AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Champions Trophy 2025: ಒಂದು ಪಂದ್ಯವನ್ನು ಗೆಲ್ಲದ ಪಾಕಿಸ್ತಾನಕ್ಕೆ ಸಿಕ್ಕಿದ್ದು ಎಷ್ಟು ಕೋಟಿ?

ICC Champions Trophy 2025 Prize Money: ಭಾರತ ತಂಡವು ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಮಣಿಸಿ ಟ್ರೋಫಿ ಎತ್ತಿ ಹಿಡಿದಿದೆ. ಇದಕ್ಕೆ ಬಹುಮಾನವಾಗಿ ಭಾರತವು ಸರಿಸುಮಾರು 23 ಕೋಟಿ ರೂಪಾಯಿ ಬಹುಮಾನ ಸಿಕ್ಕಿದೆ. ಇತ್ತ ಆತಿಥೇಯ ಪಾಕಿಸ್ತಾನಕ್ಕೆ ಒಂದೇ ಒಂದು ಪಂದ್ಯವನ್ನು ಗೆಲ್ಲಲು ಸಾಧ್ಯವಾಗದಿದ್ದರೂ ಐಸಿಸಿಯಿಂದ 2 ಕೋಟಿ 31 ಲಕ್ಷ ರೂಪಾಯಿ ಹಣ ಸಿಕ್ಕಿದೆ.

ಪೃಥ್ವಿಶಂಕರ
|

Updated on: Mar 10, 2025 | 4:00 PM

Share
ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಮಣಿಸಿದ ಟೀಂ ಇಂಡಿಯಾ ಮೂರನೇ ಬಾರಿಗೆ ಚಾಂಪಿಯನ್ಸ್ ಟ್ರೋಫಿ ಗೆದ್ದ ಸಾಧನೆ ಮಾಡಿದೆ. ಆದರೆ ತನ್ನ ಹಾಲಿ ಚಾಂಪಿಯನ್ ಪಟ್ಟವನ್ನು ಉಳಿಸಿಕೊಳ್ಳುವ ಸಲವಾಗಿ ತಾನೇ ಆಯೋಜಕತ್ವದ ಹಕ್ಕನ್ನು ಪಡೆದುಕೊಂಡು ಟೂರ್ನಿಗೆ ಪ್ರವೇಶಿಸಿದ್ದ ಪಾಕಿಸ್ತಾನಕ್ಕೆ ಮಾತ್ರ ಎದುರಾಗಿದ್ದು ಬರೀ ನಿರಾಶೆ.

ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಮಣಿಸಿದ ಟೀಂ ಇಂಡಿಯಾ ಮೂರನೇ ಬಾರಿಗೆ ಚಾಂಪಿಯನ್ಸ್ ಟ್ರೋಫಿ ಗೆದ್ದ ಸಾಧನೆ ಮಾಡಿದೆ. ಆದರೆ ತನ್ನ ಹಾಲಿ ಚಾಂಪಿಯನ್ ಪಟ್ಟವನ್ನು ಉಳಿಸಿಕೊಳ್ಳುವ ಸಲವಾಗಿ ತಾನೇ ಆಯೋಜಕತ್ವದ ಹಕ್ಕನ್ನು ಪಡೆದುಕೊಂಡು ಟೂರ್ನಿಗೆ ಪ್ರವೇಶಿಸಿದ್ದ ಪಾಕಿಸ್ತಾನಕ್ಕೆ ಮಾತ್ರ ಎದುರಾಗಿದ್ದು ಬರೀ ನಿರಾಶೆ.

1 / 7
ತವರು ನೆಲದ ಪ್ರಯೋಜನ ಪಡೆದು ಚಾಂಪಿಯನ್ಸ್ ಟ್ರೋಫಿ ಗೆಲ್ಲುವ ಕನಸಿನೊಂದಿಗೆ ಅಖಾಡಕ್ಕಿಳಿದಿದ್ದ ಪಾಕಿಸ್ತಾನಕ್ಕೆ ಟ್ರೋಫಿ ಇರಲಿ, ಒಂದು ಪಂದ್ಯವನ್ನು ಗೆಲ್ಲಲು ಸಾಧ್ಯವಾಗಲಿಲ್ಲ. ಇತ್ತ ಪಾಕಿಸ್ತಾನಕ್ಕೆ ಹೋಗದೆ ಎಲ್ಲಾ ಪಂದ್ಯಗಳನ್ನು ದುಬೈನಲ್ಲೇ ಆಡಿದ ಟೀಂ ಇಂಡಿಯಾ ಒಂದೇ ಒಂದು ಪಂದ್ಯವನ್ನು ಸೋಲದೆ ಟ್ರೋಫಿಯನ್ನು ಎತ್ತಿ ಹಿಡಿಯಿತು.

