AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CSK vs GT, IPL 2023 Rain: ರಣಭೀಕರ ಮಳೆಗೆ ತತ್ತರಿಸಿದ ನರೇಂದ್ರ ಮೋದಿ ಸ್ಟೇಡಿಯಂ: ಇಂದುಕೂಡ ಫೈನಲ್ ಅನುಮಾನ

Narendra Modi Stadium Rain: ಬೇಸರದ ಸಂಗತಿ ಎಂದರೆ ಐಪಿಎಲ್ 2023 ಫೈನಲ್​ನ ಮೀಸಲು ದಿನವಾದ ಇಂದುಕೂಡ ಮಳೆ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ. ಸೋಮವಾರ ಸಂಜೆ ವೇಳೆಗೆ ಮಳೆ ಸುರಿಯಲಿದೆಯಂತೆ.

Vinay Bhat
|

Updated on: May 29, 2023 | 7:20 AM

Share
16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಭಾನುವಾರ ನಡೆಯಬೇಕಿದ್ದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವಣ ಫೈನಲ್ ಪಂದ್ಯ ಮಳೆಗೆ ಕೊಚ್ಚಿ ಹೋಯಿತು. ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಸುರಿದ ರಣಭೀಕರ ಮಳೆಗೆ ಟಾಸ್ ಪ್ರಕ್ರಿಯೆ ಕೂಡ ನಡೆಸಲಾಗಿಲ್ಲ.

16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಭಾನುವಾರ ನಡೆಯಬೇಕಿದ್ದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವಣ ಫೈನಲ್ ಪಂದ್ಯ ಮಳೆಗೆ ಕೊಚ್ಚಿ ಹೋಯಿತು. ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಸುರಿದ ರಣಭೀಕರ ಮಳೆಗೆ ಟಾಸ್ ಪ್ರಕ್ರಿಯೆ ಕೂಡ ನಡೆಸಲಾಗಿಲ್ಲ.

1 / 7
ಸದ್ಯ ಪಂದ್ಯವನ್ನು ಮೀಸಲು ದಿನವಾದ ಇಂದು ಸೋಮವಾರಕ್ಕೆ ಮುಂದೂಡಲಾಗಿದೆ. ರೋಚಕ ಕಾದಾಟ ವೀಕ್ಷಿಸಲು ಭಾನುವಾರ ಬಂದಿದ್ದ 1,32,000 ಪ್ರೇಕ್ಷಕರು ನಿರಾಸೆ ಅನುಭವಿಸಿದರು. ವಿಶೇಷ ಎಂದರೆ 16 ವರ್ಷಗಳ ಐಪಿಎಲ್ ಇತಿಹಾಸದಲ್ಲಿ ಫೈನಲ್ ಪಂದ್ಯ ಮೀಸಲು ದಿನದಂದು ನಡೆಯುತ್ತಿರುವುದು ಇದೇ ಪ್ರಥಮ ಬಾರಿ.

ಸದ್ಯ ಪಂದ್ಯವನ್ನು ಮೀಸಲು ದಿನವಾದ ಇಂದು ಸೋಮವಾರಕ್ಕೆ ಮುಂದೂಡಲಾಗಿದೆ. ರೋಚಕ ಕಾದಾಟ ವೀಕ್ಷಿಸಲು ಭಾನುವಾರ ಬಂದಿದ್ದ 1,32,000 ಪ್ರೇಕ್ಷಕರು ನಿರಾಸೆ ಅನುಭವಿಸಿದರು. ವಿಶೇಷ ಎಂದರೆ 16 ವರ್ಷಗಳ ಐಪಿಎಲ್ ಇತಿಹಾಸದಲ್ಲಿ ಫೈನಲ್ ಪಂದ್ಯ ಮೀಸಲು ದಿನದಂದು ನಡೆಯುತ್ತಿರುವುದು ಇದೇ ಪ್ರಥಮ ಬಾರಿ.

2 / 7
ಭಾನುವಾರ ರಾತ್ರಿ 7 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಬೇಕಿತ್ತು. ಆದರೆ ಸಂಜೆ 6.30ರ ವೇಳೆಗೆ ಮಳೆರಾಯನ ಆಗಮನವಾಯಿತು. ಮೈದಾನ ಸಿಬ್ಬಂದಿಗಳು ಪಿಚ್‌ಗಳಿಗೆ ಹೊದಿಕೆ ಹಾಕಿದರು. 7 ಗಂಟೆ ಹೊತ್ತಿಗೆ ಗುಡುಗು ಮತ್ತು ಮಿಂಚು ಸಹಿತ ಮಳೆಯ ಆರ್ಭಟ ಹೆಚ್ಚಿದ್ದರಿಂದ ಕ್ರೀಡಾಂಗಣದಲ್ಲಿ ನೀರು ಹರಿಯಿತು.

