AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Irani Cup: ಇಂಗ್ಲೆಂಡ್​ ನೆಲದಲ್ಲಿ ಶತಕಗಳ ಮೇಲೆ ಶತಕ; ಭಾರತದಲ್ಲಿ 1 ರನ್​ಗೆ ಸುಸ್ತಾದ ಪೂಜಾರ

Cheteshwar Pujara: ರಾಯಲ್ ಲಂಡನ್ ODI ಕಪ್‌ನಲ್ಲಿ ಅಬ್ಬರಿಸಿದ್ದ ಪೂಜಾರ 3 ಶತಕ ಮತ್ತು 2 ಅರ್ಧ ಶತಕಗಳನ್ನು ಗಳಿಸುವ ಮೂಲಕ ತಮ್ಮ ಫಾರ್ಮ್ ತೋರಿಸಿದ್ದರು.

TV9 Web
| Edited By: |

Updated on:Oct 01, 2022 | 6:25 PM

Share
ಕಳೆದೆರಡು ತಿಂಗಳಿಂದ ಇಂಗ್ಲೆಂಡ್​ ನೆಲದಲ್ಲಿ ರನ್ ಮಳೆ ಸುರಿದಿದ್ದ ಚೇತೇಶ್ವರ ಪೂಜಾರ ತವರು ನೆಲದಲ್ಲಿ ರನ್​ಗಾಗಿ ಹಾತೊರೆಯುತ್ತಿದ್ದಾರೆ. ಸೌರಾಷ್ಟ್ರ ಮತ್ತು ರೆಸ್ಟ್ ಆಫ್ ಇಂಡಿಯಾ ನಡುವಿನ ಇರಾನಿ ಟ್ರೋಫಿ ಪಂದ್ಯ ಶನಿವಾರದಿಂದ ರಾಜ್‌ಕೋಟ್‌ನಲ್ಲಿ ಪ್ರಾರಂಭವಾಗಿದ್ದು, ಬ್ಯಾಟಿಂಗ್​ಗಿಳಿದ ಪೂಜಾರ ಮೈದಾನಕ್ಕೆ ಬಂದ ವೇಗದಲ್ಲೇ ಪೆವಿಲಿಯನ್​ಗೆ ಮರಳಿದರು.

ಕಳೆದೆರಡು ತಿಂಗಳಿಂದ ಇಂಗ್ಲೆಂಡ್​ ನೆಲದಲ್ಲಿ ರನ್ ಮಳೆ ಸುರಿದಿದ್ದ ಚೇತೇಶ್ವರ ಪೂಜಾರ ತವರು ನೆಲದಲ್ಲಿ ರನ್​ಗಾಗಿ ಹಾತೊರೆಯುತ್ತಿದ್ದಾರೆ. ಸೌರಾಷ್ಟ್ರ ಮತ್ತು ರೆಸ್ಟ್ ಆಫ್ ಇಂಡಿಯಾ ನಡುವಿನ ಇರಾನಿ ಟ್ರೋಫಿ ಪಂದ್ಯ ಶನಿವಾರದಿಂದ ರಾಜ್‌ಕೋಟ್‌ನಲ್ಲಿ ಪ್ರಾರಂಭವಾಗಿದ್ದು, ಬ್ಯಾಟಿಂಗ್​ಗಿಳಿದ ಪೂಜಾರ ಮೈದಾನಕ್ಕೆ ಬಂದ ವೇಗದಲ್ಲೇ ಪೆವಿಲಿಯನ್​ಗೆ ಮರಳಿದರು.

1 / 5
2 ತಿಂಗಳ ಕಾಲ ಇಂಗ್ಲೆಂಡ್‌ನಲ್ಲಿ ಶತಕಗಳ ಮೇಲೆ ಶತಕ ಸಿಡಿಸಿದ್ದ ಪೂಜಾರ ಭಾರತದಲ್ಲಿ ಕೇವಲ 1 ರನ್‌ಗೆ ಸುಸ್ತಾದರು. ಕುಲದೀಪ್ ಸೇನ್ ಎಸೆತದಲ್ಲಿ ಹನುಮ ವಿಹಾರಿಗೆ ಕ್ಯಾಚಿತ್ತು ಪೂಜಾರ ಔಟಾದರು.

2 ತಿಂಗಳ ಕಾಲ ಇಂಗ್ಲೆಂಡ್‌ನಲ್ಲಿ ಶತಕಗಳ ಮೇಲೆ ಶತಕ ಸಿಡಿಸಿದ್ದ ಪೂಜಾರ ಭಾರತದಲ್ಲಿ ಕೇವಲ 1 ರನ್‌ಗೆ ಸುಸ್ತಾದರು. ಕುಲದೀಪ್ ಸೇನ್ ಎಸೆತದಲ್ಲಿ ಹನುಮ ವಿಹಾರಿಗೆ ಕ್ಯಾಚಿತ್ತು ಪೂಜಾರ ಔಟಾದರು.

2 / 5
ಕೇವಲ 4 ಎಸೆತಗಳನ್ನು ಎದುರಿಸಿದ ಪೂಜಾರ 1 ರನ್​ಗೆ ತಮ್ಮ ವಿಕೆಟ್ ಒಪ್ಪಿಸಿದರು. ಪೂಜಾರ ಸೇರಿದಂತೆ ತಂಡದ ಇನ್ನುಳಿದ ಬ್ಯಾಟರ್​ಗಳು ಈ ಪಂದ್ಯದಲ್ಲಿ ಸಂಪೂರ್ಣ ವಿಫಲರಾದರು. ಹೀಗಾಗಿ ಇಡೀ ತಂಡ ಕೇವಲ 25 ಓವರ್‌ಗಳಲ್ಲಿ ತನ್ನೇಲ್ಲ ವಿಕೆಟ್ ಕಳೆದುಕೊಂಡು 98 ರನ್‌ಗಳಿಗೆ ಆಲೌಟ್ ಆಯಿತು. ರೆಸ್ಟ್ ಆಫ್ ಇಂಡಿಯಾ ಪರ ಮುಖೇಶ್ ಕುಮಾರ್ 4, ಕುಲದೀಪ್ ಸೇನ್ ಮತ್ತು ಉಮ್ರಾನ್ ಮಲಿಕ್ ತಲಾ 3 ವಿಕೆಟ್ ಪಡೆದರು.

ಕೇವಲ 4 ಎಸೆತಗಳನ್ನು ಎದುರಿಸಿದ ಪೂಜಾರ 1 ರನ್​ಗೆ ತಮ್ಮ ವಿಕೆಟ್ ಒಪ್ಪಿಸಿದರು. ಪೂಜಾರ ಸೇರಿದಂತೆ ತಂಡದ ಇನ್ನುಳಿದ ಬ್ಯಾಟರ್​ಗಳು ಈ ಪಂದ್ಯದಲ್ಲಿ ಸಂಪೂರ್ಣ ವಿಫಲರಾದರು. ಹೀಗಾಗಿ ಇಡೀ ತಂಡ ಕೇವಲ 25 ಓವರ್‌ಗಳಲ್ಲಿ ತನ್ನೇಲ್ಲ ವಿಕೆಟ್ ಕಳೆದುಕೊಂಡು 98 ರನ್‌ಗಳಿಗೆ ಆಲೌಟ್ ಆಯಿತು. ರೆಸ್ಟ್ ಆಫ್ ಇಂಡಿಯಾ ಪರ ಮುಖೇಶ್ ಕುಮಾರ್ 4, ಕುಲದೀಪ್ ಸೇನ್ ಮತ್ತು ಉಮ್ರಾನ್ ಮಲಿಕ್ ತಲಾ 3 ವಿಕೆಟ್ ಪಡೆದರು.

3 / 5
ಕಳೆದ ಎರಡು ತಿಂಗಳಿನಿಂದ ಇಂಗ್ಲೆಂಡ್‌ನ ಕೌಂಟಿ ಕ್ರಿಕೆಟ್​ನಲ್ಲಿ ಬ್ಯಾಟ್‌ನಿಂದ ಕೋಲಾಹಲ ಸೃಷ್ಟಿಸಿದ್ದ ಪೂಜಾರ ಕೌಂಟಿ ಚಾಂಪಿಯನ್‌ಶಿಪ್ ಡಿವಿಷನ್ ಒಂದರಲ್ಲಿ ಸಸೆಕ್ಸ್‌ ತಂಡದ ಪರ ಅಬ್ಬರಿಸಿದ್ದರು. ಆ ಬಳಿಕ ರಾಯಲ್ ಲಂಡನ್ ಏಕದಿನ ಕಪ್‌ನಲ್ಲಿ ಅವರು ಬೌಲರ್‌ಗಳನ್ನು ದಂಡಿಸುವುದರಲ್ಲಿ ಯಶಸ್ವಿಯಾಗಿದ್ದರು.

ಕಳೆದ ಎರಡು ತಿಂಗಳಿನಿಂದ ಇಂಗ್ಲೆಂಡ್‌ನ ಕೌಂಟಿ ಕ್ರಿಕೆಟ್​ನಲ್ಲಿ ಬ್ಯಾಟ್‌ನಿಂದ ಕೋಲಾಹಲ ಸೃಷ್ಟಿಸಿದ್ದ ಪೂಜಾರ ಕೌಂಟಿ ಚಾಂಪಿಯನ್‌ಶಿಪ್ ಡಿವಿಷನ್ ಒಂದರಲ್ಲಿ ಸಸೆಕ್ಸ್‌ ತಂಡದ ಪರ ಅಬ್ಬರಿಸಿದ್ದರು. ಆ ಬಳಿಕ ರಾಯಲ್ ಲಂಡನ್ ಏಕದಿನ ಕಪ್‌ನಲ್ಲಿ ಅವರು ಬೌಲರ್‌ಗಳನ್ನು ದಂಡಿಸುವುದರಲ್ಲಿ ಯಶಸ್ವಿಯಾಗಿದ್ದರು.

4 / 5
ರಾಯಲ್ ಲಂಡನ್ ODI ಕಪ್‌ನಲ್ಲಿ ಅಬ್ಬರಿಸಿದ್ದ ಪೂಜಾರ 3 ಶತಕ ಮತ್ತು 2 ಅರ್ಧ ಶತಕಗಳನ್ನು ಗಳಿಸುವ ಮೂಲಕ ತಮ್ಮ ಫಾರ್ಮ್ ಅನ್ನು ತೋರಿಸಿದರು. ಆದರೆ ಈಗ ತಮ್ಮದೇ ಆದ ತವರು ನೆಲದಲ್ಲಿ ಪೂಜಾರ ವಿಫಲರಾಗಿದ್ದಾರೆ.

ರಾಯಲ್ ಲಂಡನ್ ODI ಕಪ್‌ನಲ್ಲಿ ಅಬ್ಬರಿಸಿದ್ದ ಪೂಜಾರ 3 ಶತಕ ಮತ್ತು 2 ಅರ್ಧ ಶತಕಗಳನ್ನು ಗಳಿಸುವ ಮೂಲಕ ತಮ್ಮ ಫಾರ್ಮ್ ಅನ್ನು ತೋರಿಸಿದರು. ಆದರೆ ಈಗ ತಮ್ಮದೇ ಆದ ತವರು ನೆಲದಲ್ಲಿ ಪೂಜಾರ ವಿಫಲರಾಗಿದ್ದಾರೆ.

5 / 5

Published On - 6:19 pm, Sat, 1 October 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