AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CSK vs GT, IPL 2023 Rain: ರಣಭೀಕರ ಮಳೆಗೆ ತತ್ತರಿಸಿದ ನರೇಂದ್ರ ಮೋದಿ ಸ್ಟೇಡಿಯಂ: ಇಂದುಕೂಡ ಫೈನಲ್ ಅನುಮಾನ

Narendra Modi Stadium Rain: ಬೇಸರದ ಸಂಗತಿ ಎಂದರೆ ಐಪಿಎಲ್ 2023 ಫೈನಲ್​ನ ಮೀಸಲು ದಿನವಾದ ಇಂದುಕೂಡ ಮಳೆ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ. ಸೋಮವಾರ ಸಂಜೆ ವೇಳೆಗೆ ಮಳೆ ಸುರಿಯಲಿದೆಯಂತೆ.

Vinay Bhat
|

Updated on: May 29, 2023 | 7:20 AM

Share
16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಭಾನುವಾರ ನಡೆಯಬೇಕಿದ್ದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವಣ ಫೈನಲ್ ಪಂದ್ಯ ಮಳೆಗೆ ಕೊಚ್ಚಿ ಹೋಯಿತು. ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಸುರಿದ ರಣಭೀಕರ ಮಳೆಗೆ ಟಾಸ್ ಪ್ರಕ್ರಿಯೆ ಕೂಡ ನಡೆಸಲಾಗಿಲ್ಲ.

16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಭಾನುವಾರ ನಡೆಯಬೇಕಿದ್ದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವಣ ಫೈನಲ್ ಪಂದ್ಯ ಮಳೆಗೆ ಕೊಚ್ಚಿ ಹೋಯಿತು. ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಸುರಿದ ರಣಭೀಕರ ಮಳೆಗೆ ಟಾಸ್ ಪ್ರಕ್ರಿಯೆ ಕೂಡ ನಡೆಸಲಾಗಿಲ್ಲ.

1 / 7
ಸದ್ಯ ಪಂದ್ಯವನ್ನು ಮೀಸಲು ದಿನವಾದ ಇಂದು ಸೋಮವಾರಕ್ಕೆ ಮುಂದೂಡಲಾಗಿದೆ. ರೋಚಕ ಕಾದಾಟ ವೀಕ್ಷಿಸಲು ಭಾನುವಾರ ಬಂದಿದ್ದ 1,32,000 ಪ್ರೇಕ್ಷಕರು ನಿರಾಸೆ ಅನುಭವಿಸಿದರು. ವಿಶೇಷ ಎಂದರೆ 16 ವರ್ಷಗಳ ಐಪಿಎಲ್ ಇತಿಹಾಸದಲ್ಲಿ ಫೈನಲ್ ಪಂದ್ಯ ಮೀಸಲು ದಿನದಂದು ನಡೆಯುತ್ತಿರುವುದು ಇದೇ ಪ್ರಥಮ ಬಾರಿ.

ಸದ್ಯ ಪಂದ್ಯವನ್ನು ಮೀಸಲು ದಿನವಾದ ಇಂದು ಸೋಮವಾರಕ್ಕೆ ಮುಂದೂಡಲಾಗಿದೆ. ರೋಚಕ ಕಾದಾಟ ವೀಕ್ಷಿಸಲು ಭಾನುವಾರ ಬಂದಿದ್ದ 1,32,000 ಪ್ರೇಕ್ಷಕರು ನಿರಾಸೆ ಅನುಭವಿಸಿದರು. ವಿಶೇಷ ಎಂದರೆ 16 ವರ್ಷಗಳ ಐಪಿಎಲ್ ಇತಿಹಾಸದಲ್ಲಿ ಫೈನಲ್ ಪಂದ್ಯ ಮೀಸಲು ದಿನದಂದು ನಡೆಯುತ್ತಿರುವುದು ಇದೇ ಪ್ರಥಮ ಬಾರಿ.

2 / 7
ಭಾನುವಾರ ರಾತ್ರಿ 7 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಬೇಕಿತ್ತು. ಆದರೆ ಸಂಜೆ 6.30ರ ವೇಳೆಗೆ ಮಳೆರಾಯನ ಆಗಮನವಾಯಿತು. ಮೈದಾನ ಸಿಬ್ಬಂದಿಗಳು ಪಿಚ್‌ಗಳಿಗೆ ಹೊದಿಕೆ ಹಾಕಿದರು. 7 ಗಂಟೆ ಹೊತ್ತಿಗೆ ಗುಡುಗು ಮತ್ತು ಮಿಂಚು ಸಹಿತ ಮಳೆಯ ಆರ್ಭಟ ಹೆಚ್ಚಿದ್ದರಿಂದ ಕ್ರೀಡಾಂಗಣದಲ್ಲಿ ನೀರು ಹರಿಯಿತು.

