AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Champions Trophy 2025: ರವೀಂದ್ರ ಜಡೇಜಾಗೆ ಚಾನ್ಸ್ ಸಿಗೋದು ಡೌಟ್..!

Ravindra Jadeja: ರವೀಂದ್ರ ಜಡೇಜಾ ಈಗಾಗಲೇ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಇದೀಗ ಏಕದಿನ ತಂಡದಿಂದಲೂ ಅವರು ಹೊರಬೀಳುವ ಸಾಧ್ಯತೆಯಿದೆ. ಪ್ರಸ್ತುತ ಮಾಹಿತಿಗಳ ಪ್ರಕಾರ, ಮುಂಬರುವ ಚಾಂಪಿಯನ್ಸ್ ಟ್ರೋಫಿ ತಂಡಕ್ಕೆ ರವೀಂದ್ರ ಜಡೇಜಾ ಆಯ್ಕೆಯಾಗುವ ಸಾಧ್ಯತೆ ತುಂಬಾ ಕಡಿಮೆ. ಹೀಗಾಗಿ ಶೀಘ್ರದಲ್ಲೇ ಅವರ ಸೀಮಿತ ಓವರ್​ಗಳ ಕೆರಿಯರ್ ಅಂತ್ಯವಾಗಲಿದೆ.

TV9 Web
| Edited By: |

Updated on: Jan 11, 2025 | 8:54 AM

Share
ಚಾಂಪಿಯನ್ಸ್ 2025 ಕ್ಕಾಗಿ ಶೀಘ್ರದಲ್ಲೇ ಭಾರತ ತಂಡದ ಘೋಷಣೆಯಾಗಲಿದೆ. 15 ಸದಸ್ಯರ ಈ ತಂಡದಲ್ಲಿ ಟೀಮ್ ಇಂಡಿಯಾದ ಹಿರಿಯ ಆಲ್​ರೌಂಡರ್ ರವೀಂದ್ರ ಜಡೇಜಾ ಕಾಣಿಸಿಕೊಳ್ಳುವುದು ಅನುಮಾನ. ಏಕೆಂದರೆ ಹಿರಿಯ ಆಟಗಾರರನ್ನು ತಂಡದಿಂದ ಕೈ ಬಿಡಲು ಬಿಸಿಸಿಐ ಆಯ್ಕೆ ಸಮಿತಿ ಚಿಂತಿಸಿದೆ.

ಚಾಂಪಿಯನ್ಸ್ 2025 ಕ್ಕಾಗಿ ಶೀಘ್ರದಲ್ಲೇ ಭಾರತ ತಂಡದ ಘೋಷಣೆಯಾಗಲಿದೆ. 15 ಸದಸ್ಯರ ಈ ತಂಡದಲ್ಲಿ ಟೀಮ್ ಇಂಡಿಯಾದ ಹಿರಿಯ ಆಲ್​ರೌಂಡರ್ ರವೀಂದ್ರ ಜಡೇಜಾ ಕಾಣಿಸಿಕೊಳ್ಳುವುದು ಅನುಮಾನ. ಏಕೆಂದರೆ ಹಿರಿಯ ಆಟಗಾರರನ್ನು ತಂಡದಿಂದ ಕೈ ಬಿಡಲು ಬಿಸಿಸಿಐ ಆಯ್ಕೆ ಸಮಿತಿ ಚಿಂತಿಸಿದೆ.

1 / 6
ಈ ಪಟ್ಟಿಯಲ್ಲಿ 36 ವರ್ಷದ ರವೀಂದ್ರ ಜಡೇಜಾ ಅವರು ಹೆಸರು ಮುಂಚೂಣಿಯಲ್ಲಿ ಕಾಣಿಸಿಕೊಂಡಿದೆ. 2023ರ ವಿಶ್ವಕಪ್ ಬಳಿಕ ಜಡೇಜಾ ಯಾವುದೇ ಏಕದಿನ ಪಂದ್ಯವಾಡಿಲ್ಲ. ಹೀಗಾಗಿ ಅವರನ್ನು ಚಾಂಪಿಯನ್ಸ್ ಟ್ರೋಫಿ ತಂಡಕ್ಕೆ ಆಯ್ಕೆ ಮಾಡದಿರಲು ಚರ್ಚಿಸಲಾಗಿದೆ ಎಂದು ವರದಿಯಾಗಿದೆ.

