AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cheteshwar Pujara: ಪೂಜಾರ ಅರ್ಧಶತಕ, ಪಂತ್ ಭರ್ಜರಿ ಆಟ: ಬೃಹತ್ ಮುನ್ನಡೆಯತ್ತ ಟೀಮ್ ಇಂಡಿಯಾ

IND vs ENG: 257 ರನ್ ಗಳ ಮುನ್ನಡೆ ಪಡೆದುಕೊಂಡಿರುವ ಭಾರತ ಪರ ಚೇತೇಶ್ವರ್ ಪೂಜಾರ ಅರ್ಧಶತಕ ಗಳಿಸಿ ಹಾಗೂ ರಿಷಭ್ ಪಂತ್ 30 ರನ್ ಬಾರಿಸಿ ನಾಲ್ಕನೇ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

TV9 Web
| Updated By: Vinay Bhat

Updated on: Jul 04, 2022 | 7:48 AM

ಬರ್ಮಿಂಗ್ ಹ್ಯಾಮ್​ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಅಂತಿಮ ಐದನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಬೃಹತ್ ಮುನ್ನಡೆಯತ್ತ ದಾಪುಗಾಲಿಡುತ್ತಿದೆ. ಮೊದಲ ಇನ್ನಿಂಗ್ಸ್ನಲ್ಲಿ 416 ರನ್ ಕಲೆಹಾಕಿದ್ದ ಭಾರತ ಬಳಿಕ ಇಂಗ್ಲೆಂಡ್ ಅನ್ನು 284 ರನ್ ಗೆ ಕಟ್ಟಿ ಹಾಕುವಲ್ಲಿ ಯಶಸ್ವಿಯಾಯಿತು. ಇದೀಗ ಎರಡನೇ ಇನ್ನಿಂಗ್ಸ್ನಲ್ಲಿ ಬುಮ್ರಾ ಪಡೆ ಮೂರನೇ ದಿನದಾಟದ ಅಂತ್ಯಕ್ಕೆ 3 ವಿಕೆಟ್ ಕಳೆದುಕೊಂಡು 125 ರನ್ ಗಳಿಸಿದೆ.

ಬರ್ಮಿಂಗ್ ಹ್ಯಾಮ್​ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಅಂತಿಮ ಐದನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಬೃಹತ್ ಮುನ್ನಡೆಯತ್ತ ದಾಪುಗಾಲಿಡುತ್ತಿದೆ. ಮೊದಲ ಇನ್ನಿಂಗ್ಸ್ನಲ್ಲಿ 416 ರನ್ ಕಲೆಹಾಕಿದ್ದ ಭಾರತ ಬಳಿಕ ಇಂಗ್ಲೆಂಡ್ ಅನ್ನು 284 ರನ್ ಗೆ ಕಟ್ಟಿ ಹಾಕುವಲ್ಲಿ ಯಶಸ್ವಿಯಾಯಿತು. ಇದೀಗ ಎರಡನೇ ಇನ್ನಿಂಗ್ಸ್ನಲ್ಲಿ ಬುಮ್ರಾ ಪಡೆ ಮೂರನೇ ದಿನದಾಟದ ಅಂತ್ಯಕ್ಕೆ 3 ವಿಕೆಟ್ ಕಳೆದುಕೊಂಡು 125 ರನ್ ಗಳಿಸಿದೆ.

1 / 8
257 ರನ್ ಗಳ ಮುನ್ನಡೆ ಪಡೆದುಕೊಂಡಿರುವ ಭಾರತ ಪರ ಚೇತೇಶ್ವರ್ ಪೂಜಾರ ಅರ್ಧಶತಕ ಗಳಿಸಿ ಹಾಗೂ ರಿಷಭ್ ಪಂತ್ 30 ರನ್ ಬಾರಿಸಿ ನಾಲ್ಕನೇ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

257 ರನ್ ಗಳ ಮುನ್ನಡೆ ಪಡೆದುಕೊಂಡಿರುವ ಭಾರತ ಪರ ಚೇತೇಶ್ವರ್ ಪೂಜಾರ ಅರ್ಧಶತಕ ಗಳಿಸಿ ಹಾಗೂ ರಿಷಭ್ ಪಂತ್ 30 ರನ್ ಬಾರಿಸಿ ನಾಲ್ಕನೇ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

