AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CSK vs GT, IPL 2023 Rain: ರಣಭೀಕರ ಮಳೆಗೆ ತತ್ತರಿಸಿದ ನರೇಂದ್ರ ಮೋದಿ ಸ್ಟೇಡಿಯಂ: ಇಂದುಕೂಡ ಫೈನಲ್ ಅನುಮಾನ

Narendra Modi Stadium Rain: ಬೇಸರದ ಸಂಗತಿ ಎಂದರೆ ಐಪಿಎಲ್ 2023 ಫೈನಲ್​ನ ಮೀಸಲು ದಿನವಾದ ಇಂದುಕೂಡ ಮಳೆ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ. ಸೋಮವಾರ ಸಂಜೆ ವೇಳೆಗೆ ಮಳೆ ಸುರಿಯಲಿದೆಯಂತೆ.

Vinay Bhat
|

Updated on: May 29, 2023 | 7:20 AM

Share
16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಭಾನುವಾರ ನಡೆಯಬೇಕಿದ್ದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವಣ ಫೈನಲ್ ಪಂದ್ಯ ಮಳೆಗೆ ಕೊಚ್ಚಿ ಹೋಯಿತು. ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಸುರಿದ ರಣಭೀಕರ ಮಳೆಗೆ ಟಾಸ್ ಪ್ರಕ್ರಿಯೆ ಕೂಡ ನಡೆಸಲಾಗಿಲ್ಲ.

16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಭಾನುವಾರ ನಡೆಯಬೇಕಿದ್ದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವಣ ಫೈನಲ್ ಪಂದ್ಯ ಮಳೆಗೆ ಕೊಚ್ಚಿ ಹೋಯಿತು. ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಸುರಿದ ರಣಭೀಕರ ಮಳೆಗೆ ಟಾಸ್ ಪ್ರಕ್ರಿಯೆ ಕೂಡ ನಡೆಸಲಾಗಿಲ್ಲ.

1 / 7
ಸದ್ಯ ಪಂದ್ಯವನ್ನು ಮೀಸಲು ದಿನವಾದ ಇಂದು ಸೋಮವಾರಕ್ಕೆ ಮುಂದೂಡಲಾಗಿದೆ. ರೋಚಕ ಕಾದಾಟ ವೀಕ್ಷಿಸಲು ಭಾನುವಾರ ಬಂದಿದ್ದ 1,32,000 ಪ್ರೇಕ್ಷಕರು ನಿರಾಸೆ ಅನುಭವಿಸಿದರು. ವಿಶೇಷ ಎಂದರೆ 16 ವರ್ಷಗಳ ಐಪಿಎಲ್ ಇತಿಹಾಸದಲ್ಲಿ ಫೈನಲ್ ಪಂದ್ಯ ಮೀಸಲು ದಿನದಂದು ನಡೆಯುತ್ತಿರುವುದು ಇದೇ ಪ್ರಥಮ ಬಾರಿ.

ಸದ್ಯ ಪಂದ್ಯವನ್ನು ಮೀಸಲು ದಿನವಾದ ಇಂದು ಸೋಮವಾರಕ್ಕೆ ಮುಂದೂಡಲಾಗಿದೆ. ರೋಚಕ ಕಾದಾಟ ವೀಕ್ಷಿಸಲು ಭಾನುವಾರ ಬಂದಿದ್ದ 1,32,000 ಪ್ರೇಕ್ಷಕರು ನಿರಾಸೆ ಅನುಭವಿಸಿದರು. ವಿಶೇಷ ಎಂದರೆ 16 ವರ್ಷಗಳ ಐಪಿಎಲ್ ಇತಿಹಾಸದಲ್ಲಿ ಫೈನಲ್ ಪಂದ್ಯ ಮೀಸಲು ದಿನದಂದು ನಡೆಯುತ್ತಿರುವುದು ಇದೇ ಪ್ರಥಮ ಬಾರಿ.

2 / 7
ಭಾನುವಾರ ರಾತ್ರಿ 7 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಬೇಕಿತ್ತು. ಆದರೆ ಸಂಜೆ 6.30ರ ವೇಳೆಗೆ ಮಳೆರಾಯನ ಆಗಮನವಾಯಿತು. ಮೈದಾನ ಸಿಬ್ಬಂದಿಗಳು ಪಿಚ್‌ಗಳಿಗೆ ಹೊದಿಕೆ ಹಾಕಿದರು. 7 ಗಂಟೆ ಹೊತ್ತಿಗೆ ಗುಡುಗು ಮತ್ತು ಮಿಂಚು ಸಹಿತ ಮಳೆಯ ಆರ್ಭಟ ಹೆಚ್ಚಿದ್ದರಿಂದ ಕ್ರೀಡಾಂಗಣದಲ್ಲಿ ನೀರು ಹರಿಯಿತು.

