AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಸಿಎಸ್​ಕೆಗೆ ಬಿಗ್ ಶಾಕ್; ಸ್ಟಾರ್ ವೇಗಿ ಟೂರ್ನಿಯಿಂದಲೇ ಔಟ್

CSK Injury Crisis: ಐಪಿಎಲ್ 2026 ಪ್ರಾರಂಭಕ್ಕೂ ಮುನ್ನ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಭಾರಿ ಆಘಾತ ಎದುರಾಗಿದೆ. ಸ್ಟಾರ್ ವೇಗಿ ನಾಥನ್ ಎಲಿಸ್ ಸ್ನಾಯು ಸೆಳೆತದಿಂದಾಗಿ ಇಡೀ ಸೀಸನ್‌ನಿಂದ ಹೊರಬಿದ್ದಿದ್ದಾರೆ. ಇದು ಸಿಎಸ್‌ಕೆ ತಂಡಕ್ಕೆ ದೊಡ್ಡ ಹಿನ್ನಡೆಯಾಗಿದ್ದು, ಪರ್ಯಾಯ ಆಟಗಾರನ ಹುಡುಕಾಟ ಆರಂಭವಾಗಿದೆ. ಎಲಿಸ್ ಗಾಯದ ಕಾರಣ ಪಂದ್ಯಾವಳಿಯಲ್ಲಿ ಭಾಗವಹಿಸಲು ಸಾಧ್ಯವಿಲ್ಲ ಎಂದು ಸ್ಪೋರ್ಟ್‌ಸ್ಟಾರ್ ವರದಿ ಮಾಡಿದೆ.

ಪೃಥ್ವಿಶಂಕರ
|

Updated on: Mar 19, 2026 | 6:55 PM

Share
2026 ರ ಐಪಿಎಲ್ ಆರಂಭಕ್ಕೂ ಮುನ್ನವೇ ಐದು ಬಾರಿಯ ಚಾಂಪಿಯನ್‌ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ದೊಡ್ಡ ಆಘಾತ ಎದುರಾಗಿದೆ. ಕಳೆದ ಕೆಲವು ಆವೃತ್ತಿಗಳಿಂದ ಉತ್ತಮ ಪ್ರದರ್ಶನ ನೀಡುವಲ್ಲಿ ಎಡವಿರುವ ಸಿಎಸ್​ಕೆ ಈ ಬಾರಿ ಉತ್ತಮ ತಂಡ ಕಟ್ಟಿಕೊಂಡು ಅಖಾಡಕ್ಕಿಳಿಯಲು ಸಜ್ಜಾಗಿತ್ತು. ಆದರೆ ಐಪಿಎಲ್ ಆರಂಭಕ್ಕೂ ಮುನ್ನವೇ ತಂಡದ ಸ್ಟಾರ್ ವೇಗಿ ಇಂಜುರಿಯಿಂದಾಗಿ ಇಡೀ ಆವೃತ್ತಿಯಿಂದಲೇ ಹೊರಬಿದ್ದಿದ್ದಾರೆ.

2026 ರ ಐಪಿಎಲ್ ಆರಂಭಕ್ಕೂ ಮುನ್ನವೇ ಐದು ಬಾರಿಯ ಚಾಂಪಿಯನ್‌ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ದೊಡ್ಡ ಆಘಾತ ಎದುರಾಗಿದೆ. ಕಳೆದ ಕೆಲವು ಆವೃತ್ತಿಗಳಿಂದ ಉತ್ತಮ ಪ್ರದರ್ಶನ ನೀಡುವಲ್ಲಿ ಎಡವಿರುವ ಸಿಎಸ್​ಕೆ ಈ ಬಾರಿ ಉತ್ತಮ ತಂಡ ಕಟ್ಟಿಕೊಂಡು ಅಖಾಡಕ್ಕಿಳಿಯಲು ಸಜ್ಜಾಗಿತ್ತು. ಆದರೆ ಐಪಿಎಲ್ ಆರಂಭಕ್ಕೂ ಮುನ್ನವೇ ತಂಡದ ಸ್ಟಾರ್ ವೇಗಿ ಇಂಜುರಿಯಿಂದಾಗಿ ಇಡೀ ಆವೃತ್ತಿಯಿಂದಲೇ ಹೊರಬಿದ್ದಿದ್ದಾರೆ.

