AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಲಕ್ಷ ಮುಟ್ಟಿದ ಚೆನ್ನೈ vs ಮುಂಬೈ ಪಂದ್ಯದ ಟಿಕೆಟ್ ಬೆಲೆ..!

IPL 2025 MI vs CSK: ಐಪಿಎಲ್ 2025ರ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಈ ನಡುವೆ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಪಂದ್ಯದ ಟಿಕೆಟ್‌ಗಳು ಕಾಳಸಂತೆಯಲ್ಲಿ 1 ಲಕ್ಷ ರೂಪಾಯಿಗಳವರೆಗೆ ಮಾರಾಟವಾಗುತ್ತಿವೆ ಎಂದು ವರದಿಯಾಗಿದೆ. ಸಿಎಸ್‌ಕೆ ಪಂದ್ಯಗಳ ಲೋವರ್ ಸ್ಟ್ಯಾಂಡ್ ಟಿಕೆಟ್‌ಗಳನ್ನು ಕಾಳಸಂತೆಯಲ್ಲಿ ಹತ್ತು ಪಟ್ಟು ಅಧಿಕ ಬೆಲೆಗೆ ಮಾರಾಟ ಮಾಡಲಾಗುತ್ತಿದೆ.

ಪೃಥ್ವಿಶಂಕರ
|

Updated on: Mar 12, 2025 | 6:37 PM

Share
ಮಿನಿ ವಿಶ್ವಕಪ್ ಖ್ಯಾತಿಯ ಚಾಂಪಿಯನ್ಸ್ ಟ್ರೋಫಿಯನ್ನು ಗೆದ್ದು ಬೀಗಿರುವ ಟೀಂ ಇಂಡಿಯಾ ಆಟಗಾರರು ಇದೀಗ  ಮಿಲಿಯನ್ ಡಾಲರ್ ಟೂರ್ನಿ ಐಪಿಎಲ್​ಗೆ ಸಜ್ಜಾಗುತ್ತಿದ್ದಾರೆ. 18ನೇ ಆವೃತ್ತಿಯ ಐಪಿಎಲ್ ಇದೇ ತಿಂಗಳ  ಈಗ ಮಾರ್ಚ್ 22 ರಿಂದ ಪ್ರಾರಂಭವಾಗುತ್ತಿದೆ. ಈ ಆವೃತ್ತಿಯ ಮೊದಲ ಪಂದ್ಯ ಎರಡು ಬಲಿಷ್ಠ ತಂಡಗಳಾದ ಕೊಲ್ಕತ್ತಾ ನೈಟ್ ರೈಡರ್ಸ್​ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವೆ ನಡೆಯಲಿದೆ.

ಮಿನಿ ವಿಶ್ವಕಪ್ ಖ್ಯಾತಿಯ ಚಾಂಪಿಯನ್ಸ್ ಟ್ರೋಫಿಯನ್ನು ಗೆದ್ದು ಬೀಗಿರುವ ಟೀಂ ಇಂಡಿಯಾ ಆಟಗಾರರು ಇದೀಗ ಮಿಲಿಯನ್ ಡಾಲರ್ ಟೂರ್ನಿ ಐಪಿಎಲ್​ಗೆ ಸಜ್ಜಾಗುತ್ತಿದ್ದಾರೆ. 18ನೇ ಆವೃತ್ತಿಯ ಐಪಿಎಲ್ ಇದೇ ತಿಂಗಳ ಈಗ ಮಾರ್ಚ್ 22 ರಿಂದ ಪ್ರಾರಂಭವಾಗುತ್ತಿದೆ. ಈ ಆವೃತ್ತಿಯ ಮೊದಲ ಪಂದ್ಯ ಎರಡು ಬಲಿಷ್ಠ ತಂಡಗಳಾದ ಕೊಲ್ಕತ್ತಾ ನೈಟ್ ರೈಡರ್ಸ್​ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವೆ ನಡೆಯಲಿದೆ.