2 / 8
ಮೂರನೇ ದಿನದಾಟ ಶುರುವಾಗುವ ಹೊತ್ತಿಗೆ 84 ರನ್ ಗೆ 5 ವಿಕೆಟ್ ಕಳೆದುಕೊಂಡು ಫಾಲೋಆನ್ ಭೀತಿ ಎದುರಿಸುತ್ತಿದ್ದ ಇಂಗ್ಲೆಂಡ್ ಗೆ ಜಾನಿ ಬೈರ್ ಸ್ಟೋವ್ ಅವರ ಅಮೋಘ ಶತಕ ಸಹಾಯ ಮಾಡಿತು. ಜಾನಿ ಬೈರ್ ಸ್ಟೋವ್ ಅವರು ಸ್ಯಾಮ್ ಬಿಲ್ಲಿಂಗ್ಸ್ ಜೊತೆಗೂಡಿ ಏಳನೇ ವಿಕೆಟ್ಗೆ 92 ರನ್ ಸೇರಿದಿದ್ದು ಮಾತ್ರವಲ್ಲದೆ ಬೆನ್ ಸ್ಟೋಕ್ಸ್ ಜೊತೆಗೂಡಿ ಆರನೇ ವಿಕೆಟ್ಗೆ 66 ರನ್ ಜೊತೆಯಾಟ ನಡೆಸಿದರು.

ಮೂರನೇ ದಿನದಾಟ ಶುರುವಾಗುವ ಹೊತ್ತಿಗೆ 84 ರನ್ ಗೆ 5 ವಿಕೆಟ್ ಕಳೆದುಕೊಂಡು ಫಾಲೋಆನ್ ಭೀತಿ ಎದುರಿಸುತ್ತಿದ್ದ ಇಂಗ್ಲೆಂಡ್ ಗೆ ಜಾನಿ ಬೈರ್ ಸ್ಟೋವ್ ಅವರ ಅಮೋಘ ಶತಕ ಸಹಾಯ ಮಾಡಿತು. ಜಾನಿ ಬೈರ್ ಸ್ಟೋವ್ ಅವರು ಸ್ಯಾಮ್ ಬಿಲ್ಲಿಂಗ್ಸ್ ಜೊತೆಗೂಡಿ ಏಳನೇ ವಿಕೆಟ್ಗೆ 92 ರನ್ ಸೇರಿದಿದ್ದು ಮಾತ್ರವಲ್ಲದೆ ಬೆನ್ ಸ್ಟೋಕ್ಸ್ ಜೊತೆಗೂಡಿ ಆರನೇ ವಿಕೆಟ್ಗೆ 66 ರನ್ ಜೊತೆಯಾಟ ನಡೆಸಿದರು.

3 / 8
ಜಾನಿ ಬೈರ್ ಸ್ಟೋವ್ 106 ರನ್ ಗಳಿಸಿ ಮೊಹಮ್ಮದ್ ಶಮಿಗೆ ವಿಕೆಟ್ ಒಪ್ಪಿಸಿದರು. ನಂತರ ಬಂದ ಬ್ಯಾಟರ್ ಗಳು ಹೆಚ್ಚು ಹೊತ್ತು ಕ್ರೀಸ್ ನಲ್ಲಿ ನಿಲ್ಲಲಿಲ್ಲ. ಇಂಗ್ಲೆಂಡ್ ಮೊದಲ ಇನ್ನಿಂಗ್ಸ್ ನಲ್ಲಿ 61.3 ಓವರ್ ನಲ್ಲಿ 284 ರನ್ ಗೆ ಸರ್ವಪತನ ಕಂಡಿತು.

ಜಾನಿ ಬೈರ್ ಸ್ಟೋವ್ 106 ರನ್ ಗಳಿಸಿ ಮೊಹಮ್ಮದ್ ಶಮಿಗೆ ವಿಕೆಟ್ ಒಪ್ಪಿಸಿದರು. ನಂತರ ಬಂದ ಬ್ಯಾಟರ್ ಗಳು ಹೆಚ್ಚು ಹೊತ್ತು ಕ್ರೀಸ್ ನಲ್ಲಿ ನಿಲ್ಲಲಿಲ್ಲ. ಇಂಗ್ಲೆಂಡ್ ಮೊದಲ ಇನ್ನಿಂಗ್ಸ್ ನಲ್ಲಿ 61.3 ಓವರ್ ನಲ್ಲಿ 284 ರನ್ ಗೆ ಸರ್ವಪತನ ಕಂಡಿತು.

