Sign In

By signing in or creating an account, you agree with Associated Broadcasting Company's Terms & Conditions and Privacy Policy.

RCBಗೆ ಕಪ್… ಲಾಲಿಪಾಪ್: CSK ಅಭಿಮಾನಿಗಳ ಗೇಲಿ ಹಿಂದಿರುವ ಅಸಲಿಯತ್ತೇನು?

IPL 2025 CSK vs RCB: ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ 2025ರ 8ನೇ ಪಂದ್ಯದಲ್ಲಿ ಸಿಎಸ್​ಕೆ ವಿರುದ್ಧ ಆರ್​​ಸಿಬಿ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 20 ಓವರ್​ಗಳಲ್ಲಿ 196 ರನ್​ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ 20 ಓವರ್​ಗಳಲ್ಲಿ 146 ರನ್ ಬಾರಿಸಿ 50 ರನ್​ಗಳಿಂದ ಸೋಲೊಪ್ಪಿಕೊಂಡಿದೆ.

ಝಾಹಿರ್ ಯೂಸುಫ್
|

Updated on:Mar 29, 2025 | 10:54 AM

ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಫ್ಯಾನ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಹೀಯಾಳಿಸಿದ್ರಾ? ಅದು ಸಹ ಲಾಲಿಪಾಪ್ ಹಿಡಿದುಕೊಂಡು..! ನಿಮಗೆ ಕಪ್ ಸಿಗಲ್ಲ, ಲಾಲಿಪಾಪೇ ಗತಿ ಎನ್ನುವ ಮೂಲಕ RCBಯನ್ನು ಟ್ರೋಲ್ ಮಾಡಲಾಗಿದೆ ಎಂಬ ಫೋಟೋಗಳು ಇದೀಗ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಫ್ಯಾನ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಹೀಯಾಳಿಸಿದ್ರಾ? ಅದು ಸಹ ಲಾಲಿಪಾಪ್ ಹಿಡಿದುಕೊಂಡು..! ನಿಮಗೆ ಕಪ್ ಸಿಗಲ್ಲ, ಲಾಲಿಪಾಪೇ ಗತಿ ಎನ್ನುವ ಮೂಲಕ RCBಯನ್ನು ಟ್ರೋಲ್ ಮಾಡಲಾಗಿದೆ ಎಂಬ ಫೋಟೋಗಳು ಇದೀಗ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

1 / 5
ಈ ಫೋಟೋಗಳ ಸತ್ಯಾಸತ್ಯತೆಯನ್ನು ಪರಿಶೀಲಿಸಿದಾಗ ಇದು ಫೇಕ್ ಎಂದು ತಿಳಿದು ಬಂದಿದೆ. ಅಲ್ಲದೆ ಈ ಫೋಟೋಗಳನ್ನು AI ಸಹಾಯದಿಂದ ರೂಪಿಸಲಾಗಿದೆ. ಇದೇ ಫೋಟೋಗಳನ್ನು ಬಳಸಿ ಚೆಪಾಕ್​ನಲ್ಲಿ ಆರ್​ಸಿಬಿಯನ್ನು ಸಿಎಸ್​ಕೆ ಬಹಿರಂಗವಾಗಿ ಟ್ರೋಲ್ ಮಾಡಿದೆ ಎಂದು ಸುಳ್ಳು ಸುದ್ದಿಯನ್ನು ಹರಿಬಿಡಲಾಗಿದೆ.

ಈ ಫೋಟೋಗಳ ಸತ್ಯಾಸತ್ಯತೆಯನ್ನು ಪರಿಶೀಲಿಸಿದಾಗ ಇದು ಫೇಕ್ ಎಂದು ತಿಳಿದು ಬಂದಿದೆ. ಅಲ್ಲದೆ ಈ ಫೋಟೋಗಳನ್ನು AI ಸಹಾಯದಿಂದ ರೂಪಿಸಲಾಗಿದೆ. ಇದೇ ಫೋಟೋಗಳನ್ನು ಬಳಸಿ ಚೆಪಾಕ್​ನಲ್ಲಿ ಆರ್​ಸಿಬಿಯನ್ನು ಸಿಎಸ್​ಕೆ ಬಹಿರಂಗವಾಗಿ ಟ್ರೋಲ್ ಮಾಡಿದೆ ಎಂದು ಸುಳ್ಳು ಸುದ್ದಿಯನ್ನು ಹರಿಬಿಡಲಾಗಿದೆ.

2 / 5
ಇನ್ನು ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳು ಈ ಹಿಂದೆ ಆರ್​ಸಿಬಿ ಅಭಿಮಾನಿಗಳನ್ನು ಈ ಸಲ ಕಪ್ ನಿಮಗೆ ಲಾಲಿಪಾಪ್ ಎನ್ನುವ ಘೋಷವಾಕ್ಯದೊಂದಿಗೆ ಬಹಿರಂಗವಾಗಿ ಹೀಯಾಳಿಸಿರುವುದು ನಿಜ. ಐಪಿಎಲ್​ 2024 ರಲ್ಲಿ ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಒಟ್ಟುಗೂಡಿದ ಸಿಎಸ್​ಕೆ ಫ್ಯಾನ್ಸ್ ಈ ಸಲ ಕಪ್ ಲಾಲಿಪಾಪ್ ಎಂದು ಘೋಷಣೆ ಕೂಗುತ್ತಾ ಆರ್​ಸಿಬಿಯನ್ನು ಟ್ರೋಲ್ ಮಾಡಿದ್ದರು.