ತವರು ನೆಲದ ಪ್ರಯೋಜನ ಪಡೆದು ಚಾಂಪಿಯನ್ಸ್ ಟ್ರೋಫಿ ಗೆಲ್ಲುವ ಕನಸಿನೊಂದಿಗೆ ಅಖಾಡಕ್ಕಿಳಿದಿದ್ದ ಪಾಕಿಸ್ತಾನಕ್ಕೆ ಟ್ರೋಫಿ ಇರಲಿ, ಒಂದು ಪಂದ್ಯವನ್ನು ಗೆಲ್ಲಲು ಸಾಧ್ಯವಾಗಲಿಲ್ಲ. ಇತ್ತ ಪಾಕಿಸ್ತಾನಕ್ಕೆ ಹೋಗದೆ ಎಲ್ಲಾ ಪಂದ್ಯಗಳನ್ನು ದುಬೈನಲ್ಲೇ ಆಡಿದ ಟೀಂ ಇಂಡಿಯಾ ಒಂದೇ ಒಂದು ಪಂದ್ಯವನ್ನು ಸೋಲದೆ ಟ್ರೋಫಿಯನ್ನು ಎತ್ತಿ ಹಿಡಿಯಿತು.

2 / 7
ಇದಕ್ಕೆ ಬಹುಮಾನವಾಗಿ ಐಸಿಸಿಯಿಂದ 20 ಕೋಟಿ ರೂಗಳು ಟೀಂ ಇಂಡಿಯಾ ಖಾತೆ ಸೇರಿತು. ಇದರ ಜೊತೆಗೆ ಪ್ರತಿ ಪಂದ್ಯದಲ್ಲೂ ಗೆಲುವು ಸಾಧಿಸಿದಕ್ಕೆ ಹಾಗೂ ಟೂರ್ನಿಯಲ್ಲಿ ಭಾಗವಹಿಸಿದಕ್ಕೂ ಟೀಂ ಇಂಡಿಯಾಗೆ ಐಸಿಸಿಯಿಂದ ಹಣ ಸಿಕ್ಕಿದೆ. ಒಟ್ಟಾರೆಯಾಗಿ ಭಾರತಕ್ಕೆ ಸಿಕ್ಕ ಒಟ್ಟು ಹಣ ಸರಿಸುಮಾರು 23 ಕೋಟಿ ಎಂದು ಅಂದಾಜಿಸಬಹುದು.

ಇದಕ್ಕೆ ಬಹುಮಾನವಾಗಿ ಐಸಿಸಿಯಿಂದ 20 ಕೋಟಿ ರೂಗಳು ಟೀಂ ಇಂಡಿಯಾ ಖಾತೆ ಸೇರಿತು. ಇದರ ಜೊತೆಗೆ ಪ್ರತಿ ಪಂದ್ಯದಲ್ಲೂ ಗೆಲುವು ಸಾಧಿಸಿದಕ್ಕೆ ಹಾಗೂ ಟೂರ್ನಿಯಲ್ಲಿ ಭಾಗವಹಿಸಿದಕ್ಕೂ ಟೀಂ ಇಂಡಿಯಾಗೆ ಐಸಿಸಿಯಿಂದ ಹಣ ಸಿಕ್ಕಿದೆ. ಒಟ್ಟಾರೆಯಾಗಿ ಭಾರತಕ್ಕೆ ಸಿಕ್ಕ ಒಟ್ಟು ಹಣ ಸರಿಸುಮಾರು 23 ಕೋಟಿ ಎಂದು ಅಂದಾಜಿಸಬಹುದು.

3 / 7
ಇತ್ತ ಹಾಲಿ ಚಾಂಪಿಯನ್ ಪಟ್ಟದೊಂದಿಗೆ ಹಾಗೆಯೇ ಆತಿಥ್ಯದ ಅಧಿಕಾರದೊಂದಿಗೆ ಟೂರ್ನಿಗೆ ಕಾಲಿರಿಸಿದ್ದ ಪಾಕಿಸ್ತಾನಕ್ಕೆ, ಇಡೀ ಪಂದ್ಯಾವಳಿ ದುಃಸ್ವಪ್ನವಾಗಿ ಕಾಡಿತ್ತು. ತವರು ನೆಲದಲ್ಲೇ ಪಾಕಿಸ್ತಾನಕ್ಕೆ ಒಂದೇ ಒಂದು ಪಂದ್ಯವನ್ನು ಗೆಲ್ಲಲು ಸಾಧ್ಯವಾಗಲಿಲ್ಲ. ಹೀಗಾಗಿ ಲೀಗ್ ಹಂತವನ್ನು ದಾಟಿ ಪಾಕ್ ತಂಡಕ್ಕೆ ಮುಂದಕ್ಕೆ ಹೋಗಲು ಸಾಧ್ಯವಾಗಲಿಲ್ಲ.

ಇತ್ತ ಹಾಲಿ ಚಾಂಪಿಯನ್ ಪಟ್ಟದೊಂದಿಗೆ ಹಾಗೆಯೇ ಆತಿಥ್ಯದ ಅಧಿಕಾರದೊಂದಿಗೆ ಟೂರ್ನಿಗೆ ಕಾಲಿರಿಸಿದ್ದ ಪಾಕಿಸ್ತಾನಕ್ಕೆ, ಇಡೀ ಪಂದ್ಯಾವಳಿ ದುಃಸ್ವಪ್ನವಾಗಿ ಕಾಡಿತ್ತು. ತವರು ನೆಲದಲ್ಲೇ ಪಾಕಿಸ್ತಾನಕ್ಕೆ ಒಂದೇ ಒಂದು ಪಂದ್ಯವನ್ನು ಗೆಲ್ಲಲು ಸಾಧ್ಯವಾಗಲಿಲ್ಲ. ಹೀಗಾಗಿ ಲೀಗ್ ಹಂತವನ್ನು ದಾಟಿ ಪಾಕ್ ತಂಡಕ್ಕೆ ಮುಂದಕ್ಕೆ ಹೋಗಲು ಸಾಧ್ಯವಾಗಲಿಲ್ಲ.

4 / 7
ಲೀಗ್ ಹಂತದಲ್ಲಿ 2 ಪಂದ್ಯಗಳನ್ನು ಆಡುವ ಅವಕಾಶ ಪಡೆದ ಪಾಕಿಸ್ತಾನ, ತನ್ನ ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ 60 ರನ್​ಗಳಿಂದ ಸೋತಿತ್ತು. ಇದರ ನಂತರ ಭಾರತದ ವಿರುದ್ಧ 6 ವಿಕೆಟ್‌ಗಳಿಂದ ಸೋತಿತ್ತು. ಆದರೆ ಬಾಂಗ್ಲಾದೇಶ ವಿರುದ್ಧದ ಮೂರನೇ ಹಾಗೂ ಕೊನೆಯ ಲೀಗ್ ಪಂದ್ಯ ಮಳೆಯಿಂದ ರದ್ದಾಗಿತ್ತು. ಈ ಕಾರಣದಿಂದಾಗಿ ಪಾಕಿಸ್ತಾನ ತಂಡ ಸೆಮಿಫೈನಲ್ ತಲುಪಲು ಸಾಧ್ಯವಾಗದೆ ಪಾಯಿಂಟ್ ಪಟ್ಟಿಯಲ್ಲಿ 7ನೇ ಸ್ಥಾನಕ್ಕೆ ತೃಪ್ತಿ ಪಡಬೇಕಾಯಿತು.

ಲೀಗ್ ಹಂತದಲ್ಲಿ 2 ಪಂದ್ಯಗಳನ್ನು ಆಡುವ ಅವಕಾಶ ಪಡೆದ ಪಾಕಿಸ್ತಾನ, ತನ್ನ ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ 60 ರನ್​ಗಳಿಂದ ಸೋತಿತ್ತು. ಇದರ ನಂತರ ಭಾರತದ ವಿರುದ್ಧ 6 ವಿಕೆಟ್‌ಗಳಿಂದ ಸೋತಿತ್ತು. ಆದರೆ ಬಾಂಗ್ಲಾದೇಶ ವಿರುದ್ಧದ ಮೂರನೇ ಹಾಗೂ ಕೊನೆಯ ಲೀಗ್ ಪಂದ್ಯ ಮಳೆಯಿಂದ ರದ್ದಾಗಿತ್ತು. ಈ ಕಾರಣದಿಂದಾಗಿ ಪಾಕಿಸ್ತಾನ ತಂಡ ಸೆಮಿಫೈನಲ್ ತಲುಪಲು ಸಾಧ್ಯವಾಗದೆ ಪಾಯಿಂಟ್ ಪಟ್ಟಿಯಲ್ಲಿ 7ನೇ ಸ್ಥಾನಕ್ಕೆ ತೃಪ್ತಿ ಪಡಬೇಕಾಯಿತು.