1 / 5
ಸ್ಪೋರ್ಟ್‌ಸ್ಟಾರ್ ವರದಿಯ ಪ್ರಕಾರ, ಆಸ್ಟ್ರೇಲಿಯಾದ ವೇಗಿ ನಾಥನ್ ಎಲಿಸ್ ಮಂಡಿರಜ್ಜು ಗಾಯದಿಂದ ಬಳಲುತ್ತಿದ್ದು, ಅವರು ಪಂದ್ಯಾವಳಿ ಪ್ರಾರಂಭಕ್ಕೂ ಮುನ್ನ ಅಥವಾ ಪಂದ್ಯಾವಳಿ ನಂತರವೂ ಸಂಪೂರ್ಣವಾಗಿ ಚೇತರಿಸಿಕೊಳ್ಳುವ ಸಾಧ್ಯತೆಯಿಲ್ಲ ಎಂದು ವರದಿಯಾಗಿದೆ. ಇದರಿಂದಾಗಿ ಅವರು ಈ ಬಾರಿಯ ಐಪಿಎಲ್‌ನಲ್ಲಿ ಭಾಗವಹಿಸಲು ಸಾಧ್ಯವಾಗುವುದಿಲ್ಲ.

ಸ್ಪೋರ್ಟ್‌ಸ್ಟಾರ್ ವರದಿಯ ಪ್ರಕಾರ, ಆಸ್ಟ್ರೇಲಿಯಾದ ವೇಗಿ ನಾಥನ್ ಎಲಿಸ್ ಮಂಡಿರಜ್ಜು ಗಾಯದಿಂದ ಬಳಲುತ್ತಿದ್ದು, ಅವರು ಪಂದ್ಯಾವಳಿ ಪ್ರಾರಂಭಕ್ಕೂ ಮುನ್ನ ಅಥವಾ ಪಂದ್ಯಾವಳಿ ನಂತರವೂ ಸಂಪೂರ್ಣವಾಗಿ ಚೇತರಿಸಿಕೊಳ್ಳುವ ಸಾಧ್ಯತೆಯಿಲ್ಲ ಎಂದು ವರದಿಯಾಗಿದೆ. ಇದರಿಂದಾಗಿ ಅವರು ಈ ಬಾರಿಯ ಐಪಿಎಲ್‌ನಲ್ಲಿ ಭಾಗವಹಿಸಲು ಸಾಧ್ಯವಾಗುವುದಿಲ್ಲ.

2 / 5
ಸಿಎಸ್‌ಕೆ ಸಿಇಒ ಕಾಸಿ ವಿಶ್ವನಾಥನ್ ಅವರನ್ನು ಉಲ್ಲೇಖಿಸಿ ಸ್ಪೋರ್ಟ್‌ಸ್ಟಾರ್ ವರದಿ ಮಾಡಿದೆ. ಎಲಿಸ್ ಅವರ ಅಲಭ್ಯತೆ ತಂಡಕ್ಕೆ ದೊಡ್ಡ ಹಿನ್ನಡೆಯಾಗಿದೆ ಎಂದಿರುವ ವಿಶ್ವನಾಥನ್, ಅವರ ಬದಲಿ ಆಟಗಾರನನ್ನು ಹುಡುಕಲು ಪ್ರಾರಂಭಿಸಿರುವುದಾಗಿಯೂ ತಿಳಿಸಿದ್ದಾರೆ.

ಸಿಎಸ್‌ಕೆ ಸಿಇಒ ಕಾಸಿ ವಿಶ್ವನಾಥನ್ ಅವರನ್ನು ಉಲ್ಲೇಖಿಸಿ ಸ್ಪೋರ್ಟ್‌ಸ್ಟಾರ್ ವರದಿ ಮಾಡಿದೆ. ಎಲಿಸ್ ಅವರ ಅಲಭ್ಯತೆ ತಂಡಕ್ಕೆ ದೊಡ್ಡ ಹಿನ್ನಡೆಯಾಗಿದೆ ಎಂದಿರುವ ವಿಶ್ವನಾಥನ್, ಅವರ ಬದಲಿ ಆಟಗಾರನನ್ನು ಹುಡುಕಲು ಪ್ರಾರಂಭಿಸಿರುವುದಾಗಿಯೂ ತಿಳಿಸಿದ್ದಾರೆ.

3 / 5
ಈ ವರ್ಷದ ಆರಂಭದಿಂದಲೂ ಎಲಿಸ್ ಮಂಡಿರಜ್ಜು ಗಾಯದಿಂದ ಬಳಲುತ್ತಿದ್ದಾರೆ. ಜನವರಿಯಲ್ಲಿ ನಡೆದ ಬಿಬಿಎಲ್​ನಲ್ಲಿ ಗಾಯಕ್ಕೆ ತುತ್ತಾಗಿದ್ದ ಎಲಿಸ್, 2026 ರ ಟಿ20 ವಿಶ್ವಕಪ್‌ಗೆ ಫಿಟ್ ಆಗಿದ್ದರು. ಆಸ್ಟ್ರೇಲಿಯಾ ಪರ ನಾಲ್ಕು ಪಂದ್ಯಗಳನ್ನಾಡ ಐದು ವಿಕೆಟ್‌ಗಳನ್ನು ಕಬಳಿಸಿದ್ದರು. ಆದಾಗ್ಯೂ, ಇತ್ತೀಚೆಗೆ ಆಸ್ಟ್ರೇಲಿಯಾದ ದೇಶೀಯ ಏಕದಿನ ಪಂದ್ಯಾವಳಿಯ ಫೈನಲ್‌ನಲ್ಲಿ ಆಡಿದ್ದ ಎಲಿಸ್​ ಮತ್ತೆ ಗಾಯಕ್ಕೆ ತುತ್ತಾಗಿದ್ದಾರೆ.

