AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cheteshwar Pujara: 62ನೇ ಶತಕ ಸಿಡಿಸಿ ದಾಖಲೆ ಬರೆದ ಚೇತೇಶ್ವರ ಪೂಜಾರ

Cheteshwar Pujara: ಪ್ರಸ್ತುತ ಟೀಮ್ ಇಂಡಿಯಾದಿಂದ ಹೊರಗುಳಿದಿರುವ ಚೇತೇಶ್ವರ ಪೂಜಾರ ರಣಜಿ ಟೂರ್ನಿಯಲ್ಲಿ ಭರ್ಜರಿ ಪ್ರದರ್ಶನ ನೀಡುತ್ತಿದ್ದಾರೆ. ಹೀಗಾಗಿ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಆಯ್ಕೆಯಾದರೂ ಅಚ್ಚರಿಪಡಬೇಕಿಲ್ಲ. ಏಕೆಂದರೆ ಇಂಗ್ಲೆಂಡ್ ವಿರುದ್ಧದ ಮುಂಬರುವ ಪಂದ್ಯಗಳಿಂದ ವಿರಾಟ್ ಕೊಹ್ಲಿ ಹೊರಗುಳಿಯುವ ಸಾಧ್ಯತೆ ಹೆಚ್ಚಿದೆ.

TV9 Web
| Edited By: |

Updated on: Feb 10, 2024 | 10:34 AM

Share
ಜೈಪುರದಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿ ಪಂದ್ಯದಲ್ಲಿ ರಾಜಸ್ಥಾನ್ ವಿರುದ್ಧ ಚೇತೇಶ್ವರ ಪೂಜಾರ (Cheteshwar Pujara) ಶತಕ ಬಾರಿಸಿ ಮಿಂಚಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಸೌರಾಷ್ಟ್ರ ತಂಡದ ನಾಯಕ ಜಯದೇವ್ ಉನಾದ್ಕಟ್ ಬ್ಯಾಟಿಂಗ್ ಆಯ್ದುಕೊಂಡರು. ಅದರಂತೆ ಇನಿಂಗ್ಸ್ ಆರಂಭಿಸಿದ ಸೌರಾಷ್ಟ್ರ ತಂಡ ಉತ್ತಮ ಆರಂಭ ಪಡೆದಿರಲಿಲ್ಲ.

ಜೈಪುರದಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿ ಪಂದ್ಯದಲ್ಲಿ ರಾಜಸ್ಥಾನ್ ವಿರುದ್ಧ ಚೇತೇಶ್ವರ ಪೂಜಾರ (Cheteshwar Pujara) ಶತಕ ಬಾರಿಸಿ ಮಿಂಚಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಸೌರಾಷ್ಟ್ರ ತಂಡದ ನಾಯಕ ಜಯದೇವ್ ಉನಾದ್ಕಟ್ ಬ್ಯಾಟಿಂಗ್ ಆಯ್ದುಕೊಂಡರು. ಅದರಂತೆ ಇನಿಂಗ್ಸ್ ಆರಂಭಿಸಿದ ಸೌರಾಷ್ಟ್ರ ತಂಡ ಉತ್ತಮ ಆರಂಭ ಪಡೆದಿರಲಿಲ್ಲ.

1 / 6
ಆರಂಭಿಕ ಆಟಗಾರರಾದ ಕೆವಿನ್ (0), ಹಾರ್ವಿಕ್ ದೇಸಾಯಿ (21) ಬೇಗನೆ ಔಟಾದರೆ, ಆ ಬಳಿಕ ವಿಶ್ವರಾಜ್ ಜಡೇಜಾ 22 ರನ್​ಗಳಿಸಿ ವಿಕೆಟ್ ಒಪ್ಪಿಸಿದರು. ಈ ಹಂತದಲ್ಲಿ ಕಣಕ್ಕಿಳಿದ ಚೇತೇಶ್ವರ ಪೂಜಾರ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು.

ಆರಂಭಿಕ ಆಟಗಾರರಾದ ಕೆವಿನ್ (0), ಹಾರ್ವಿಕ್ ದೇಸಾಯಿ (21) ಬೇಗನೆ ಔಟಾದರೆ, ಆ ಬಳಿಕ ವಿಶ್ವರಾಜ್ ಜಡೇಜಾ 22 ರನ್​ಗಳಿಸಿ ವಿಕೆಟ್ ಒಪ್ಪಿಸಿದರು. ಈ ಹಂತದಲ್ಲಿ ಕಣಕ್ಕಿಳಿದ ಚೇತೇಶ್ವರ ಪೂಜಾರ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು.

2 / 6
ಎಚ್ಚರಿಕೆಯ ಬ್ಯಾಟಿಂಗ್​ನೊಂದಿಗೆ ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡಿದ ಪೂಜಾರ ಶೆಲ್ಡನ್ ಜಾಕ್ಸನ್ ಜೊತೆಗೂಡಿ ಶತಕದ ಜೊತೆಯಾಟವಾಡಿದರು. 230 ಎಸೆತಗಳನ್ನು ಎದುರಿಸಿದ ಚೇತೇಶ್ವರ ಪೂಜಾರ 9 ಫೋರ್​ಗಳೊಂದಿಗೆ 110 ರನ್ ಬಾರಿಸಿ ಔಟಾದರು.

ಎಚ್ಚರಿಕೆಯ ಬ್ಯಾಟಿಂಗ್​ನೊಂದಿಗೆ ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡಿದ ಪೂಜಾರ ಶೆಲ್ಡನ್ ಜಾಕ್ಸನ್ ಜೊತೆಗೂಡಿ ಶತಕದ ಜೊತೆಯಾಟವಾಡಿದರು. 230 ಎಸೆತಗಳನ್ನು ಎದುರಿಸಿದ ಚೇತೇಶ್ವರ ಪೂಜಾರ 9 ಫೋರ್​ಗಳೊಂದಿಗೆ 110 ರನ್ ಬಾರಿಸಿ ಔಟಾದರು.

3 / 6
ವಿಶೇಷ ಎಂದರೆ ಪ್ರಥಮ ದರ್ಜೆ ಕ್ರಿಕೆಟ್​ನಲ್ಲಿ ಇದು ಚೇತೇಶ್ವರ ಪೂಜಾರ ಅವರ 62ನೇ ಶತಕವಾಗಿದೆ. ಇದರೊಂದಿಗೆ ಫಸ್ಟ್ ಕ್ಲಾಸ್ ಕ್ರಿಕೆಟ್​ನಲ್ಲಿ ಅತ್ಯಧಿಕ ಶತಕ ಬಾರಿಸಿದ ಭಾರತೀಯರ ಪಟ್ಟಿಯಲ್ಲಿ ಪೂಜಾರ 3ನೇ ಸ್ಥಾನಕ್ಕೇರಿದ್ದಾರೆ.

ವಿಶೇಷ ಎಂದರೆ ಪ್ರಥಮ ದರ್ಜೆ ಕ್ರಿಕೆಟ್​ನಲ್ಲಿ ಇದು ಚೇತೇಶ್ವರ ಪೂಜಾರ ಅವರ 62ನೇ ಶತಕವಾಗಿದೆ. ಇದರೊಂದಿಗೆ ಫಸ್ಟ್ ಕ್ಲಾಸ್ ಕ್ರಿಕೆಟ್​ನಲ್ಲಿ ಅತ್ಯಧಿಕ ಶತಕ ಬಾರಿಸಿದ ಭಾರತೀಯರ ಪಟ್ಟಿಯಲ್ಲಿ ಪೂಜಾರ 3ನೇ ಸ್ಥಾನಕ್ಕೇರಿದ್ದಾರೆ.

4 / 6
ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹಾಗೂ ಸುನಿಲ್ ಗವಾಸ್ಕರ್. ಸಚಿನ್ ಹಾಗೂ ಸುನಿಲ್ ಗವಾಸ್ಕರ್ ಪ್ರಥಮ ದರ್ಜೆ ಕ್ರಿಕೆಟ್​ನಲ್ಲಿ ತಲಾ 81 ಶತಕಗಳನ್ನು ಸಿಡಿಸಿದ್ದಾರೆ. ಇನ್ನು 68 ಶತಕ ಬಾರಿಸಿರುವ ದ್ರಾವಿಡ್ 2ನೇ ಸ್ಥಾನದಲ್ಲಿದ್ದಾರೆ. ಇದೀಗ 62ನೇ ಶತಕದೊಂದಿಗೆ ಪೂಜಾರ ಈ ಪಟ್ಟಿಯಲ್ಲಿ 3ನೇ ಸ್ಥಾನ ಅಲಂಕರಿಸಿದ್ದಾರೆ.

ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹಾಗೂ ಸುನಿಲ್ ಗವಾಸ್ಕರ್. ಸಚಿನ್ ಹಾಗೂ ಸುನಿಲ್ ಗವಾಸ್ಕರ್ ಪ್ರಥಮ ದರ್ಜೆ ಕ್ರಿಕೆಟ್​ನಲ್ಲಿ ತಲಾ 81 ಶತಕಗಳನ್ನು ಸಿಡಿಸಿದ್ದಾರೆ. ಇನ್ನು 68 ಶತಕ ಬಾರಿಸಿರುವ ದ್ರಾವಿಡ್ 2ನೇ ಸ್ಥಾನದಲ್ಲಿದ್ದಾರೆ. ಇದೀಗ 62ನೇ ಶತಕದೊಂದಿಗೆ ಪೂಜಾರ ಈ ಪಟ್ಟಿಯಲ್ಲಿ 3ನೇ ಸ್ಥಾನ ಅಲಂಕರಿಸಿದ್ದಾರೆ.

5 / 6
ಇನ್ನು ಈ ಪಂದ್ಯದಲ್ಲಿ ಚೇತೇಶ್ವರ ಪೂಜಾರ (110) ಅವರ ಶತಕ ಹಾಗೂ ಶೆಲ್ಡನ್ ಜಾಕ್ಸನ್ (78) ಅವರ ಅಜೇಯ ಅರ್ಧಶತಕದ ನೆರವಿನಿಂದ ಸೌರಾಷ್ಟ್ರ ತಂಡವು 89.3 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 242 ರನ್​ ಕಲೆಹಾಕಿದೆ.

ಇನ್ನು ಈ ಪಂದ್ಯದಲ್ಲಿ ಚೇತೇಶ್ವರ ಪೂಜಾರ (110) ಅವರ ಶತಕ ಹಾಗೂ ಶೆಲ್ಡನ್ ಜಾಕ್ಸನ್ (78) ಅವರ ಅಜೇಯ ಅರ್ಧಶತಕದ ನೆರವಿನಿಂದ ಸೌರಾಷ್ಟ್ರ ತಂಡವು 89.3 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 242 ರನ್​ ಕಲೆಹಾಕಿದೆ.

6 / 6
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