ಈ ಪಟ್ಟಿಯಲ್ಲಿ 36 ವರ್ಷದ ರವೀಂದ್ರ ಜಡೇಜಾ ಅವರು ಹೆಸರು ಮುಂಚೂಣಿಯಲ್ಲಿ ಕಾಣಿಸಿಕೊಂಡಿದೆ. 2023ರ ವಿಶ್ವಕಪ್ ಬಳಿಕ ಜಡೇಜಾ ಯಾವುದೇ ಏಕದಿನ ಪಂದ್ಯವಾಡಿಲ್ಲ. ಹೀಗಾಗಿ ಅವರನ್ನು ಚಾಂಪಿಯನ್ಸ್ ಟ್ರೋಫಿ ತಂಡಕ್ಕೆ ಆಯ್ಕೆ ಮಾಡದಿರಲು ಚರ್ಚಿಸಲಾಗಿದೆ ಎಂದು ವರದಿಯಾಗಿದೆ.

2 / 6
ರವೀಂದ್ರ ಜಡೇಜಾ ಮುಂಬರುವ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಕಾಣಿಸಿಕೊಂಡರೆ ಮಾತ್ರ ಅವರಿಗೆ ಚಾಂಪಿಯನ್ಸ್ ಟ್ರೋಫಿ ತಂಡದಲ್ಲಿ ಸ್ಥಾನ ಸಿಗಲಿದೆ. ಒಂದು ವೇಳೆ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಿಂದ ಅವರನ್ನು ಕೈ ಬಿಟ್ಟರೆ ಅವರ ಒಡಿಐ ಕೆರಿಯರ್ ಅಂತ್ಯ ಎಂದೇ ಹೇಳಬಹುದು.

ರವೀಂದ್ರ ಜಡೇಜಾ ಮುಂಬರುವ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಕಾಣಿಸಿಕೊಂಡರೆ ಮಾತ್ರ ಅವರಿಗೆ ಚಾಂಪಿಯನ್ಸ್ ಟ್ರೋಫಿ ತಂಡದಲ್ಲಿ ಸ್ಥಾನ ಸಿಗಲಿದೆ. ಒಂದು ವೇಳೆ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಿಂದ ಅವರನ್ನು ಕೈ ಬಿಟ್ಟರೆ ಅವರ ಒಡಿಐ ಕೆರಿಯರ್ ಅಂತ್ಯ ಎಂದೇ ಹೇಳಬಹುದು.

3 / 6
ಏಕೆಂದರೆ ತಂಡದಲ್ಲಿ ಸ್ಪಿನ್ ಆಲ್​ರೌಂಡರ್​​ಗಳಾಗಿ ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್ ಇದ್ದಾರೆ. ಇದೀಗ ಯುವ ಆಟಗಾರ ತನುಷ್ ಕೋಟ್ಯಾನ್ ಕೂಡ ಸ್ಪಿನ್ ಆಲ್​ರೌಂಡರ್ ಆಗಿ ಭಾರತ ತಂಡದ ಕದ ತಟ್ಟುತ್ತಿದ್ದಾರೆ. ಹೀಗಾಗಿ ಭವಿಷ್ಯದ ದೃಷ್ಟಿಯಿಂದ ಚಾಂಪಿಯನ್ಸ್ ಟ್ರೋಫಿ ತಂಡದಿಂದ ಜಡೇಜಾ ಅವರನ್ನು ಕೈ ಬಿಡುವ ಸಾಧ್ಯತೆ ಹೆಚ್ಚಿದೆ.

ಏಕೆಂದರೆ ತಂಡದಲ್ಲಿ ಸ್ಪಿನ್ ಆಲ್​ರೌಂಡರ್​​ಗಳಾಗಿ ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್ ಇದ್ದಾರೆ. ಇದೀಗ ಯುವ ಆಟಗಾರ ತನುಷ್ ಕೋಟ್ಯಾನ್ ಕೂಡ ಸ್ಪಿನ್ ಆಲ್​ರೌಂಡರ್ ಆಗಿ ಭಾರತ ತಂಡದ ಕದ ತಟ್ಟುತ್ತಿದ್ದಾರೆ. ಹೀಗಾಗಿ ಭವಿಷ್ಯದ ದೃಷ್ಟಿಯಿಂದ ಚಾಂಪಿಯನ್ಸ್ ಟ್ರೋಫಿ ತಂಡದಿಂದ ಜಡೇಜಾ ಅವರನ್ನು ಕೈ ಬಿಡುವ ಸಾಧ್ಯತೆ ಹೆಚ್ಚಿದೆ.

