AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB ದಾಖಲೆ ಉಡೀಸ್ ಮಾಡಿದ CSK

IPL 2025 CSK vs GT: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2025) 67ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 20 ಓವರ್​ಗಳಲ್ಲಿ 230 ರನ್ ಕಲೆಹಾಕಿದರೆ, ಈ ಗುರಿಯನ್ನು ಬೆನ್ನತ್ತಿದ ಗುಜರಾತ್ ಟೈಟಾನ್ಸ್ ತಂಡವು ಕೇವಲ 147 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಸಿಎಸ್​ಕೆ ತಂಡ 83 ರನ್​ಗಳ ಭರ್ಜರಿ ಜಯ ಸಾಧಿಸಿದೆ.

ಝಾಹಿರ್ ಯೂಸುಫ್
|

Updated on: May 26, 2025 | 12:30 PM

Share
IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18ರ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡ ಹೊಸ ದಾಖಲೆ ಬರೆದಿದೆ. ಅದು ಕೂಡ ತನ್ನ ಸಾಂಪ್ರದಾಯಿಕ ಎದುರಾಳಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ವಿಶೇಷ ದಾಖಲೆಯೊಂದನ್ನು ಮುರಿಯುವ ಮೂಲಕ ಎಂಬುದು ವಿಶೇಷ.

IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18ರ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡ ಹೊಸ ದಾಖಲೆ ಬರೆದಿದೆ. ಅದು ಕೂಡ ತನ್ನ ಸಾಂಪ್ರದಾಯಿಕ ಎದುರಾಳಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ವಿಶೇಷ ದಾಖಲೆಯೊಂದನ್ನು ಮುರಿಯುವ ಮೂಲಕ ಎಂಬುದು ವಿಶೇಷ.

1 / 5
ಭಾನುವಾರ ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 230 ರನ್​ ಕಲೆಹಾಕಿತು. ಈ 230 ರನ್​​ಗಳೊಂದಿಗೆ ಐಪಿಎಲ್​ ಇತಿಹಾಸದಲ್ಲಿ ಅತ್ಯಧಿಕ ಬಾರಿ 200+ ಸ್ಕೋರ್​ಗಳಿಸಿದ ತಂಡವೆಂಬ ದಾಖಲೆ ಸಿಎಸ್​ಕೆ ಪಾಲಾಯಿತು.

ಭಾನುವಾರ ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 230 ರನ್​ ಕಲೆಹಾಕಿತು. ಈ 230 ರನ್​​ಗಳೊಂದಿಗೆ ಐಪಿಎಲ್​ ಇತಿಹಾಸದಲ್ಲಿ ಅತ್ಯಧಿಕ ಬಾರಿ 200+ ಸ್ಕೋರ್​ಗಳಿಸಿದ ತಂಡವೆಂಬ ದಾಖಲೆ ಸಿಎಸ್​ಕೆ ಪಾಲಾಯಿತು.

2 / 5
ಇದಕ್ಕೂ ಮುನ್ನ ಈ ವಿಶೇಷ ದಾಖಲೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಹೆಸರಿನಲ್ಲಿತ್ತು. ಆರ್​ಸಿಬಿ ತಂಡವು ಈವರೆಗೆ 268 ಪಂದ್ಯಗಳನ್ನಾಡಿದ್ದು, ಈ ವೇಳೆ 33 ಬಾರಿ 200+ ಸ್ಕೋರ್​ಗಳಿಸಿದೆ. ಈ ಮೂಲಕ ಐಪಿಎಲ್​ನಲ್ಲಿ ಅತ್ಯಧಿಕ ಬಾರಿ ಇನ್ನೂರಕ್ಕಿಂತ ಅಧಿಕ ಮೊತ್ತಗಳಿಸಿದ ತಂಡ ಎನಿಸಿಕೊಂಡಿತು.

ಇದಕ್ಕೂ ಮುನ್ನ ಈ ವಿಶೇಷ ದಾಖಲೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಹೆಸರಿನಲ್ಲಿತ್ತು. ಆರ್​ಸಿಬಿ ತಂಡವು ಈವರೆಗೆ 268 ಪಂದ್ಯಗಳನ್ನಾಡಿದ್ದು, ಈ ವೇಳೆ 33 ಬಾರಿ 200+ ಸ್ಕೋರ್​ಗಳಿಸಿದೆ. ಈ ಮೂಲಕ ಐಪಿಎಲ್​ನಲ್ಲಿ ಅತ್ಯಧಿಕ ಬಾರಿ ಇನ್ನೂರಕ್ಕಿಂತ ಅಧಿಕ ಮೊತ್ತಗಳಿಸಿದ ತಂಡ ಎನಿಸಿಕೊಂಡಿತು.

3 / 5
ಇದೀಗ ಆರ್​ಸಿಬಿ ತಂಡದ ಈ ದಾಖಲೆಯನ್ನು ಅಳಿಸಿ ಹಾಕುವಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಯಶಸ್ವಿಯಾಗಿದೆ. ಸಿಎಸ್​ಕೆ ತಂಡವು ಈವರೆಗೆ 253 ಪಂದ್ಯಗಳನ್ನಾಡಿದ್ದು, ಈ ವೇಳೆ ಒಟ್ಟು 35 ಬಾರಿ 200+ ಸ್ಕೋರ್​ಗಳಿಸಿದೆ. ಅಂದರೆ ಈ ಬಾರಿಯ ಐಪಿಎಲ್​ನಲ್ಲಿ 2 ಬಾರಿ 200ಕ್ಕಿಂತ ಅಧಿಕ ಸ್ಕೋರ್​ಗಳಿಸುವ ಮೂಲಕ ಸಿಎಸ್​ಕೆ ತಂಡವು ಆರ್​ಸಿಬಿ ತಂಡದ ಹೆಸರಿನಲ್ಲಿದ್ದ ದಾಖಲೆಯನ್ನು ಮುರಿದಿದೆ.

ಇದೀಗ ಆರ್​ಸಿಬಿ ತಂಡದ ಈ ದಾಖಲೆಯನ್ನು ಅಳಿಸಿ ಹಾಕುವಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಯಶಸ್ವಿಯಾಗಿದೆ. ಸಿಎಸ್​ಕೆ ತಂಡವು ಈವರೆಗೆ 253 ಪಂದ್ಯಗಳನ್ನಾಡಿದ್ದು, ಈ ವೇಳೆ ಒಟ್ಟು 35 ಬಾರಿ 200+ ಸ್ಕೋರ್​ಗಳಿಸಿದೆ. ಅಂದರೆ ಈ ಬಾರಿಯ ಐಪಿಎಲ್​ನಲ್ಲಿ 2 ಬಾರಿ 200ಕ್ಕಿಂತ ಅಧಿಕ ಸ್ಕೋರ್​ಗಳಿಸುವ ಮೂಲಕ ಸಿಎಸ್​ಕೆ ತಂಡವು ಆರ್​ಸಿಬಿ ತಂಡದ ಹೆಸರಿನಲ್ಲಿದ್ದ ದಾಖಲೆಯನ್ನು ಮುರಿದಿದೆ.

4 / 5
ಹಾಗೆಯೇ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ 83 ರನ್​ಗಳ ಜಯ ಸಾಧಿಸುವುದರೊಂದಿಗೆ ಐಪಿಎಲ್ ಇತಿಹಾಸದಲ್ಲಿ ಅತೀ ಹೆಚ್ಚು ಬಾರಿ 80 ಕ್ಕಿಂತ ಅಧಿಕ ರನ್​ಗಳ ಅಂತರದಿಂದ ಗೆದ್ದ ತಂಡವೆಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಆರ್​ಸಿಬಿ ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ಹೆಸರಿನಲ್ಲಿತ್ತು. ಉಭಯ ತಂಡಗಳು ಒಟ್ಟು 7 ಬಾರಿ 80 ಕ್ಕೂ ಅಧಿಕ ರನ್​ಗಳ ಅಂತರದಿಂದ ಗೆದ್ದಿದ್ದರು. ಇದೀಗ 8ನೇ ಬಾರಿ 80 ಕ್ಕಿಂತ ಅಧಿಕ ರನ್​ಗಳ ಅಂತರದಿಂದ ಜಯ ಸಾಧಿಸಿ ಚೆನ್ನೈ ಸೂಪರ್ ಕಿಂಗ್ಸ್ ಐಪಿಎಲ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದೆ.

ಹಾಗೆಯೇ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ 83 ರನ್​ಗಳ ಜಯ ಸಾಧಿಸುವುದರೊಂದಿಗೆ ಐಪಿಎಲ್ ಇತಿಹಾಸದಲ್ಲಿ ಅತೀ ಹೆಚ್ಚು ಬಾರಿ 80 ಕ್ಕಿಂತ ಅಧಿಕ ರನ್​ಗಳ ಅಂತರದಿಂದ ಗೆದ್ದ ತಂಡವೆಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಆರ್​ಸಿಬಿ ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ಹೆಸರಿನಲ್ಲಿತ್ತು. ಉಭಯ ತಂಡಗಳು ಒಟ್ಟು 7 ಬಾರಿ 80 ಕ್ಕೂ ಅಧಿಕ ರನ್​ಗಳ ಅಂತರದಿಂದ ಗೆದ್ದಿದ್ದರು. ಇದೀಗ 8ನೇ ಬಾರಿ 80 ಕ್ಕಿಂತ ಅಧಿಕ ರನ್​ಗಳ ಅಂತರದಿಂದ ಜಯ ಸಾಧಿಸಿ ಚೆನ್ನೈ ಸೂಪರ್ ಕಿಂಗ್ಸ್ ಐಪಿಎಲ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದೆ.

5 / 5
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