AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಲ್ಫಿ ಗಲಾಟೆ: ಪೃಥ್ವಿ ಶಾಗೆ ಎದುರಾಯ್ತು ಸಂಕಷ್ಟ; ತನಿಖೆಗೆ ಕೋರ್ಟ್​ ಆದೇಶ..!

Sapna Gill vs Prithvi Shaw: ಐಪಿಎಲ್ ಮಧ್ಯೆ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆರಂಭಿಕ ಬ್ಯಾಟ್ಸ್‌ಮನ್ ಪೃಥ್ವಿ ಶಾಗೆ ಸಂಕಷ್ಟ ಎದುರಾಗಿದೆ. ಕಳೆದ ವರ್ಷ ನಡೆದಿದ್ದ ಸೆಲ್ಫಿ ಗಲಾಟೆ ಪ್ರಕರಣಕ್ಕೆ ಕುರಿತಂತೆ ಮಹತ್ವದ ನಿರ್ಧಾರ ತೆಗೆದುಕೊಂಡಿರುವ ಮುಂಬೈ ಕೋರ್ಟ್​ ಪ್ರಕರಣವನ್ನು ತನಿಖೆ ನಡೆಸುವಂತೆ ಪೊಲೀಸರಿಗೆ ಆದೇಶಿಸಿದೆ.

ಪೃಥ್ವಿಶಂಕರ
|

Updated on: Apr 04, 2024 | 8:28 PM

Share
ಐಪಿಎಲ್ ಮಧ್ಯೆ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆರಂಭಿಕ ಬ್ಯಾಟ್ಸ್‌ಮನ್ ಪೃಥ್ವಿ ಶಾಗೆ ಸಂಕಷ್ಟ ಎದುರಾಗಿದೆ. ಕಳೆದ ವರ್ಷ ನಡೆದಿದ್ದ ಸೆಲ್ಫಿ ಗಲಾಟೆ ಪ್ರಕರಣಕ್ಕೆ ಕುರಿತಂತೆ ಮಹತ್ವದ ನಿರ್ಧಾರ ತೆಗೆದುಕೊಂಡಿರುವ ಮುಂಬೈ ಕೋರ್ಟ್​ ಪ್ರಕರಣವನ್ನು ತನಿಖೆ ನಡೆಸುವಂತೆ ಪೊಲೀಸರಿಗೆ ಆದೇಶಿಸಿದೆ.

ಐಪಿಎಲ್ ಮಧ್ಯೆ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆರಂಭಿಕ ಬ್ಯಾಟ್ಸ್‌ಮನ್ ಪೃಥ್ವಿ ಶಾಗೆ ಸಂಕಷ್ಟ ಎದುರಾಗಿದೆ. ಕಳೆದ ವರ್ಷ ನಡೆದಿದ್ದ ಸೆಲ್ಫಿ ಗಲಾಟೆ ಪ್ರಕರಣಕ್ಕೆ ಕುರಿತಂತೆ ಮಹತ್ವದ ನಿರ್ಧಾರ ತೆಗೆದುಕೊಂಡಿರುವ ಮುಂಬೈ ಕೋರ್ಟ್​ ಪ್ರಕರಣವನ್ನು ತನಿಖೆ ನಡೆಸುವಂತೆ ಪೊಲೀಸರಿಗೆ ಆದೇಶಿಸಿದೆ.

1 / 8
ವಾಸ್ತವವಾಗಿ ಕಳೆದ ವರ್ಷ ಪೃಥ್ವಿ ಶಾ ಹಾಗೂ ಭೋಜ್​ಪುರಿ ನಟಿ ಸಪ್ನಾ ಗಿಲ್ ಸೆಲ್ಫಿ ವಿಚಾರಕ್ಕೆ ಜಗಳ ಮಾಡಿಕೊಂಡಿದ್ದರು. ಆ ಪ್ರಕರಣದಲ್ಲಿ ಪೃಥ್ವಿ ಶಾ ವಿರುದ್ಧ ಸಪ್ನಾ ಐಪಿಸಿಯ 10 ಕ್ಕೂ ಹೆಚ್ಚು ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು.

ವಾಸ್ತವವಾಗಿ ಕಳೆದ ವರ್ಷ ಪೃಥ್ವಿ ಶಾ ಹಾಗೂ ಭೋಜ್​ಪುರಿ ನಟಿ ಸಪ್ನಾ ಗಿಲ್ ಸೆಲ್ಫಿ ವಿಚಾರಕ್ಕೆ ಜಗಳ ಮಾಡಿಕೊಂಡಿದ್ದರು. ಆ ಪ್ರಕರಣದಲ್ಲಿ ಪೃಥ್ವಿ ಶಾ ವಿರುದ್ಧ ಸಪ್ನಾ ಐಪಿಸಿಯ 10 ಕ್ಕೂ ಹೆಚ್ಚು ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು.

2 / 8
ಇತ್ತ ಪೃಥ್ವಿ ಶಾ ಕೂಡ ಸಪ್ನಾ ವಿರುದ್ಧ ಹಲ್ಲೆ ಪ್ರಕರಣ ದಾಖಲಿಸಿದ್ದರೆ, ಮತ್ತೊಂದೆಡೆ ಪೃಥ್ವಿ ವಿರುದ್ಧ ಸಪ್ನಾ ಗಿಲ್ ಕಿರುಕುಳದ ಆರೋಪ ಮಾಡಿದ್ದರು. ಈ ಪ್ರಕರಣದಲ್ಲಿ ಇದೀಗ ನ್ಯಾಯಾಲಯವು ಪೃಥ್ವಿ ಶಾ ವಿರುದ್ಧ ಸಪ್ನಾ ಗಿಲ್ ಅವರ ಕಿರುಕುಳದ ದೂರಿನ ತನಿಖೆ ನಡೆಸುವಂತೆ ಪೊಲೀಸರಿಗೆ ಆದೇಶಿಸಿದೆ.

ಇತ್ತ ಪೃಥ್ವಿ ಶಾ ಕೂಡ ಸಪ್ನಾ ವಿರುದ್ಧ ಹಲ್ಲೆ ಪ್ರಕರಣ ದಾಖಲಿಸಿದ್ದರೆ, ಮತ್ತೊಂದೆಡೆ ಪೃಥ್ವಿ ವಿರುದ್ಧ ಸಪ್ನಾ ಗಿಲ್ ಕಿರುಕುಳದ ಆರೋಪ ಮಾಡಿದ್ದರು. ಈ ಪ್ರಕರಣದಲ್ಲಿ ಇದೀಗ ನ್ಯಾಯಾಲಯವು ಪೃಥ್ವಿ ಶಾ ವಿರುದ್ಧ ಸಪ್ನಾ ಗಿಲ್ ಅವರ ಕಿರುಕುಳದ ದೂರಿನ ತನಿಖೆ ನಡೆಸುವಂತೆ ಪೊಲೀಸರಿಗೆ ಆದೇಶಿಸಿದೆ.

3 / 8
ಅಲ್ಲದೆ ಜೂನ್ 19 ರೊಳಗೆ ತನಿಖಾ ವರದಿಯನ್ನು ಸಲ್ಲಿಸುವಂತೆ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಎಸ್‌ಸಿ ಟೇಡೆ ಪೊಲೀಸರಿಗೆ ಸೂಚಿಸಿದ್ದಾರೆ. ಆದಾಗ್ಯೂ, ಪೃಥ್ವಿ ಶಾ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸದ ಪೊಲೀಸರ ವಿರುದ್ಧ ಕ್ರಮಕ್ಕಾಗಿ ಗಿಲ್ ಮಾಡಿದ ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿದೆ.

ಅಲ್ಲದೆ ಜೂನ್ 19 ರೊಳಗೆ ತನಿಖಾ ವರದಿಯನ್ನು ಸಲ್ಲಿಸುವಂತೆ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಎಸ್‌ಸಿ ಟೇಡೆ ಪೊಲೀಸರಿಗೆ ಸೂಚಿಸಿದ್ದಾರೆ. ಆದಾಗ್ಯೂ, ಪೃಥ್ವಿ ಶಾ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸದ ಪೊಲೀಸರ ವಿರುದ್ಧ ಕ್ರಮಕ್ಕಾಗಿ ಗಿಲ್ ಮಾಡಿದ ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿದೆ.

4 / 8
ಕಳೆದ ವರ್ಷ, ಅಂದರೆ 2023ರ ಫೆಬ್ರವರಿಯಲ್ಲಿ ಪೃಥ್ವಿ ಶಾ ತನ್ನ ಸ್ನೇಹಿತನೊಂದಿಗೆ ಹೋಟೆಲ್‌ಗೆ ಹೋಗಿದ್ದರು. ಈ ವೇಳೆ ಸಪ್ನಾ ತನ್ನ ಸ್ನೇಹಿತನೊಂದಿಗೆ ಪೃಥ್ವಿ ಜೊತೆ ಸೆಲ್ಫಿ ತೆಗೆದುಕೊಂಡಿದ್ದಾರೆ. ಪದೇ ಪದೇ ಸೆಲ್ಫಿ ತೆಗೆದುಕೊಂಡಿದ್ದಕ್ಕೆ ಸಿಟ್ಟಾದ ಶಾ ಹೋಟೆಲ್ ಮ್ಯಾನೇಜರ್‌ಗೆ ಈ ಇಬ್ಬರನ್ನು ಹೋಟೆಲ್​ನಿಂದ ಹೊರ ಹಾಕುವಂತೆ ಹೇಳಿದ್ದಾರೆ.

ಕಳೆದ ವರ್ಷ, ಅಂದರೆ 2023ರ ಫೆಬ್ರವರಿಯಲ್ಲಿ ಪೃಥ್ವಿ ಶಾ ತನ್ನ ಸ್ನೇಹಿತನೊಂದಿಗೆ ಹೋಟೆಲ್‌ಗೆ ಹೋಗಿದ್ದರು. ಈ ವೇಳೆ ಸಪ್ನಾ ತನ್ನ ಸ್ನೇಹಿತನೊಂದಿಗೆ ಪೃಥ್ವಿ ಜೊತೆ ಸೆಲ್ಫಿ ತೆಗೆದುಕೊಂಡಿದ್ದಾರೆ. ಪದೇ ಪದೇ ಸೆಲ್ಫಿ ತೆಗೆದುಕೊಂಡಿದ್ದಕ್ಕೆ ಸಿಟ್ಟಾದ ಶಾ ಹೋಟೆಲ್ ಮ್ಯಾನೇಜರ್‌ಗೆ ಈ ಇಬ್ಬರನ್ನು ಹೋಟೆಲ್​ನಿಂದ ಹೊರ ಹಾಕುವಂತೆ ಹೇಳಿದ್ದಾರೆ.

5 / 8
ಇದರಿಂದ ಬೇಸರಗೊಂಡ ಸಪ್ನಾ ಮತ್ತು ಆಕೆಯ ಸ್ನೇಹಿತ, ಪೃಥ್ವಿ ಹೋಟೆಲ್​ನಿಂದ ಹೊರಬರಲು ಸುಮಾರು 25 ನಿಮಿಷಗಳ ಕಾಲ ಕಾದು ಕುಳಿತು, ಪೃಥ್ವಿ ಶಾ ಹೋಟೆಲ್​ನಿಂದ ಹೊರಬರುತ್ತಲೆ ಕಾರನ್ನು ಹಿಂಬಾಲಿಸಿ ದಾಳಿಗೆ ಯತ್ನಿಸಿದ್ದರು.

ಇದರಿಂದ ಬೇಸರಗೊಂಡ ಸಪ್ನಾ ಮತ್ತು ಆಕೆಯ ಸ್ನೇಹಿತ, ಪೃಥ್ವಿ ಹೋಟೆಲ್​ನಿಂದ ಹೊರಬರಲು ಸುಮಾರು 25 ನಿಮಿಷಗಳ ಕಾಲ ಕಾದು ಕುಳಿತು, ಪೃಥ್ವಿ ಶಾ ಹೋಟೆಲ್​ನಿಂದ ಹೊರಬರುತ್ತಲೆ ಕಾರನ್ನು ಹಿಂಬಾಲಿಸಿ ದಾಳಿಗೆ ಯತ್ನಿಸಿದ್ದರು.

6 / 8
ಸಪ್ನಾ ಕೂಡ ಪೃಥ್ವಿ ಮೇಲೆ ಹಲ್ಲೆಗೆ ಯತ್ನಿಸಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಇದಾದ ನಂತರ ಶಾ ಅವರ ಸ್ನೇಹಿತ ಆಶಿಶ್, ಸಪ್ನಾ ಮತ್ತು ಆಕೆಯ ಸ್ನೇಹಿತರ ವಿರುದ್ಧ ಪೊಲೀಸ್ ದೂರು ದಾಖಲಿಸಿದ್ದರು. ಮರುದಿನ, ಶಾ ಮೇಲೆ ಹಲ್ಲೆ ಮತ್ತು ಬೆದರಿಕೆ ಹಾಕಿರುವ ಆರೋಪದ ಮೇಲೆ ಓಶಿವಾರ ಪೊಲೀಸರು ಸಪ್ನಾ ಅವರನ್ನು ಬಂಧಿಸಿದ್ದರು.

ಸಪ್ನಾ ಕೂಡ ಪೃಥ್ವಿ ಮೇಲೆ ಹಲ್ಲೆಗೆ ಯತ್ನಿಸಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಇದಾದ ನಂತರ ಶಾ ಅವರ ಸ್ನೇಹಿತ ಆಶಿಶ್, ಸಪ್ನಾ ಮತ್ತು ಆಕೆಯ ಸ್ನೇಹಿತರ ವಿರುದ್ಧ ಪೊಲೀಸ್ ದೂರು ದಾಖಲಿಸಿದ್ದರು. ಮರುದಿನ, ಶಾ ಮೇಲೆ ಹಲ್ಲೆ ಮತ್ತು ಬೆದರಿಕೆ ಹಾಕಿರುವ ಆರೋಪದ ಮೇಲೆ ಓಶಿವಾರ ಪೊಲೀಸರು ಸಪ್ನಾ ಅವರನ್ನು ಬಂಧಿಸಿದ್ದರು.

7 / 8
ಆ ನಂತರ ಜಾಮೀನು ಪಡೆದು ಹೊರಬಂದಿದ್ದ ಸಪ್ನಾ, ಪೃಥ್ವಿ ಶಾ ಹಾಗೂ ಅವರ ಸ್ನೇಹಿತ ಆಶಿಶ್ ಯಾದವ್ ಮತ್ತು ಇತರರ ವಿರುದ್ಧ ದೂರು ನೀಡಲು ಅಂಧೇರಿ ವಿಮಾನ ನಿಲ್ದಾಣ ಪೊಲೀಸ್ ಠಾಣೆಗೆ ತೆರಳಿದ್ದರು. ಆದರೆ ಪೊಲೀಸರು ಪ್ರಕರಣ ದಾಖಲಿಸಿಕೊಳ್ಳದಿದ್ದಾಗ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮೊರೆ ಹೋಗಿದ್ದರು.

ಆ ನಂತರ ಜಾಮೀನು ಪಡೆದು ಹೊರಬಂದಿದ್ದ ಸಪ್ನಾ, ಪೃಥ್ವಿ ಶಾ ಹಾಗೂ ಅವರ ಸ್ನೇಹಿತ ಆಶಿಶ್ ಯಾದವ್ ಮತ್ತು ಇತರರ ವಿರುದ್ಧ ದೂರು ನೀಡಲು ಅಂಧೇರಿ ವಿಮಾನ ನಿಲ್ದಾಣ ಪೊಲೀಸ್ ಠಾಣೆಗೆ ತೆರಳಿದ್ದರು. ಆದರೆ ಪೊಲೀಸರು ಪ್ರಕರಣ ದಾಖಲಿಸಿಕೊಳ್ಳದಿದ್ದಾಗ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮೊರೆ ಹೋಗಿದ್ದರು.

8 / 8
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