AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಮೆಗಾ ಹರಾಜಿನಲ್ಲಿ ಆತನೇ ನಮ್ಮ ಟಾರ್ಗೆಟ್​…ಸಿಎಸ್​ಕೆ ತಂಡದಿಂದ ಘೋಷಣೆ

Mega Auction: ಸಿಎಸ್​ಕೆಯು ಮೊದಲ ಆಯ್ಕೆಯಾಗಿ ರವೀಂದ್ರ ಜಡೇಜಾ ಅವರನ್ನು ಆಯ್ಕೆ ಮಾಡಿಕೊಂಡಿದ್ದರೆ, 2ನೇ ಆಯ್ಕೆಯಾಗಿ ಮಹೇಂದ್ರ ಸಿಂಗ್ ಧೋನಿಯನ್ನು ಉಳಿಸಿಕೊಂಡಿದೆ. ಇನ್ನು ಮೂರನೇ ಆಟಗಾರನಾಗಿ ರುತುರಾಜ್ ಗಾಯಕ್ವಾಡ್ ಹಾಗೂ 4ನೇ ಆಟಗಾರನಾಗಿ ಮೊಯೀನ್ ಅಲಿಯನ್ನು ಉಳಿಸಿಕೊಂಡಿದೆ.

TV9 Web
| Edited By: |

Updated on: Dec 02, 2021 | 5:31 PM

Share
ಇಂಡಿಯನ್ ಪ್ರೀಮಿಯರ್ ಲೀಗ್ ಮೆಗಾ ಹರಾಜಿಗೂ ಮುನ್ನ 8 ಫ್ರಾಂಚೈಸಿಗಳು ತಮಗೆ ಬೇಕಾದ ಸ್ಟಾರ್ ಆಟಗಾರರನ್ನು ಉಳಿಸಿಕೊಂಡಿದೆ. ಇದಾಗ್ಯೂ ಕೆಲ ತಂಡಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದ ಆಟಗಾರರನ್ನು ರಿಲೀಸ್ ಮಾಡಲಾಗಿದೆ. ಅದರಲ್ಲೂ ಚೆನ್ನೈ ಸೂಪರ್ ಕಿಂಗ್ಸ್​ ಬಿಡುಗಡೆ ಮಾಡಿದ ಪಟ್ಟಿಯಲ್ಲಿ ಕೆಲ ಪ್ರಮುಖ ಆಟಗಾರರು ಇರುವುದು ವಿಶೇಷ.

ಇಂಡಿಯನ್ ಪ್ರೀಮಿಯರ್ ಲೀಗ್ ಮೆಗಾ ಹರಾಜಿಗೂ ಮುನ್ನ 8 ಫ್ರಾಂಚೈಸಿಗಳು ತಮಗೆ ಬೇಕಾದ ಸ್ಟಾರ್ ಆಟಗಾರರನ್ನು ಉಳಿಸಿಕೊಂಡಿದೆ. ಇದಾಗ್ಯೂ ಕೆಲ ತಂಡಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದ ಆಟಗಾರರನ್ನು ರಿಲೀಸ್ ಮಾಡಲಾಗಿದೆ. ಅದರಲ್ಲೂ ಚೆನ್ನೈ ಸೂಪರ್ ಕಿಂಗ್ಸ್​ ಬಿಡುಗಡೆ ಮಾಡಿದ ಪಟ್ಟಿಯಲ್ಲಿ ಕೆಲ ಪ್ರಮುಖ ಆಟಗಾರರು ಇರುವುದು ವಿಶೇಷ.

1 / 6
ಏಕೆಂದರೆ ಸಿಎಸ್​ಕೆಯು ಮೊದಲ ಆಯ್ಕೆಯಾಗಿ ರವೀಂದ್ರ ಜಡೇಜಾ ಅವರನ್ನು ಆಯ್ಕೆ ಮಾಡಿಕೊಂಡಿದ್ದರೆ, 2ನೇ ಆಯ್ಕೆಯಾಗಿ ಮಹೇಂದ್ರ ಸಿಂಗ್ ಧೋನಿಯನ್ನು ಉಳಿಸಿಕೊಂಡಿದೆ. ಇನ್ನು ಮೂರನೇ ಆಟಗಾರನಾಗಿ ರುತುರಾಜ್ ಗಾಯಕ್ವಾಡ್ ಹಾಗೂ 4ನೇ ಆಟಗಾರನಾಗಿ ಮೊಯೀನ್ ಅಲಿಯನ್ನು ಉಳಿಸಿಕೊಂಡಿದೆ.

ಏಕೆಂದರೆ ಸಿಎಸ್​ಕೆಯು ಮೊದಲ ಆಯ್ಕೆಯಾಗಿ ರವೀಂದ್ರ ಜಡೇಜಾ ಅವರನ್ನು ಆಯ್ಕೆ ಮಾಡಿಕೊಂಡಿದ್ದರೆ, 2ನೇ ಆಯ್ಕೆಯಾಗಿ ಮಹೇಂದ್ರ ಸಿಂಗ್ ಧೋನಿಯನ್ನು ಉಳಿಸಿಕೊಂಡಿದೆ. ಇನ್ನು ಮೂರನೇ ಆಟಗಾರನಾಗಿ ರುತುರಾಜ್ ಗಾಯಕ್ವಾಡ್ ಹಾಗೂ 4ನೇ ಆಟಗಾರನಾಗಿ ಮೊಯೀನ್ ಅಲಿಯನ್ನು ಉಳಿಸಿಕೊಂಡಿದೆ.

2 / 6
ಆದರೆ ನಾಲ್ಕು ಆಟಗಾರರ ರಿಟೈನ್ ಹಿನ್ನೆಲೆಯಲ್ಲಿ ತಂಡದಿಂದ ಹೊರಬಿದ್ದಿದ್ದು ಸಿಎಸ್​ಕೆ ತಂಡದ ಸ್ಟಾರ್ ಪ್ಲೇಯರ್  ಫಾಫ್ ಡುಪ್ಲೆಸಿಸ್​. ಡುಪ್ಲೆಸಿಸ್​ ಕಳೆದ ಕೆಲ ವರ್ಷಗಳಿಂದ ಚೆನ್ನೈ ಪರ ಅತ್ಯುತ್ತಮ ಪ್ರದರ್ಶನ ನೀಡುತ್ತಾ ಬಂದಿದ್ದಾರೆ. ಅದರಲ್ಲೂ ಸಿಎಸ್​ಕೆ ತಂಡದ ಆರಂಭಿಕನಾಗಿ ಅದ್ಭುತ ಪ್ರದರ್ಶನ ನೀಡಿದ್ದಾರೆ.

ಆದರೆ ನಾಲ್ಕು ಆಟಗಾರರ ರಿಟೈನ್ ಹಿನ್ನೆಲೆಯಲ್ಲಿ ತಂಡದಿಂದ ಹೊರಬಿದ್ದಿದ್ದು ಸಿಎಸ್​ಕೆ ತಂಡದ ಸ್ಟಾರ್ ಪ್ಲೇಯರ್ ಫಾಫ್ ಡುಪ್ಲೆಸಿಸ್​. ಡುಪ್ಲೆಸಿಸ್​ ಕಳೆದ ಕೆಲ ವರ್ಷಗಳಿಂದ ಚೆನ್ನೈ ಪರ ಅತ್ಯುತ್ತಮ ಪ್ರದರ್ಶನ ನೀಡುತ್ತಾ ಬಂದಿದ್ದಾರೆ. ಅದರಲ್ಲೂ ಸಿಎಸ್​ಕೆ ತಂಡದ ಆರಂಭಿಕನಾಗಿ ಅದ್ಭುತ ಪ್ರದರ್ಶನ ನೀಡಿದ್ದಾರೆ.

3 / 6
 ಇನ್ನು ಕಳೆದ ಸೀಸನ್​ನಲ್ಲಿ 16 ಪಂದ್ಯಗಳಲ್ಲಿ ಬ್ಯಾಟ್ ಬೀಸಿದ್ದ ಡುಪ್ಲೆಸಿಸ್ 633 ರನ್ ಬಾರಿಸುವ ಮೂಲಕ ಚೆನ್ನೈ ಸೂಪರ್ ಕಿಂಗ್ಸ್​ ಚಾಂಪಿಯನ್ ಪಟ್ಟ ಅಲಂಕರಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಇದಕ್ಕೂ ಮುನ್ನ 2020ರ ಸೀಸನ್​ನಲ್ಲಿ 13 ಪಂದ್ಯಗಳಲ್ಲಿ 449 ರನ್ ಕಲೆಹಾಕಿದ್ದರು. ಇದಾಗ್ಯೂ ಸಿಎಸ್​ಕೆ ತಂಡಕ್ಕೆ ಫಾಫ್​ ಡುಪ್ಲೆಸಿಸ್​ ಅವರನ್ನು ರಿಟೈನ್ ಮಾಡಿಕೊಳ್ಳಲು ಸಾಧ್ಯವಾಗಿಲ್ಲ.

ಇನ್ನು ಕಳೆದ ಸೀಸನ್​ನಲ್ಲಿ 16 ಪಂದ್ಯಗಳಲ್ಲಿ ಬ್ಯಾಟ್ ಬೀಸಿದ್ದ ಡುಪ್ಲೆಸಿಸ್ 633 ರನ್ ಬಾರಿಸುವ ಮೂಲಕ ಚೆನ್ನೈ ಸೂಪರ್ ಕಿಂಗ್ಸ್​ ಚಾಂಪಿಯನ್ ಪಟ್ಟ ಅಲಂಕರಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಇದಕ್ಕೂ ಮುನ್ನ 2020ರ ಸೀಸನ್​ನಲ್ಲಿ 13 ಪಂದ್ಯಗಳಲ್ಲಿ 449 ರನ್ ಕಲೆಹಾಕಿದ್ದರು. ಇದಾಗ್ಯೂ ಸಿಎಸ್​ಕೆ ತಂಡಕ್ಕೆ ಫಾಫ್​ ಡುಪ್ಲೆಸಿಸ್​ ಅವರನ್ನು ರಿಟೈನ್ ಮಾಡಿಕೊಳ್ಳಲು ಸಾಧ್ಯವಾಗಿಲ್ಲ.

4 / 6
 ಆದರೆ ಫಾಫ್ ಡುಪ್ಲೆಸಿಸ್​ ಅವರನ್ನು ಮತ್ತೆ ಚೆನ್ನೈ ಸೂಪರ್ ಕಿಂಗ್ಸ್ ಕೈಬಿಟ್ಟಿಲ್ಲ ಎಂಬುದನ್ನು ದೃಢಪಡಿಸಿದ್ದಾರೆ​ ಸಿಎಸ್​ಕೆ ಸಿಇಒ ಕಾಸಿ ವಿಶ್ವನಾಥನ್. ಫಾಫ್ ಅವರು ಕಳೆದ ಎರಡು ಸೀಸನ್​ಗಳಲ್ಲಿ ನಮ್ಮ ತಂಡದ ಪರ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ಅದರಲ್ಲೂ ಕಳೆದ ಬಾರಿ ತಂಡವನ್ನು ಫೈನಲ್​ಗೆ ಕೊಂಡೊಯ್ದಿದ್ದ ಆಟಗಾರ. ಹೀಗಾಗಿ ಮೆಗಾ ಹರಾಜಿನಲ್ಲಿ ನಾವು ಮತ್ತೆ ಖರೀದಿಸಲು ಎಲ್ಲಾ ಪ್ರಯತ್ನ ಮಾಡಲಿದ್ದೇವೆ ಎಂದು ತಿಳಿಸಿದ್ದಾರೆ.

ಆದರೆ ಫಾಫ್ ಡುಪ್ಲೆಸಿಸ್​ ಅವರನ್ನು ಮತ್ತೆ ಚೆನ್ನೈ ಸೂಪರ್ ಕಿಂಗ್ಸ್ ಕೈಬಿಟ್ಟಿಲ್ಲ ಎಂಬುದನ್ನು ದೃಢಪಡಿಸಿದ್ದಾರೆ​ ಸಿಎಸ್​ಕೆ ಸಿಇಒ ಕಾಸಿ ವಿಶ್ವನಾಥನ್. ಫಾಫ್ ಅವರು ಕಳೆದ ಎರಡು ಸೀಸನ್​ಗಳಲ್ಲಿ ನಮ್ಮ ತಂಡದ ಪರ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ಅದರಲ್ಲೂ ಕಳೆದ ಬಾರಿ ತಂಡವನ್ನು ಫೈನಲ್​ಗೆ ಕೊಂಡೊಯ್ದಿದ್ದ ಆಟಗಾರ. ಹೀಗಾಗಿ ಮೆಗಾ ಹರಾಜಿನಲ್ಲಿ ನಾವು ಮತ್ತೆ ಖರೀದಿಸಲು ಎಲ್ಲಾ ಪ್ರಯತ್ನ ಮಾಡಲಿದ್ದೇವೆ ಎಂದು ತಿಳಿಸಿದ್ದಾರೆ.

5 / 6
ಮೆಗಾ ಹರಾಜಿನಲ್ಲಿ ಫಾಫ್ ಡುಪ್ಲೆಸಿಸ್ ಖರೀದಿಗಾಗಿ ನಮ್ಮೆಲ್ಲಾ ಪ್ರಯತ್ನ ಮಾಡಲಿದ್ದೇವೆ. ಇದಾಗ್ಯೂ ಏನಾಗಲಿದೆ ಎಂಬುದು ಗೊತ್ತಿಲ್ಲ. ಆದರೂ ನಮ್ಮ ಪ್ರಯತ್ನವನ್ನಂತು ನಾವು ಮಾಡಲಿದ್ದೇವೆ ಎಂದು ತಿಳಿಸಿದ್ದಾರೆ. ಈ ಮೂಲಕ ಆರಂಭಿಕನಾಗಿ ಫಾಫ್ ಡುಪ್ಲೆಸಿಸ್​ ಅವರೇ ನಮ್ಮ ಮೊದಲ ಟಾರ್ಗೆಟ್ ಎಂಬುದನ್ನು ಸಿಎಸ್​ಕೆ ಸಿಇಒ ಕಾಸಿ ವಿಶ್ವನಾಥನ್ ಖಚಿತಪಡಿಸಿದ್ದಾರೆ.

ಮೆಗಾ ಹರಾಜಿನಲ್ಲಿ ಫಾಫ್ ಡುಪ್ಲೆಸಿಸ್ ಖರೀದಿಗಾಗಿ ನಮ್ಮೆಲ್ಲಾ ಪ್ರಯತ್ನ ಮಾಡಲಿದ್ದೇವೆ. ಇದಾಗ್ಯೂ ಏನಾಗಲಿದೆ ಎಂಬುದು ಗೊತ್ತಿಲ್ಲ. ಆದರೂ ನಮ್ಮ ಪ್ರಯತ್ನವನ್ನಂತು ನಾವು ಮಾಡಲಿದ್ದೇವೆ ಎಂದು ತಿಳಿಸಿದ್ದಾರೆ. ಈ ಮೂಲಕ ಆರಂಭಿಕನಾಗಿ ಫಾಫ್ ಡುಪ್ಲೆಸಿಸ್​ ಅವರೇ ನಮ್ಮ ಮೊದಲ ಟಾರ್ಗೆಟ್ ಎಂಬುದನ್ನು ಸಿಎಸ್​ಕೆ ಸಿಇಒ ಕಾಸಿ ವಿಶ್ವನಾಥನ್ ಖಚಿತಪಡಿಸಿದ್ದಾರೆ.

6 / 6
Follow Us
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್