AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹರಾಜಿನಲ್ಲೂ ಫಿಕ್ಸಿಂಗ್… CSK ಫ್ರಾಂಚೈಸಿಯ ಬಂಡವಾಳ ಬಿಚ್ಚಿಟ್ಟ ಲಲಿತ್ ಮೋದಿ

IPL 2009 ರಲ್ಲಿ ಇಂಗ್ಲೆಂಡ್ ಆಟಗಾರ ಆ್ಯಂಡ್ರ್ಯೂ ಫ್ಲಿಂಟಾಫ್ ಚೆನ್ನೈ ಸೂಪರ್ ಕಿಂಗ್ಸ್ ಪರ ಆಡಿದ್ದರು. ಆದರೆ ಇದಕ್ಕೂ ಮುನ್ನ ನಡೆದ ಹರಾಜಿನ ವೇಳೆ ಇಂಗ್ಲೆಂಡ್ ಆಟಗಾರನನ್ನು ಖರೀದಿಸದಂತೆ ಉಳಿದ ಫ್ರಾಂಚೈಸಿಗಳು ಸಿಎಸ್​​ಕೆ ಒತ್ತಡ ಹೇರಿದ ಆರೋಪ ಕೇಳಿ ಬಂದಿದೆ. ಈ ಮೂಲಕ ಸಿಎಸ್​​ಕೆ 7.5 ಕೋಟಿ ರೂ.ಗೆ ಫ್ಲಿಂಟಾಫ್ ಅವರನ್ನು ಖರೀದಿಸಿತು ಎಂದು ಲಲಿತ್ ಮೋದಿ ಹೇಳಿದ್ದಾರೆ.

ಝಾಹಿರ್ ಯೂಸುಫ್
|

Updated on:Nov 28, 2024 | 12:20 PM

Share
ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ವಿರುದ್ಧ ಇಂಡಿಯನ್ ಪ್ರೀಮಿಯರ್ ಲೀಗ್​​ನ ಮಾಜಿ ಅಧ್ಯಕ್ಷ ಲಲಿತ್ ಮೋದಿ ಆರೋಪಗಳ ಸುರಿಮಳೆಗೈದಿದ್ದಾರೆ. ಈ ಆರೋಪಗಳ ನಡುವೆ ಸಿಎಸ್​​ಕೆ ಫ್ರಾಂಚೈಸಿ ಅಂಪೈರ್​​​ಗಳನ್ನು ಫಿಕ್ಸಿಂಗ್ ಮಾಡುತ್ತಿದ್ದ ವಿಷಯವನ್ನು ಬಹಿರಂಗಪಡಿಸಿದ್ದಾರೆ. ಅದರ ಜೊತೆ ಹರಾಜಿಗೂ ಮುನ್ನ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ಮಾಡುತ್ತಿದ್ದ ಮಾಸ್ಟರ್ ಪ್ಲ್ಯಾನ್​​ಗಳನ್ನು ಸಹ ಬಿಚ್ಚಿಟ್ಟಿದ್ದಾರೆ.

ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ವಿರುದ್ಧ ಇಂಡಿಯನ್ ಪ್ರೀಮಿಯರ್ ಲೀಗ್​​ನ ಮಾಜಿ ಅಧ್ಯಕ್ಷ ಲಲಿತ್ ಮೋದಿ ಆರೋಪಗಳ ಸುರಿಮಳೆಗೈದಿದ್ದಾರೆ. ಈ ಆರೋಪಗಳ ನಡುವೆ ಸಿಎಸ್​​ಕೆ ಫ್ರಾಂಚೈಸಿ ಅಂಪೈರ್​​​ಗಳನ್ನು ಫಿಕ್ಸಿಂಗ್ ಮಾಡುತ್ತಿದ್ದ ವಿಷಯವನ್ನು ಬಹಿರಂಗಪಡಿಸಿದ್ದಾರೆ. ಅದರ ಜೊತೆ ಹರಾಜಿಗೂ ಮುನ್ನ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ಮಾಡುತ್ತಿದ್ದ ಮಾಸ್ಟರ್ ಪ್ಲ್ಯಾನ್​​ಗಳನ್ನು ಸಹ ಬಿಚ್ಚಿಟ್ಟಿದ್ದಾರೆ.