5 / 7
ಆದಾಗ್ಯೂ ಪಾಕಿಸ್ತಾನ ಐಸಿಸಿಯಿಂದ ಕೋಟಿ ಮೊತ್ತದ ಬಹುಮಾನ ಪಡೆಯುವಲ್ಲಿ ಯಶಸ್ವಿಯಾಗಿದೆ. 2025 ರ ಚಾಂಪಿಯನ್ಸ್ ಟ್ರೋಫಿಯಲ್ಲಿ 7 ಅಥವಾ 8 ನೇ ಸ್ಥಾನ ಪಡೆಯುವ ತಂಡಗಳಿಗೆ ಸರಿಸುಮಾರು 1 ಕೋಟಿ 22 ಲಕ್ಷ ರೂಪಾಯಿಗಳನ್ನು ನೀಡಲು ಐಸಿಸಿ ನಿರ್ಧರಿಸಿತ್ತು. ಆ ಪ್ರಕಾರ 7ನೇ ಸ್ಥಾನ ಪಡೆದಿರುವ ಪಾಕಿಸ್ತಾನಕ್ಕೆ 1 ಕೋಟಿ 22 ಲಕ್ಷ ರೂಪಾಯಿ ಬಹುಮಾನ ಸಿಕ್ಕಿದೆ.

ಆದಾಗ್ಯೂ ಪಾಕಿಸ್ತಾನ ಐಸಿಸಿಯಿಂದ ಕೋಟಿ ಮೊತ್ತದ ಬಹುಮಾನ ಪಡೆಯುವಲ್ಲಿ ಯಶಸ್ವಿಯಾಗಿದೆ. 2025 ರ ಚಾಂಪಿಯನ್ಸ್ ಟ್ರೋಫಿಯಲ್ಲಿ 7 ಅಥವಾ 8 ನೇ ಸ್ಥಾನ ಪಡೆಯುವ ತಂಡಗಳಿಗೆ ಸರಿಸುಮಾರು 1 ಕೋಟಿ 22 ಲಕ್ಷ ರೂಪಾಯಿಗಳನ್ನು ನೀಡಲು ಐಸಿಸಿ ನಿರ್ಧರಿಸಿತ್ತು. ಆ ಪ್ರಕಾರ 7ನೇ ಸ್ಥಾನ ಪಡೆದಿರುವ ಪಾಕಿಸ್ತಾನಕ್ಕೆ 1 ಕೋಟಿ 22 ಲಕ್ಷ ರೂಪಾಯಿ ಬಹುಮಾನ ಸಿಕ್ಕಿದೆ.

6 / 7
ಇದು ಮಾತ್ರವಲ್ಲದೆ ಪಾಕಿಸ್ತಾನ ತಂಡವು 2025 ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾಗವಹಿಸಿದ್ದಕ್ಕಾಗಿ ಸರಿಸುಮಾರು 1 ಕೋಟಿ 9 ಲಕ್ಷ ರೂಗಳನ್ನು ಪಡೆದುಕೊಂಡಿದೆ. ಈ ರೀತಿಯಾಗಿ, ಪಾಕಿಸ್ತಾನವು ಪ್ರಸಕ್ತ ಚಾಂಪಿಯನ್ಸ್ ಟ್ರೋಫಿಯಲ್ಲಿ ಯಾವುದೇ ಪಂದ್ಯವನ್ನು ಗೆಲ್ಲದೆ ಸರಿಸುಮಾರು 2 ಕೋಟಿ 31 ಲಕ್ಷ ರೂ.ಗಳನ್ನು  ಬಹುಮಾನವನ್ನಾಗಿ ಪಡೆದುಕೊಂಡಿದೆ.

ಇದು ಮಾತ್ರವಲ್ಲದೆ ಪಾಕಿಸ್ತಾನ ತಂಡವು 2025 ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾಗವಹಿಸಿದ್ದಕ್ಕಾಗಿ ಸರಿಸುಮಾರು 1 ಕೋಟಿ 9 ಲಕ್ಷ ರೂಗಳನ್ನು ಪಡೆದುಕೊಂಡಿದೆ. ಈ ರೀತಿಯಾಗಿ, ಪಾಕಿಸ್ತಾನವು ಪ್ರಸಕ್ತ ಚಾಂಪಿಯನ್ಸ್ ಟ್ರೋಫಿಯಲ್ಲಿ ಯಾವುದೇ ಪಂದ್ಯವನ್ನು ಗೆಲ್ಲದೆ ಸರಿಸುಮಾರು 2 ಕೋಟಿ 31 ಲಕ್ಷ ರೂ.ಗಳನ್ನು ಬಹುಮಾನವನ್ನಾಗಿ ಪಡೆದುಕೊಂಡಿದೆ.

7 / 7
ಪೃಥ್ವಿಶಂಕರ
ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