AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಒಂದೇ ಒಂದು ಪಂದ್ಯವನ್ನಾಡದೆ ರಾಂಚಿಗೆ ವಾಪಸ್ಸಾದ ಧೋನಿ

MS Dhoni absence: ಐಪಿಎಲ್ 2026 ರಲ್ಲಿ ಚೆನ್ನೈ ಸೂಪರ್‌ಕಿಂಗ್ಸ್ ಪ್ಲೇಆಫ್‌ನಿಂದ ಹೊರಬಿದ್ದಿದೆ. ಇದರೊಂದಿಗೆ ಅಭಿಮಾನಿಗಳಿಗೆ ಮತ್ತೊಂದು ಆಘಾತ ಎದುರಾಗಿದೆ. ಎಂಎಸ್ ಧೋನಿ ಈ ಸೀಸನ್‌ನಲ್ಲಿ ಒಂದೇ ಒಂದು ಪಂದ್ಯ ಆಡಿಲ್ಲ. ಅಂತಿಮ ಲೀಗ್ ಪಂದ್ಯದಲ್ಲೂ ಧೋನಿ ಆಡಲ್ಲ ಎಂದು ವರದಿಯಾಗಿದೆ. ತಂಡ ಈಗಾಗಲೇ ಪ್ಲೇಆಫ್‌ ರೇಸ್‌ನಿಂದ ಹೊರಬಿದ್ದಿರುವುದರಿಂದ ಧೋನಿ ರಾಂಚಿಗೆ ಮರಳಿದ್ದಾರೆ. ಅಭಿಮಾನಿಗಳಿಗೆ ಇದು ತೀವ್ರ ನಿರಾಸೆ ಮೂಡಿಸಿದೆ.

ಪೃಥ್ವಿಶಂಕರ
|

Updated on: May 20, 2026 | 8:10 PM

Share
ಐಪಿಎಲ್ 2026 ರ ಲೀಗ್ ಹಂತ ಮುಗಿಯಲು ಕೆಲವೇ ಪಂದ್ಯಗಳು ಬಾಕಿ ಇವೆ. ಅಂದರೆ ಇದರರ್ಥ ಪ್ಲೇಆಫ್‌ ಸುತ್ತಿಗೆ ಕೇವಲ 4 ತಂಡಗಳು ಮುನ್ನಡೆಯಲಿದ್ದು, ಉಳಿದ 6 ತಂಡಗಳು ಲೀಗ್‌ ಹಂತದಲ್ಲೇ ತಮ್ಮ ಪ್ರಯಾಣವನ್ನು ಮುಗಿಸಲಿವೆ. ಅಂತಹ ತಂಡಗಳಲ್ಲಿ ಚೆನ್ನೈ ಸೂಪರ್​ಕಿಂಗ್ಸ್ ತಂಡ ಕೂಡ ಒಂದಾಗಿದೆ. ಆಡಿರುವ 13 ಪಂದ್ಯಗಳಲ್ಲಿ ಕೇವಲ 6 ಪಂದ್ಯಗಳನ್ನು ಗೆದ್ದಿರುವ ಸಿಎಸ್​ಕೆ ಪ್ಲೇಆಫ್‌ ರೇಸ್​ನಿಂದ ಹೊರಬಿದ್ದಿದೆ.

ಐಪಿಎಲ್ 2026 ರ ಲೀಗ್ ಹಂತ ಮುಗಿಯಲು ಕೆಲವೇ ಪಂದ್ಯಗಳು ಬಾಕಿ ಇವೆ. ಅಂದರೆ ಇದರರ್ಥ ಪ್ಲೇಆಫ್‌ ಸುತ್ತಿಗೆ ಕೇವಲ 4 ತಂಡಗಳು ಮುನ್ನಡೆಯಲಿದ್ದು, ಉಳಿದ 6 ತಂಡಗಳು ಲೀಗ್‌ ಹಂತದಲ್ಲೇ ತಮ್ಮ ಪ್ರಯಾಣವನ್ನು ಮುಗಿಸಲಿವೆ. ಅಂತಹ ತಂಡಗಳಲ್ಲಿ ಚೆನ್ನೈ ಸೂಪರ್​ಕಿಂಗ್ಸ್ ತಂಡ ಕೂಡ ಒಂದಾಗಿದೆ. ಆಡಿರುವ 13 ಪಂದ್ಯಗಳಲ್ಲಿ ಕೇವಲ 6 ಪಂದ್ಯಗಳನ್ನು ಗೆದ್ದಿರುವ ಸಿಎಸ್​ಕೆ ಪ್ಲೇಆಫ್‌ ರೇಸ್​ನಿಂದ ಹೊರಬಿದ್ದಿದೆ.

1 / 5
ಅಭಿಮಾನಿಗಳಿಗೆ ಸಿಎಸ್​ಕೆ ಪ್ಲೇಆಫ್‌ ರೇಸ್​ನಿಂದ ಹೊರಬಿದ್ದಿರುವ ಆಘಾತದ ಜೊತೆಗೆ ತಂಡದ ಮಾಜಿ ನಾಯಕ ಎಂಎಸ್ ಧೋನಿ ಒಂದೇ ಒಂದು ಪಂದ್ಯವನ್ನು ಆಡದಿರುವುದು ಕೂಡ ಬೇಸರ ಮೂಡಿಸಿದೆ. ಲೀಗ್​ನ ಕೊನೆಯ ಪಂದ್ಯದಲ್ಲಾದರೂ ಧೋನಿ ಆಡ್ತಾರಾ ಎಂದು ಅಭಿಮಾನಿಗಳು ಕಾದು ಕುಳಿತಿದ್ದರು. ಆದರೀಗ ಹೊರಬಿದ್ದಿರುವ ಸುದ್ದಿ ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಸೆ ಮೂಡಿಸಿದೆ.

ಅಭಿಮಾನಿಗಳಿಗೆ ಸಿಎಸ್​ಕೆ ಪ್ಲೇಆಫ್‌ ರೇಸ್​ನಿಂದ ಹೊರಬಿದ್ದಿರುವ ಆಘಾತದ ಜೊತೆಗೆ ತಂಡದ ಮಾಜಿ ನಾಯಕ ಎಂಎಸ್ ಧೋನಿ ಒಂದೇ ಒಂದು ಪಂದ್ಯವನ್ನು ಆಡದಿರುವುದು ಕೂಡ ಬೇಸರ ಮೂಡಿಸಿದೆ. ಲೀಗ್​ನ ಕೊನೆಯ ಪಂದ್ಯದಲ್ಲಾದರೂ ಧೋನಿ ಆಡ್ತಾರಾ ಎಂದು ಅಭಿಮಾನಿಗಳು ಕಾದು ಕುಳಿತಿದ್ದರು. ಆದರೀಗ ಹೊರಬಿದ್ದಿರುವ ಸುದ್ದಿ ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಸೆ ಮೂಡಿಸಿದೆ.

2 / 5
2026 ರ ಐಪಿಎಲ್‌ನಲ್ಲಿ ಎಂಎಸ್ ಧೋನಿ ಆಡದೇ ಇರುವ ಸಾಧ್ಯತೆ ಹೆಚ್ಚು ಎಂದು ವರದಿಯಾಗಿದೆ. ಚೆನ್ನೈ ಸೂಪರ್ ಕಿಂಗ್ಸ್‌ನ ಅಂತಿಮ ಪಂದ್ಯ ಗುಜರಾತ್ ಟೈಟಾನ್ಸ್ ವಿರುದ್ಧ ಅಹಮದಾಬಾದ್‌ನಲ್ಲಿ ನಡೆಯಲಿದ್ದು, ಆ ಪಂದ್ಯದಲ್ಲಿ ಧೋನಿ ಆಡುವುದಿಲ್ಲ. ಧೋನಿ ಈಗಾಗಲೇ ತಂಡವನ್ನು ತೊರೆದು ರಾಂಚಿಗೆ ಅಂದರೆ ಅವರ ಮನೆಗೆ ಮರಳಿದ್ದಾರೆ ಎಂದು ವರದಿಯಾಗಿದೆ.

2026 ರ ಐಪಿಎಲ್‌ನಲ್ಲಿ ಎಂಎಸ್ ಧೋನಿ ಆಡದೇ ಇರುವ ಸಾಧ್ಯತೆ ಹೆಚ್ಚು ಎಂದು ವರದಿಯಾಗಿದೆ. ಚೆನ್ನೈ ಸೂಪರ್ ಕಿಂಗ್ಸ್‌ನ ಅಂತಿಮ ಪಂದ್ಯ ಗುಜರಾತ್ ಟೈಟಾನ್ಸ್ ವಿರುದ್ಧ ಅಹಮದಾಬಾದ್‌ನಲ್ಲಿ ನಡೆಯಲಿದ್ದು, ಆ ಪಂದ್ಯದಲ್ಲಿ ಧೋನಿ ಆಡುವುದಿಲ್ಲ. ಧೋನಿ ಈಗಾಗಲೇ ತಂಡವನ್ನು ತೊರೆದು ರಾಂಚಿಗೆ ಅಂದರೆ ಅವರ ಮನೆಗೆ ಮರಳಿದ್ದಾರೆ ಎಂದು ವರದಿಯಾಗಿದೆ.

3 / 5
ಪವಾಡವೆನಾದರೂ ನಡೆದು ಸಿಎಸ್​ಕೆ ತಂಡ ಪ್ಲೇಆಫ್‌ ತಲುಪಿದರೆ ಆಗ ಧೋನಿ ತಂಡದಲ್ಲಿ ಆಡುವ ಸಾಧ್ಯತೆಗಳಿವೆ. ಆದರೆ ಸಿಎಸ್​ಕೆ ತಂಡ ಪ್ಲೇಆಫ್‌ ತಲುಪುವುದು ಅಸಾಧ್ಯದ ಮಾತಾಗಿದೆ. ಮೇಲೆ ಹೇಳಿದಂತೆ ಈ ಆವೃತ್ತಿಯಲ್ಲಿ ಒಂದೇ ಒಂದು ಪಂದ್ಯವನ್ನು ಆಡಲಿಲ್ಲ.

ಪವಾಡವೆನಾದರೂ ನಡೆದು ಸಿಎಸ್​ಕೆ ತಂಡ ಪ್ಲೇಆಫ್‌ ತಲುಪಿದರೆ ಆಗ ಧೋನಿ ತಂಡದಲ್ಲಿ ಆಡುವ ಸಾಧ್ಯತೆಗಳಿವೆ. ಆದರೆ ಸಿಎಸ್​ಕೆ ತಂಡ ಪ್ಲೇಆಫ್‌ ತಲುಪುವುದು ಅಸಾಧ್ಯದ ಮಾತಾಗಿದೆ. ಮೇಲೆ ಹೇಳಿದಂತೆ ಈ ಆವೃತ್ತಿಯಲ್ಲಿ ಒಂದೇ ಒಂದು ಪಂದ್ಯವನ್ನು ಆಡಲಿಲ್ಲ.

4 / 5
ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಕೊನೆಯ ಪಂದ್ಯದಲ್ಲಿ ಮಾತನಾಡಿದ್ದ ಸಿಎಸ್​ಕೆ ನಾಯಕ ರುತುರಾಜ್ ಗಾಯಕ್ವಾಡ್, ಧೋನಿ ಕೊನೆಯ ಲೀಗ್ ಪಂದ್ಯದಲ್ಲಿ ಖಂಡಿತವಾಗಿಯೂ ಆಡುತ್ತಾರೆ ಎಂದಿದ್ದರು. ಆದರೀಗ ಹೊರಬಿದ್ದಿರುವ ಮಾಹಿತಿ ಪ್ರಕಾರ ಧೋನಿ ಆ ಪಂದ್ಯವನ್ನು ಆಡುವುದಿಲ್ಲ ಎನ್ನಲಾಗುತ್ತಿದೆ. ಸಧ್ಯಕ್ಕೆ ಧೋನಿ ನಿವೃತ್ತಿ ಘೋಷಿಸಿಲ್ಲವಾಗಿರುವುದರಿಂದ ಅವರು ಮುಂದಿನ ಸೀಸನ್​ನಲ್ಲಿ ಆಡುವುದನ್ನು ಕಾಣಬಹುದು.

ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಕೊನೆಯ ಪಂದ್ಯದಲ್ಲಿ ಮಾತನಾಡಿದ್ದ ಸಿಎಸ್​ಕೆ ನಾಯಕ ರುತುರಾಜ್ ಗಾಯಕ್ವಾಡ್, ಧೋನಿ ಕೊನೆಯ ಲೀಗ್ ಪಂದ್ಯದಲ್ಲಿ ಖಂಡಿತವಾಗಿಯೂ ಆಡುತ್ತಾರೆ ಎಂದಿದ್ದರು. ಆದರೀಗ ಹೊರಬಿದ್ದಿರುವ ಮಾಹಿತಿ ಪ್ರಕಾರ ಧೋನಿ ಆ ಪಂದ್ಯವನ್ನು ಆಡುವುದಿಲ್ಲ ಎನ್ನಲಾಗುತ್ತಿದೆ. ಸಧ್ಯಕ್ಕೆ ಧೋನಿ ನಿವೃತ್ತಿ ಘೋಷಿಸಿಲ್ಲವಾಗಿರುವುದರಿಂದ ಅವರು ಮುಂದಿನ ಸೀಸನ್​ನಲ್ಲಿ ಆಡುವುದನ್ನು ಕಾಣಬಹುದು.

5 / 5
Follow Us
ಏಣಿಯ ಮೇಲೆ ಬ್ಯಾಲೆನ್ಸ್, ಕ್ಯಾಪ್ಟನ್ ಆಗಲು ಏನೆಲ್ಲಾ ಸಾಹಸ: ವಿಡಿಯೋ
ಏಣಿಯ ಮೇಲೆ ಬ್ಯಾಲೆನ್ಸ್, ಕ್ಯಾಪ್ಟನ್ ಆಗಲು ಏನೆಲ್ಲಾ ಸಾಹಸ: ವಿಡಿಯೋ
ಟಿ.ನರಸೀಪುರದಲ್ಲಿ ಶೋಭಾಯಾತ್ರೆಗೆ ಪ್ರತಿಯಾಗಿ ಸೌಹಾರ್ದ ಭೀಮಯಾತ್ರೆ
ಟಿ.ನರಸೀಪುರದಲ್ಲಿ ಶೋಭಾಯಾತ್ರೆಗೆ ಪ್ರತಿಯಾಗಿ ಸೌಹಾರ್ದ ಭೀಮಯಾತ್ರೆ
ತಮ್ಮದೇ ನಟನೆ ಸಿನಿಮಾ ನೋಡಿ ಕಣ್ಣೀರು ಹಾಕಿದ ನಟಿ ಮೋನಿಷಾ: ವಿಡಿಯೋ
ತಮ್ಮದೇ ನಟನೆ ಸಿನಿಮಾ ನೋಡಿ ಕಣ್ಣೀರು ಹಾಕಿದ ನಟಿ ಮೋನಿಷಾ: ವಿಡಿಯೋ
ದಕ್ಷಿಣ ಕನ್ನಡ ಜಿಲ್ಲೆ ಹೆಸರು ಬದಲಾವಣೆಗೆ ಮುಂದಾದ ಸರ್ಕಾರ
ದಕ್ಷಿಣ ಕನ್ನಡ ಜಿಲ್ಲೆ ಹೆಸರು ಬದಲಾವಣೆಗೆ ಮುಂದಾದ ಸರ್ಕಾರ
ತುಳು 2ನೇ ಭಾಷೆಯನ್ನಾಗಿ ಘೋಷಣೆ: ಕುಣಿದು ಕುಪ್ಪಳಿಸಿದ ಶಾಸಕ ಅಶೋಕ್ ರೈ
ತುಳು 2ನೇ ಭಾಷೆಯನ್ನಾಗಿ ಘೋಷಣೆ: ಕುಣಿದು ಕುಪ್ಪಳಿಸಿದ ಶಾಸಕ ಅಶೋಕ್ ರೈ
ಆ ಕಾಲದಲ್ಲೇ ಹಿಂದಿಯವರು ಅನಂತ್ ನಾಗ್ ಬಗ್ಗೆ ಮಾತಾಡುತ್ತಿದ್ದರು: ಉಪೇಂದ್ರ
ಆ ಕಾಲದಲ್ಲೇ ಹಿಂದಿಯವರು ಅನಂತ್ ನಾಗ್ ಬಗ್ಗೆ ಮಾತಾಡುತ್ತಿದ್ದರು: ಉಪೇಂದ್ರ
ಟಿ. ನರಸಿಪುರದಲ್ಲಿ ಗಣೇಶ ಮೂರ್ತಿ ಶೋಭಾಯಾತ್ರೆ ನೇರಪ್ರಸಾರ
ಟಿ. ನರಸಿಪುರದಲ್ಲಿ ಗಣೇಶ ಮೂರ್ತಿ ಶೋಭಾಯಾತ್ರೆ ನೇರಪ್ರಸಾರ
ತುಳು ರಾಜ್ಯದ 2ನೇ ಭಾಷೆ:ಮಂಗಳೂರಿನಲ್ಲಿ ಮುಗಿಲು ಮುಟ್ಟಿದ ಸಂಭ್ರಮ
ತುಳು ರಾಜ್ಯದ 2ನೇ ಭಾಷೆ:ಮಂಗಳೂರಿನಲ್ಲಿ ಮುಗಿಲು ಮುಟ್ಟಿದ ಸಂಭ್ರಮ
ಉಪೇಂದ್ರ ಹುಟ್ಟುಹಬ್ಬದ ಸಂಭ್ರಮ; ಹೊಸ ಸಿನಿಮಾ ಪೋಸ್ಟರ್ ಬಿಡುಗಡೆ
ಉಪೇಂದ್ರ ಹುಟ್ಟುಹಬ್ಬದ ಸಂಭ್ರಮ; ಹೊಸ ಸಿನಿಮಾ ಪೋಸ್ಟರ್ ಬಿಡುಗಡೆ
ಸಚಿವ ಸಂಪುಟ ಸಭೆ ಅಂತ್ಯ: ಸಿಎಂ ಡಿಕೆ ಶಿವಕುಮಾರ್ ಸುದ್ದಿಗೋಷ್ಠಿ ನೇರಪ್ರಸಾರ
ಸಚಿವ ಸಂಪುಟ ಸಭೆ ಅಂತ್ಯ: ಸಿಎಂ ಡಿಕೆ ಶಿವಕುಮಾರ್ ಸುದ್ದಿಗೋಷ್ಠಿ ನೇರಪ್ರಸಾರ