ಭಾನುವಾರ ರಾತ್ರಿ 7 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಬೇಕಿತ್ತು. ಆದರೆ ಸಂಜೆ 6.30ರ ವೇಳೆಗೆ ಮಳೆರಾಯನ ಆಗಮನವಾಯಿತು. ಮೈದಾನ ಸಿಬ್ಬಂದಿಗಳು ಪಿಚ್‌ಗಳಿಗೆ ಹೊದಿಕೆ ಹಾಕಿದರು. 7 ಗಂಟೆ ಹೊತ್ತಿಗೆ ಗುಡುಗು ಮತ್ತು ಮಿಂಚು ಸಹಿತ ಮಳೆಯ ಆರ್ಭಟ ಹೆಚ್ಚಿದ್ದರಿಂದ ಕ್ರೀಡಾಂಗಣದಲ್ಲಿ ನೀರು ಹರಿಯಿತು.

3 / 7
ಪ್ರೇಕ್ಷಕರ ಗ್ಯಾಲರಿಯಲ್ಲಿದ್ದ ಅಭಿಮಾನಿಗಳು ಮಳೆಯಿಂದ ರಕ್ಷಿಸಿಕೊಳ್ಳಲು ಕಷ್ಟ ಪಡುತ್ತಿರುವುದು ಕಂಡುಬಂತು. ರಾತ್ರಿ 8.30 ಹೊತ್ತಿಗೆ ಮಳೆ ನಿಂತಿತು. ಅಂಪೈರ್‌ಗಳು ಮೈದಾನ ಪರಿಶೀಲಿಸಿ ಟಾಸ್ ಮಾಡುವ ನಿರ್ಧಾರ ತೆಗೆದುಕೊಂಡರು. ಇನ್ನೇನು ಟಾಸ್ ನಡೆಯುತ್ತೆ ಎಂಬೊತ್ತಿಗೆ ಪುನಃ ಮಳೆ ಸುರಿಯಲಾರಂಭಿಸಿತು.

ಪ್ರೇಕ್ಷಕರ ಗ್ಯಾಲರಿಯಲ್ಲಿದ್ದ ಅಭಿಮಾನಿಗಳು ಮಳೆಯಿಂದ ರಕ್ಷಿಸಿಕೊಳ್ಳಲು ಕಷ್ಟ ಪಡುತ್ತಿರುವುದು ಕಂಡುಬಂತು. ರಾತ್ರಿ 8.30 ಹೊತ್ತಿಗೆ ಮಳೆ ನಿಂತಿತು. ಅಂಪೈರ್‌ಗಳು ಮೈದಾನ ಪರಿಶೀಲಿಸಿ ಟಾಸ್ ಮಾಡುವ ನಿರ್ಧಾರ ತೆಗೆದುಕೊಂಡರು. ಇನ್ನೇನು ಟಾಸ್ ನಡೆಯುತ್ತೆ ಎಂಬೊತ್ತಿಗೆ ಪುನಃ ಮಳೆ ಸುರಿಯಲಾರಂಭಿಸಿತು.

4 / 7
ರಾತ್ರಿ ಸುಮಾರು 10.30ರವರೆಗೂ ಜೋರಾಗಿ ಮಳೆ ಮುಂದುವರಿಯಿತು. ಪಿಚ್‌ಗೆ ಹಾಕಿದ್ದ ಹೊದಿಕೆ ಮತ್ತು ಔಟ್‌ಫೀಲ್ಡ್‌ನಲ್ಲಿ ಸಾಕಷ್ಟು ನೀರು ನಿಂತಿತು. ಅಂತಿಮವಾಗಿ ರಾತ್ರಿ 10.55ರ ವೇಳೆಗೆ ಮ್ಯಾಚ್‌ ರೆಫರಿ ಜಾವಗಲ್‌ ಶ್ರೀನಾಥ್‌ ಮತ್ತು ಅಂಪೈರ್‌ಗಳು ಮಾತುಕತೆ ನಡೆಸಿ ಪಂದ್ಯವನ್ನು ಇಂದು ಸೋಮವಾರಕ್ಕೆ ಮುಂದೂಡಲು ನಿರ್ಧಾರ ಮಾಡಿದರು.

ರಾತ್ರಿ ಸುಮಾರು 10.30ರವರೆಗೂ ಜೋರಾಗಿ ಮಳೆ ಮುಂದುವರಿಯಿತು. ಪಿಚ್‌ಗೆ ಹಾಕಿದ್ದ ಹೊದಿಕೆ ಮತ್ತು ಔಟ್‌ಫೀಲ್ಡ್‌ನಲ್ಲಿ ಸಾಕಷ್ಟು ನೀರು ನಿಂತಿತು. ಅಂತಿಮವಾಗಿ ರಾತ್ರಿ 10.55ರ ವೇಳೆಗೆ ಮ್ಯಾಚ್‌ ರೆಫರಿ ಜಾವಗಲ್‌ ಶ್ರೀನಾಥ್‌ ಮತ್ತು ಅಂಪೈರ್‌ಗಳು ಮಾತುಕತೆ ನಡೆಸಿ ಪಂದ್ಯವನ್ನು ಇಂದು ಸೋಮವಾರಕ್ಕೆ ಮುಂದೂಡಲು ನಿರ್ಧಾರ ಮಾಡಿದರು.

5 / 7
ಬೇಸರದ ಸಂಗತಿ ಎಂದರೆ ಮೀಸಲು ದಿನವಾದ ಇಂದುಕೂಡ ಮಳೆ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ. ಸೋಮವಾರ ಸಂಜೆ ವೇಳೆಗೆ ಮಳೆ ಸುರಿಯಲಿದೆಯಂತೆ. ದಿನಪೂರ್ತಿ ಮೋಡ ಕವಿದ ವಾತಾವರಣ ಇರುತ್ತದೆ ಎಂದು ವರದಿ ಹೇಳಿದೆ. ದೇಶದ ಪ್ರಸ್ತುತ ಹವಾಮಾನ ವರದಿ ಗಮನಿಸಿದರೆ, ಯಾವುದೇ ಸಮಯದಲ್ಲಿ ಮಳೆಯಾಗಬಹುದು.

ಬೇಸರದ ಸಂಗತಿ ಎಂದರೆ ಮೀಸಲು ದಿನವಾದ ಇಂದುಕೂಡ ಮಳೆ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ. ಸೋಮವಾರ ಸಂಜೆ ವೇಳೆಗೆ ಮಳೆ ಸುರಿಯಲಿದೆಯಂತೆ. ದಿನಪೂರ್ತಿ ಮೋಡ ಕವಿದ ವಾತಾವರಣ ಇರುತ್ತದೆ ಎಂದು ವರದಿ ಹೇಳಿದೆ. ದೇಶದ ಪ್ರಸ್ತುತ ಹವಾಮಾನ ವರದಿ ಗಮನಿಸಿದರೆ, ಯಾವುದೇ ಸಮಯದಲ್ಲಿ ಮಳೆಯಾಗಬಹುದು.

6 / 7
ಒಂದು ವೇಳೆ ಇಂದಿನ ಪಂದ್ಯ ಕೂಡ ಮಳೆಯಿಂದ ಕೊಚ್ಚಿ ಹೋದರೆ ಲೀಗ್ ಹಂತದ ಪಾಯಿಂಟ್ಸ್ ಟೇಬಲ್​ ಮೂಲಕ ಚಾಂಪಿಯನ್ ತಂಡವನ್ನು ನಿರ್ಧರಿಸಲಾಗುತ್ತದೆ. ಪಾಯಿಂಟ್ಸ್​ ಟೇಬಲ್​ನಲ್ಲಿ ಅಗ್ರಸ್ಥಾನ ಅಲಂಕರಿಸಿದ ಗುಜರಾತ್ ತಂಡವನ್ನು ಚಾಂಪಿಯನ್ ಎಂದು ಘೋಷಣೆ ಮಾಡಲಾಗುತ್ತದೆ.

ಒಂದು ವೇಳೆ ಇಂದಿನ ಪಂದ್ಯ ಕೂಡ ಮಳೆಯಿಂದ ಕೊಚ್ಚಿ ಹೋದರೆ ಲೀಗ್ ಹಂತದ ಪಾಯಿಂಟ್ಸ್ ಟೇಬಲ್​ ಮೂಲಕ ಚಾಂಪಿಯನ್ ತಂಡವನ್ನು ನಿರ್ಧರಿಸಲಾಗುತ್ತದೆ. ಪಾಯಿಂಟ್ಸ್​ ಟೇಬಲ್​ನಲ್ಲಿ ಅಗ್ರಸ್ಥಾನ ಅಲಂಕರಿಸಿದ ಗುಜರಾತ್ ತಂಡವನ್ನು ಚಾಂಪಿಯನ್ ಎಂದು ಘೋಷಣೆ ಮಾಡಲಾಗುತ್ತದೆ.

7 / 7
Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