Matheesha Pathirana: ಬೆಳ್ಳಂ ಬೆಳಗ್ಗೆ ಸಿಎಸ್​ಕೆಗೆ ಬಿಗ್ ಶಾಕ್: ಐಪಿಎಲ್​ನಿಂದ ಹೊರ ನಡೆದ ಸ್ಟಾರ್ ಆಟಗಾರ

IPL 2024, Chennai Super Kings: ರುತುರಾಜ್ ಗಾಯಕ್ವಾಡ್ ನಾಯಕತ್ವದ ಸಿಎಸ್​ಕೆ ತನ್ನ ಮುಂದಿನ ಪಂದ್ಯವನ್ನು ಗುರುವಾರ ಗುಜರಾತ್ ಟೈಟಾನ್ಸ್ ವಿರುದ್ಧ ಆಡಲಿದೆ. ಆದರೆ, ಇದಕ್ಕೂ ಮುನ್ನ ಚೆನ್ನೈಗೆ ದೊಡ್ಡ ಆಘಾತ ಉಂಟಾಗಿದೆ. ತಂಡದ ಸ್ಟಾರ್ ಶ್ರೀಲಂಕಾದ ವೇಗಿ ಮಥೀಶ ಪತಿರಾನಾ ಅವರು ಐಪಿಎಲ್ 2024ರ ಉಳಿದ ಪಂದ್ಯಗಳಿಂದ ಹೊರಗುಳಿದಿದ್ದಾರೆ.

|

Updated on: May 07, 2024 | 8:12 AM

ನಾಯಕತ್ವದ ಬದಲಾವಣೆ ಮತ್ತು ಎಂಎಸ್ ಧೋನಿಯ ಕೊನೆಯ ಸೀಸನ್ ಎನ್ನಲಾಗುತ್ತಿರುವ ಕಾರಣ ಈ ಬಾರಿಯ ಐಪಿಎಲ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮೇಲೆ ಎಲ್ಲರ ಕಣ್ಣಿದೆ. ಆದರೆ, ಸಿಎಸ್​ಕೆ ಆಡಿರುವ 11 ಪಂದ್ಯಗಳಲ್ಲಿ ಆರು ಗೆಲುವು ಮತ್ತು ಐದು ಪಂದ್ಯಗಳಲ್ಲಿ ಸೋಲು ಕಂಡು 12 ಅಂಕ ಪಡೆದುಕೊಂಡಿದೆ.

ನಾಯಕತ್ವದ ಬದಲಾವಣೆ ಮತ್ತು ಎಂಎಸ್ ಧೋನಿಯ ಕೊನೆಯ ಸೀಸನ್ ಎನ್ನಲಾಗುತ್ತಿರುವ ಕಾರಣ ಈ ಬಾರಿಯ ಐಪಿಎಲ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮೇಲೆ ಎಲ್ಲರ ಕಣ್ಣಿದೆ. ಆದರೆ, ಸಿಎಸ್​ಕೆ ಆಡಿರುವ 11 ಪಂದ್ಯಗಳಲ್ಲಿ ಆರು ಗೆಲುವು ಮತ್ತು ಐದು ಪಂದ್ಯಗಳಲ್ಲಿ ಸೋಲು ಕಂಡು 12 ಅಂಕ ಪಡೆದುಕೊಂಡಿದೆ.

1 / 7
ರುತುರಾಜ್ ಗಾಯಕ್ವಾಡ್ ನಾಯಕತ್ವದ ಸಿಎಸ್​ಕೆ ತನ್ನ ಮುಂದಿನ ಪಂದ್ಯವನ್ನು ಗುರುವಾರ ಗುಜರಾತ್ ಟೈಟಾನ್ಸ್ ವಿರುದ್ಧ ಆಡಲಿದೆ. ಆದರೆ, ಇದಕ್ಕೂ ಮುನ್ನ ಚೆನ್ನೈಗೆ ದೊಡ್ಡ ಆಘಾತ ಉಂಟಾಗಿದೆ. ತಂಡದ ಸ್ಟಾರ್ ಶ್ರೀಲಂಕಾದ ವೇಗಿ ಮಥೀಶ ಪತಿರಾನಾ ಅವರು ಐಪಿಎಲ್ 2024ರ ಉಳಿದ ಪಂದ್ಯಗಳಿಂದ ಹೊರಗುಳಿದಿದ್ದಾರೆ.

