AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಐಪಿಎಲ್​ನಿಂದ ಕ್ಯಾಪ್ಟನ್ ಔಟ್, ಚೆನ್ನೈಗೆ ಮತ್ತೆ ಧೋನಿಯೇ ನಾಯಕ

MS Dhoni Returns as CSK Captain: ರುತುರಾಜ್ ಗಾಯಕ್ವಾಡ್ ಅವರ ಗಾಯದಿಂದಾಗಿ ಮಹೇಂದ್ರ ಸಿಂಗ್ ಧೋನಿ ಮತ್ತೊಮ್ಮೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕರಾಗಿದ್ದಾರೆ. ರಾಜಸ್ಥಾನ್ ವಿರುದ್ಧದ ಪಂದ್ಯದಲ್ಲಿ ಬಲ ಮೊಣಕೈಗೆ ಗಾಯವಾಗಿದ್ದ ರುತುರಾಜ್ ಇನ್ನೂ ಎರಡು ಪಂದ್ಯಗಳನ್ನು ಆಡಿದ್ದರೂ, ಈಗ ಟೂರ್ನಿಯಿಂದ ಹೊರಗುಳಿದಿದ್ದಾರೆ. ಧೋನಿ ಅವರ ಮರಳುವಿಕೆ ಅಭಿಮಾನಿಗಳಿಗೆ ಸಿಹಿ ಸುದ್ದಿಯಾದರೆ, ರುತುರಾಜ್ ಗಾಯ ಒಂದು ಕಹಿ ಸುದ್ದಿಯಾಗಿದೆ. ಧೋನಿ ಐಪಿಎಲ್ 2025ರಲ್ಲಿ ತಂಡವನ್ನು ಮುನ್ನಡೆಸಲಿದ್ದಾರೆ.

ಪೃಥ್ವಿಶಂಕರ
|

Updated on: Apr 10, 2025 | 7:42 PM

Share
ಸಿಎಸ್​ಕೆ ಅಭಿಮಾನಿಗಳಿಗೆ ಒಂದು ಸಿಹಿ, ಮತ್ತೊಂದು ಕಹಿ ಸುದ್ದಿ ಸಿಕ್ಕಿದೆ. ಸಿಹಿ ಸುದ್ದಿ ಎಂದರೆ ಅಭಿಮಾನಿಗಳ ಆರಾಧ್ಯ ದೈವ ಮಹೇಂದ್ರ ಸಿಂಗ್ ಧೋನಿ ಮತ್ತೊಮ್ಮೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕರಾಗಿದ್ದಾರೆ. ಐಪಿಎಲ್ 2025 ರಲ್ಲಿ ಸತತ ನಾಲ್ಕು ಪಂದ್ಯಗಳಲ್ಲಿ ಸೋತಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕನನ್ನು ಬದಲಾಯಿಸಲಾಗಿದೆ.

ಸಿಎಸ್​ಕೆ ಅಭಿಮಾನಿಗಳಿಗೆ ಒಂದು ಸಿಹಿ, ಮತ್ತೊಂದು ಕಹಿ ಸುದ್ದಿ ಸಿಕ್ಕಿದೆ. ಸಿಹಿ ಸುದ್ದಿ ಎಂದರೆ ಅಭಿಮಾನಿಗಳ ಆರಾಧ್ಯ ದೈವ ಮಹೇಂದ್ರ ಸಿಂಗ್ ಧೋನಿ ಮತ್ತೊಮ್ಮೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕರಾಗಿದ್ದಾರೆ. ಐಪಿಎಲ್ 2025 ರಲ್ಲಿ ಸತತ ನಾಲ್ಕು ಪಂದ್ಯಗಳಲ್ಲಿ ಸೋತಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕನನ್ನು ಬದಲಾಯಿಸಲಾಗಿದೆ.