ಭಾನುವಾರ ರಾತ್ರಿ 7 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಬೇಕಿತ್ತು. ಆದರೆ ಸಂಜೆ 6.30ರ ವೇಳೆಗೆ ಮಳೆರಾಯನ ಆಗಮನವಾಯಿತು. ಮೈದಾನ ಸಿಬ್ಬಂದಿಗಳು ಪಿಚ್‌ಗಳಿಗೆ ಹೊದಿಕೆ ಹಾಕಿದರು. 7 ಗಂಟೆ ಹೊತ್ತಿಗೆ ಗುಡುಗು ಮತ್ತು ಮಿಂಚು ಸಹಿತ ಮಳೆಯ ಆರ್ಭಟ ಹೆಚ್ಚಿದ್ದರಿಂದ ಕ್ರೀಡಾಂಗಣದಲ್ಲಿ ನೀರು ಹರಿಯಿತು.

3 / 7
ಪ್ರೇಕ್ಷಕರ ಗ್ಯಾಲರಿಯಲ್ಲಿದ್ದ ಅಭಿಮಾನಿಗಳು ಮಳೆಯಿಂದ ರಕ್ಷಿಸಿಕೊಳ್ಳಲು ಕಷ್ಟ ಪಡುತ್ತಿರುವುದು ಕಂಡುಬಂತು. ರಾತ್ರಿ 8.30 ಹೊತ್ತಿಗೆ ಮಳೆ ನಿಂತಿತು. ಅಂಪೈರ್‌ಗಳು ಮೈದಾನ ಪರಿಶೀಲಿಸಿ ಟಾಸ್ ಮಾಡುವ ನಿರ್ಧಾರ ತೆಗೆದುಕೊಂಡರು. ಇನ್ನೇನು ಟಾಸ್ ನಡೆಯುತ್ತೆ ಎಂಬೊತ್ತಿಗೆ ಪುನಃ ಮಳೆ ಸುರಿಯಲಾರಂಭಿಸಿತು.

ಪ್ರೇಕ್ಷಕರ ಗ್ಯಾಲರಿಯಲ್ಲಿದ್ದ ಅಭಿಮಾನಿಗಳು ಮಳೆಯಿಂದ ರಕ್ಷಿಸಿಕೊಳ್ಳಲು ಕಷ್ಟ ಪಡುತ್ತಿರುವುದು ಕಂಡುಬಂತು. ರಾತ್ರಿ 8.30 ಹೊತ್ತಿಗೆ ಮಳೆ ನಿಂತಿತು. ಅಂಪೈರ್‌ಗಳು ಮೈದಾನ ಪರಿಶೀಲಿಸಿ ಟಾಸ್ ಮಾಡುವ ನಿರ್ಧಾರ ತೆಗೆದುಕೊಂಡರು. ಇನ್ನೇನು ಟಾಸ್ ನಡೆಯುತ್ತೆ ಎಂಬೊತ್ತಿಗೆ ಪುನಃ ಮಳೆ ಸುರಿಯಲಾರಂಭಿಸಿತು.

4 / 7
ರಾತ್ರಿ ಸುಮಾರು 10.30ರವರೆಗೂ ಜೋರಾಗಿ ಮಳೆ ಮುಂದುವರಿಯಿತು. ಪಿಚ್‌ಗೆ ಹಾಕಿದ್ದ ಹೊದಿಕೆ ಮತ್ತು ಔಟ್‌ಫೀಲ್ಡ್‌ನಲ್ಲಿ ಸಾಕಷ್ಟು ನೀರು ನಿಂತಿತು. ಅಂತಿಮವಾಗಿ ರಾತ್ರಿ 10.55ರ ವೇಳೆಗೆ ಮ್ಯಾಚ್‌ ರೆಫರಿ ಜಾವಗಲ್‌ ಶ್ರೀನಾಥ್‌ ಮತ್ತು ಅಂಪೈರ್‌ಗಳು ಮಾತುಕತೆ ನಡೆಸಿ ಪಂದ್ಯವನ್ನು ಇಂದು ಸೋಮವಾರಕ್ಕೆ ಮುಂದೂಡಲು ನಿರ್ಧಾರ ಮಾಡಿದರು.

ರಾತ್ರಿ ಸುಮಾರು 10.30ರವರೆಗೂ ಜೋರಾಗಿ ಮಳೆ ಮುಂದುವರಿಯಿತು. ಪಿಚ್‌ಗೆ ಹಾಕಿದ್ದ ಹೊದಿಕೆ ಮತ್ತು ಔಟ್‌ಫೀಲ್ಡ್‌ನಲ್ಲಿ ಸಾಕಷ್ಟು ನೀರು ನಿಂತಿತು. ಅಂತಿಮವಾಗಿ ರಾತ್ರಿ 10.55ರ ವೇಳೆಗೆ ಮ್ಯಾಚ್‌ ರೆಫರಿ ಜಾವಗಲ್‌ ಶ್ರೀನಾಥ್‌ ಮತ್ತು ಅಂಪೈರ್‌ಗಳು ಮಾತುಕತೆ ನಡೆಸಿ ಪಂದ್ಯವನ್ನು ಇಂದು ಸೋಮವಾರಕ್ಕೆ ಮುಂದೂಡಲು ನಿರ್ಧಾರ ಮಾಡಿದರು.

5 / 7
ಬೇಸರದ ಸಂಗತಿ ಎಂದರೆ ಮೀಸಲು ದಿನವಾದ ಇಂದುಕೂಡ ಮಳೆ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ. ಸೋಮವಾರ ಸಂಜೆ ವೇಳೆಗೆ ಮಳೆ ಸುರಿಯಲಿದೆಯಂತೆ. ದಿನಪೂರ್ತಿ ಮೋಡ ಕವಿದ ವಾತಾವರಣ ಇರುತ್ತದೆ ಎಂದು ವರದಿ ಹೇಳಿದೆ. ದೇಶದ ಪ್ರಸ್ತುತ ಹವಾಮಾನ ವರದಿ ಗಮನಿಸಿದರೆ, ಯಾವುದೇ ಸಮಯದಲ್ಲಿ ಮಳೆಯಾಗಬಹುದು.

ಬೇಸರದ ಸಂಗತಿ ಎಂದರೆ ಮೀಸಲು ದಿನವಾದ ಇಂದುಕೂಡ ಮಳೆ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ. ಸೋಮವಾರ ಸಂಜೆ ವೇಳೆಗೆ ಮಳೆ ಸುರಿಯಲಿದೆಯಂತೆ. ದಿನಪೂರ್ತಿ ಮೋಡ ಕವಿದ ವಾತಾವರಣ ಇರುತ್ತದೆ ಎಂದು ವರದಿ ಹೇಳಿದೆ. ದೇಶದ ಪ್ರಸ್ತುತ ಹವಾಮಾನ ವರದಿ ಗಮನಿಸಿದರೆ, ಯಾವುದೇ ಸಮಯದಲ್ಲಿ ಮಳೆಯಾಗಬಹುದು.

6 / 7
ಒಂದು ವೇಳೆ ಇಂದಿನ ಪಂದ್ಯ ಕೂಡ ಮಳೆಯಿಂದ ಕೊಚ್ಚಿ ಹೋದರೆ ಲೀಗ್ ಹಂತದ ಪಾಯಿಂಟ್ಸ್ ಟೇಬಲ್​ ಮೂಲಕ ಚಾಂಪಿಯನ್ ತಂಡವನ್ನು ನಿರ್ಧರಿಸಲಾಗುತ್ತದೆ. ಪಾಯಿಂಟ್ಸ್​ ಟೇಬಲ್​ನಲ್ಲಿ ಅಗ್ರಸ್ಥಾನ ಅಲಂಕರಿಸಿದ ಗುಜರಾತ್ ತಂಡವನ್ನು ಚಾಂಪಿಯನ್ ಎಂದು ಘೋಷಣೆ ಮಾಡಲಾಗುತ್ತದೆ.

ಒಂದು ವೇಳೆ ಇಂದಿನ ಪಂದ್ಯ ಕೂಡ ಮಳೆಯಿಂದ ಕೊಚ್ಚಿ ಹೋದರೆ ಲೀಗ್ ಹಂತದ ಪಾಯಿಂಟ್ಸ್ ಟೇಬಲ್​ ಮೂಲಕ ಚಾಂಪಿಯನ್ ತಂಡವನ್ನು ನಿರ್ಧರಿಸಲಾಗುತ್ತದೆ. ಪಾಯಿಂಟ್ಸ್​ ಟೇಬಲ್​ನಲ್ಲಿ ಅಗ್ರಸ್ಥಾನ ಅಲಂಕರಿಸಿದ ಗುಜರಾತ್ ತಂಡವನ್ನು ಚಾಂಪಿಯನ್ ಎಂದು ಘೋಷಣೆ ಮಾಡಲಾಗುತ್ತದೆ.

7 / 7
Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