ರುತುರಾಜ್ ಗಾಯಕ್ವಾಡ್ ನಾಯಕತ್ವದ ಸಿಎಸ್​ಕೆ ತನ್ನ ಮುಂದಿನ ಪಂದ್ಯವನ್ನು ಗುರುವಾರ ಗುಜರಾತ್ ಟೈಟಾನ್ಸ್ ವಿರುದ್ಧ ಆಡಲಿದೆ. ಆದರೆ, ಇದಕ್ಕೂ ಮುನ್ನ ಚೆನ್ನೈಗೆ ದೊಡ್ಡ ಆಘಾತ ಉಂಟಾಗಿದೆ. ತಂಡದ ಸ್ಟಾರ್ ಶ್ರೀಲಂಕಾದ ವೇಗಿ ಮಥೀಶ ಪತಿರಾನಾ ಅವರು ಐಪಿಎಲ್ 2024ರ ಉಳಿದ ಪಂದ್ಯಗಳಿಂದ ಹೊರಗುಳಿದಿದ್ದಾರೆ.

2 / 7
ಚೆನ್ನೈ ಸೂಪರ್ ಕಿಂಗ್ಸ್‌ಗಾಗಿ ಐಪಿಎಲ್ 2024 ರ ಆರು ಪಂದ್ಯಗಳಲ್ಲಿ ಮಥೀಶ ಪತಿರಾನಾ 13 ವಿಕೆಟ್‌ಗಳನ್ನು ಪಡೆದಿದ್ದರು. 21 ವರ್ಷದ ಕ್ರಿಕೆಟಿಗ ಸಿಎಸ್​ಕೆಗಾಗಿ ಉಳಿದ ಪಂದ್ಯಗಳಿಂದ ಹೊರಗುಳಿದಿದ್ದೇನೆ ಎಂದು ತಮ್ಮ ಅಧಿಕೃತ ಇನ್​ಸ್ಟಾಗ್ರಾಮ್​ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಇದು ರುತುರಾಜ್ ಪಡೆಗೆ ದೊಡ್ಡ ಹೊಡೆತ ಬೀಳುವುದು ಖಚಿತ.

ಚೆನ್ನೈ ಸೂಪರ್ ಕಿಂಗ್ಸ್‌ಗಾಗಿ ಐಪಿಎಲ್ 2024 ರ ಆರು ಪಂದ್ಯಗಳಲ್ಲಿ ಮಥೀಶ ಪತಿರಾನಾ 13 ವಿಕೆಟ್‌ಗಳನ್ನು ಪಡೆದಿದ್ದರು. 21 ವರ್ಷದ ಕ್ರಿಕೆಟಿಗ ಸಿಎಸ್​ಕೆಗಾಗಿ ಉಳಿದ ಪಂದ್ಯಗಳಿಂದ ಹೊರಗುಳಿದಿದ್ದೇನೆ ಎಂದು ತಮ್ಮ ಅಧಿಕೃತ ಇನ್​ಸ್ಟಾಗ್ರಾಮ್​ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಇದು ರುತುರಾಜ್ ಪಡೆಗೆ ದೊಡ್ಡ ಹೊಡೆತ ಬೀಳುವುದು ಖಚಿತ.

3 / 7
ಪತಿರಾನಾ ಚೆನ್ನೈ ಮತ್ತು ಧರ್ಮಶಾಲಾದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧದ ಸಿಎಸ್‌ಕೆಯ ಎರಡು ಪಂದ್ಯಗಳಿಗೆ ಗೈರಾಗಿದ್ದರು. ಆದರೆ, ಮುಂಬರುವ ಪಂದ್ಯಗಳಲ್ಲಿ ಅವರು ಭಾಗವಹಿಸಲಿದ್ದಾರೆ ಎನ್ನಲಾಗಿತ್ತು. ಇದೀಗ ಇನ್‌ಸ್ಟಾಗ್ರಾಮ್​ನಲ್ಲಿ ಸಿಎಸ್‌ಕೆ ಜೊತೆಗಿನ ಕೆಲವು ಫೋಟೋಗಳನ್ನು ಹಂಚಿಕೊಂಡಿರುವ ಪತಿರಾನಾ ಸಿಎಸ್​ಕೆ ತಂಡವನ್ನು ತೊರೆದ ಬಗ್ಗೆ ಖಚಿತಪಡಿಸಿದ್ದಾರೆ.