4 / 8
ಭಾರತದ ಪರ ಮೊಹಮ್ಮದ್ ಸಿರಾಜ್ ನಾಲ್ಕು ವಿಕೆಟ್ಗಳನ್ನು ಕಬಳಿಸಿದರೆ, ನಾಯಕ ಜಸ್ಪ್ರೀತ್ ಬುಮ್ರಾ ಮೂರು ವಿಕೆಟ್ಗಳನ್ನು ಕಿತ್ತರು. ಮೊದಲ ಇನ್ನಿಂಗ್ಸ್ ನಲ್ಲಿ ಭಾರತ 132 ರನ್ಗಳ ಭಾರೀ ಮುನ್ನಡೆ ಸಾಧಿಸಿತು.

ಭಾರತದ ಪರ ಮೊಹಮ್ಮದ್ ಸಿರಾಜ್ ನಾಲ್ಕು ವಿಕೆಟ್ಗಳನ್ನು ಕಬಳಿಸಿದರೆ, ನಾಯಕ ಜಸ್ಪ್ರೀತ್ ಬುಮ್ರಾ ಮೂರು ವಿಕೆಟ್ಗಳನ್ನು ಕಿತ್ತರು. ಮೊದಲ ಇನ್ನಿಂಗ್ಸ್ ನಲ್ಲಿ ಭಾರತ 132 ರನ್ಗಳ ಭಾರೀ ಮುನ್ನಡೆ ಸಾಧಿಸಿತು.

5 / 8
ಬಳಿಕ ಭಾರತ ತಂಡ ಎರಡನೇ ಇನಿಂಗ್ಸ್ ಆರಂಭಿಸಿತು. ಮೊದಲ ಓವರ್ನಲ್ಲೇ ಶುಭಮನ್ ಗಿಲ್ (4) ಔಟಾದರೆ, 75 ರನ್ ಗಳಿಸುವ ಹೊತ್ತಿಗೆ ಹನುಮ ವಿಹಾರಿ (11) ಮತ್ತು ವಿರಾಟ್ ಕೊಹ್ಲಿ (20) ವಿಕೆಟ್ ಕಳೆದುಕೊಂಡು ಒತ್ತಡಕ್ಕೆ ಸಿಲುಕಿತ್ತು.

ಬಳಿಕ ಭಾರತ ತಂಡ ಎರಡನೇ ಇನಿಂಗ್ಸ್ ಆರಂಭಿಸಿತು. ಮೊದಲ ಓವರ್ನಲ್ಲೇ ಶುಭಮನ್ ಗಿಲ್ (4) ಔಟಾದರೆ, 75 ರನ್ ಗಳಿಸುವ ಹೊತ್ತಿಗೆ ಹನುಮ ವಿಹಾರಿ (11) ಮತ್ತು ವಿರಾಟ್ ಕೊಹ್ಲಿ (20) ವಿಕೆಟ್ ಕಳೆದುಕೊಂಡು ಒತ್ತಡಕ್ಕೆ ಸಿಲುಕಿತ್ತು.

6 / 8
ಆದರೆ, ತಾಳ್ಮೆಯ ಮೂರ್ತಿಯಂತೆ ಕ್ರೀಸ್ ನಲ್ಲಿ ಭದ್ರವಾಗಿ ನೆಲೆನಿಂತು ರನ್ ಹೆಕ್ಕಿದ ಅನುಭವಿ ಚೇತೇಶ್ವರ್ ಪೂಜಾರ, 139 ಎಸೆತಗಳಲ್ಲಿ ಅಜೇಯ 50 ರನ್ ಗಳಿಸುವ ಮೂಲಕ ತಂಡಕ್ಕೆ ಚೇತರಿಕೆ ನೀಡಿದರು.

