AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರಾವಿಸ್ ಹೆಡ್ ಸಿಡಿಲಬ್ಬರದಿಂದ ಆಸ್ಟ್ರೇಲಿಯಾಗೆ 17 ಕೋಟಿ ರೂ. ನಷ್ಟ!

Australia vs England: ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಟ್ರಾವಿಸ್ ಹೆಡ್ ಕೇವಲ 69 ಎಸೆತಗಳಲ್ಲಿ ಶತಕ ಪೂರೈಸಿದ್ದರು. ಅಷ್ಟೇ ಅಲ್ಲದೆ ಸಿಡಿಲಬ್ಬರದ ಬ್ಯಾಟಿಂಗ್​ನೊಂದಿಗೆ 2ನೇ ದಿನದಾಟದಲ್ಲೇ ಪಂದ್ಯ ಮುಗಿಸಿದ್ದರು. ಹೆಡ್ ಅವರ ಈ ಆರ್ಭಟದಿಂದಾಗಿ ಇದೀಗ ಕ್ರಿಕೆಟ್ ಆಸ್ಟ್ರೇಲಿಯಾಗೆ ಆದಾಯ ಗಳಿಕೆಗೆ ಹೊಡೆತ ಬಿದ್ದಿದೆ.

ಝಾಹಿರ್ ಯೂಸುಫ್
|

Updated on: Nov 24, 2025 | 11:53 AM

Share
Ashes 2025: ಇಂಗ್ಲೆಂಡ್ ವಿರುದ್ಧದ ಪ್ರತಿಷ್ಠಿತ ಆ್ಯಶಸ್ ಸರಣಿಯ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಭರ್ಜರಿ ಜಯ ಸಾಧಿಸಿದೆ. ಈ ಭರ್ಜರಿ ಗೆಲುವಿನಿಂದಾಗಿ ಕ್ರಿಕೆಟ್ ಆಸ್ಟ್ರೇಲಿಯಾಗೆ ಸುಮಾರು 17 ಕೋಟಿ ರೂ. ನಷ್ಟವಾಗಿದೆ ಎಂದರೆ ನಂಬುತ್ತೀರಾ?... ನಂಬಲೇಬೇಕು.

Ashes 2025: ಇಂಗ್ಲೆಂಡ್ ವಿರುದ್ಧದ ಪ್ರತಿಷ್ಠಿತ ಆ್ಯಶಸ್ ಸರಣಿಯ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಭರ್ಜರಿ ಜಯ ಸಾಧಿಸಿದೆ. ಈ ಭರ್ಜರಿ ಗೆಲುವಿನಿಂದಾಗಿ ಕ್ರಿಕೆಟ್ ಆಸ್ಟ್ರೇಲಿಯಾಗೆ ಸುಮಾರು 17 ಕೋಟಿ ರೂ. ನಷ್ಟವಾಗಿದೆ ಎಂದರೆ ನಂಬುತ್ತೀರಾ?... ನಂಬಲೇಬೇಕು.

1 / 5
ಏಕೆಂದರೆ ಐದು ದಿನಗಳ ಜಿದ್ದಾಜಿದ್ದಿನ ಕದನವನ್ನು ನಿರೀಕ್ಷಿಸಲಾಗಿದ್ದ ಪರ್ತ್​ ಟೆಸ್ಟ್ ಪಂದ್ಯವು ಕೇವಲ 2 ದಿನಗಳಲ್ಲೇ ಮುಗಿದು ಹೋಗಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡವು ಪ್ರಥಮ ಇನಿಂಗ್ಸ್​ನಲ್ಲಿ 172 ರನ್​ ಕಲೆಹಾಕಿದರೆ, ಆಸ್ಟ್ರೇಲಿಯಾ ತಂಡ 132 ರನ್​ಗಳಿಸಿ ಆಲೌಟ್ ಆಯಿತು.

ಏಕೆಂದರೆ ಐದು ದಿನಗಳ ಜಿದ್ದಾಜಿದ್ದಿನ ಕದನವನ್ನು ನಿರೀಕ್ಷಿಸಲಾಗಿದ್ದ ಪರ್ತ್​ ಟೆಸ್ಟ್ ಪಂದ್ಯವು ಕೇವಲ 2 ದಿನಗಳಲ್ಲೇ ಮುಗಿದು ಹೋಗಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡವು ಪ್ರಥಮ ಇನಿಂಗ್ಸ್​ನಲ್ಲಿ 172 ರನ್​ ಕಲೆಹಾಕಿದರೆ, ಆಸ್ಟ್ರೇಲಿಯಾ ತಂಡ 132 ರನ್​ಗಳಿಸಿ ಆಲೌಟ್ ಆಯಿತು.

2 / 5
ಇನ್ನು ದ್ವಿತೀಯ ಇನಿಂಗ್ಸ್​ನಲ್ಲಿ ಇಂಗ್ಲೆಂಡ್ ತಂಡವು 164 ರನ್​ಗಳಿಸಲಷ್ಟೇ ಶಕ್ತರಾಗಿದ್ದರು. ಅದರಂತೆ ಕೊನೆಯ ಇನಿಂಗ್ಸ್​ನಲ್ಲಿ 205 ರನ್​ಗಳ ಗುರಿಯನ್ನು ಬೆನ್ನತ್ತಿದ ಆಸ್ಟ್ರೇಲಿಯಾ ಪರ ಟ್ರಾವಿಸ್ ಹೆಡ್ 83 ಎಸೆತಗಳಲ್ಲಿ 123 ರನ್​ ಸಿಡಿಸಿದ್ದರು. ಈ ಸ್ಫೋಟಕ ಬ್ಯಾಟಿಂಗ್ ನೆರವಿನೊಂದಿಗೆ ಆಸ್ಟ್ರೇಲಿಯಾ ತಂಡ 28.2 ಓವರ್​ಗಳಲ್ಲಿ 205 ರನ್​ಗಳಿಸಿ 2ನೇ ದಿನದಾಟದಲ್ಲೇ ಪಂದ್ಯ ಮುಗಿಸಿದ್ದರು.

ಇನ್ನು ದ್ವಿತೀಯ ಇನಿಂಗ್ಸ್​ನಲ್ಲಿ ಇಂಗ್ಲೆಂಡ್ ತಂಡವು 164 ರನ್​ಗಳಿಸಲಷ್ಟೇ ಶಕ್ತರಾಗಿದ್ದರು. ಅದರಂತೆ ಕೊನೆಯ ಇನಿಂಗ್ಸ್​ನಲ್ಲಿ 205 ರನ್​ಗಳ ಗುರಿಯನ್ನು ಬೆನ್ನತ್ತಿದ ಆಸ್ಟ್ರೇಲಿಯಾ ಪರ ಟ್ರಾವಿಸ್ ಹೆಡ್ 83 ಎಸೆತಗಳಲ್ಲಿ 123 ರನ್​ ಸಿಡಿಸಿದ್ದರು. ಈ ಸ್ಫೋಟಕ ಬ್ಯಾಟಿಂಗ್ ನೆರವಿನೊಂದಿಗೆ ಆಸ್ಟ್ರೇಲಿಯಾ ತಂಡ 28.2 ಓವರ್​ಗಳಲ್ಲಿ 205 ರನ್​ಗಳಿಸಿ 2ನೇ ದಿನದಾಟದಲ್ಲೇ ಪಂದ್ಯ ಮುಗಿಸಿದ್ದರು.

3 / 5
ಇತ್ತ ಆಸ್ಟ್ರೇಲಿಯಾ ತಂಡವು ಕೇವಲ 2 ದಿನದಾಟದಲ್ಲೇ ಪಂದ್ಯ ಮುಗಿಸಿದ್ದರಿಂದ ಕ್ರಿಕೆಟ್ ಆಸ್ಟ್ರೇಲಿಯಾ 3 ಮಿಲಿಯನ್ ಆಸ್ಟ್ರೇಲಿಯನ್ ಡಾಲರ್‌ ನಷ್ಟ ಅನುಭವಿಸಿದೆ. ಎಬಿಸಿ ಸ್ಪೋರ್ಟ್ಸ್ ವರದಿಯ ಪ್ರಕಾರ, ಮೊದಲ ಟೆಸ್ಟ್ ಪಂದ್ಯವು 2 ದಿನಗಳಲ್ಲೇ ಮುಗಿದ ಕಾರಣ ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿಯ ಆದಾಯಕ್ಕೆ ಹೊಡೆತ ಬಿದ್ದಿದೆ.

ಇತ್ತ ಆಸ್ಟ್ರೇಲಿಯಾ ತಂಡವು ಕೇವಲ 2 ದಿನದಾಟದಲ್ಲೇ ಪಂದ್ಯ ಮುಗಿಸಿದ್ದರಿಂದ ಕ್ರಿಕೆಟ್ ಆಸ್ಟ್ರೇಲಿಯಾ 3 ಮಿಲಿಯನ್ ಆಸ್ಟ್ರೇಲಿಯನ್ ಡಾಲರ್‌ ನಷ್ಟ ಅನುಭವಿಸಿದೆ. ಎಬಿಸಿ ಸ್ಪೋರ್ಟ್ಸ್ ವರದಿಯ ಪ್ರಕಾರ, ಮೊದಲ ಟೆಸ್ಟ್ ಪಂದ್ಯವು 2 ದಿನಗಳಲ್ಲೇ ಮುಗಿದ ಕಾರಣ ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿಯ ಆದಾಯಕ್ಕೆ ಹೊಡೆತ ಬಿದ್ದಿದೆ.

4 / 5
ಏಕೆಂದರೆ ಭಾನುವಾರ ಪಂದ್ಯ ವೀಕ್ಷಿಸಲು 60 ಸಾವಿರ ಮಂದಿ ಟಿಕೆಟ್ ಬುಕ್ ಮಾಡಿಕೊಂಡಿದ್ದರು. ಆದರೆ ಟ್ರಾವಿಸ್ ಹೆಡ್ ಅವರ ಆರ್ಭಟದಿಂದಾಗಿ ಮೊದಲ ಟೆಸ್ಟ್ ಪಂದ್ಯವು ಎರಡನೇ ದಿನದಾಟದಲ್ಲೇ ಮುಗಿಯಿತು. ಇದರಿಂದಾಗಿ ಉಳಿದ ದಿನಗಳ ಟಿಕೆಟ್ ಮಾರಾಟ ಕೂಡ ವ್ಯರ್ಥವಾಗಿದೆ. ಈ ಟಿಕೆಟ್ ಮಾರಾಟಗಳಿಂದಾಗಿ ಕ್ರಿಕೆಟ್ ಆಸ್ಟ್ರೇಲಿಯಾ ಸುಮಾರು 3 ಮಿಲಿಯನ್ ಡಾಲರ್ ಆದಾಯಗಳಿಸುವ ಇರಾದೆಯಲ್ಲಿತ್ತು. ಆದರೆ ಆಸ್ಟ್ರೇಲಿಯಾ ತಂಡವು 2ನೇ ದಿನಕ್ಕೆ ಪಂದ್ಯ ಮುಗಿಸಿದ್ದರಿಂದ ಸರಿಸುಮಾರು 17.35 ಕೋಟಿ ರೂ. ನಷ್ಟವಾಗಿದೆ ಎಂದು ವರದಿಯಾಗಿದೆ.

ಏಕೆಂದರೆ ಭಾನುವಾರ ಪಂದ್ಯ ವೀಕ್ಷಿಸಲು 60 ಸಾವಿರ ಮಂದಿ ಟಿಕೆಟ್ ಬುಕ್ ಮಾಡಿಕೊಂಡಿದ್ದರು. ಆದರೆ ಟ್ರಾವಿಸ್ ಹೆಡ್ ಅವರ ಆರ್ಭಟದಿಂದಾಗಿ ಮೊದಲ ಟೆಸ್ಟ್ ಪಂದ್ಯವು ಎರಡನೇ ದಿನದಾಟದಲ್ಲೇ ಮುಗಿಯಿತು. ಇದರಿಂದಾಗಿ ಉಳಿದ ದಿನಗಳ ಟಿಕೆಟ್ ಮಾರಾಟ ಕೂಡ ವ್ಯರ್ಥವಾಗಿದೆ. ಈ ಟಿಕೆಟ್ ಮಾರಾಟಗಳಿಂದಾಗಿ ಕ್ರಿಕೆಟ್ ಆಸ್ಟ್ರೇಲಿಯಾ ಸುಮಾರು 3 ಮಿಲಿಯನ್ ಡಾಲರ್ ಆದಾಯಗಳಿಸುವ ಇರಾದೆಯಲ್ಲಿತ್ತು. ಆದರೆ ಆಸ್ಟ್ರೇಲಿಯಾ ತಂಡವು 2ನೇ ದಿನಕ್ಕೆ ಪಂದ್ಯ ಮುಗಿಸಿದ್ದರಿಂದ ಸರಿಸುಮಾರು 17.35 ಕೋಟಿ ರೂ. ನಷ್ಟವಾಗಿದೆ ಎಂದು ವರದಿಯಾಗಿದೆ.

5 / 5
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮತ್ತೊಂದು ಬಿಗ್ ಎಲಿಮಿನೇಷನ್: ಸ್ಪಂದನಾ-ಮಾಳು ನಡುವೆ ಯಾರು ಹೊರಗೆ?
ಮತ್ತೊಂದು ಬಿಗ್ ಎಲಿಮಿನೇಷನ್: ಸ್ಪಂದನಾ-ಮಾಳು ನಡುವೆ ಯಾರು ಹೊರಗೆ?
ಹಾಲು ಕುಡಿಯಬೇಕಿದ್ದ 5 ವರ್ಷದ ಮೊಮ್ಮಗನಿಗೆ ಮದ್ಯ ಕುಡಿಸಿದ ಅಜ್ಜ!
ಹಾಲು ಕುಡಿಯಬೇಕಿದ್ದ 5 ವರ್ಷದ ಮೊಮ್ಮಗನಿಗೆ ಮದ್ಯ ಕುಡಿಸಿದ ಅಜ್ಜ!