1 / 6
ಐಪಿಎಲ್ ಆರಂಭವಾಗಿ ಕೇವಲ 5 ಪಂದ್ಯಗಳು ನಡೆದಿರುವಾಗ ಸಿಎಸ್​ಕೆ ತನ್ನ ತಂಡದ ನಾಯಕನನ್ನು ಬದಲಿಸಿರುವುದು ಎಲ್ಲರಿಗೂ ಅಚ್ಚರಿ ತರಿಸಬಹುದು. ವಾಸ್ತವವಾಗಿ ಚೆನ್ನೈ ಫ್ರಾಂಚೈಸಿ ತನ್ನ ನಾಯಕನನ್ನು ಬದಲಿಸಲು ಕಾರಣ ತಂಡದ ಪ್ರದರ್ಶನವಲ್ಲ, ಬದಲಿಗೆ ತಂಡದ ಖಾಯಂ ನಾಯಕ ರುತುರಾಜ್​ ಗಾಯಕ್ವಾಡ್ ಅವರ ಗಾಯದ ಸಮಸ್ಯೆ.

ಐಪಿಎಲ್ ಆರಂಭವಾಗಿ ಕೇವಲ 5 ಪಂದ್ಯಗಳು ನಡೆದಿರುವಾಗ ಸಿಎಸ್​ಕೆ ತನ್ನ ತಂಡದ ನಾಯಕನನ್ನು ಬದಲಿಸಿರುವುದು ಎಲ್ಲರಿಗೂ ಅಚ್ಚರಿ ತರಿಸಬಹುದು. ವಾಸ್ತವವಾಗಿ ಚೆನ್ನೈ ಫ್ರಾಂಚೈಸಿ ತನ್ನ ನಾಯಕನನ್ನು ಬದಲಿಸಲು ಕಾರಣ ತಂಡದ ಪ್ರದರ್ಶನವಲ್ಲ, ಬದಲಿಗೆ ತಂಡದ ಖಾಯಂ ನಾಯಕ ರುತುರಾಜ್​ ಗಾಯಕ್ವಾಡ್ ಅವರ ಗಾಯದ ಸಮಸ್ಯೆ.

2 / 6
ಹೌದು.. ಗಾಯದ ಕಾರಣದಿಂದಾಗಿ ರುತುರಾಜ್ ಗಾಯಕ್ವಾಡ್ ಇಡೀ ಟೂರ್ನಿಯಿಂದ ಹೊರಬಿದಿದ್ದಾರೆ. ಹೀಗಾಗಿ ಅವರ ಸ್ಥಾನದಲ್ಲಿ ಧೋನಿ ಮತ್ತೊಮ್ಮೆ ತಂಡವನ್ನು ಮುನ್ನಡೆಸಲಿದ್ದಾರೆ. ವಾಸ್ತವವಾಗಿ 2022 ರಲ್ಲಿ ತಂಡವನ್ನು ಚಾಂಪಿಯನ್ ಮಾಡಿದ ಬಳಿಕ ಧೋನಿ ನಾಯಕತ್ವದಿಂದ ಕೆಳಗಿಳಿದಿದ್ದರು. ಇದೀಗ ಅವರು 2 ಆವೃತ್ತಿಗಳ ನಂತರ ಮತ್ತೊಮ್ಮೆ ನಾಯಕನಾಗಿ ಕಾಣಿಸಿಕೊಳ್ಳಲಿದ್ದಾರೆ.

ಹೌದು.. ಗಾಯದ ಕಾರಣದಿಂದಾಗಿ ರುತುರಾಜ್ ಗಾಯಕ್ವಾಡ್ ಇಡೀ ಟೂರ್ನಿಯಿಂದ ಹೊರಬಿದಿದ್ದಾರೆ. ಹೀಗಾಗಿ ಅವರ ಸ್ಥಾನದಲ್ಲಿ ಧೋನಿ ಮತ್ತೊಮ್ಮೆ ತಂಡವನ್ನು ಮುನ್ನಡೆಸಲಿದ್ದಾರೆ. ವಾಸ್ತವವಾಗಿ 2022 ರಲ್ಲಿ ತಂಡವನ್ನು ಚಾಂಪಿಯನ್ ಮಾಡಿದ ಬಳಿಕ ಧೋನಿ ನಾಯಕತ್ವದಿಂದ ಕೆಳಗಿಳಿದಿದ್ದರು. ಇದೀಗ ಅವರು 2 ಆವೃತ್ತಿಗಳ ನಂತರ ಮತ್ತೊಮ್ಮೆ ನಾಯಕನಾಗಿ ಕಾಣಿಸಿಕೊಳ್ಳಲಿದ್ದಾರೆ.

