಿನ್ಸ್, ಮಿಚೆಲ್ ಮಾರ್ಷ್, ವೇಗಿ ಜೋಶ್ ಹ್ಯಾಜಲ್‌ವುಡ್, ಕ್ಯಾಮರೂನ್ ಗ್ರೀನ್ ಮತ್ತು ಮಾರ್ಕಸ್ ಸ್ಟೊಯಿನಿಸ್ ಚಾಂಪಿಯನ್ಸ್ ಟ್ರೋಫಿಗೆ ಅಲಭ್ಯರಾಗಿದ್ದಾರೆ. ಇದರಲ್ಲಿ ನಾಲ್ವರು ಆಟಗಾರರು ಇಂಜುರಿಗೊಂಡಿದ್ದರೆ, ಮಾರ್ಕಸ್ ಸ್ಟೊಯಿನಿಸ್ ಏಕದಿನ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸುವ ಮೂಲಕ ಎಲ್ಲರನ್ನೂ ಅಚ್ಚರಿಗೊಳಿಸಿದ್ದಾರೆ.

ಆಸ್ಟ್ರೇಲಿಯಾ ತಂಡದ ಐವರು ಸ್ಟಾರ್ ಆಟಗಾರರಾದ ನಾಯಕ ಪ್ಯಾಟ್ ಕಮ್ಮಿನ್ಸ್, ಮಿಚೆಲ್ ಮಾರ್ಷ್, ವೇಗಿ ಜೋಶ್ ಹ್ಯಾಜಲ್‌ವುಡ್, ಕ್ಯಾಮರೂನ್ ಗ್ರೀನ್ ಮತ್ತು ಮಾರ್ಕಸ್ ಸ್ಟೊಯಿನಿಸ್ ಚಾಂಪಿಯನ್ಸ್ ಟ್ರೋಫಿಗೆ ಅಲಭ್ಯರಾಗಿದ್ದಾರೆ. ಇದರಲ್ಲಿ ನಾಲ್ವರು ಆಟಗಾರರು ಇಂಜುರಿಗೊಂಡಿದ್ದರೆ, ಮಾರ್ಕಸ್ ಸ್ಟೊಯಿನಿಸ್ ಏಕದಿನ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸುವ ಮೂಲಕ ಎಲ್ಲರನ್ನೂ ಅಚ್ಚರಿಗೊಳಿಸಿದ್ದಾರೆ.

2 / 5
ಚಾಂಪಿಯನ್ಸ್ ಟ್ರೋಫಿಯಿಂದ ನಾಯಕ ಪ್ಯಾಟ್ ಕಮ್ಮಿನ್ಸ್ ಮತ್ತು ಜೋಶ್ ಹ್ಯಾಜಲ್‌ವುಡ್ ಅವರನ್ನು ಹೊರಗಿಡಲಾಗಿದೆ ಎಂದು ಕ್ರಿಕೆಟ್ ಆಸ್ಟ್ರೇಲಿಯಾ ಅಧಿಕೃತವಾಗಿ ಘೋಷಿಸಿದೆ. ಈ ಇಬ್ಬರೂ ಆಟಗಾರರು ಟೀಂ ಇಂಡಿಯಾ ವಿರುದ್ಧ ಆಡಿದ್ದ ಬಾರ್ಡರ್ ಗವಾಸ್ಕರ್ ಟ್ರೋಫಿಯಲ್ಲಿ ಗಾಯಗೊಂಡಿದ್ದರು. ಈ ಕಾರಣದಿಂದಾಗಿ ಈ ಇಬ್ಬರೂ ಆಟಗಾರರು ಶ್ರೀಲಂಕಾ ವಿರುದ್ಧ ನಡೆಯುತ್ತಿರುವ ಟೆಸ್ಟ್ ಸರಣಿಯಲ್ಲಿ ಆಸ್ಟ್ರೇಲಿಯಾ ತಂಡದ ಭಾಗವಾಗಿಲ್ಲ.

ಚಾಂಪಿಯನ್ಸ್ ಟ್ರೋಫಿಯಿಂದ ನಾಯಕ ಪ್ಯಾಟ್ ಕಮ್ಮಿನ್ಸ್ ಮತ್ತು ಜೋಶ್ ಹ್ಯಾಜಲ್‌ವುಡ್ ಅವರನ್ನು ಹೊರಗಿಡಲಾಗಿದೆ ಎಂದು ಕ್ರಿಕೆಟ್ ಆಸ್ಟ್ರೇಲಿಯಾ ಅಧಿಕೃತವಾಗಿ ಘೋಷಿಸಿದೆ. ಈ ಇಬ್ಬರೂ ಆಟಗಾರರು ಟೀಂ ಇಂಡಿಯಾ ವಿರುದ್ಧ ಆಡಿದ್ದ ಬಾರ್ಡರ್ ಗವಾಸ್ಕರ್ ಟ್ರೋಫಿಯಲ್ಲಿ ಗಾಯಗೊಂಡಿದ್ದರು. ಈ ಕಾರಣದಿಂದಾಗಿ ಈ ಇಬ್ಬರೂ ಆಟಗಾರರು ಶ್ರೀಲಂಕಾ ವಿರುದ್ಧ ನಡೆಯುತ್ತಿರುವ ಟೆಸ್ಟ್ ಸರಣಿಯಲ್ಲಿ ಆಸ್ಟ್ರೇಲಿಯಾ ತಂಡದ ಭಾಗವಾಗಿಲ್ಲ.

3 / 5
ನಾಯಕ ಪ್ಯಾಟ್ ಕಮ್ಮಿನ್ಸ್ ಪಾದದ ಗಾಯದಿಂದ ಬಳಲುತ್ತಿದ್ದರೆ, ಹ್ಯಾಜಲ್‌ವುಡ್ ಇನ್ನೂ ತನ್ನ ಕಾಲಿನ ಗಾಯದಿಂದ ಚೇತರಿಸಿಕೊಂಡಿಲ್ಲ. ದುರದೃಷ್ಟವಶಾತ್ ಪ್ಯಾಟ್ ಕಮ್ಮಿನ್ಸ್, ಜೋಶ್ ಹ್ಯಾಜಲ್‌ವುಡ್ ಮತ್ತು ಮಿಚೆಲ್ ಮಾರ್ಷ್ ಗಾಯಗಳಿಂದ ಬಳಲುತ್ತಿದ್ದು, ಚಾಂಪಿಯನ್ಸ್ ಟ್ರೋಫಿಗೆ ಸಮಯಕ್ಕೆ ಸರಿಯಾಗಿ ಆಗಮಿಸಲು ಸಾಧ್ಯವಾಗುವುದಿಲ್ಲ ಎಂದು ಆಸ್ಟ್ರೇಲಿಯಾ ತಂಡದ ಆಯ್ಕೆ ಸಮಿತಿ ಅಧ್ಯಕ್ಷ ಜಾರ್ಜ್ ಬೈಲಿ ಹೇಳಿದ್ದಾರೆ.

ನಾಯಕ ಪ್ಯಾಟ್ ಕಮ್ಮಿನ್ಸ್ ಪಾದದ ಗಾಯದಿಂದ ಬಳಲುತ್ತಿದ್ದರೆ, ಹ್ಯಾಜಲ್‌ವುಡ್ ಇನ್ನೂ ತನ್ನ ಕಾಲಿನ ಗಾಯದಿಂದ ಚೇತರಿಸಿಕೊಂಡಿಲ್ಲ. ದುರದೃಷ್ಟವಶಾತ್ ಪ್ಯಾಟ್ ಕಮ್ಮಿನ್ಸ್, ಜೋಶ್ ಹ್ಯಾಜಲ್‌ವುಡ್ ಮತ್ತು ಮಿಚೆಲ್ ಮಾರ್ಷ್ ಗಾಯಗಳಿಂದ ಬಳಲುತ್ತಿದ್ದು, ಚಾಂಪಿಯನ್ಸ್ ಟ್ರೋಫಿಗೆ ಸಮಯಕ್ಕೆ ಸರಿಯಾಗಿ ಆಗಮಿಸಲು ಸಾಧ್ಯವಾಗುವುದಿಲ್ಲ ಎಂದು ಆಸ್ಟ್ರೇಲಿಯಾ ತಂಡದ ಆಯ್ಕೆ ಸಮಿತಿ ಅಧ್ಯಕ್ಷ ಜಾರ್ಜ್ ಬೈಲಿ ಹೇಳಿದ್ದಾರೆ.

4 / 5
ಮತ್ತೊಂದೆಡೆ, ತಂಡದ ಸ್ಟಾರ್ ಆಲ್‌ರೌಂಡರ್ ಮಾರ್ಕಸ್ ಸ್ಟೊಯಿನಿಸ್ ಇಂದು ಏಕದಿನ ಕ್ರಿಕೆಟ್‌ನಿಂದ ನಿವೃತ್ತರಾಗುವ ಮೂಲಕ ಎಲ್ಲರನ್ನೂ ಅಚ್ಚರಿಗೊಳಿಸಿದ್ದಾರೆ. ಸ್ಟೊಯಿನಿಸ್ ಅವರು ಟಿ20 ಕ್ರಿಕೆಟ್‌ನತ್ತ ಗಮನ ಹರಿಸಲು ಬಯಸಿದ್ದು, ಈ ಕಾರಣಕ್ಕಾಗಿ ಏಕದಿನ ಮಾದರಿಗೆ ವಿದಾಯ ಹೇಳುತ್ತಿರುವುದಾಗಿ ಸ್ಟೊಯಿನಿಸ್ ಮಾಹಿತಿ ನೀಡಿದ್ದಾರೆ.

ಮತ್ತೊಂದೆಡೆ, ತಂಡದ ಸ್ಟಾರ್ ಆಲ್‌ರೌಂಡರ್ ಮಾರ್ಕಸ್ ಸ್ಟೊಯಿನಿಸ್ ಇಂದು ಏಕದಿನ ಕ್ರಿಕೆಟ್‌ನಿಂದ ನಿವೃತ್ತರಾಗುವ ಮೂಲಕ ಎಲ್ಲರನ್ನೂ ಅಚ್ಚರಿಗೊಳಿಸಿದ್ದಾರೆ. ಸ್ಟೊಯಿನಿಸ್ ಅವರು ಟಿ20 ಕ್ರಿಕೆಟ್‌ನತ್ತ ಗಮನ ಹರಿಸಲು ಬಯಸಿದ್ದು, ಈ ಕಾರಣಕ್ಕಾಗಿ ಏಕದಿನ ಮಾದರಿಗೆ ವಿದಾಯ ಹೇಳುತ್ತಿರುವುದಾಗಿ ಸ್ಟೊಯಿನಿಸ್ ಮಾಹಿತಿ ನೀಡಿದ್ದಾರೆ.

5 / 5
Follow us
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಸ್ಕೂಟಿಗೆ ಡಿಕ್ಕಿ ಹೊಡೆದು 11 ಕಿ.ಮೀ ಎಳೆದೊಯ್ದ ಕಾರು, ಭಯಾನಕ ವಿಡಿಯೋ
ಸ್ಕೂಟಿಗೆ ಡಿಕ್ಕಿ ಹೊಡೆದು 11 ಕಿ.ಮೀ ಎಳೆದೊಯ್ದ ಕಾರು, ಭಯಾನಕ ವಿಡಿಯೋ