ಈ ವರ್ಷದ ಆರಂಭದಿಂದಲೂ ಎಲಿಸ್ ಮಂಡಿರಜ್ಜು ಗಾಯದಿಂದ ಬಳಲುತ್ತಿದ್ದಾರೆ. ಜನವರಿಯಲ್ಲಿ ನಡೆದ ಬಿಬಿಎಲ್​ನಲ್ಲಿ ಗಾಯಕ್ಕೆ ತುತ್ತಾಗಿದ್ದ ಎಲಿಸ್, 2026 ರ ಟಿ20 ವಿಶ್ವಕಪ್‌ಗೆ ಫಿಟ್ ಆಗಿದ್ದರು. ಆಸ್ಟ್ರೇಲಿಯಾ ಪರ ನಾಲ್ಕು ಪಂದ್ಯಗಳನ್ನಾಡ ಐದು ವಿಕೆಟ್‌ಗಳನ್ನು ಕಬಳಿಸಿದ್ದರು. ಆದಾಗ್ಯೂ, ಇತ್ತೀಚೆಗೆ ಆಸ್ಟ್ರೇಲಿಯಾದ ದೇಶೀಯ ಏಕದಿನ ಪಂದ್ಯಾವಳಿಯ ಫೈನಲ್‌ನಲ್ಲಿ ಆಡಿದ್ದ ಎಲಿಸ್​ ಮತ್ತೆ ಗಾಯಕ್ಕೆ ತುತ್ತಾಗಿದ್ದಾರೆ.

4 / 5
2025 ರ ಮೆಗಾ ಹರಾಜಿನಲ್ಲಿ ಸಿಎಸ್​ಕೆ 2 ಕೋಟಿ ರೂ ನೀಡು ನಾಥನ್ ಎಲಿಸ್ ಅವರನ್ನು ತಂಡಕ್ಕೆ ಸೇರಿಸಿಕೊಂಡಿತ್ತು. ಆದಾಗ್ಯೂ, ಕಳೆದ ಐಪಿಎಲ್​ನಲ್ಲಿ ಕೇವಲ ಒಂದು ಪಂದ್ಯವನ್ನು ಮಾತ್ರ ಆಡಿದ್ದ ಎಲಿಸ್ ಒಂದು ವಿಕೆಟ್ ಪಡೆದಿದ್ದರು. ಇದರ ಹೊರತಾಗಿಯೂ, ಫ್ರಾಂಚೈಸಿ ಅವರನ್ನು ಉಳಿಸಿಕೊಂಡಿತ್ತು. ಆದರೀಗ ಅವರು ಸೀಸನ್ ಆರಂಭಕ್ಕೂ ಮುನ್ನವೇ ಮತ್ತೆ ಗಾಯಗೊಂಡಿದ್ದಾರೆ.

2025 ರ ಮೆಗಾ ಹರಾಜಿನಲ್ಲಿ ಸಿಎಸ್​ಕೆ 2 ಕೋಟಿ ರೂ ನೀಡು ನಾಥನ್ ಎಲಿಸ್ ಅವರನ್ನು ತಂಡಕ್ಕೆ ಸೇರಿಸಿಕೊಂಡಿತ್ತು. ಆದಾಗ್ಯೂ, ಕಳೆದ ಐಪಿಎಲ್​ನಲ್ಲಿ ಕೇವಲ ಒಂದು ಪಂದ್ಯವನ್ನು ಮಾತ್ರ ಆಡಿದ್ದ ಎಲಿಸ್ ಒಂದು ವಿಕೆಟ್ ಪಡೆದಿದ್ದರು. ಇದರ ಹೊರತಾಗಿಯೂ, ಫ್ರಾಂಚೈಸಿ ಅವರನ್ನು ಉಳಿಸಿಕೊಂಡಿತ್ತು. ಆದರೀಗ ಅವರು ಸೀಸನ್ ಆರಂಭಕ್ಕೂ ಮುನ್ನವೇ ಮತ್ತೆ ಗಾಯಗೊಂಡಿದ್ದಾರೆ.