ಪತಿರಾನಾ ಚೆನ್ನೈ ಮತ್ತು ಧರ್ಮಶಾಲಾದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧದ ಸಿಎಸ್‌ಕೆಯ ಎರಡು ಪಂದ್ಯಗಳಿಗೆ ಗೈರಾಗಿದ್ದರು. ಆದರೆ, ಮುಂಬರುವ ಪಂದ್ಯಗಳಲ್ಲಿ ಅವರು ಭಾಗವಹಿಸಲಿದ್ದಾರೆ ಎನ್ನಲಾಗಿತ್ತು. ಇದೀಗ ಇನ್‌ಸ್ಟಾಗ್ರಾಮ್​ನಲ್ಲಿ ಸಿಎಸ್‌ಕೆ ಜೊತೆಗಿನ ಕೆಲವು ಫೋಟೋಗಳನ್ನು ಹಂಚಿಕೊಂಡಿರುವ ಪತಿರಾನಾ ಸಿಎಸ್​ಕೆ ತಂಡವನ್ನು ತೊರೆದ ಬಗ್ಗೆ ಖಚಿತಪಡಿಸಿದ್ದಾರೆ.

4 / 7
“ಸಿಎಸ್‌ಕೆ ಡ್ರೆಸ್ಸಿಂಗ್ ರೂಮ್​ನಲ್ಲಿ 2024 ರ ಐಪಿಎಲ್ ಚಾಂಪಿಯನ್ ಟ್ರೋಫಿಯನ್ನು ಶೀಘ್ರದಲ್ಲೇ ನೋಡುವ ನನ್ನ ಏಕೈಕ ಆಸೆಯೊಂದಿಗೆ ಕಠಿಣ ವಿದಾಯ ಹೇಳುತ್ತಿದ್ದೇನೆ.! ಚೆನ್ನೈನ ಪ್ರೀತಿಗಾಗಿ ಮತ್ತು ಸಿಎಸ್​ಕೆ ತಂಡಕ್ಕೆ ಕೃತಜ್ಞತೆಗಳು,'' ಎಂದು ಮಥೀಶ ಪತಿರಾನಾ ಬರೆದುಕೊಂಡಿದ್ದಾರೆ.

“ಸಿಎಸ್‌ಕೆ ಡ್ರೆಸ್ಸಿಂಗ್ ರೂಮ್​ನಲ್ಲಿ 2024 ರ ಐಪಿಎಲ್ ಚಾಂಪಿಯನ್ ಟ್ರೋಫಿಯನ್ನು ಶೀಘ್ರದಲ್ಲೇ ನೋಡುವ ನನ್ನ ಏಕೈಕ ಆಸೆಯೊಂದಿಗೆ ಕಠಿಣ ವಿದಾಯ ಹೇಳುತ್ತಿದ್ದೇನೆ.! ಚೆನ್ನೈನ ಪ್ರೀತಿಗಾಗಿ ಮತ್ತು ಸಿಎಸ್​ಕೆ ತಂಡಕ್ಕೆ ಕೃತಜ್ಞತೆಗಳು,'' ಎಂದು ಮಥೀಶ ಪತಿರಾನಾ ಬರೆದುಕೊಂಡಿದ್ದಾರೆ.

5 / 7
2022 ರಲ್ಲಿ ಸಿಎಸ್‌ಕೆ ಪರ ಐಪಿಎಲ್‌ಗೆ ಪದಾರ್ಪಣೆ ಮಾಡಿದ ಪತಿರಾನಾ, ಈ ವರ್ಷ ಉತ್ತಮ ಪ್ರದರ್ಶನ ತೋರಿದ್ದರು. ತಂಡದ ಎರಡನೇ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಆಗಿದ್ದರು. ಇದೀಗ ಮಂಡಿರಜ್ಜು ಗಾಯದಿಂದ ಸಂಪೂರ್ಣ ಟೂರ್ನಿಂದ ಹೊರಬಿದ್ದಿದ್ದಾರೆ. ಇವರ ಅನುಪಸ್ಥಿತಿ ತಂಡಕ್ಕೆ ಕಾಡಲಿದೆ.