ಭಾನುವಾರ ರಾತ್ರಿ 7 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಬೇಕಿತ್ತು. ಆದರೆ ಸಂಜೆ 6.30ರ ವೇಳೆಗೆ ಮಳೆರಾಯನ ಆಗಮನವಾಯಿತು. ಮೈದಾನ ಸಿಬ್ಬಂದಿಗಳು ಪಿಚ್‌ಗಳಿಗೆ ಹೊದಿಕೆ ಹಾಕಿದರು. 7 ಗಂಟೆ ಹೊತ್ತಿಗೆ ಗುಡುಗು ಮತ್ತು ಮಿಂಚು ಸಹಿತ ಮಳೆಯ ಆರ್ಭಟ ಹೆಚ್ಚಿದ್ದರಿಂದ ಕ್ರೀಡಾಂಗಣದಲ್ಲಿ ನೀರು ಹರಿಯಿತು.

3 / 7
ಪ್ರೇಕ್ಷಕರ ಗ್ಯಾಲರಿಯಲ್ಲಿದ್ದ ಅಭಿಮಾನಿಗಳು ಮಳೆಯಿಂದ ರಕ್ಷಿಸಿಕೊಳ್ಳಲು ಕಷ್ಟ ಪಡುತ್ತಿರುವುದು ಕಂಡುಬಂತು. ರಾತ್ರಿ 8.30 ಹೊತ್ತಿಗೆ ಮಳೆ ನಿಂತಿತು. ಅಂಪೈರ್‌ಗಳು ಮೈದಾನ ಪರಿಶೀಲಿಸಿ ಟಾಸ್ ಮಾಡುವ ನಿರ್ಧಾರ ತೆಗೆದುಕೊಂಡರು. ಇನ್ನೇನು ಟಾಸ್ ನಡೆಯುತ್ತೆ ಎಂಬೊತ್ತಿಗೆ ಪುನಃ ಮಳೆ ಸುರಿಯಲಾರಂಭಿಸಿತು.

ಪ್ರೇಕ್ಷಕರ ಗ್ಯಾಲರಿಯಲ್ಲಿದ್ದ ಅಭಿಮಾನಿಗಳು ಮಳೆಯಿಂದ ರಕ್ಷಿಸಿಕೊಳ್ಳಲು ಕಷ್ಟ ಪಡುತ್ತಿರುವುದು ಕಂಡುಬಂತು. ರಾತ್ರಿ 8.30 ಹೊತ್ತಿಗೆ ಮಳೆ ನಿಂತಿತು. ಅಂಪೈರ್‌ಗಳು ಮೈದಾನ ಪರಿಶೀಲಿಸಿ ಟಾಸ್ ಮಾಡುವ ನಿರ್ಧಾರ ತೆಗೆದುಕೊಂಡರು. ಇನ್ನೇನು ಟಾಸ್ ನಡೆಯುತ್ತೆ ಎಂಬೊತ್ತಿಗೆ ಪುನಃ ಮಳೆ ಸುರಿಯಲಾರಂಭಿಸಿತು.

4 / 7
ರಾತ್ರಿ ಸುಮಾರು 10.30ರವರೆಗೂ ಜೋರಾಗಿ ಮಳೆ ಮುಂದುವರಿಯಿತು. ಪಿಚ್‌ಗೆ ಹಾಕಿದ್ದ ಹೊದಿಕೆ ಮತ್ತು ಔಟ್‌ಫೀಲ್ಡ್‌ನಲ್ಲಿ ಸಾಕಷ್ಟು ನೀರು ನಿಂತಿತು. ಅಂತಿಮವಾಗಿ ರಾತ್ರಿ 10.55ರ ವೇಳೆಗೆ ಮ್ಯಾಚ್‌ ರೆಫರಿ ಜಾವಗಲ್‌ ಶ್ರೀನಾಥ್‌ ಮತ್ತು ಅಂಪೈರ್‌ಗಳು ಮಾತುಕತೆ ನಡೆಸಿ ಪಂದ್ಯವನ್ನು ಇಂದು ಸೋಮವಾರಕ್ಕೆ ಮುಂದೂಡಲು ನಿರ್ಧಾರ ಮಾಡಿದರು.

ರಾತ್ರಿ ಸುಮಾರು 10.30ರವರೆಗೂ ಜೋರಾಗಿ ಮಳೆ ಮುಂದುವರಿಯಿತು. ಪಿಚ್‌ಗೆ ಹಾಕಿದ್ದ ಹೊದಿಕೆ ಮತ್ತು ಔಟ್‌ಫೀಲ್ಡ್‌ನಲ್ಲಿ ಸಾಕಷ್ಟು ನೀರು ನಿಂತಿತು. ಅಂತಿಮವಾಗಿ ರಾತ್ರಿ 10.55ರ ವೇಳೆಗೆ ಮ್ಯಾಚ್‌ ರೆಫರಿ ಜಾವಗಲ್‌ ಶ್ರೀನಾಥ್‌ ಮತ್ತು ಅಂಪೈರ್‌ಗಳು ಮಾತುಕತೆ ನಡೆಸಿ ಪಂದ್ಯವನ್ನು ಇಂದು ಸೋಮವಾರಕ್ಕೆ ಮುಂದೂಡಲು ನಿರ್ಧಾರ ಮಾಡಿದರು.

5 / 7
ಬೇಸರದ ಸಂಗತಿ ಎಂದರೆ ಮೀಸಲು ದಿನವಾದ ಇಂದುಕೂಡ ಮಳೆ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ. ಸೋಮವಾರ ಸಂಜೆ ವೇಳೆಗೆ ಮಳೆ ಸುರಿಯಲಿದೆಯಂತೆ. ದಿನಪೂರ್ತಿ ಮೋಡ ಕವಿದ ವಾತಾವರಣ ಇರುತ್ತದೆ ಎಂದು ವರದಿ ಹೇಳಿದೆ. ದೇಶದ ಪ್ರಸ್ತುತ ಹವಾಮಾನ ವರದಿ ಗಮನಿಸಿದರೆ, ಯಾವುದೇ ಸಮಯದಲ್ಲಿ ಮಳೆಯಾಗಬಹುದು.

ಬೇಸರದ ಸಂಗತಿ ಎಂದರೆ ಮೀಸಲು ದಿನವಾದ ಇಂದುಕೂಡ ಮಳೆ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ. ಸೋಮವಾರ ಸಂಜೆ ವೇಳೆಗೆ ಮಳೆ ಸುರಿಯಲಿದೆಯಂತೆ. ದಿನಪೂರ್ತಿ ಮೋಡ ಕವಿದ ವಾತಾವರಣ ಇರುತ್ತದೆ ಎಂದು ವರದಿ ಹೇಳಿದೆ. ದೇಶದ ಪ್ರಸ್ತುತ ಹವಾಮಾನ ವರದಿ ಗಮನಿಸಿದರೆ, ಯಾವುದೇ ಸಮಯದಲ್ಲಿ ಮಳೆಯಾಗಬಹುದು.

6 / 7
ಒಂದು ವೇಳೆ ಇಂದಿನ ಪಂದ್ಯ ಕೂಡ ಮಳೆಯಿಂದ ಕೊಚ್ಚಿ ಹೋದರೆ ಲೀಗ್ ಹಂತದ ಪಾಯಿಂಟ್ಸ್ ಟೇಬಲ್​ ಮೂಲಕ ಚಾಂಪಿಯನ್ ತಂಡವನ್ನು ನಿರ್ಧರಿಸಲಾಗುತ್ತದೆ. ಪಾಯಿಂಟ್ಸ್​ ಟೇಬಲ್​ನಲ್ಲಿ ಅಗ್ರಸ್ಥಾನ ಅಲಂಕರಿಸಿದ ಗುಜರಾತ್ ತಂಡವನ್ನು ಚಾಂಪಿಯನ್ ಎಂದು ಘೋಷಣೆ ಮಾಡಲಾಗುತ್ತದೆ.

ಒಂದು ವೇಳೆ ಇಂದಿನ ಪಂದ್ಯ ಕೂಡ ಮಳೆಯಿಂದ ಕೊಚ್ಚಿ ಹೋದರೆ ಲೀಗ್ ಹಂತದ ಪಾಯಿಂಟ್ಸ್ ಟೇಬಲ್​ ಮೂಲಕ ಚಾಂಪಿಯನ್ ತಂಡವನ್ನು ನಿರ್ಧರಿಸಲಾಗುತ್ತದೆ. ಪಾಯಿಂಟ್ಸ್​ ಟೇಬಲ್​ನಲ್ಲಿ ಅಗ್ರಸ್ಥಾನ ಅಲಂಕರಿಸಿದ ಗುಜರಾತ್ ತಂಡವನ್ನು ಚಾಂಪಿಯನ್ ಎಂದು ಘೋಷಣೆ ಮಾಡಲಾಗುತ್ತದೆ.

7 / 7
ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