66ನೇ ಶತಕದೊಂದಿಗೆ ಹಲವು ದಾಖಲೆ ಬರೆದ ಚೇತೇಶ್ವರ ಪೂಜಾರ

Cheteshwar Pujara: 2023ರ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದ ಬಳಿಕ ಟೀಮ್ ಇಂಡಿಯಾದಿಂದ ಹೊರಬಿದ್ದಿರುವ ಚೇತೇಶ್ವರ ಪೂಜಾರ ಇದೀಗ ಕಂಬ್ಯಾಕ್​ ಹಾದಿಯಲ್ಲಿದ್ದಾರೆ. ಇದರ ಪ್ರಯತ್ನವಾಗಿ ಇದೀಗ ರಣಜಿ ಟೂರ್ನಿಯಲ್ಲಿ ಭರ್ಜರಿ ಸೆಂಚುರಿ ಸಿಡಿಸಿ ಟೀಮ್ ಇಂಡಿಯಾದ ಕದ ತಟ್ಟಿದ್ದಾರೆ.

|

Updated on: Oct 21, 2024 | 1:31 PM

ಭಾರತ ಟೆಸ್ಟ್ ತಂಡದಿಂದ ಹೊರಬಿದ್ದಿರುವ ಚೇತೇಶ್ವರ ಪೂಜಾರ ದೇಶೀಯ ಅಂಗಳದಲ್ಲಿ ಭರ್ಜರಿ ಪ್ರದರ್ಶನ ಮುಂದುವರೆಸಿದ್ದಾರೆ. ಅದರಲ್ಲೂ ಪ್ರಸ್ತುತ ನಡೆಯುತ್ತಿರುವ ರಣಜಿ ಟ್ರೋಫಿ ಪಂದ್ಯದಲ್ಲಿ ಆಕರ್ಷಕ ಶತಕ ಸಿಡಿಸುವ ಮೂಲಕ ಹಲವು ದಾಖಲೆಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.

ಭಾರತ ಟೆಸ್ಟ್ ತಂಡದಿಂದ ಹೊರಬಿದ್ದಿರುವ ಚೇತೇಶ್ವರ ಪೂಜಾರ ದೇಶೀಯ ಅಂಗಳದಲ್ಲಿ ಭರ್ಜರಿ ಪ್ರದರ್ಶನ ಮುಂದುವರೆಸಿದ್ದಾರೆ. ಅದರಲ್ಲೂ ಪ್ರಸ್ತುತ ನಡೆಯುತ್ತಿರುವ ರಣಜಿ ಟ್ರೋಫಿ ಪಂದ್ಯದಲ್ಲಿ ಆಕರ್ಷಕ ಶತಕ ಸಿಡಿಸುವ ಮೂಲಕ ಹಲವು ದಾಖಲೆಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.

1 / 6
ರಾಜ್​ಕೋಟ್​ನಲ್ಲಿ ನಡೆಯುತ್ತಿರುವ ರಣಜಿ ಟೂರ್ನಿಯ ಗ್ರೂಪ್-ಡಿ ಪಂದ್ಯದಲ್ಲಿ ಸೌರಾಷ್ಟ್ರ ಮತ್ತು ಛತ್ತೀಸ್‌ಗಢ್ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಛತ್ತೀಸ್‌ಗಢ್ 578/7 ರನ್​ಗಳಿಸಿ ಡಿಕ್ಲೇರ್ ಘೋಷಿಸಿದೆ. ಇದಕ್ಕುತ್ತರವಾಗಿ ಇನಿಂಗ್ಸ್ ಆರಂಭಿಸಿದ ಸೌರಾಷ್ಟ್ರ ಪರ ಚೇತೇಶ್ವರ ಪೂಜಾರ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ.

ರಾಜ್​ಕೋಟ್​ನಲ್ಲಿ ನಡೆಯುತ್ತಿರುವ ರಣಜಿ ಟೂರ್ನಿಯ ಗ್ರೂಪ್-ಡಿ ಪಂದ್ಯದಲ್ಲಿ ಸೌರಾಷ್ಟ್ರ ಮತ್ತು ಛತ್ತೀಸ್‌ಗಢ್ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಛತ್ತೀಸ್‌ಗಢ್ 578/7 ರನ್​ಗಳಿಸಿ ಡಿಕ್ಲೇರ್ ಘೋಷಿಸಿದೆ. ಇದಕ್ಕುತ್ತರವಾಗಿ ಇನಿಂಗ್ಸ್ ಆರಂಭಿಸಿದ ಸೌರಾಷ್ಟ್ರ ಪರ ಚೇತೇಶ್ವರ ಪೂಜಾರ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ.

2 / 6
ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಚೇತೇಶ್ವರ ಪೂಜಾರ 197 ಎಸೆತಗಳಲ್ಲಿ ಶತಕ ಪೂರೈಸಿದ್ದಾರೆ. ವಿಶೇಷ ಎಂದರೆ ಇದು ಪೂಜಾರ ಅವರ 66ನೇ ಪ್ರಥಮ ದರ್ಜೆ ಟೆಸ್ಟ್ ಸೆಂಚುರಿ. ಈ ಮೂಲಕ ಪ್ರಥಮ ದರ್ಜೆ ಕ್ರಿಕೆಟ್​ನಲ್ಲಿ ಅತ್ಯಧಿಕ ಶತಕ ಸಿಡಿಸಿದ ಬ್ಯಾಟರ್​ಗಳ ಪಟ್ಟಿಯಲ್ಲಿ ವೆಸ್ಟ್ ಇಂಡೀಸ್ ಲೆಜೆಂಡ್ ಬ್ರಿಯಾನ್ ಲಾರಾ (65 ಶತಕ) ಅವರನ್ನು ಹಿಂದಿಕ್ಕಿದ್ದಾರೆ.

ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಚೇತೇಶ್ವರ ಪೂಜಾರ 197 ಎಸೆತಗಳಲ್ಲಿ ಶತಕ ಪೂರೈಸಿದ್ದಾರೆ. ವಿಶೇಷ ಎಂದರೆ ಇದು ಪೂಜಾರ ಅವರ 66ನೇ ಪ್ರಥಮ ದರ್ಜೆ ಟೆಸ್ಟ್ ಸೆಂಚುರಿ. ಈ ಮೂಲಕ ಪ್ರಥಮ ದರ್ಜೆ ಕ್ರಿಕೆಟ್​ನಲ್ಲಿ ಅತ್ಯಧಿಕ ಶತಕ ಸಿಡಿಸಿದ ಬ್ಯಾಟರ್​ಗಳ ಪಟ್ಟಿಯಲ್ಲಿ ವೆಸ್ಟ್ ಇಂಡೀಸ್ ಲೆಜೆಂಡ್ ಬ್ರಿಯಾನ್ ಲಾರಾ (65 ಶತಕ) ಅವರನ್ನು ಹಿಂದಿಕ್ಕಿದ್ದಾರೆ.

3 / 6
ಹಾಗೆಯೇ ಈ ಶತಕದೊಂದಿಗೆ ಚೇತೇಶ್ವರ ಪೂಜಾರ ಪ್ರಥಮ ದರ್ಜೆ ಕ್ರಿಕೆಟ್​ನಲ್ಲಿ 21 ಸಾವಿರ ರನ್ ಪೂರೈಸಿದ್ದಾರೆ. ಈ ಮೂಲಕ ಪ್ರಥಮ ದರ್ಜೆಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಭಾರತದ ನಾಲ್ಕನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಈ ಪಟ್ಟಿಯಲ್ಲಿ ಸುನಿಲ್ ಗವಾಸ್ಕರ್ (25834 ರನ್ಸ್) ಅಗ್ರಸ್ಥಾನದಲ್ಲಿದ್ದು, ಸಚಿನ್ ತೆಂಡೂಲ್ಕರ್ (25396 ರನ್ಸ್) ದ್ವಿತೀಯ ಸ್ಥಾನದಲ್ಲಿದ್ದಾರೆ. ಹಾಗೆಯೇ ರಾಹುಲ್ ದ್ರಾವಿಡ್ (23784 ರನ್ಸ್) ಮೂರನೇ ಸ್ಥಾನದಲ್ಲಿದ್ದಾರೆ. ಇದೀಗ 21 ಸಾವಿರ ರನ್​ಗಳೊಂದಿಗೆ ಪೂಜಾರ ನಾಲ್ಕನೇ ಸ್ಥಾನ ಅಲಂಕರಿಸಿದ್ದಾರೆ.

ಹಾಗೆಯೇ ಈ ಶತಕದೊಂದಿಗೆ ಚೇತೇಶ್ವರ ಪೂಜಾರ ಪ್ರಥಮ ದರ್ಜೆ ಕ್ರಿಕೆಟ್​ನಲ್ಲಿ 21 ಸಾವಿರ ರನ್ ಪೂರೈಸಿದ್ದಾರೆ. ಈ ಮೂಲಕ ಪ್ರಥಮ ದರ್ಜೆಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಭಾರತದ ನಾಲ್ಕನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಈ ಪಟ್ಟಿಯಲ್ಲಿ ಸುನಿಲ್ ಗವಾಸ್ಕರ್ (25834 ರನ್ಸ್) ಅಗ್ರಸ್ಥಾನದಲ್ಲಿದ್ದು, ಸಚಿನ್ ತೆಂಡೂಲ್ಕರ್ (25396 ರನ್ಸ್) ದ್ವಿತೀಯ ಸ್ಥಾನದಲ್ಲಿದ್ದಾರೆ. ಹಾಗೆಯೇ ರಾಹುಲ್ ದ್ರಾವಿಡ್ (23784 ರನ್ಸ್) ಮೂರನೇ ಸ್ಥಾನದಲ್ಲಿದ್ದಾರೆ. ಇದೀಗ 21 ಸಾವಿರ ರನ್​ಗಳೊಂದಿಗೆ ಪೂಜಾರ ನಾಲ್ಕನೇ ಸ್ಥಾನ ಅಲಂಕರಿಸಿದ್ದಾರೆ.

4 / 6
ಹಾಗೆಯೇ ಹೆಚ್ಚು ಪ್ರಥಮ ದರ್ಜೆ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ಶತಕ ಬಾರಿಸಿದ ಮೂರನೇ ಭಾರತೀಯ ಬ್ಯಾಟರ್​ಗಳ ಪಟ್ಟಿಯಲ್ಲಿ ಪೂಜಾರ ಮೂರನೇ ಸ್ಥಾನಕ್ಕೇರಿದ್ದಾರೆ. ಈ ಪಟ್ಟಿಯಲ್ಲಿ ಗವಾಸ್ಕರ್ ಮತ್ತು ಸಚಿನ್ ತೆಂಡೂಲ್ಕರ್ ತಲಾ 81 ಶತಕಗಳೊಂದಿಗೆ ಜಂಟಿಯಾಗಿ ಮೊದಲ ಸ್ಥಾನದಲ್ಲಿದ್ದಾರೆ. ಇನ್ನು 68 ಶತಕಗಳೊಂದಿಗೆ ರಾಹುಲ್ ದ್ರಾವಿಡ್ ಎರಡನೇ ಸ್ಥಾನದಲ್ಲಿದ್ದರೆ, ಇದೀಗ 66ನೇ ಶತಕ ಸಿಡಿಸಿ ಪೂಜಾರಾ ಮೂರನೇ ಸ್ಥಾನ ಅಲಂಕರಿಸಿದ್ದಾರೆ.

ಹಾಗೆಯೇ ಹೆಚ್ಚು ಪ್ರಥಮ ದರ್ಜೆ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ಶತಕ ಬಾರಿಸಿದ ಮೂರನೇ ಭಾರತೀಯ ಬ್ಯಾಟರ್​ಗಳ ಪಟ್ಟಿಯಲ್ಲಿ ಪೂಜಾರ ಮೂರನೇ ಸ್ಥಾನಕ್ಕೇರಿದ್ದಾರೆ. ಈ ಪಟ್ಟಿಯಲ್ಲಿ ಗವಾಸ್ಕರ್ ಮತ್ತು ಸಚಿನ್ ತೆಂಡೂಲ್ಕರ್ ತಲಾ 81 ಶತಕಗಳೊಂದಿಗೆ ಜಂಟಿಯಾಗಿ ಮೊದಲ ಸ್ಥಾನದಲ್ಲಿದ್ದಾರೆ. ಇನ್ನು 68 ಶತಕಗಳೊಂದಿಗೆ ರಾಹುಲ್ ದ್ರಾವಿಡ್ ಎರಡನೇ ಸ್ಥಾನದಲ್ಲಿದ್ದರೆ, ಇದೀಗ 66ನೇ ಶತಕ ಸಿಡಿಸಿ ಪೂಜಾರಾ ಮೂರನೇ ಸ್ಥಾನ ಅಲಂಕರಿಸಿದ್ದಾರೆ.

5 / 6
ಇನ್ನು ಈ ಪಂದ್ಯದಲ್ಲಿ ಚೇತೇಶ್ವರ ಪೂಜಾರ ಕ್ರೀಸ್ ಕಚ್ಚಿ ಆಡುತ್ತಿದ್ದು, 87 ಓವರ್​ಗಳ ಮುಕ್ತಾಯದ ವೇಳೆಗೆ 246 ಎಸೆತಗಳನ್ನು ಎದುರಿಸಿರುವ ಪೂಜಾರ 15 ಫೋರ್​ಗಳೊಂದಿಗೆ ಅಜೇಯ 138 ರನ್ ಗಳಿಸಿದ್ದಾರೆ. ಈ ಶತಕದ ನೆರವಿನಿಂದ ಸೌರಾಷ್ಟ್ರ ತಂಡವು 3 ವಿಕೆಟ್ ಕಳೆದುಕೊಂಡು 300 ರನ್​ಗಳಿಸಿ ಪ್ರಥಮ ಇನಿಂಗ್ಸ್​ ಮುಂದುವರೆಸಿದೆ.

ಇನ್ನು ಈ ಪಂದ್ಯದಲ್ಲಿ ಚೇತೇಶ್ವರ ಪೂಜಾರ ಕ್ರೀಸ್ ಕಚ್ಚಿ ಆಡುತ್ತಿದ್ದು, 87 ಓವರ್​ಗಳ ಮುಕ್ತಾಯದ ವೇಳೆಗೆ 246 ಎಸೆತಗಳನ್ನು ಎದುರಿಸಿರುವ ಪೂಜಾರ 15 ಫೋರ್​ಗಳೊಂದಿಗೆ ಅಜೇಯ 138 ರನ್ ಗಳಿಸಿದ್ದಾರೆ. ಈ ಶತಕದ ನೆರವಿನಿಂದ ಸೌರಾಷ್ಟ್ರ ತಂಡವು 3 ವಿಕೆಟ್ ಕಳೆದುಕೊಂಡು 300 ರನ್​ಗಳಿಸಿ ಪ್ರಥಮ ಇನಿಂಗ್ಸ್​ ಮುಂದುವರೆಸಿದೆ.

6 / 6
Follow us
ರಾತ್ರಿ ತಂಗಿದ್ದ ಗುಡಿ ನಡುಗಡ್ಡೆಯಾಗಿದ್ದು ಭಕ್ತರಿಗೆ ಬೆಳಗ್ಗೆ ಗೊತ್ತಾಗಿದೆ
ರಾತ್ರಿ ತಂಗಿದ್ದ ಗುಡಿ ನಡುಗಡ್ಡೆಯಾಗಿದ್ದು ಭಕ್ತರಿಗೆ ಬೆಳಗ್ಗೆ ಗೊತ್ತಾಗಿದೆ
ಎರಡು ಬಸ್​ಗಳ ನಡುವೆ ಡಿಕ್ಕಿ, ಪ್ರಯಾಣಿಕರು ಪವಾಡಸದೃಶ ರೀತಿಯಲ್ಲಿ ಪಾರು
ಎರಡು ಬಸ್​ಗಳ ನಡುವೆ ಡಿಕ್ಕಿ, ಪ್ರಯಾಣಿಕರು ಪವಾಡಸದೃಶ ರೀತಿಯಲ್ಲಿ ಪಾರು
ಬಿಜೆಪಿ-ಜೆಡಿಎಸ್ ಮೈತ್ರಿಗೆ ನಾವು ಹುಳಿ ಹಿಂಡುತ್ತಿಲ್ಲವೆಂದ ಚಲುವರಾಯಸ್ವಾಮಿ
ಬಿಜೆಪಿ-ಜೆಡಿಎಸ್ ಮೈತ್ರಿಗೆ ನಾವು ಹುಳಿ ಹಿಂಡುತ್ತಿಲ್ಲವೆಂದ ಚಲುವರಾಯಸ್ವಾಮಿ
ಇಂದು ಸುರಿದ ಮಳೆಗೆ ಬೆಂಗಳೂರು ಡಬಲ್ ರೋಡಲ್ಲಿ ಸಿಂಗಲ್ ರೋಡೂ ಕಾಣಿಸ್ತಿಲ್ಲ
ಇಂದು ಸುರಿದ ಮಳೆಗೆ ಬೆಂಗಳೂರು ಡಬಲ್ ರೋಡಲ್ಲಿ ಸಿಂಗಲ್ ರೋಡೂ ಕಾಣಿಸ್ತಿಲ್ಲ
ಮೆಕ್​ಡೊನಾಲ್ಡ್​ನಲ್ಲಿ ಫ್ರೆಂಚ್​ಫ್ರೈಸ್ ಮಾಡಿದ ಡೊನಾಲ್ಡ್​ ಟ್ರಂಪ್
ಮೆಕ್​ಡೊನಾಲ್ಡ್​ನಲ್ಲಿ ಫ್ರೆಂಚ್​ಫ್ರೈಸ್ ಮಾಡಿದ ಡೊನಾಲ್ಡ್​ ಟ್ರಂಪ್
‘ಬರಬಾರದಿತ್ತು’; ಬಿಗ್ ಬಾಸ್ ಮನೆಯಲ್ಲಿ ಮೊದಲ ದಿನವೇ ಸುಸ್ತಾದ ಹನುಮಂತ್
‘ಬರಬಾರದಿತ್ತು’; ಬಿಗ್ ಬಾಸ್ ಮನೆಯಲ್ಲಿ ಮೊದಲ ದಿನವೇ ಸುಸ್ತಾದ ಹನುಮಂತ್
ಬೆಂಗಳೂರಿನಲ್ಲಿ ಮಳೆ ಆರ್ಭಟ: ರಸ್ತೆಯಲ್ಲಿ ನಿಂತ ನೀರು, ವಾಹನ ಸವಾರರ ಪರದಾಟ
ಬೆಂಗಳೂರಿನಲ್ಲಿ ಮಳೆ ಆರ್ಭಟ: ರಸ್ತೆಯಲ್ಲಿ ನಿಂತ ನೀರು, ವಾಹನ ಸವಾರರ ಪರದಾಟ
Daily Devotional: ರತ್ನ ಧಾರಣೆಯ ಹಿಂದಿನ ರಹಸ್ಯ ತಿಳಿಯಿರಿ
Daily Devotional: ರತ್ನ ಧಾರಣೆಯ ಹಿಂದಿನ ರಹಸ್ಯ ತಿಳಿಯಿರಿ
Nithya Bhavishya: ಈ ರಾಶಿಯ ಸರ್ಕಾರಿ ನೌಕರರು ಇಂದು ಶುಭ ಸುದ್ದಿ ಕೇಳುವರು
Nithya Bhavishya: ಈ ರಾಶಿಯ ಸರ್ಕಾರಿ ನೌಕರರು ಇಂದು ಶುಭ ಸುದ್ದಿ ಕೇಳುವರು
ನನ್ನ ವರ್ಚಸ್ಸು ಹಾಳು ಮಾಡಲು ಯತ್ನ: ಬಿಜೆಪಿ ನಾಯಕರ ಮೇಲೆ ಹೆಚ್​ಡಿಕೆ ಗರಂ
ನನ್ನ ವರ್ಚಸ್ಸು ಹಾಳು ಮಾಡಲು ಯತ್ನ: ಬಿಜೆಪಿ ನಾಯಕರ ಮೇಲೆ ಹೆಚ್​ಡಿಕೆ ಗರಂ