AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಂ ಇಂಡಿಯಾ ಆಟಗಾರನಿಗೆ ಮೂಳೆ ಮುರಿತ; ದೀರ್ಘಕಾಲ ಕ್ರಿಕೆಟ್‌ನಿಂದ ದೂರ

Sai Sudharsan Injury Update: ಯುವ ಕ್ರಿಕೆಟಿಗ ಸಾಯಿ ಸುದರ್ಶನ್ ಪಕ್ಕೆಲುಬು ಗಾಯಕ್ಕೆ ಒಳಗಾಗಿದ್ದು, ಮುಂದಿನ 6 ವಾರಗಳ ಕಾಲ ಕ್ರಿಕೆಟ್‌ನಿಂದ ದೂರ ಉಳಿಯಲಿದ್ದಾರೆ. ವಿಜಯ್ ಹಜಾರೆ ಟ್ರೋಫಿಯಲ್ಲಿ ತಮಿಳುನಾಡು ತಂಡಕ್ಕೆ ಇದು ದೊಡ್ಡ ಹಿನ್ನಡೆಯಾಗಿದೆ. ನ್ಯೂಜಿಲೆಂಡ್ ಸರಣಿ ಆಯ್ಕೆಗೆ ಪರಿಣಾಮವಿಲ್ಲದಿದ್ದರೂ, ಐಪಿಎಲ್ 2026 ಆರಂಭಕ್ಕೂ ಮುನ್ನ ಅವರ ಚೇತರಿಕೆ ನಿರ್ಣಾಯಕವಾಗಿದೆ.

ಪೃಥ್ವಿಶಂಕರ
|

Updated on: Jan 02, 2026 | 6:31 PM

Share
ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾವನ್ನು ಇನ್ನೇರಡು ದಿನಗಳ ಒಳಗೆ ಪ್ರಕಟಿಸುವ ಸಾಧ್ಯತೆಗಳಿವೆ. ಆದರೆ ಅದಕ್ಕೂ ಮುನ್ನ ತಂಡದ ಯುವ ಆಟಗಾರ ಸಾಯಿ ಸುದರ್ಶನ್ ಗಂಭೀರ ಗಾಯಕ್ಕೆ ತುತ್ತಾಗಿದ್ದು, ಕೆಲವು ವಾರಗಳ ವರೆಗೆ ಕ್ರಿಕೆಟ್​ನಿಂದ ದೂರ ಉಳಿಯಲಿದ್ದಾರೆ ಎಂದು ವರದಿಯಾಗಿದೆ.

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾವನ್ನು ಇನ್ನೇರಡು ದಿನಗಳ ಒಳಗೆ ಪ್ರಕಟಿಸುವ ಸಾಧ್ಯತೆಗಳಿವೆ. ಆದರೆ ಅದಕ್ಕೂ ಮುನ್ನ ತಂಡದ ಯುವ ಆಟಗಾರ ಸಾಯಿ ಸುದರ್ಶನ್ ಗಂಭೀರ ಗಾಯಕ್ಕೆ ತುತ್ತಾಗಿದ್ದು, ಕೆಲವು ವಾರಗಳ ವರೆಗೆ ಕ್ರಿಕೆಟ್​ನಿಂದ ದೂರ ಉಳಿಯಲಿದ್ದಾರೆ ಎಂದು ವರದಿಯಾಗಿದೆ.

1 / 5
ಆದಾಗ್ಯೂ ಸಾಯಿ ಸುದರ್ಶನ್ ಗಾಯಗೊಂಡಿರುವುದು ಟೀಂ ಇಂಡಿಯಾ ಆಯ್ಕೆಗೆ ಯಾವುದೇ ಸಮಸ್ಯೆಯನ್ನುಂಟು ಮಾಡುವುದಿಲ್ಲ. ಏಕೆಂದರೆ ಏಕದಿನ ಸರಣಿಗೆ ಅವರನ್ನು ಆಯ್ಕೆಗೆ ಪರಿಗಣಿಸುವ ಸಾಧ್ಯತೆಗಳಿರಲಿಲ್ಲ. ಆದರೆ ಸಾಯಿ ಸುದರ್ಶನ್ ಗಾಯಗೊಂಡಿರುವುದರಿಂದ ವಿಜಯ್ ಹಜಾರೆ ಟ್ರೋಫಿಯಲ್ಲಿ ಆಡುತ್ತಿರುವ ತಮಿಳುನಾಡು ತಂಡಕ್ಕೆ ದೊಡ್ಡ ಆಘಾತ ನೀಡಿದೆ.

ಆದಾಗ್ಯೂ ಸಾಯಿ ಸುದರ್ಶನ್ ಗಾಯಗೊಂಡಿರುವುದು ಟೀಂ ಇಂಡಿಯಾ ಆಯ್ಕೆಗೆ ಯಾವುದೇ ಸಮಸ್ಯೆಯನ್ನುಂಟು ಮಾಡುವುದಿಲ್ಲ. ಏಕೆಂದರೆ ಏಕದಿನ ಸರಣಿಗೆ ಅವರನ್ನು ಆಯ್ಕೆಗೆ ಪರಿಗಣಿಸುವ ಸಾಧ್ಯತೆಗಳಿರಲಿಲ್ಲ. ಆದರೆ ಸಾಯಿ ಸುದರ್ಶನ್ ಗಾಯಗೊಂಡಿರುವುದರಿಂದ ವಿಜಯ್ ಹಜಾರೆ ಟ್ರೋಫಿಯಲ್ಲಿ ಆಡುತ್ತಿರುವ ತಮಿಳುನಾಡು ತಂಡಕ್ಕೆ ದೊಡ್ಡ ಆಘಾತ ನೀಡಿದೆ.

2 / 5
ವಾಸ್ತವವಾಗಿ ಕೆಲವು ದಿನಗಳ ಹಿಂದೆ ಅಭ್ಯಾಸದ ಸಮಯದಲ್ಲಿ ಸಾಯಿ ಸುದರ್ಶನ್​ ಅವರ ಪಕ್ಕೆಲುಬುಗಳಿಗೆ ಚೆಂಡು ತಗುಲಿತ್ತು. ಇದರ ನಡುವೆ ವಿಜಯ್ ಹಜಾರೆ ಟ್ರೋಫಿಯಲ್ಲಿ ಆಡುತ್ತಿದ್ದ ಸುದರ್ಶನ್ ಮಧ್ಯಪ್ರದೇಶ ವಿರುದ್ಧದ ಪಂದ್ಯದಲ್ಲಿ ಅರ್ಧಶತಕದ ಇನ್ನಿಂಗ್ಸ್ ಕೂಡ ಆಡಿದ್ದರು. ಆದರೆ ಅದೇ ಪಂದ್ಯದಲ್ಲಿ ರನ್​ಗಾಗಿ ಓಡುವ ವೇಳೆ ಸುದರ್ಶನ್​ಗೆ ಪಕ್ಕೆಲುಬು ನೋವು ಮತ್ತಷ್ಟು ಹೆಚ್ಚಾಗಿತ್ತು.

ವಾಸ್ತವವಾಗಿ ಕೆಲವು ದಿನಗಳ ಹಿಂದೆ ಅಭ್ಯಾಸದ ಸಮಯದಲ್ಲಿ ಸಾಯಿ ಸುದರ್ಶನ್​ ಅವರ ಪಕ್ಕೆಲುಬುಗಳಿಗೆ ಚೆಂಡು ತಗುಲಿತ್ತು. ಇದರ ನಡುವೆ ವಿಜಯ್ ಹಜಾರೆ ಟ್ರೋಫಿಯಲ್ಲಿ ಆಡುತ್ತಿದ್ದ ಸುದರ್ಶನ್ ಮಧ್ಯಪ್ರದೇಶ ವಿರುದ್ಧದ ಪಂದ್ಯದಲ್ಲಿ ಅರ್ಧಶತಕದ ಇನ್ನಿಂಗ್ಸ್ ಕೂಡ ಆಡಿದ್ದರು. ಆದರೆ ಅದೇ ಪಂದ್ಯದಲ್ಲಿ ರನ್​ಗಾಗಿ ಓಡುವ ವೇಳೆ ಸುದರ್ಶನ್​ಗೆ ಪಕ್ಕೆಲುಬು ನೋವು ಮತ್ತಷ್ಟು ಹೆಚ್ಚಾಗಿತ್ತು.

3 / 5
ನೋವಿನ ನಡುವೆಯೂ ಆಟ ಮುಂದುವರೆಸಿದ್ದ ಸುದರ್ಶನ್ ಅವರನ್ನು ಪಂದ್ಯ ಮುಗಿದ ಬಳಿಕ ಬೆಂಗಳೂರಿನಲ್ಲಿರುವ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್‌ಗೆ ದಾಖಲಿಸಲಾಗಿತ್ತು. ಇದೀಗ ಸುದರ್ಶನ್ ವೈದ್ಯಕೀಯ ತಂಡದ ಮೇಲ್ವಿಚಾರಣೆಯಲಿದ್ದಾರೆ. ವರದಿಯ ಪ್ರಕಾರ, ಸುದರ್ಶನ್ ಸುಮಾರು 6 ವಾರಗಳ ಕಾಲ ಕ್ರಿಕೆಟ್​ನಿಂದ ದೂರ ಉಳಿಯಲಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ನೋವಿನ ನಡುವೆಯೂ ಆಟ ಮುಂದುವರೆಸಿದ್ದ ಸುದರ್ಶನ್ ಅವರನ್ನು ಪಂದ್ಯ ಮುಗಿದ ಬಳಿಕ ಬೆಂಗಳೂರಿನಲ್ಲಿರುವ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್‌ಗೆ ದಾಖಲಿಸಲಾಗಿತ್ತು. ಇದೀಗ ಸುದರ್ಶನ್ ವೈದ್ಯಕೀಯ ತಂಡದ ಮೇಲ್ವಿಚಾರಣೆಯಲಿದ್ದಾರೆ. ವರದಿಯ ಪ್ರಕಾರ, ಸುದರ್ಶನ್ ಸುಮಾರು 6 ವಾರಗಳ ಕಾಲ ಕ್ರಿಕೆಟ್​ನಿಂದ ದೂರ ಉಳಿಯಲಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

4 / 5
ಟೀಂ ಇಂಡಿಯಾ ಪರ ಟೆಸ್ಟ್ ಕ್ರಿಕೆಟ್​ಗೆ ಪದಾರ್ಪಣೆ ಮಾಡಿರುವ ಸುದರ್ಶನ್ ಚೇತರಿಕೆಗೆ ಸಾಕಷ್ಟು ಸಮಯಾವಕಾಶ ಸಿಗಲಿದೆ. ಏಕೆಂದರೆ ಟೀಂ ಇಂಡಿಯಾ ಪ್ರಸ್ತುತ ಯಾವುದೇ ಟೆಸ್ಟ್ ಪಂದ್ಯಗಳನ್ನು ಆಡುತ್ತಿಲ್ಲ. ಆದರೆ 2026 ರ ಐಪಿಎಲ್ ಆರಂಭಕ್ಕೂ ಮುನ್ನ ಸುದರ್ಶನ್ ಗುಣಮುಖರಾಗುತ್ತಾರಾ ಎಂಬುದನ್ನು ಕಾದುನೋಡಬೇಕಿದೆ. ಈ ಪಂದ್ಯಾವಳಿ ಮಾರ್ಚ್ ಅಂತ್ಯದಲ್ಲಿ ಪ್ರಾರಂಭವಾಗಲಿದ್ದು, ಸುದರ್ಶನ್ ಗುಜರಾತ್ ಟೈಟಾನ್ಸ್‌ ಪರ ಕಣಕ್ಕಿಳಿಯಲಿದ್ದಾರೆ.

ಟೀಂ ಇಂಡಿಯಾ ಪರ ಟೆಸ್ಟ್ ಕ್ರಿಕೆಟ್​ಗೆ ಪದಾರ್ಪಣೆ ಮಾಡಿರುವ ಸುದರ್ಶನ್ ಚೇತರಿಕೆಗೆ ಸಾಕಷ್ಟು ಸಮಯಾವಕಾಶ ಸಿಗಲಿದೆ. ಏಕೆಂದರೆ ಟೀಂ ಇಂಡಿಯಾ ಪ್ರಸ್ತುತ ಯಾವುದೇ ಟೆಸ್ಟ್ ಪಂದ್ಯಗಳನ್ನು ಆಡುತ್ತಿಲ್ಲ. ಆದರೆ 2026 ರ ಐಪಿಎಲ್ ಆರಂಭಕ್ಕೂ ಮುನ್ನ ಸುದರ್ಶನ್ ಗುಣಮುಖರಾಗುತ್ತಾರಾ ಎಂಬುದನ್ನು ಕಾದುನೋಡಬೇಕಿದೆ. ಈ ಪಂದ್ಯಾವಳಿ ಮಾರ್ಚ್ ಅಂತ್ಯದಲ್ಲಿ ಪ್ರಾರಂಭವಾಗಲಿದ್ದು, ಸುದರ್ಶನ್ ಗುಜರಾತ್ ಟೈಟಾನ್ಸ್‌ ಪರ ಕಣಕ್ಕಿಳಿಯಲಿದ್ದಾರೆ.

5 / 5
Follow Us
ಕೊಯಮತ್ತೂರಿನ ಬೇಕರಿಯಿಂದ 10,000 ರೂ. ಸಿಗರೇಟ್ ಪ್ಯಾಕೆಟ್ ಕದ್ದ ಕಳ್ಳ!
ಕೊಯಮತ್ತೂರಿನ ಬೇಕರಿಯಿಂದ 10,000 ರೂ. ಸಿಗರೇಟ್ ಪ್ಯಾಕೆಟ್ ಕದ್ದ ಕಳ್ಳ!
ಪರಿಷತ್ 5 ಸ್ಥಾನ ಗೆಲ್ಲಲು ಬಿಗ್ ಪ್ಲಾನ್, ಡಿಕೆಶಿ ತಂತ್ರಗಾರಿಕೆ ಹೇಗಿದೆ?
ಪರಿಷತ್ 5 ಸ್ಥಾನ ಗೆಲ್ಲಲು ಬಿಗ್ ಪ್ಲಾನ್, ಡಿಕೆಶಿ ತಂತ್ರಗಾರಿಕೆ ಹೇಗಿದೆ?
ಮೋದಿ ಬಹಳ ಸುಂದರ ವ್ಯಕ್ತಿ; ಗೆಳೆಯನನ್ನು ಹೊಗಳಿದ ಟ್ರಂಪ್
ಮೋದಿ ಬಹಳ ಸುಂದರ ವ್ಯಕ್ತಿ; ಗೆಳೆಯನನ್ನು ಹೊಗಳಿದ ಟ್ರಂಪ್
ವಿಧಾನಪರಿಷತ್ ಎಲೆಕ್ಷನ್: ಎಚ್​​​ಡಿಕೆ, ಡಿಕೆ ನಂಬರ್ ಗೇಮ್ ಹೇಗಿದೆ?
ವಿಧಾನಪರಿಷತ್ ಎಲೆಕ್ಷನ್: ಎಚ್​​​ಡಿಕೆ, ಡಿಕೆ ನಂಬರ್ ಗೇಮ್ ಹೇಗಿದೆ?
ಈ ವರ್ಷದ ಬಿಗ್ ಬಾಸ್ ಟಿಆರ್​ಪಿ ಬಗ್ಗೆ ನನಗೆ ಭಯ ಶುರು ಆಗಿದೆ: ತುಕಾಲಿ ಸಂತು
ಈ ವರ್ಷದ ಬಿಗ್ ಬಾಸ್ ಟಿಆರ್​ಪಿ ಬಗ್ಗೆ ನನಗೆ ಭಯ ಶುರು ಆಗಿದೆ: ತುಕಾಲಿ ಸಂತು
ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ; ಹತ್ತಾರು ಮನೆಗಳಿಗೆ ಹಾನಿ
ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ; ಹತ್ತಾರು ಮನೆಗಳಿಗೆ ಹಾನಿ
ಅಡ್ಡ ಮತದಾನದ ಭೀತಿ: ಕಾಂಗ್ರೆಸ್ ಶಾಸಕರಿಗೆ ಮತದಾನದ ತರಬೇತಿ
ಅಡ್ಡ ಮತದಾನದ ಭೀತಿ: ಕಾಂಗ್ರೆಸ್ ಶಾಸಕರಿಗೆ ಮತದಾನದ ತರಬೇತಿ
ಬಿಗ್​​ಬಾಸ್​ನಿಂದ ಜೀವನದಲ್ಲಾದ ಬದಲಾವಣೆ ಏನು: ಕರಿಬಸಪ್ಪ ಮಾತು
ಬಿಗ್​​ಬಾಸ್​ನಿಂದ ಜೀವನದಲ್ಲಾದ ಬದಲಾವಣೆ ಏನು: ಕರಿಬಸಪ್ಪ ಮಾತು
ಮೇಲ್ಮನೆ ಮೇಲಾಟ:ಕಾಂಗ್ರೆಸ್​​ ಕ್ಯಾಂಪ್​ ಸೇರಿಕೊಂಡ ಬಿಜೆಪಿ ಉಚ್ಛಾಟಿತ ಶಾಸಕ
ಮೇಲ್ಮನೆ ಮೇಲಾಟ:ಕಾಂಗ್ರೆಸ್​​ ಕ್ಯಾಂಪ್​ ಸೇರಿಕೊಂಡ ಬಿಜೆಪಿ ಉಚ್ಛಾಟಿತ ಶಾಸಕ
ಸಚಿವ ಸ್ಥಾನ ಸಂಬಂಧ ಜಮೀರ್​​ ಅಹ್ಮದ್​​ ಸ್ಫೋಟಕ ಹೇಳಿಕೆ
ಸಚಿವ ಸ್ಥಾನ ಸಂಬಂಧ ಜಮೀರ್​​ ಅಹ್ಮದ್​​ ಸ್ಫೋಟಕ ಹೇಳಿಕೆ