2022 ರಲ್ಲಿ ಸಿಎಸ್‌ಕೆ ಪರ ಐಪಿಎಲ್‌ಗೆ ಪದಾರ್ಪಣೆ ಮಾಡಿದ ಪತಿರಾನಾ, ಈ ವರ್ಷ ಉತ್ತಮ ಪ್ರದರ್ಶನ ತೋರಿದ್ದರು. ತಂಡದ ಎರಡನೇ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಆಗಿದ್ದರು. ಇದೀಗ ಮಂಡಿರಜ್ಜು ಗಾಯದಿಂದ ಸಂಪೂರ್ಣ ಟೂರ್ನಿಂದ ಹೊರಬಿದ್ದಿದ್ದಾರೆ. ಇವರ ಅನುಪಸ್ಥಿತಿ ತಂಡಕ್ಕೆ ಕಾಡಲಿದೆ.

6 / 7
ಪ್ಲೇಆಫ್‌ಗೆ ಅರ್ಹತೆ ಪಡೆಯುವ ರೇಸ್‌ನಲ್ಲಿ ಜೀವಂತವಾಗಿರುವ ಹಾಲಿ ಚಾಂಪಿಯನ್ ಸಿಎಸ್‌ಕೆ, ಈಗ ಉಳಿದ ಪಂದ್ಯಗಳಿಗೆ ಪತಿರಾನ ಬದಲಿಗೆ ಮತ್ತೊಬ್ಬ ಆಟಗಾರನನ್ನು ಸಹಿ ಹಾಕಲು ನೋಡುತ್ತಿದೆ. ಏಪ್ರಿಲ್ 14 ರಂದು ವಾಂಖೆಡೆ ಸ್ಟೇಡಿಯಂನಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧದ ಸಿಎಸ್‌ಕೆ ಪಂದ್ಯದ ವೇಳೆ, ನಾಲ್ಕು ಓವರ್‌ಗಳಲ್ಲಿ 28 ರನ್‌ಗಳಿಗೆ ನಾಲ್ಕು ವಿಕೆಟ್‌ಗಳನ್ನು ಕಬಳಿಸಿ ಪತಿರಾನ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದಿದ್ದರು.

ಪ್ಲೇಆಫ್‌ಗೆ ಅರ್ಹತೆ ಪಡೆಯುವ ರೇಸ್‌ನಲ್ಲಿ ಜೀವಂತವಾಗಿರುವ ಹಾಲಿ ಚಾಂಪಿಯನ್ ಸಿಎಸ್‌ಕೆ, ಈಗ ಉಳಿದ ಪಂದ್ಯಗಳಿಗೆ ಪತಿರಾನ ಬದಲಿಗೆ ಮತ್ತೊಬ್ಬ ಆಟಗಾರನನ್ನು ಸಹಿ ಹಾಕಲು ನೋಡುತ್ತಿದೆ. ಏಪ್ರಿಲ್ 14 ರಂದು ವಾಂಖೆಡೆ ಸ್ಟೇಡಿಯಂನಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧದ ಸಿಎಸ್‌ಕೆ ಪಂದ್ಯದ ವೇಳೆ, ನಾಲ್ಕು ಓವರ್‌ಗಳಲ್ಲಿ 28 ರನ್‌ಗಳಿಗೆ ನಾಲ್ಕು ವಿಕೆಟ್‌ಗಳನ್ನು ಕಬಳಿಸಿ ಪತಿರಾನ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದಿದ್ದರು.

7 / 7
Follow us
ಅಸ್ಸಾಂನಲ್ಲಿ ಭೀಕರ ಪ್ರವಾಹ; ಪ್ರಾಣ ಒತ್ತೆಯಿಟ್ಟು ಕರುವನ್ನು ಕಾಪಾಡಿದ ಜನ
ಅಸ್ಸಾಂನಲ್ಲಿ ಭೀಕರ ಪ್ರವಾಹ; ಪ್ರಾಣ ಒತ್ತೆಯಿಟ್ಟು ಕರುವನ್ನು ಕಾಪಾಡಿದ ಜನ
ದರ್ಶನ್​ ಮಾಡಿದ್ದೇ ಸರಿ ಎನ್ನುವ ಅಭಿಮಾನಿಗಳಿಗೆ ಕಿವಿಮಾತು ಹೇಳಿದ ಸುಮಲತಾ
ದರ್ಶನ್​ ಮಾಡಿದ್ದೇ ಸರಿ ಎನ್ನುವ ಅಭಿಮಾನಿಗಳಿಗೆ ಕಿವಿಮಾತು ಹೇಳಿದ ಸುಮಲತಾ
ಮುಂಬೈನಲ್ಲಿ ಜನಸಾಗರ ಮಧ್ಯೆ ಕಪ್ ಹಿಡಿದು ಕುಣಿದ ಬ್ಯೂ ಬಾಯ್ಸ್: ವಿಡಿಯೋ ನೋಡಿ
ಮುಂಬೈನಲ್ಲಿ ಜನಸಾಗರ ಮಧ್ಯೆ ಕಪ್ ಹಿಡಿದು ಕುಣಿದ ಬ್ಯೂ ಬಾಯ್ಸ್: ವಿಡಿಯೋ ನೋಡಿ
ಬ್ರಹ್ಮಾವರ ತಾಲ್ಲೂಕಿನ ಮಡಿಸಾಲು ಹಳ್ಳ ಉಕ್ಕಿ ತಗ್ಗುಪ್ರದೇಶಗಳು ಜಲಾವೃತ
ಬ್ರಹ್ಮಾವರ ತಾಲ್ಲೂಕಿನ ಮಡಿಸಾಲು ಹಳ್ಳ ಉಕ್ಕಿ ತಗ್ಗುಪ್ರದೇಶಗಳು ಜಲಾವೃತ
ಮುಂಬೈ ಏರ್‌ಪೋರ್ಟ್‌ನಲ್ಲಿ ಟೀಂ ಇಂಡಿಯಾದ ಆಟಗಾರರಿಗೆ ವಾಟರ್ ಸೆಲ್ಯೂಟ್‌
ಮುಂಬೈ ಏರ್‌ಪೋರ್ಟ್‌ನಲ್ಲಿ ಟೀಂ ಇಂಡಿಯಾದ ಆಟಗಾರರಿಗೆ ವಾಟರ್ ಸೆಲ್ಯೂಟ್‌
ದರ್ಶನ್ ಹಾಗೆ ಮಾಡಿರಲು ಸಾಧ್ಯವಿಲ್ಲ: ಸುಮಲತಾ ಅಂಬರೀಶ್
ದರ್ಶನ್ ಹಾಗೆ ಮಾಡಿರಲು ಸಾಧ್ಯವಿಲ್ಲ: ಸುಮಲತಾ ಅಂಬರೀಶ್
ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಮುಂಬೈ ಬಂದ ಟೀಮ್ ಇಂಡಿಯಾಗೆ ಭವ್ಯ ಸ್ವಾಗತ
ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಮುಂಬೈ ಬಂದ ಟೀಮ್ ಇಂಡಿಯಾಗೆ ಭವ್ಯ ಸ್ವಾಗತ
ಟೀಂ ಇಂಡಿಯಾ ವಿಜಯೋತ್ಸವಕ್ಕೆ ಕಡಲ ಕಿನಾರೆಯಲ್ಲಿ ಜನ ಸಾಗರ: ವಿಹಂಗಮ ನೋಟ
ಟೀಂ ಇಂಡಿಯಾ ವಿಜಯೋತ್ಸವಕ್ಕೆ ಕಡಲ ಕಿನಾರೆಯಲ್ಲಿ ಜನ ಸಾಗರ: ವಿಹಂಗಮ ನೋಟ
ದರ್ಶನ್ ಕುಟುಂಬ  ಜೊತೆ ನಿರಂತರವಾಗಿ ಸಂಪರ್ಕದಲ್ಲಿರುವೆ: ಸುಮಲತಾ ಅಂಬರೀಶ್
ದರ್ಶನ್ ಕುಟುಂಬ  ಜೊತೆ ನಿರಂತರವಾಗಿ ಸಂಪರ್ಕದಲ್ಲಿರುವೆ: ಸುಮಲತಾ ಅಂಬರೀಶ್
ಶ್ರೀರಾಮ ಮಂದಿರ ಮೇಲ್ಚಾವಣಿ ಸೋರಿಕೆಗೆ ಪೇಜಾವರಶ್ರೀ ಸ್ಪಷ್ಟನೆ
ಶ್ರೀರಾಮ ಮಂದಿರ ಮೇಲ್ಚಾವಣಿ ಸೋರಿಕೆಗೆ ಪೇಜಾವರಶ್ರೀ ಸ್ಪಷ್ಟನೆ