ಆದರೆ, ತಾಳ್ಮೆಯ ಮೂರ್ತಿಯಂತೆ ಕ್ರೀಸ್ ನಲ್ಲಿ ಭದ್ರವಾಗಿ ನೆಲೆನಿಂತು ರನ್ ಹೆಕ್ಕಿದ ಅನುಭವಿ ಚೇತೇಶ್ವರ್ ಪೂಜಾರ, 139 ಎಸೆತಗಳಲ್ಲಿ ಅಜೇಯ 50 ರನ್ ಗಳಿಸುವ ಮೂಲಕ ತಂಡಕ್ಕೆ ಚೇತರಿಕೆ ನೀಡಿದರು.

7 / 8
ಬ್ಯಾಟಿಂಗ್ ಕ್ರಮಾಂಕದಲ್ಲಿ ಬಡ್ತಿ ಪಡೆದು ಆಡಿದ ಇನ್ ಫಾರ್ಮ್ ಬ್ಯಾಟರ್ ರಿಷಭ್ ಪಂತ್ (ಅಜೇಯ 30) ಪೂಜಾರ ಜೊತೆ ನಾಲ್ಕನೇ ದಿನದಾಟಕ್ಕೆ ಕ್ರೀಸ್ ಕಾಯ್ದುಕೊಂಡಿದ್ದಾರೆ.  ಸದ್ಯ 257 ರನ್ ಗಳ ಮುನ್ನಡೆಯಲ್ಲಿರುವ ಭಾರತ ಕನಿಷ್ಠ 400ರ ಗಡಿಯತ್ತ ಚಿತ್ತ ನೆಟ್ಟಿದೆ.

ಬ್ಯಾಟಿಂಗ್ ಕ್ರಮಾಂಕದಲ್ಲಿ ಬಡ್ತಿ ಪಡೆದು ಆಡಿದ ಇನ್ ಫಾರ್ಮ್ ಬ್ಯಾಟರ್ ರಿಷಭ್ ಪಂತ್ (ಅಜೇಯ 30) ಪೂಜಾರ ಜೊತೆ ನಾಲ್ಕನೇ ದಿನದಾಟಕ್ಕೆ ಕ್ರೀಸ್ ಕಾಯ್ದುಕೊಂಡಿದ್ದಾರೆ. ಸದ್ಯ 257 ರನ್ ಗಳ ಮುನ್ನಡೆಯಲ್ಲಿರುವ ಭಾರತ ಕನಿಷ್ಠ 400ರ ಗಡಿಯತ್ತ ಚಿತ್ತ ನೆಟ್ಟಿದೆ.

8 / 8
Follow us
ನಟಿ ರಚಿತಾ ರಾಮ್ ವಿರುದ್ಧ ಕ್ರಮ ಕೈಗೊಳ್ಳುತ್ತಾ ಚಲನಚಿತ್ರ ವಾಣಿಜ್ಯ ಮಂಡಳಿ?
ನಟಿ ರಚಿತಾ ರಾಮ್ ವಿರುದ್ಧ ಕ್ರಮ ಕೈಗೊಳ್ಳುತ್ತಾ ಚಲನಚಿತ್ರ ವಾಣಿಜ್ಯ ಮಂಡಳಿ?
ಪ್ರಕೃತಿಯ ಶಕ್ತಿ ಮುಂದೆ ನಾವೇನೂ ಅಲ್ಲ!; ಈ ವಿಡಿಯೋ ನೋಡಿ
ಪ್ರಕೃತಿಯ ಶಕ್ತಿ ಮುಂದೆ ನಾವೇನೂ ಅಲ್ಲ!; ಈ ವಿಡಿಯೋ ನೋಡಿ
ಕನ್ನಡ ಸಿನಿಮಾಗೆ ಬೆಳಗ್ಗೆ 9.30ರ ಶೋ ಕೊಟ್ಟರೆ ಜನ ಬರಲ್ಲ: ಶ್ರೀನಗರ ಕಿಟ್ಟಿ
ಕನ್ನಡ ಸಿನಿಮಾಗೆ ಬೆಳಗ್ಗೆ 9.30ರ ಶೋ ಕೊಟ್ಟರೆ ಜನ ಬರಲ್ಲ: ಶ್ರೀನಗರ ಕಿಟ್ಟಿ
ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು
ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು