AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Champions Trophy 2025: ಅದೇ ನಾಲ್ಕು… ನಾಲ್ಕರಲ್ಲಿ ಎರಡು… ಹಿಸ್ಟರಿ ರಿಪೀಟ್

Champions Trophy 2025: ಚಾಂಪಿಯನ್ಸ್ ಟ್ರೋಫಿಯ ಸೆಮಿಫೈನಲ್​ನಲ್ಲಿ ಭಾರತ, ನ್ಯೂಝಿಲೆಂಡ್, ಸೌತ್ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ತಂಡಗಳು ಕಣಕ್ಕಿಳಿಯಲಿವೆ. ಈ ನಾಲ್ಕು ತಂಡಗಳೇ ಕಳೆದ ಬಾರಿಯ ಏಕದಿನ ವಿಶ್ವಕಪ್​ನಲ್ಲೂ ಸೆಮಿಫೈನಲ್ ಆಡಿತ್ತು ಎಂಬುದು ವಿಶೇಷ. ಇದೀಗ ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್​ನಲ್ಲೂ ನಾಲ್ಕು ಬಲಿಷ್ಠ ತಂಡಗಳು ಕಾಣಿಸಿಕೊಂಡಿದ್ದು, ಹೀಗಾಗಿ ನಾಕೌಟ್ ಹಂತದಲ್ಲಿ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು.

ಝಾಹಿರ್ ಯೂಸುಫ್
|

Updated on: Mar 02, 2025 | 8:53 AM

Share
ಚಾಂಪಿಯನ್ಸ್ ಟ್ರೋಫಿ ಟೂರ್ನಿಯು ನಾಕೌಟ್ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ 4 ತಂಡಗಳು ಹೊರಬಿದ್ದರೆ, 4 ತಂಡಗಳು ಸೆಮಿಫೈನಲ್​ಗೆ ಪ್ರವೇಶಿಸಿದೆ. ಹೀಗೆ ಮುಂದಿನ ಹಂತಕ್ಕೇರಿದ ತಂಡಗಳೆಂದರೆ ಭಾರತ, ನ್ಯೂಝಿಲೆಂಡ್, ಆಸ್ಟ್ರೇಲಿಯಾ ಮತ್ತು ಸೌತ್ ಆಫ್ರಿಕಾ.

ಚಾಂಪಿಯನ್ಸ್ ಟ್ರೋಫಿ ಟೂರ್ನಿಯು ನಾಕೌಟ್ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ 4 ತಂಡಗಳು ಹೊರಬಿದ್ದರೆ, 4 ತಂಡಗಳು ಸೆಮಿಫೈನಲ್​ಗೆ ಪ್ರವೇಶಿಸಿದೆ. ಹೀಗೆ ಮುಂದಿನ ಹಂತಕ್ಕೇರಿದ ತಂಡಗಳೆಂದರೆ ಭಾರತ, ನ್ಯೂಝಿಲೆಂಡ್, ಆಸ್ಟ್ರೇಲಿಯಾ ಮತ್ತು ಸೌತ್ ಆಫ್ರಿಕಾ.

1 / 5
ಇಂಟ್ರೆಸ್ಟಿಂಗ್ ವಿಷಯ ಎಂದರೆ, 2015 ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಇದೇ ನಾಲ್ಕು ತಂಡಗಳು ಸೆಮಿಫೈನಲ್ ಆಡಿತ್ತು. ಇನ್ನು 2023ರ ಏಕದಿನ ವಿಶ್ವಕಪ್​ನಲ್ಲೂ ಭಾರತ, ಸೌತ್ ಆಫ್ರಿಕಾ, ನ್ಯೂಝಿಲೆಂಡ್ ಹಾಗೂ ಆಸ್ಟ್ರೇಲಿಯಾ ತಂಡಗಳು ಸೆಮಿಫೈನಲ್​ನಲ್ಲಿ ಕಾಣಿಸಿಕೊಂಡಿತ್ತು.

ಇಂಟ್ರೆಸ್ಟಿಂಗ್ ವಿಷಯ ಎಂದರೆ, 2015 ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಇದೇ ನಾಲ್ಕು ತಂಡಗಳು ಸೆಮಿಫೈನಲ್ ಆಡಿತ್ತು. ಇನ್ನು 2023ರ ಏಕದಿನ ವಿಶ್ವಕಪ್​ನಲ್ಲೂ ಭಾರತ, ಸೌತ್ ಆಫ್ರಿಕಾ, ನ್ಯೂಝಿಲೆಂಡ್ ಹಾಗೂ ಆಸ್ಟ್ರೇಲಿಯಾ ತಂಡಗಳು ಸೆಮಿಫೈನಲ್​ನಲ್ಲಿ ಕಾಣಿಸಿಕೊಂಡಿತ್ತು.

2 / 5
ಇಲ್ಲಿ ಭಾರತ ತಂಡ ನ್ಯೂಝಿಲೆಂಡ್ ತಂಡವನ್ನು ಮಣಿಸಿ ಫೈನಲ್​ಗೆ ಪ್ರವೇಶಿಸಿದರೆ, ಆಸ್ಟ್ರೇಲಿಯಾ ತಂಡ ಸೌತ್ ಆಫ್ರಿಕಾ ತಂಡಕ್ಕೆ ಸೋಲುಣಿಸಿ ಏಕದಿನ ವಿಶ್ವಕಪ್​ನ ಫೈನಲ್ ಫೈಟ್​ಗೆ ಎಂಟ್ರಿ ಕೊಟ್ಟಿತ್ತು. ಅಲ್ಲದೆ ಅಂತಿಮ ಪಂದ್ಯದಲ್ಲಿ ಭಾರತ ತಂಡಕ್ಕೆ ಸೋಲುಣಿಸಿ ಆಸ್ಟ್ರೇಲಿಯಾ 2023ರ ಏಕದಿನ ವಿಶ್ವಕಪ್ ಟ್ರೋಫಿ ಎತ್ತಿ ಹಿಡಿದದ್ದು ಈಗ ಇತಿಹಾಸ.

ಇಲ್ಲಿ ಭಾರತ ತಂಡ ನ್ಯೂಝಿಲೆಂಡ್ ತಂಡವನ್ನು ಮಣಿಸಿ ಫೈನಲ್​ಗೆ ಪ್ರವೇಶಿಸಿದರೆ, ಆಸ್ಟ್ರೇಲಿಯಾ ತಂಡ ಸೌತ್ ಆಫ್ರಿಕಾ ತಂಡಕ್ಕೆ ಸೋಲುಣಿಸಿ ಏಕದಿನ ವಿಶ್ವಕಪ್​ನ ಫೈನಲ್ ಫೈಟ್​ಗೆ ಎಂಟ್ರಿ ಕೊಟ್ಟಿತ್ತು. ಅಲ್ಲದೆ ಅಂತಿಮ ಪಂದ್ಯದಲ್ಲಿ ಭಾರತ ತಂಡಕ್ಕೆ ಸೋಲುಣಿಸಿ ಆಸ್ಟ್ರೇಲಿಯಾ 2023ರ ಏಕದಿನ ವಿಶ್ವಕಪ್ ಟ್ರೋಫಿ ಎತ್ತಿ ಹಿಡಿದದ್ದು ಈಗ ಇತಿಹಾಸ.

3 / 5
ಇದೀಗ ಇದೇ ನಾಲ್ಕು ತಂಡಗಳು ಚಾಂಪಿಯನ್ಸ್ ಟ್ರೋಫಿಯಲ್ಲೂ ಸೆಮಿಫೈನಲ್​ಗೆ ಪ್ರವೇಶಿಸಿದೆ. ಈ ಮೂಲಕ ಮತ್ತೊಮ್ಮೆ ಇತಿಹಾಸವನ್ನು ಪುನರಾವರ್ತಿಸಿದ್ದಾರೆ. ಆದರೆ 2023 ರಲ್ಲಿ ಸೆಮಿಫೈನಲ್​ನಲ್ಲಿ ಮುಖಾಮುಖಿಯಾಗಿದ್ದ ತಂಡಗಳು ಈ ಬಾರಿ ಪರಸ್ಪರ ಸೆಣಸುವುದಿಲ್ಲ ಎಂಬುದು ಖಚಿತವಾಗಿದೆ.