1 / 6
ರಾಜ್ ಶಾಮಣಿ ಪಾಡ್‌ಕಾಸ್ಟ್‌ನಲ್ಲಿ ಮಾತನಾಡಿದ ಲಲಿತ್ ಮೋದಿ, ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯು​ ಹರಾಜಿಗೂ ಮುನ್ನ ಕೆಲ ಆಟಗಾರರನ್ನು ಟಾರ್ಗೆಟ್ ಮಾಡುತ್ತಿದ್ದ ವಿಚಾರವನ್ನು ಬಹಿರಂಗಪಡಿಸಿದ್ದಾರೆ. 2009 ರ ಐಪಿಎಲ್ ಹರಾಜಿಗೂ ಮುನ್ನ ಇಂಗ್ಲೆಂಡ್ ಆಲ್​​ರೌಂಡರ್ ಆ್ಯಂಡ್ರೊ ಫ್ಲಿಂಟಾಫ್ ಅವರನ್ನು ಯಾವುದೇ ಫ್ರಾಂಚೈಸಿ ಖರೀದಿಸಬಾರದು ಸಿಎಸ್​​ಕೆ ಮಾಲೀಕರಾದ ಎನ್ ಶ್ರೀನಿವಾಸನ್ ತಿಳಿಸಿದ್ದರು.

ರಾಜ್ ಶಾಮಣಿ ಪಾಡ್‌ಕಾಸ್ಟ್‌ನಲ್ಲಿ ಮಾತನಾಡಿದ ಲಲಿತ್ ಮೋದಿ, ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯು​ ಹರಾಜಿಗೂ ಮುನ್ನ ಕೆಲ ಆಟಗಾರರನ್ನು ಟಾರ್ಗೆಟ್ ಮಾಡುತ್ತಿದ್ದ ವಿಚಾರವನ್ನು ಬಹಿರಂಗಪಡಿಸಿದ್ದಾರೆ. 2009 ರ ಐಪಿಎಲ್ ಹರಾಜಿಗೂ ಮುನ್ನ ಇಂಗ್ಲೆಂಡ್ ಆಲ್​​ರೌಂಡರ್ ಆ್ಯಂಡ್ರೊ ಫ್ಲಿಂಟಾಫ್ ಅವರನ್ನು ಯಾವುದೇ ಫ್ರಾಂಚೈಸಿ ಖರೀದಿಸಬಾರದು ಸಿಎಸ್​​ಕೆ ಮಾಲೀಕರಾದ ಎನ್ ಶ್ರೀನಿವಾಸನ್ ತಿಳಿಸಿದ್ದರು.

2 / 6
ಇದನ್ನು ನಾನು ಎಲ್ಲಾ ಫ್ರಾಂಚೈಸಿಗಳ ಬಳಿ ಹೇಳಿದ್ದೆ. ಅದರಂತೆ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯು ಆಂಡ್ರ್ಯೂ ಫ್ಲಿಂಟಾಫ್ ಅವರನ್ನು ಖರೀದಿಸಿದ್ದರು. ಅಂದರೆ ಇಲ್ಲಿ ಮೊದಲೇ ಬಿಡ್ ಮಾಡಬಾರದೆಂದು ಸೂಚಿಸಲಾಗುತ್ತಿತ್ತು ಎಂದು ಲಲಿತ್ ಮೋದಿ ಆರೋಪಿಸಿದ್ದಾರೆ.

ಇದನ್ನು ನಾನು ಎಲ್ಲಾ ಫ್ರಾಂಚೈಸಿಗಳ ಬಳಿ ಹೇಳಿದ್ದೆ. ಅದರಂತೆ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯು ಆಂಡ್ರ್ಯೂ ಫ್ಲಿಂಟಾಫ್ ಅವರನ್ನು ಖರೀದಿಸಿದ್ದರು. ಅಂದರೆ ಇಲ್ಲಿ ಮೊದಲೇ ಬಿಡ್ ಮಾಡಬಾರದೆಂದು ಸೂಚಿಸಲಾಗುತ್ತಿತ್ತು ಎಂದು ಲಲಿತ್ ಮೋದಿ ಆರೋಪಿಸಿದ್ದಾರೆ.

3 / 6
ಒಂದು ವೇಳೆ ನಾವು ಅಂದಿನ ಬಿಸಿಸಿಐ ಕಾರ್ಯದರ್ಶಿಯಾಗಿದ್ದ ಎನ್ ಶ್ರೀನಿವಾಸನ್ ವಿರುದ್ಧ ತಿರುಗಿನಿಂತಿದ್ದರೆ ಅವರು ಐಪಿಎಲ್ ಆಯೋಜನೆಗೊಳ್ಳಲು ಬಿಡುತ್ತಿರಲಿಲ್ಲ. ಹೀಗಾಗಿ ಸಿಎಸ್​​ಕೆ ಫ್ರಾಂಚೈಸಿಯ ಡಿಮ್ಯಾಂಡ್​​ಗೆ ತಕ್ಕಂತೆ ಆಟಗಾರರ ಬಿಡ್ಡಿಂಗ್ ನಡೆದಿದೆ ಎಂದು ಲಲಿತ್ ಮೋದಿ ಆರೋಪಿಸಿದ್ದಾರೆ.

ಒಂದು ವೇಳೆ ನಾವು ಅಂದಿನ ಬಿಸಿಸಿಐ ಕಾರ್ಯದರ್ಶಿಯಾಗಿದ್ದ ಎನ್ ಶ್ರೀನಿವಾಸನ್ ವಿರುದ್ಧ ತಿರುಗಿನಿಂತಿದ್ದರೆ ಅವರು ಐಪಿಎಲ್ ಆಯೋಜನೆಗೊಳ್ಳಲು ಬಿಡುತ್ತಿರಲಿಲ್ಲ. ಹೀಗಾಗಿ ಸಿಎಸ್​​ಕೆ ಫ್ರಾಂಚೈಸಿಯ ಡಿಮ್ಯಾಂಡ್​​ಗೆ ತಕ್ಕಂತೆ ಆಟಗಾರರ ಬಿಡ್ಡಿಂಗ್ ನಡೆದಿದೆ ಎಂದು ಲಲಿತ್ ಮೋದಿ ಆರೋಪಿಸಿದ್ದಾರೆ.

4 / 6
ಹಾಗೆಯೇ ಚೆನ್ನೈ ಸೂಪರ್ ಕಿಂಗ್ಸ್​ ಫ್ರಾಂಚೈಸಿಯು ತನ್ನ ಪಂದ್ಯಗಳಿಗೆ ಚೆನ್ನೈ ಮೂಲದ ಅಂಪೈರ್​​ಗಳನ್ನು ನೇಮಿಸಿಕೊಳ್ಳುತ್ತಿದ್ದರು. ಈ ಮೂಲಕ ಅಂಪೈರ್​​ಗಳನ್ನು ಫಿಕ್ಸ್ ಮಾಡಿಕೊಳ್ಳುತ್ತಿದ್ದರು. ಇದನ್ನು ಅಂಪೈರ್ ಫಿಕ್ಸಿಂಗ್ ಎಂದು ಕರೆಯಲಾಗುತ್ತದೆ. ಇದನ್ನು ಪ್ರಶ್ನಿಸಿದ ನನ್ನ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಮಾಲೀಕರು ತಿರುಗಿಬಿದ್ದಿದ್ದರು ಎಂದು ಲಲಿತ್ ಮೋದಿ ಹೇಳಿದ್ದಾರೆ.

ಹಾಗೆಯೇ ಚೆನ್ನೈ ಸೂಪರ್ ಕಿಂಗ್ಸ್​ ಫ್ರಾಂಚೈಸಿಯು ತನ್ನ ಪಂದ್ಯಗಳಿಗೆ ಚೆನ್ನೈ ಮೂಲದ ಅಂಪೈರ್​​ಗಳನ್ನು ನೇಮಿಸಿಕೊಳ್ಳುತ್ತಿದ್ದರು. ಈ ಮೂಲಕ ಅಂಪೈರ್​​ಗಳನ್ನು ಫಿಕ್ಸ್ ಮಾಡಿಕೊಳ್ಳುತ್ತಿದ್ದರು. ಇದನ್ನು ಅಂಪೈರ್ ಫಿಕ್ಸಿಂಗ್ ಎಂದು ಕರೆಯಲಾಗುತ್ತದೆ. ಇದನ್ನು ಪ್ರಶ್ನಿಸಿದ ನನ್ನ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಮಾಲೀಕರು ತಿರುಗಿಬಿದ್ದಿದ್ದರು ಎಂದು ಲಲಿತ್ ಮೋದಿ ಹೇಳಿದ್ದಾರೆ.

5 / 6
ಒಟ್ಟಿನಲ್ಲಿ ಸ್ಪಾಟ್ ಫಿಕ್ಸಿಂಗ್ ಆರೋಪದಡಿ 2 ವರ್ಷಗಳ ಕಾಲ ಐಪಿಎಲ್​​ನಿಂದ ಬ್ಯಾನ್ ಆಗಿದ್ದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಇದೀಗ ಅಂಪೈರ್ ಫಿಕ್ಸಿಂಗ್ ಹಾಗೂ ಹರಾಜು ಫಿಕ್ಸಿಂಗ್ ಆರೋಪಗಳು ಕೇಳಿ ಬಂದಿದ್ದು, ಈ ಆರೋಪಗಳ ಮೂಲಕ ಐಪಿಎಲ್​​ನ ಮಾಜಿ ಅಧ್ಯಕ್ಷರು ಇಂಡಿಯನ್ ಪ್ರೀಮಿಯರ್ ಲೀಗ್ ಬಗ್ಗೆ ಹೊಸ ಚರ್ಚೆಗಳನ್ನು ಹುಟ್ಟುಹಾಕಿದ್ದಾರೆ.

ಒಟ್ಟಿನಲ್ಲಿ ಸ್ಪಾಟ್ ಫಿಕ್ಸಿಂಗ್ ಆರೋಪದಡಿ 2 ವರ್ಷಗಳ ಕಾಲ ಐಪಿಎಲ್​​ನಿಂದ ಬ್ಯಾನ್ ಆಗಿದ್ದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಇದೀಗ ಅಂಪೈರ್ ಫಿಕ್ಸಿಂಗ್ ಹಾಗೂ ಹರಾಜು ಫಿಕ್ಸಿಂಗ್ ಆರೋಪಗಳು ಕೇಳಿ ಬಂದಿದ್ದು, ಈ ಆರೋಪಗಳ ಮೂಲಕ ಐಪಿಎಲ್​​ನ ಮಾಜಿ ಅಧ್ಯಕ್ಷರು ಇಂಡಿಯನ್ ಪ್ರೀಮಿಯರ್ ಲೀಗ್ ಬಗ್ಗೆ ಹೊಸ ಚರ್ಚೆಗಳನ್ನು ಹುಟ್ಟುಹಾಕಿದ್ದಾರೆ.

6 / 6

Published On - 12:20 pm, Thu, 28 November 24

ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?