5 / 5
Follow Us
ಪ್ರಜ್ವಲ್ ಅಶ್ಲೀಲ ವಿಡಿಯೋ ಕೇಸ್: JDS ಕಟ್ಟರ್ ಕಾರ್ಯಕರ್ತರೇ ಆರೋಪಿಗಳು!
ಪ್ರಜ್ವಲ್ ಅಶ್ಲೀಲ ವಿಡಿಯೋ ಕೇಸ್: JDS ಕಟ್ಟರ್ ಕಾರ್ಯಕರ್ತರೇ ಆರೋಪಿಗಳು!
'ಕೈ' ಟಿಕೆಟ್​​ ಸಿಗದಿದ್ರೆ BJPಯಿಂದ ಶಾಮನೂರು ಮೊಮ್ಮಗ ಸ್ಪರ್ಧೆ!: ಯತ್ನಾಳ್​
'ಕೈ' ಟಿಕೆಟ್​​ ಸಿಗದಿದ್ರೆ BJPಯಿಂದ ಶಾಮನೂರು ಮೊಮ್ಮಗ ಸ್ಪರ್ಧೆ!: ಯತ್ನಾಳ್​
ಇರಾನ್ ದಾಳಿಗೆ ಹೊತ್ತಿ ಉರಿದ ಕತಾರ್​ನ ಅತಿದೊಡ್ಡ ಎಲ್​ಎನ್​ಜಿ ಸ್ಥಾವರ
ಇರಾನ್ ದಾಳಿಗೆ ಹೊತ್ತಿ ಉರಿದ ಕತಾರ್​ನ ಅತಿದೊಡ್ಡ ಎಲ್​ಎನ್​ಜಿ ಸ್ಥಾವರ
ಸಿಎಂ ಹುದ್ದೆ ಖಾಲಿ ಇಲ್ಲ ಎಂಬ ವೇಣುಗೋಪಾಲ್​​ ಹೇಳಿಕೆಗೆ ಡಿಕೆಶಿ ಉತ್ತರ ನೋಡಿ
ಸಿಎಂ ಹುದ್ದೆ ಖಾಲಿ ಇಲ್ಲ ಎಂಬ ವೇಣುಗೋಪಾಲ್​​ ಹೇಳಿಕೆಗೆ ಡಿಕೆಶಿ ಉತ್ತರ ನೋಡಿ
ಸೊಸೆ ಕೈ ಮುರಿದಿದೆ ಕಷ್ಟವಾಗುತ್ತೆಂದು ರೊಟ್ಟಿ ಲಟ್ಟಿಸಿಕೊಟ್ಟ ಮಾವ
ಸೊಸೆ ಕೈ ಮುರಿದಿದೆ ಕಷ್ಟವಾಗುತ್ತೆಂದು ರೊಟ್ಟಿ ಲಟ್ಟಿಸಿಕೊಟ್ಟ ಮಾವ
ಯುಗಾದಿ ವರ್ಷ ಭವಿಷ್ಯ; ಈ ವರ್ಷ ಮೀನ ರಾಶಿಯವರಿಗೆ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಈ ವರ್ಷ ಮೀನ ರಾಶಿಯವರಿಗೆ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಈ ವರ್ಷ ಕುಂಭ ರಾಶಿಯವರಿಗೆ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಈ ವರ್ಷ ಕುಂಭ ರಾಶಿಯವರಿಗೆ ಹೇಗಿರಲಿದೆ?
ರಂಜಾನ್ ಉಪವಾಸದ ಲಾಂಗ್ ಡ್ರೈವ್ ಹೆಸರಲ್ಲಿ ಬಂದು ಅಪಾಯಕಾರಿ ವ್ಹೀಲಿಂಗ್
ರಂಜಾನ್ ಉಪವಾಸದ ಲಾಂಗ್ ಡ್ರೈವ್ ಹೆಸರಲ್ಲಿ ಬಂದು ಅಪಾಯಕಾರಿ ವ್ಹೀಲಿಂಗ್
ಸೌದೆ ಒಲೆಯಲ್ಲಿ ಸಿದ್ಧವಾಗುತ್ತಿದೆ ಬಿಸಿ ಬಿಸಿ ಹೋಳಿಗೆ!
ಸೌದೆ ಒಲೆಯಲ್ಲಿ ಸಿದ್ಧವಾಗುತ್ತಿದೆ ಬಿಸಿ ಬಿಸಿ ಹೋಳಿಗೆ!
ಹರಿತವಾದ ಆಯುಧಗಳೊಂದಿಗೆ ಬಂದು ಪೊಲೀಸರನ್ನೇ ಹೆದರಿಸಿ ಓಡಿಸಿದ ಗೂಂಡಾಗಳು
ಹರಿತವಾದ ಆಯುಧಗಳೊಂದಿಗೆ ಬಂದು ಪೊಲೀಸರನ್ನೇ ಹೆದರಿಸಿ ಓಡಿಸಿದ ಗೂಂಡಾಗಳು