ಇನ್ನು ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳು ಈ ಹಿಂದೆ ಆರ್​ಸಿಬಿ ಅಭಿಮಾನಿಗಳನ್ನು ಈ ಸಲ ಕಪ್ ನಿಮಗೆ ಲಾಲಿಪಾಪ್ ಎನ್ನುವ ಘೋಷವಾಕ್ಯದೊಂದಿಗೆ ಬಹಿರಂಗವಾಗಿ ಹೀಯಾಳಿಸಿರುವುದು ನಿಜ. ಐಪಿಎಲ್​ 2024 ರಲ್ಲಿ ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಒಟ್ಟುಗೂಡಿದ ಸಿಎಸ್​ಕೆ ಫ್ಯಾನ್ಸ್ ಈ ಸಲ ಕಪ್ ಲಾಲಿಪಾಪ್ ಎಂದು ಘೋಷಣೆ ಕೂಗುತ್ತಾ ಆರ್​ಸಿಬಿಯನ್ನು ಟ್ರೋಲ್ ಮಾಡಿದ್ದರು.

3 / 5
ಆದರೆ ಚೆಪಾಕ್​ ಸ್ಟೇಡಿಯಂನಲ್ಲಿ ಸಿಎಸ್​ಕೆ ಅಭಿಮಾನಿಗಳು ಲಾಲಿಪಾಪ್ ಅನ್ನು ಹಿಡಿದುಕೊಂಡು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಕಾಲೆಳೆದಿಲ್ಲ. ಬದಲಾಗಿ ಇಂದೊಂದು ಸಂಪೂರ್ಣ ಫೇಕ್ ನ್ಯೂಸ್. ಅಲ್ಲದೆ ಪ್ರಸ್ತುತ ವೈರಲ್ ಆಗಿರುವ ಫೋಟೋಗಳು ಎಐ ಮೂಲಕ ರೂಪಿಸಿರುವುದು ಎಂದು ತಿಳಿದು ಬಂದಿದೆ.

ಆದರೆ ಚೆಪಾಕ್​ ಸ್ಟೇಡಿಯಂನಲ್ಲಿ ಸಿಎಸ್​ಕೆ ಅಭಿಮಾನಿಗಳು ಲಾಲಿಪಾಪ್ ಅನ್ನು ಹಿಡಿದುಕೊಂಡು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಕಾಲೆಳೆದಿಲ್ಲ. ಬದಲಾಗಿ ಇಂದೊಂದು ಸಂಪೂರ್ಣ ಫೇಕ್ ನ್ಯೂಸ್. ಅಲ್ಲದೆ ಪ್ರಸ್ತುತ ವೈರಲ್ ಆಗಿರುವ ಫೋಟೋಗಳು ಎಐ ಮೂಲಕ ರೂಪಿಸಿರುವುದು ಎಂದು ತಿಳಿದು ಬಂದಿದೆ.

4 / 5
ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ರುತುರಾಜ್ ಗಾಯಕ್ವಾಡ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ 196 ರನ್ ಕಲೆಹಾಕಿದರೆ, ಚೆನ್ನೈ ಸೂಪರ್ ಕಿಂಗ್ಸ್ ತಂಡವು 146 ರನ್​ಗಳಿಸಿ 50 ರನ್​ಗಳಿಂದ ಸೋಲೊಪ್ಪಿಕೊಂಡಿದೆ. ಅದು ತವರು ಮೈದಾನದಲ್ಲಿ ಸಿಎಸ್​ಕೆ ತಂಡದ ಅತ್ಯಂತ ಹೀನಾಯ ಸೋಲು ಎಂಬುದು ವಿಶೇಷ.

ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ರುತುರಾಜ್ ಗಾಯಕ್ವಾಡ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ 196 ರನ್ ಕಲೆಹಾಕಿದರೆ, ಚೆನ್ನೈ ಸೂಪರ್ ಕಿಂಗ್ಸ್ ತಂಡವು 146 ರನ್​ಗಳಿಸಿ 50 ರನ್​ಗಳಿಂದ ಸೋಲೊಪ್ಪಿಕೊಂಡಿದೆ. ಅದು ತವರು ಮೈದಾನದಲ್ಲಿ ಸಿಎಸ್​ಕೆ ತಂಡದ ಅತ್ಯಂತ ಹೀನಾಯ ಸೋಲು ಎಂಬುದು ವಿಶೇಷ.

5 / 5

Published On - 10:53 am, Sat, 29 March 25

Follow us
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್