3 / 6
ಅಷ್ಟಕ್ಕೂ ರುತುರಾಜ್ ಗಾಯಗೊಂಡಿದ್ದು ಹೇಗೆ ಮತ್ತು ಎಲ್ಲಿ ಎಂಬುದನ್ನು ನೋಡುವುದಾದರೆ.. ಮಾರ್ಚ್ 30 ರಂದು ನಡೆದ ಪಂದ್ಯದಲ್ಲಿ ಸಿಎಸ್​ಕೆ, ರಾಜಸ್ಥಾನ್ ರಾಯಲ್ಸ್ ತಂಡವನ್ನು ಎದುರಿಸಿತ್ತು. ಈ ಪಂದ್ಯದಲ್ಲಿ ಸಿಎಸ್​ಕೆ ನಾಯಕ ರುತುರಾಜ್ ಬ್ಯಾಟಿಂಗ್‌ ಮಾಡುವ ವೇಳೆ ಎದುರಾಳಿ ತಂಡದ ವೇಗಿ ತುಷಾರ್ ದೇಶಪಾಂಡೆ ಎಸೆದ ಶಾರ್ಟ್ ಪಿಚ್ ಬಾಲ್ ಗಾಯಕ್ವಾಡ್ ಅವರ ಬಲ ಮೊಣಕೈಗೆ ಬಡಿದಿತ್ತು.

ಅಷ್ಟಕ್ಕೂ ರುತುರಾಜ್ ಗಾಯಗೊಂಡಿದ್ದು ಹೇಗೆ ಮತ್ತು ಎಲ್ಲಿ ಎಂಬುದನ್ನು ನೋಡುವುದಾದರೆ.. ಮಾರ್ಚ್ 30 ರಂದು ನಡೆದ ಪಂದ್ಯದಲ್ಲಿ ಸಿಎಸ್​ಕೆ, ರಾಜಸ್ಥಾನ್ ರಾಯಲ್ಸ್ ತಂಡವನ್ನು ಎದುರಿಸಿತ್ತು. ಈ ಪಂದ್ಯದಲ್ಲಿ ಸಿಎಸ್​ಕೆ ನಾಯಕ ರುತುರಾಜ್ ಬ್ಯಾಟಿಂಗ್‌ ಮಾಡುವ ವೇಳೆ ಎದುರಾಳಿ ತಂಡದ ವೇಗಿ ತುಷಾರ್ ದೇಶಪಾಂಡೆ ಎಸೆದ ಶಾರ್ಟ್ ಪಿಚ್ ಬಾಲ್ ಗಾಯಕ್ವಾಡ್ ಅವರ ಬಲ ಮೊಣಕೈಗೆ ಬಡಿದಿತ್ತು.

4 / 6
ಆ ಸಮಯದಲ್ಲೇ ರುತುರಾಜ್ ಬಹಳ ನೋವಿನಿಂದ ಬಳಲಿದ್ದು, ಪ್ರಸಾರದ ವೇಳೆ ಬಹಿರಂಗಗೊಂಡಿತ್ತು. ಆದಾಗ್ಯೂ ಈ ನೋವಿನಲ್ಲೂ ರುತುರಾಜ್ ತಮ್ಮ ಬ್ಯಾಟಿಂಗ್ ಮುಂದುವರೆಸಿ ಆ ಪಂದ್ಯದಲ್ಲಿ 63 ರನ್ ಕಲೆಹಾಕಿದ್ದರು. ಆದರೀಗ ಅವರ ಬಲ ಮೊಣಕೈನ ಮೂಳೆ ಮುರಿದಿದೆ ಎಂದು ವರದಿಯಾಗಿದೆ. ಹೀಗಾಗಿ ರುತುರಾಜ್ ಟೂರ್ನಿಯಿಂದ ಹೊರಗುಳಿದಿದ್ದಾರೆ.