ಇದೀಗ ಇದೇ ನಾಲ್ಕು ತಂಡಗಳು ಚಾಂಪಿಯನ್ಸ್ ಟ್ರೋಫಿಯಲ್ಲೂ ಸೆಮಿಫೈನಲ್​ಗೆ ಪ್ರವೇಶಿಸಿದೆ. ಈ ಮೂಲಕ ಮತ್ತೊಮ್ಮೆ ಇತಿಹಾಸವನ್ನು ಪುನರಾವರ್ತಿಸಿದ್ದಾರೆ. ಆದರೆ 2023 ರಲ್ಲಿ ಸೆಮಿಫೈನಲ್​ನಲ್ಲಿ ಮುಖಾಮುಖಿಯಾಗಿದ್ದ ತಂಡಗಳು ಈ ಬಾರಿ ಪರಸ್ಪರ ಸೆಣಸುವುದಿಲ್ಲ ಎಂಬುದು ಖಚಿತವಾಗಿದೆ.

4 / 5
ಏಕೆಂದರೆ ಕಳೆದ ಬಾರಿಯ ಸೆಮಿಫೈನಲಿಸ್ಟ್ ಭಾರತ ಮತ್ತು ನ್ಯೂಝಿಲೆಂಡ್ ಗ್ರೂಪ್-ಎ ನಲ್ಲಿದ್ದರೆ, ಆಸ್ಟ್ರೇಲಿಯಾ ಮತ್ತು ಸೌತ್ ಆಫ್ರಿಕಾ ಗ್ರೂಪ್-ಬಿ ನಲ್ಲಿದೆ. ಹೀಗಾಗಿ ಈ ನಾಲ್ಕು ತಂಡಗಳು ಪರಸ್ಪರ ವಿರುದ್ಧವಾಗಿ ಸೆಣಸಲಿದೆ. ಅಂದರೆ ಇಲ್ಲಿ ಟೀಮ್ ಇಂಡಿಯಾಗೆ ಸೆಮಿಫೈನಲ್ ಎದುರಾಳಿಯಾಗಿ ಆಸ್ಟ್ರೇಲಿಯಾ ಅಥವಾ ಸೌತ್ ಆಫ್ರಿಕಾ ಸಿಗಲಿದೆ. ಅದರಂತೆ ಈ ಬಾರಿ ಫೈನಲ್​ಗೆ ಎಂಟ್ರಿ ಕೊಡುವ 2 ತಂಡಗಳಾವುವು ಎಂಬುದೇ ಈಗ ಕುತೂಹಲ.

ಏಕೆಂದರೆ ಕಳೆದ ಬಾರಿಯ ಸೆಮಿಫೈನಲಿಸ್ಟ್ ಭಾರತ ಮತ್ತು ನ್ಯೂಝಿಲೆಂಡ್ ಗ್ರೂಪ್-ಎ ನಲ್ಲಿದ್ದರೆ, ಆಸ್ಟ್ರೇಲಿಯಾ ಮತ್ತು ಸೌತ್ ಆಫ್ರಿಕಾ ಗ್ರೂಪ್-ಬಿ ನಲ್ಲಿದೆ. ಹೀಗಾಗಿ ಈ ನಾಲ್ಕು ತಂಡಗಳು ಪರಸ್ಪರ ವಿರುದ್ಧವಾಗಿ ಸೆಣಸಲಿದೆ. ಅಂದರೆ ಇಲ್ಲಿ ಟೀಮ್ ಇಂಡಿಯಾಗೆ ಸೆಮಿಫೈನಲ್ ಎದುರಾಳಿಯಾಗಿ ಆಸ್ಟ್ರೇಲಿಯಾ ಅಥವಾ ಸೌತ್ ಆಫ್ರಿಕಾ ಸಿಗಲಿದೆ. ಅದರಂತೆ ಈ ಬಾರಿ ಫೈನಲ್​ಗೆ ಎಂಟ್ರಿ ಕೊಡುವ 2 ತಂಡಗಳಾವುವು ಎಂಬುದೇ ಈಗ ಕುತೂಹಲ.

5 / 5
Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು