AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Champions Trophy 2025: ಅದೇ ನಾಲ್ಕು… ನಾಲ್ಕರಲ್ಲಿ ಎರಡು… ಹಿಸ್ಟರಿ ರಿಪೀಟ್

Champions Trophy 2025: ಚಾಂಪಿಯನ್ಸ್ ಟ್ರೋಫಿಯ ಸೆಮಿಫೈನಲ್​ನಲ್ಲಿ ಭಾರತ, ನ್ಯೂಝಿಲೆಂಡ್, ಸೌತ್ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ತಂಡಗಳು ಕಣಕ್ಕಿಳಿಯಲಿವೆ. ಈ ನಾಲ್ಕು ತಂಡಗಳೇ ಕಳೆದ ಬಾರಿಯ ಏಕದಿನ ವಿಶ್ವಕಪ್​ನಲ್ಲೂ ಸೆಮಿಫೈನಲ್ ಆಡಿತ್ತು ಎಂಬುದು ವಿಶೇಷ. ಇದೀಗ ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್​ನಲ್ಲೂ ನಾಲ್ಕು ಬಲಿಷ್ಠ ತಂಡಗಳು ಕಾಣಿಸಿಕೊಂಡಿದ್ದು, ಹೀಗಾಗಿ ನಾಕೌಟ್ ಹಂತದಲ್ಲಿ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು.

ಝಾಹಿರ್ ಯೂಸುಫ್
|

Updated on: Mar 02, 2025 | 8:53 AM

ಚಾಂಪಿಯನ್ಸ್ ಟ್ರೋಫಿ ಟೂರ್ನಿಯು ನಾಕೌಟ್ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ 4 ತಂಡಗಳು ಹೊರಬಿದ್ದರೆ, 4 ತಂಡಗಳು ಸೆಮಿಫೈನಲ್​ಗೆ ಪ್ರವೇಶಿಸಿದೆ. ಹೀಗೆ ಮುಂದಿನ ಹಂತಕ್ಕೇರಿದ ತಂಡಗಳೆಂದರೆ ಭಾರತ, ನ್ಯೂಝಿಲೆಂಡ್, ಆಸ್ಟ್ರೇಲಿಯಾ ಮತ್ತು ಸೌತ್ ಆಫ್ರಿಕಾ.

ಚಾಂಪಿಯನ್ಸ್ ಟ್ರೋಫಿ ಟೂರ್ನಿಯು ನಾಕೌಟ್ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ 4 ತಂಡಗಳು ಹೊರಬಿದ್ದರೆ, 4 ತಂಡಗಳು ಸೆಮಿಫೈನಲ್​ಗೆ ಪ್ರವೇಶಿಸಿದೆ. ಹೀಗೆ ಮುಂದಿನ ಹಂತಕ್ಕೇರಿದ ತಂಡಗಳೆಂದರೆ ಭಾರತ, ನ್ಯೂಝಿಲೆಂಡ್, ಆಸ್ಟ್ರೇಲಿಯಾ ಮತ್ತು ಸೌತ್ ಆಫ್ರಿಕಾ.

1 / 5
ಇಂಟ್ರೆಸ್ಟಿಂಗ್ ವಿಷಯ ಎಂದರೆ, 2015 ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಇದೇ ನಾಲ್ಕು ತಂಡಗಳು ಸೆಮಿಫೈನಲ್ ಆಡಿತ್ತು. ಇನ್ನು 2023ರ ಏಕದಿನ ವಿಶ್ವಕಪ್​ನಲ್ಲೂ ಭಾರತ, ಸೌತ್ ಆಫ್ರಿಕಾ, ನ್ಯೂಝಿಲೆಂಡ್ ಹಾಗೂ ಆಸ್ಟ್ರೇಲಿಯಾ ತಂಡಗಳು ಸೆಮಿಫೈನಲ್​ನಲ್ಲಿ ಕಾಣಿಸಿಕೊಂಡಿತ್ತು.

ಇಂಟ್ರೆಸ್ಟಿಂಗ್ ವಿಷಯ ಎಂದರೆ, 2015 ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಇದೇ ನಾಲ್ಕು ತಂಡಗಳು ಸೆಮಿಫೈನಲ್ ಆಡಿತ್ತು. ಇನ್ನು 2023ರ ಏಕದಿನ ವಿಶ್ವಕಪ್​ನಲ್ಲೂ ಭಾರತ, ಸೌತ್ ಆಫ್ರಿಕಾ, ನ್ಯೂಝಿಲೆಂಡ್ ಹಾಗೂ ಆಸ್ಟ್ರೇಲಿಯಾ ತಂಡಗಳು ಸೆಮಿಫೈನಲ್​ನಲ್ಲಿ ಕಾಣಿಸಿಕೊಂಡಿತ್ತು.

2 / 5
ಇಲ್ಲಿ ಭಾರತ ತಂಡ ನ್ಯೂಝಿಲೆಂಡ್ ತಂಡವನ್ನು ಮಣಿಸಿ ಫೈನಲ್​ಗೆ ಪ್ರವೇಶಿಸಿದರೆ, ಆಸ್ಟ್ರೇಲಿಯಾ ತಂಡ ಸೌತ್ ಆಫ್ರಿಕಾ ತಂಡಕ್ಕೆ ಸೋಲುಣಿಸಿ ಏಕದಿನ ವಿಶ್ವಕಪ್​ನ ಫೈನಲ್ ಫೈಟ್​ಗೆ ಎಂಟ್ರಿ ಕೊಟ್ಟಿತ್ತು. ಅಲ್ಲದೆ ಅಂತಿಮ ಪಂದ್ಯದಲ್ಲಿ ಭಾರತ ತಂಡಕ್ಕೆ ಸೋಲುಣಿಸಿ ಆಸ್ಟ್ರೇಲಿಯಾ 2023ರ ಏಕದಿನ ವಿಶ್ವಕಪ್ ಟ್ರೋಫಿ ಎತ್ತಿ ಹಿಡಿದದ್ದು ಈಗ ಇತಿಹಾಸ.

ಇಲ್ಲಿ ಭಾರತ ತಂಡ ನ್ಯೂಝಿಲೆಂಡ್ ತಂಡವನ್ನು ಮಣಿಸಿ ಫೈನಲ್​ಗೆ ಪ್ರವೇಶಿಸಿದರೆ, ಆಸ್ಟ್ರೇಲಿಯಾ ತಂಡ ಸೌತ್ ಆಫ್ರಿಕಾ ತಂಡಕ್ಕೆ ಸೋಲುಣಿಸಿ ಏಕದಿನ ವಿಶ್ವಕಪ್​ನ ಫೈನಲ್ ಫೈಟ್​ಗೆ ಎಂಟ್ರಿ ಕೊಟ್ಟಿತ್ತು. ಅಲ್ಲದೆ ಅಂತಿಮ ಪಂದ್ಯದಲ್ಲಿ ಭಾರತ ತಂಡಕ್ಕೆ ಸೋಲುಣಿಸಿ ಆಸ್ಟ್ರೇಲಿಯಾ 2023ರ ಏಕದಿನ ವಿಶ್ವಕಪ್ ಟ್ರೋಫಿ ಎತ್ತಿ ಹಿಡಿದದ್ದು ಈಗ ಇತಿಹಾಸ.

3 / 5
ಇದೀಗ ಇದೇ ನಾಲ್ಕು ತಂಡಗಳು ಚಾಂಪಿಯನ್ಸ್ ಟ್ರೋಫಿಯಲ್ಲೂ ಸೆಮಿಫೈನಲ್​ಗೆ ಪ್ರವೇಶಿಸಿದೆ. ಈ ಮೂಲಕ ಮತ್ತೊಮ್ಮೆ ಇತಿಹಾಸವನ್ನು ಪುನರಾವರ್ತಿಸಿದ್ದಾರೆ. ಆದರೆ 2023 ರಲ್ಲಿ ಸೆಮಿಫೈನಲ್​ನಲ್ಲಿ ಮುಖಾಮುಖಿಯಾಗಿದ್ದ ತಂಡಗಳು ಈ ಬಾರಿ ಪರಸ್ಪರ ಸೆಣಸುವುದಿಲ್ಲ ಎಂಬುದು ಖಚಿತವಾಗಿದೆ.

ಇದೀಗ ಇದೇ ನಾಲ್ಕು ತಂಡಗಳು ಚಾಂಪಿಯನ್ಸ್ ಟ್ರೋಫಿಯಲ್ಲೂ ಸೆಮಿಫೈನಲ್​ಗೆ ಪ್ರವೇಶಿಸಿದೆ. ಈ ಮೂಲಕ ಮತ್ತೊಮ್ಮೆ ಇತಿಹಾಸವನ್ನು ಪುನರಾವರ್ತಿಸಿದ್ದಾರೆ. ಆದರೆ 2023 ರಲ್ಲಿ ಸೆಮಿಫೈನಲ್​ನಲ್ಲಿ ಮುಖಾಮುಖಿಯಾಗಿದ್ದ ತಂಡಗಳು ಈ ಬಾರಿ ಪರಸ್ಪರ ಸೆಣಸುವುದಿಲ್ಲ ಎಂಬುದು ಖಚಿತವಾಗಿದೆ.

4 / 5
ಏಕೆಂದರೆ ಕಳೆದ ಬಾರಿಯ ಸೆಮಿಫೈನಲಿಸ್ಟ್ ಭಾರತ ಮತ್ತು ನ್ಯೂಝಿಲೆಂಡ್ ಗ್ರೂಪ್-ಎ ನಲ್ಲಿದ್ದರೆ, ಆಸ್ಟ್ರೇಲಿಯಾ ಮತ್ತು ಸೌತ್ ಆಫ್ರಿಕಾ ಗ್ರೂಪ್-ಬಿ ನಲ್ಲಿದೆ. ಹೀಗಾಗಿ ಈ ನಾಲ್ಕು ತಂಡಗಳು ಪರಸ್ಪರ ವಿರುದ್ಧವಾಗಿ ಸೆಣಸಲಿದೆ. ಅಂದರೆ ಇಲ್ಲಿ ಟೀಮ್ ಇಂಡಿಯಾಗೆ ಸೆಮಿಫೈನಲ್ ಎದುರಾಳಿಯಾಗಿ ಆಸ್ಟ್ರೇಲಿಯಾ ಅಥವಾ ಸೌತ್ ಆಫ್ರಿಕಾ ಸಿಗಲಿದೆ. ಅದರಂತೆ ಈ ಬಾರಿ ಫೈನಲ್​ಗೆ ಎಂಟ್ರಿ ಕೊಡುವ 2 ತಂಡಗಳಾವುವು ಎಂಬುದೇ ಈಗ ಕುತೂಹಲ.

ಏಕೆಂದರೆ ಕಳೆದ ಬಾರಿಯ ಸೆಮಿಫೈನಲಿಸ್ಟ್ ಭಾರತ ಮತ್ತು ನ್ಯೂಝಿಲೆಂಡ್ ಗ್ರೂಪ್-ಎ ನಲ್ಲಿದ್ದರೆ, ಆಸ್ಟ್ರೇಲಿಯಾ ಮತ್ತು ಸೌತ್ ಆಫ್ರಿಕಾ ಗ್ರೂಪ್-ಬಿ ನಲ್ಲಿದೆ. ಹೀಗಾಗಿ ಈ ನಾಲ್ಕು ತಂಡಗಳು ಪರಸ್ಪರ ವಿರುದ್ಧವಾಗಿ ಸೆಣಸಲಿದೆ. ಅಂದರೆ ಇಲ್ಲಿ ಟೀಮ್ ಇಂಡಿಯಾಗೆ ಸೆಮಿಫೈನಲ್ ಎದುರಾಳಿಯಾಗಿ ಆಸ್ಟ್ರೇಲಿಯಾ ಅಥವಾ ಸೌತ್ ಆಫ್ರಿಕಾ ಸಿಗಲಿದೆ. ಅದರಂತೆ ಈ ಬಾರಿ ಫೈನಲ್​ಗೆ ಎಂಟ್ರಿ ಕೊಡುವ 2 ತಂಡಗಳಾವುವು ಎಂಬುದೇ ಈಗ ಕುತೂಹಲ.

5 / 5
Follow us
ಪಾಟ್ನಾದಲ್ಲಿ 1,200 ಕೋಟಿ ವೆಚ್ಚದ ಟರ್ಮಿನಲ್ ಉದ್ಘಾಟಿಸಿದ ಮೋದಿ
ಪಾಟ್ನಾದಲ್ಲಿ 1,200 ಕೋಟಿ ವೆಚ್ಚದ ಟರ್ಮಿನಲ್ ಉದ್ಘಾಟಿಸಿದ ಮೋದಿ
ಪಾಟ್ನಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಬೃಹತ್ ರೋಡ್ ಶೋ
ಪಾಟ್ನಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಬೃಹತ್ ರೋಡ್ ಶೋ
ಆರ್​ಸಿಬಿ ವೇಗಿಗಳ ವಿಕೆಟ್ ಬೇಟೆ ಹೇಗಿದೆ ನೀವೇ ನೋಡಿ
ಆರ್​ಸಿಬಿ ವೇಗಿಗಳ ವಿಕೆಟ್ ಬೇಟೆ ಹೇಗಿದೆ ನೀವೇ ನೋಡಿ
ಕನ್ನಡದ ಬಗ್ಗೆ ಕಮಲ್ ಹಾಸನ್​ ಹೇಳಿದ್ದು ಸರಿಯೇ? ನಟಿ ಜಯಮಾಲಾ ಪ್ರತಿಕ್ರಿಯೆ
ಕನ್ನಡದ ಬಗ್ಗೆ ಕಮಲ್ ಹಾಸನ್​ ಹೇಳಿದ್ದು ಸರಿಯೇ? ನಟಿ ಜಯಮಾಲಾ ಪ್ರತಿಕ್ರಿಯೆ
ರೆಹಮಾನ್ ಕೊಲೆಗೆ ಪೊಲೀಸ್ ಕಮೀಶನರ್ ಹೊಣೆ: ಯುವ ಮುಖಂಡರು
ರೆಹಮಾನ್ ಕೊಲೆಗೆ ಪೊಲೀಸ್ ಕಮೀಶನರ್ ಹೊಣೆ: ಯುವ ಮುಖಂಡರು
ಕಮಲ್ ಹಾಸನ್ ನಟನೆಯ ಥಗ್ ಲೈಫ್ ಬ್ಯಾನ್ ಮಾಡೋದು ಚರ್ಚೆಯ ವಿಷಯ: ಸುಮಲತಾ
ಕಮಲ್ ಹಾಸನ್ ನಟನೆಯ ಥಗ್ ಲೈಫ್ ಬ್ಯಾನ್ ಮಾಡೋದು ಚರ್ಚೆಯ ವಿಷಯ: ಸುಮಲತಾ
ಹರಿಪ್ರಸಾದ್ ಮನೆಯಿಂದಲೇ ಶಾಹುಲ್​ಗೆ ಜಮೀರ್ ಮತ್ತು ನಜೀರ್​ರಿಂದ ಫೋನ್
ಹರಿಪ್ರಸಾದ್ ಮನೆಯಿಂದಲೇ ಶಾಹುಲ್​ಗೆ ಜಮೀರ್ ಮತ್ತು ನಜೀರ್​ರಿಂದ ಫೋನ್
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​