4 / 6
ಇತ್ತ ಈ ಬಗ್ಗೆ ರವೀಂದ್ರ ಜಡೇಜಾ ಅವರಿಗೂ ಸೂಚನೆ ಸಿಕ್ಕಿರುವ ಸಾಧ್ಯತೆಯಿದೆ. ಇದೇ ಕಾರಣದಿಂದಾಗಿ ಅವರು ಸೋಷಿಯಲ್ ಮೀಡಿಯಾದಲ್ಲಿ ಟೆಸ್ಟ್ ಜೆರ್ಸಿಯ ಫೋಟೋ ಹಂಚಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಇದು ಜಡೇಜಾ ಟೆಸ್ಟ್​ ಕ್ರಿಕೆಟ್​ಗೆ ವಿದಾಯ ಹೇಳುವ ಅಥವಾ ಟೆಸ್ಟ್​ನಲ್ಲಿ ಮಾತ್ರ ಮುಂದುವರೆಯಲಿರುವ ಮುನ್ಸೂಚನೆ ಎಂದು ವಿಶ್ಲೇಷಿಸಲಾಗುತ್ತಿದೆ.

ಇತ್ತ ಈ ಬಗ್ಗೆ ರವೀಂದ್ರ ಜಡೇಜಾ ಅವರಿಗೂ ಸೂಚನೆ ಸಿಕ್ಕಿರುವ ಸಾಧ್ಯತೆಯಿದೆ. ಇದೇ ಕಾರಣದಿಂದಾಗಿ ಅವರು ಸೋಷಿಯಲ್ ಮೀಡಿಯಾದಲ್ಲಿ ಟೆಸ್ಟ್ ಜೆರ್ಸಿಯ ಫೋಟೋ ಹಂಚಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಇದು ಜಡೇಜಾ ಟೆಸ್ಟ್​ ಕ್ರಿಕೆಟ್​ಗೆ ವಿದಾಯ ಹೇಳುವ ಅಥವಾ ಟೆಸ್ಟ್​ನಲ್ಲಿ ಮಾತ್ರ ಮುಂದುವರೆಯಲಿರುವ ಮುನ್ಸೂಚನೆ ಎಂದು ವಿಶ್ಲೇಷಿಸಲಾಗುತ್ತಿದೆ.

5 / 6
ಒಟ್ಟಿನಲ್ಲಿ ಟೀಮ್ ಇಂಡಿಯಾ ಪರ 197	ಏಕದಿನ ಪಂದ್ಯಗಳನ್ನಾಡಿರುವ ರವೀಂದ್ರ ಜಡೇಜಾ ಅವರ ಒಡಿಐ ಭವಿಷ್ಯ ಮುಂಬರುವ ಇಂಗ್ಲೆಂಡ್ ವಿರುದ್ಧದ ಸರಣಿಯೊಂದಿಗೆ ನಿರ್ಧಾರವಾಗಲಿದೆ. ಈ ಸರಣಿಗೆ ಆಯ್ಕೆಯಾಗದಿದ್ದರೆ 36 ವರ್ಷದ ಹಿರಿಯ ಆಟಗಾರನ ಸೀಮಿತ ಓವರ್​​ಗಳ ಕೆರಿಯರ್ ಕೊನೆಗೊಳ್ಳುವುದು ಖಚಿತ.

ಒಟ್ಟಿನಲ್ಲಿ ಟೀಮ್ ಇಂಡಿಯಾ ಪರ 197 ಏಕದಿನ ಪಂದ್ಯಗಳನ್ನಾಡಿರುವ ರವೀಂದ್ರ ಜಡೇಜಾ ಅವರ ಒಡಿಐ ಭವಿಷ್ಯ ಮುಂಬರುವ ಇಂಗ್ಲೆಂಡ್ ವಿರುದ್ಧದ ಸರಣಿಯೊಂದಿಗೆ ನಿರ್ಧಾರವಾಗಲಿದೆ. ಈ ಸರಣಿಗೆ ಆಯ್ಕೆಯಾಗದಿದ್ದರೆ 36 ವರ್ಷದ ಹಿರಿಯ ಆಟಗಾರನ ಸೀಮಿತ ಓವರ್​​ಗಳ ಕೆರಿಯರ್ ಕೊನೆಗೊಳ್ಳುವುದು ಖಚಿತ.

6 / 6
Follow Us
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!
ಬೆಳಗಾವಿ ಮೂಲದ ಶಾಸಕನಿಂದ ಅಡ್ಡಮತದಾನ ಶಂಕೆ, ಬಿಜೆಪಿಯಲ್ಲಿ ಸಂಚಲನ
ಬೆಳಗಾವಿ ಮೂಲದ ಶಾಸಕನಿಂದ ಅಡ್ಡಮತದಾನ ಶಂಕೆ, ಬಿಜೆಪಿಯಲ್ಲಿ ಸಂಚಲನ
ಬಿಜೆಪಿ ನಾಯಕರ ಮಧ್ಯೆಯೇ ಜೋರಾದ ವಾಗ್ಯುದ್ಧ!
ಬಿಜೆಪಿ ನಾಯಕರ ಮಧ್ಯೆಯೇ ಜೋರಾದ ವಾಗ್ಯುದ್ಧ!