1 / 5
ಈ ಪಂದ್ಯಕ್ಕೆ ಈಗಾಗಾಲೇ ಸಾಕಷ್ಟು ಕ್ರೇಜ್ ಹೆಚ್ಚಿದೆ. ಈ ನಡುವೆ ಐಪಿಎಲ್​ನ ಮತ್ತೆರಡು ಬಲಿಷ್ಠ ತಂಡಗಳಾದ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಪಂದ್ಯದ ಟಿಕೆಟ್​ಗಳ ಬಗ್ಗೆ ಸ್ಫೋಟಕ ಮಾಹಿತಿಯೊಂದು ಹೊರಬಿದ್ದಿದೆ. ಉಭಯ ತಂಡಗಳ ಕದನದ ಟಿಕೆಟ್ ಬೆಲೆ ಕಾಳಸಂತೆಯಲ್ಲಿ 1 ಲಕ್ಷ ರೂಗಳಿಗೆ ಸಮೀಪಿಸಿದೆ ಎಂದು ವರದಿಯಾಗಿದೆ.

ಈ ಪಂದ್ಯಕ್ಕೆ ಈಗಾಗಾಲೇ ಸಾಕಷ್ಟು ಕ್ರೇಜ್ ಹೆಚ್ಚಿದೆ. ಈ ನಡುವೆ ಐಪಿಎಲ್​ನ ಮತ್ತೆರಡು ಬಲಿಷ್ಠ ತಂಡಗಳಾದ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಪಂದ್ಯದ ಟಿಕೆಟ್​ಗಳ ಬಗ್ಗೆ ಸ್ಫೋಟಕ ಮಾಹಿತಿಯೊಂದು ಹೊರಬಿದ್ದಿದೆ. ಉಭಯ ತಂಡಗಳ ಕದನದ ಟಿಕೆಟ್ ಬೆಲೆ ಕಾಳಸಂತೆಯಲ್ಲಿ 1 ಲಕ್ಷ ರೂಗಳಿಗೆ ಸಮೀಪಿಸಿದೆ ಎಂದು ವರದಿಯಾಗಿದೆ.

2 / 5
ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿಯ ಪ್ರಕಾರ, ಸಿಎಸ್‌ಕೆ ಪಂದ್ಯಗಳ ಲೋವರ್ ಸ್ಟ್ಯಾಂಡ್ ಟಿಕೆಟ್‌ಗಳನ್ನು ಕಾಳಸಂತೆಯಲ್ಲಿ ಹತ್ತು ಪಟ್ಟು ಅಧಿಕ ಬೆಲೆಗೆ ಮಾರಾಟ ಮಾಡಲಾಗುತ್ತಿದೆ. ವಾಸ್ತವವಾಗಿ ಸಿಎಸ್‌ಕೆ ತನ್ನ ತವರಿನ ಪಂದ್ಯಗಳಿಗೆ ಅಧಿಕೃತ ಟಿಕೆಟ್‌ಗಳ ಮಾರಾಟವನ್ನು ಇನ್ನೂ ಪ್ರಾರಂಭಿಸಿಲ್ಲ. ಆದಾಗ್ಯೂ ಈ ಎರಡು ತಂಡಗಳ ನಡುವಿನ ಪಂದ್ಯದ ಟಿಕೆಟ್ ಬೆಲೆಯನ್ನು ಭಾರಿ ಮೊತ್ತಕ್ಕೆ ಏರಿಸಲಾಗಿದೆ.

ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿಯ ಪ್ರಕಾರ, ಸಿಎಸ್‌ಕೆ ಪಂದ್ಯಗಳ ಲೋವರ್ ಸ್ಟ್ಯಾಂಡ್ ಟಿಕೆಟ್‌ಗಳನ್ನು ಕಾಳಸಂತೆಯಲ್ಲಿ ಹತ್ತು ಪಟ್ಟು ಅಧಿಕ ಬೆಲೆಗೆ ಮಾರಾಟ ಮಾಡಲಾಗುತ್ತಿದೆ. ವಾಸ್ತವವಾಗಿ ಸಿಎಸ್‌ಕೆ ತನ್ನ ತವರಿನ ಪಂದ್ಯಗಳಿಗೆ ಅಧಿಕೃತ ಟಿಕೆಟ್‌ಗಳ ಮಾರಾಟವನ್ನು ಇನ್ನೂ ಪ್ರಾರಂಭಿಸಿಲ್ಲ. ಆದಾಗ್ಯೂ ಈ ಎರಡು ತಂಡಗಳ ನಡುವಿನ ಪಂದ್ಯದ ಟಿಕೆಟ್ ಬೆಲೆಯನ್ನು ಭಾರಿ ಮೊತ್ತಕ್ಕೆ ಏರಿಸಲಾಗಿದೆ.

3 / 5
ಟಿಕೆಟ್ ಮರುಮಾರಾಟ ವೆಬ್‌ಸೈಟ್ ವಿಯಾಗೋಗೋ ಪ್ರಕಾರ, ಸಿಎಸ್‌ಕೆ vs ಮುಂಬೈ ಇಂಡಿಯನ್ಸ್ ಪಂದ್ಯದ ಕೆಎಂಕೆ ಲೋವರ್ ಸ್ಟ್ಯಾಂಡ್ ಟಿಕೆಟ್‌ಗಳ ಬೆಲೆ 85,380 ರೂ. ತಲುಪಿದೆ. ಈ ಸ್ಟ್ಯಾಂಡ್‌ಗೆ 84 ಟಿಕೆಟ್‌ಗಳು ಲಭ್ಯವಿದ್ದು, ಇದರ ಆರಂಭಿಕ ಬೆಲೆ 12,512 ರೂ. ಆಗಿದೆ. ಆದರೆ ಕಾಳಸಂತೆಯಲ್ಲಿ ಈ ಸ್ಟ್ಯಾಂಡ್​ನ ಟಿಕೆಟ್ ಬೆಲೆಯನ್ನು 85,380 ರೂ.ಗೆ ನಿಗದಿಪಡಿಸಲಾಗಿದೆ ಎಂದು ವರದಿಯಾಗಿದೆ.

ಟಿಕೆಟ್ ಮರುಮಾರಾಟ ವೆಬ್‌ಸೈಟ್ ವಿಯಾಗೋಗೋ ಪ್ರಕಾರ, ಸಿಎಸ್‌ಕೆ vs ಮುಂಬೈ ಇಂಡಿಯನ್ಸ್ ಪಂದ್ಯದ ಕೆಎಂಕೆ ಲೋವರ್ ಸ್ಟ್ಯಾಂಡ್ ಟಿಕೆಟ್‌ಗಳ ಬೆಲೆ 85,380 ರೂ. ತಲುಪಿದೆ. ಈ ಸ್ಟ್ಯಾಂಡ್‌ಗೆ 84 ಟಿಕೆಟ್‌ಗಳು ಲಭ್ಯವಿದ್ದು, ಇದರ ಆರಂಭಿಕ ಬೆಲೆ 12,512 ರೂ. ಆಗಿದೆ. ಆದರೆ ಕಾಳಸಂತೆಯಲ್ಲಿ ಈ ಸ್ಟ್ಯಾಂಡ್​ನ ಟಿಕೆಟ್ ಬೆಲೆಯನ್ನು 85,380 ರೂ.ಗೆ ನಿಗದಿಪಡಿಸಲಾಗಿದೆ ಎಂದು ವರದಿಯಾಗಿದೆ.

4 / 5
ವಾಸ್ತವವಾಗಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ತನ್ನ ತವರಿನಲ್ಲಿ ಒಟ್ಟು 6 ಪಂದ್ಯಗಳನ್ನು ಆಡಲಿದೆ. ಈಗಾಗಲೇ ಸಿಎಸ್​ಕೆಯ ತವರು ಪಂದ್ಯಗಳ ಟಿಕೆಟ್‌ಗಳು ಪ್ರಸ್ತುತ ವೆಬ್‌ಸೈಟ್‌ನಲ್ಲಿ ಲಭ್ಯವಿದೆ. ಆದರೆ ಮಾರ್ಚ್ 28 ರಂದು ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಪಂದ್ಯದ ಟಿಕೆಟ್‌ಗಳನ್ನು ಮಾತ್ರ ಇನ್ನೂ ಮಾರಾಟಕ್ಕಿಟ್ಟಿಲ್ಲ.

ವಾಸ್ತವವಾಗಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ತನ್ನ ತವರಿನಲ್ಲಿ ಒಟ್ಟು 6 ಪಂದ್ಯಗಳನ್ನು ಆಡಲಿದೆ. ಈಗಾಗಲೇ ಸಿಎಸ್​ಕೆಯ ತವರು ಪಂದ್ಯಗಳ ಟಿಕೆಟ್‌ಗಳು ಪ್ರಸ್ತುತ ವೆಬ್‌ಸೈಟ್‌ನಲ್ಲಿ ಲಭ್ಯವಿದೆ. ಆದರೆ ಮಾರ್ಚ್ 28 ರಂದು ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಪಂದ್ಯದ ಟಿಕೆಟ್‌ಗಳನ್ನು ಮಾತ್ರ ಇನ್ನೂ ಮಾರಾಟಕ್ಕಿಟ್ಟಿಲ್ಲ.

5 / 5
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್