ಆ ಸಮಯದಲ್ಲೇ ರುತುರಾಜ್ ಬಹಳ ನೋವಿನಿಂದ ಬಳಲಿದ್ದು, ಪ್ರಸಾರದ ವೇಳೆ ಬಹಿರಂಗಗೊಂಡಿತ್ತು. ಆದಾಗ್ಯೂ ಈ ನೋವಿನಲ್ಲೂ ರುತುರಾಜ್ ತಮ್ಮ ಬ್ಯಾಟಿಂಗ್ ಮುಂದುವರೆಸಿ ಆ ಪಂದ್ಯದಲ್ಲಿ 63 ರನ್ ಕಲೆಹಾಕಿದ್ದರು. ಆದರೀಗ ಅವರ ಬಲ ಮೊಣಕೈನ ಮೂಳೆ ಮುರಿದಿದೆ ಎಂದು ವರದಿಯಾಗಿದೆ. ಹೀಗಾಗಿ ರುತುರಾಜ್ ಟೂರ್ನಿಯಿಂದ ಹೊರಗುಳಿದಿದ್ದಾರೆ.

5 / 6
ಇಲ್ಲಿ ಹುಟ್ಟಿಕೊಳ್ಳುವ ಬಹುಮುಖ್ಯ ಪ್ರಶ್ನೆ ಏನೆಂದರೆ, ಗಾಯಕ್ವಾಡ್ ಗಂಭೀರ ಗಾಯದಿಂದ ಬಳಲುತ್ತಿದ್ದರೂ, ಅವರು ಇನ್ನೂ ಎರಡು ಪಂದ್ಯಗಳನ್ನು ಆಡಿದ್ದರು. ಅವರು ದೆಹಲಿ ವಿರುದ್ಧ 5 ರನ್ ಮತ್ತು ಪಂಜಾಬ್ ವಿರುದ್ಧ 1 ರನ್​ಗಳ ಇನ್ನಿಂಗ್ಸ್ ಆಡಿದ್ದರು. ಈ ಎರಡೂ ಪಂದ್ಯಗಳಲ್ಲಿ ಅವರು ಫಿಲ್ಡಿಂಗ್ ಕೂಡ ಮಾಡಿದ್ದರು. ಆದರೀಗ ಕೆಕೆಆರ್ ವಿರುದ್ಧದ ಪಂದ್ಯಕ್ಕೂ ಮೊದಲು ಅವರು ಟೂರ್ನಿಯಿಂದ ಹೊರಬಿದ್ದಿರುವುದು ಸಾಕಷ್ಟು ಪ್ರಶ್ನೆಗಳಿಗೆ ಎಡೆ ಮಾಡಿಕೊಟ್ಟಿದೆ.

ಇಲ್ಲಿ ಹುಟ್ಟಿಕೊಳ್ಳುವ ಬಹುಮುಖ್ಯ ಪ್ರಶ್ನೆ ಏನೆಂದರೆ, ಗಾಯಕ್ವಾಡ್ ಗಂಭೀರ ಗಾಯದಿಂದ ಬಳಲುತ್ತಿದ್ದರೂ, ಅವರು ಇನ್ನೂ ಎರಡು ಪಂದ್ಯಗಳನ್ನು ಆಡಿದ್ದರು. ಅವರು ದೆಹಲಿ ವಿರುದ್ಧ 5 ರನ್ ಮತ್ತು ಪಂಜಾಬ್ ವಿರುದ್ಧ 1 ರನ್​ಗಳ ಇನ್ನಿಂಗ್ಸ್ ಆಡಿದ್ದರು. ಈ ಎರಡೂ ಪಂದ್ಯಗಳಲ್ಲಿ ಅವರು ಫಿಲ್ಡಿಂಗ್ ಕೂಡ ಮಾಡಿದ್ದರು. ಆದರೀಗ ಕೆಕೆಆರ್ ವಿರುದ್ಧದ ಪಂದ್ಯಕ್ಕೂ ಮೊದಲು ಅವರು ಟೂರ್ನಿಯಿಂದ ಹೊರಬಿದ್ದಿರುವುದು ಸಾಕಷ್ಟು ಪ್ರಶ್ನೆಗಳಿಗೆ ಎಡೆ ಮಾಡಿಕೊಟ್ಟಿದೆ.

6 / 6
Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು