AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CSK vs PBKS: ಏಳರಿಂದ ಮೇಲೇಳದ ಸಂಜು ಸ್ಯಾಮ್ಸನ್

Sanju Samson's Early Wicket: ರಾಜಸ್ಥಾನ್ ವಿರುದ್ಧ ಹೀನಾಯ ಸೋತ ಚೆನ್ನೈ, ಇಂದು ಪಂಜಾಬ್ ಎದುರು ತವರು ಮೈದಾನದಲ್ಲಿ ಆಡುತ್ತಿದೆ. ಟಾಸ್ ಸೋತು ಬ್ಯಾಟಿಂಗ್ ಆರಂಭಿಸಿದ ಸಿಎಸ್‌ಕೆಗೆ ಉತ್ತಮ ಆರಂಭ ಸಿಗಲಿಲ್ಲ. ಸಂಜು ಸ್ಯಾಮ್ಸನ್ (7 ರನ್) ಮತ್ತೊಮ್ಮೆ ಕಳಪೆ ಪ್ರದರ್ಶನ ನೀಡಿ ಬೇಗನೆ ವಿಕೆಟ್ ಕಳೆದುಕೊಂಡರು. ಇದರಿಂದ ಸಿಎಸ್‌ಕೆ 14 ರನ್‌ಗಳಿಗೆ ಮೊದಲ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ. ಚೆನ್ನೈ ತಂಡಕ್ಕೆ ಉತ್ತಮ ಪ್ರದರ್ಶನ ನೀಡುವ ಸವಾಲು ಎದುರಾಗಿದೆ.

ಪೃಥ್ವಿಶಂಕರ
|

Updated on: Apr 03, 2026 | 8:35 PM

Share
ರಾಜಸ್ಥಾನ್ ರಾಯಲ್ಸ್ ವಿರುದ್ಧದ ತನ್ನ ಮೊದಲ ಪಂದ್ಯವನ್ನು ಹೀನಾಯವಾಗಿ ಸೋತಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಇಂದು ತನ್ನ ತವರು ಮೈದಾನವಾದ ಎಂಎ ಚಿದಂಬರಂ ಮೈದಾನದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಎದುರಿಸಿದೆ. ಈ ಪಂದ್ಯದಲ್ಲಿ ಟಾಸ್ ಸೋತ ಸಿಎಸ್​ಕೆ ಮೊದಲು ಬ್ಯಾಟಿಂಗ್‌ ಮಾಡುತ್ತಿದೆ. ಆದಾಗ್ಯೂ ತಂಡಕ್ಕೆ ಉತ್ತಮ ಆರಂಭ ಸಿಕ್ಕಿಲ್ಲ.

ರಾಜಸ್ಥಾನ್ ರಾಯಲ್ಸ್ ವಿರುದ್ಧದ ತನ್ನ ಮೊದಲ ಪಂದ್ಯವನ್ನು ಹೀನಾಯವಾಗಿ ಸೋತಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಇಂದು ತನ್ನ ತವರು ಮೈದಾನವಾದ ಎಂಎ ಚಿದಂಬರಂ ಮೈದಾನದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಎದುರಿಸಿದೆ. ಈ ಪಂದ್ಯದಲ್ಲಿ ಟಾಸ್ ಸೋತ ಸಿಎಸ್​ಕೆ ಮೊದಲು ಬ್ಯಾಟಿಂಗ್‌ ಮಾಡುತ್ತಿದೆ. ಆದಾಗ್ಯೂ ತಂಡಕ್ಕೆ ಉತ್ತಮ ಆರಂಭ ಸಿಕ್ಕಿಲ್ಲ.

1 / 5
ಎಂದಿನಂತೆ ಈ ಪಂದ್ಯದಲ್ಲೂ ಸಂಜು ಸ್ಯಾಮ್ಸನ್ ಹಾಗೂ ರುತುರಾಜ್ ಗಾಯಕ್ವಾಡ್ ಸಿಎಸ್​ಕೆ ಪರ ಇನ್ನಿಂಗ್ಸ್ ಆರಂಭಿಸಿದರು. ರಾಜಸ್ಥಾನ್ ವಿರುದ್ಧದ ಪಂದ್ಯದಲ್ಲಿ 7 ಎಸೆತಗಳನ್ನು ಎದುರಿಸಿ ಕೇವಲ 6 ರನ್​ಗಳಿಗೆ ಔಟಾಗಿದ್ದ ಸಂಜು, ಈ ಪಂದ್ಯದಲ್ಲಿ ಅಬ್ಬರಿಸಲಿ ಎಂದು ಅಭಿಮಾನಿಗಳು ಆಶಿಸಿದ್ದರು. ಆದರೆ ಈ ಪಂದ್ಯದಲ್ಲೂ ಸಂಜು ಪ್ರದರ್ಶನ ಸಪ್ಪೆಯಾಗಿತ್ತು.

ಎಂದಿನಂತೆ ಈ ಪಂದ್ಯದಲ್ಲೂ ಸಂಜು ಸ್ಯಾಮ್ಸನ್ ಹಾಗೂ ರುತುರಾಜ್ ಗಾಯಕ್ವಾಡ್ ಸಿಎಸ್​ಕೆ ಪರ ಇನ್ನಿಂಗ್ಸ್ ಆರಂಭಿಸಿದರು. ರಾಜಸ್ಥಾನ್ ವಿರುದ್ಧದ ಪಂದ್ಯದಲ್ಲಿ 7 ಎಸೆತಗಳನ್ನು ಎದುರಿಸಿ ಕೇವಲ 6 ರನ್​ಗಳಿಗೆ ಔಟಾಗಿದ್ದ ಸಂಜು, ಈ ಪಂದ್ಯದಲ್ಲಿ ಅಬ್ಬರಿಸಲಿ ಎಂದು ಅಭಿಮಾನಿಗಳು ಆಶಿಸಿದ್ದರು. ಆದರೆ ಈ ಪಂದ್ಯದಲ್ಲೂ ಸಂಜು ಪ್ರದರ್ಶನ ಸಪ್ಪೆಯಾಗಿತ್ತು.

2 / 5
ಈ ಪಂದ್ಯದಲ್ಲೂ 7 ಎಸೆತಗಳನ್ನು ಎದುರಿಸಿದ ಸಂಜು, ಕಳೆದ ಪಂದ್ಯಕ್ಕಿಂತ ಒಂದು ರನ್ ಹೆಚ್ಚಿಗೆ ಬಾರಿಸಿ ಅಂದರೆ 7 ರನ್ ಬಾರಿಸಿ ವಿಕೆಟ್ ಕೀಪರ್​ಗೆ ಕ್ಯಾಚಿತ್ತು ಔಟಾದರು. ಸಂಜು ಅವರ ಇನ್ನಿಂಗ್ಸ್​ನಲ್ಲಿ ಕೇವಲ 1 ಬೌಂಡರಿ ಮಾತ್ರ ಸೇರಿತ್ತು. ಸಂಜು ಬೇಗನೇ ಔಟಾದ ಕಾರಣ ಸಿಎಸ್​ಕೆ ತಂಡ 14 ರನ್​ಗಳಿಗೆ ತನ್ನ ಮೊದಲ ವಿಕೆಟ್ ಕಳೆದುಕೊಂಡಿತು.

ಈ ಪಂದ್ಯದಲ್ಲೂ 7 ಎಸೆತಗಳನ್ನು ಎದುರಿಸಿದ ಸಂಜು, ಕಳೆದ ಪಂದ್ಯಕ್ಕಿಂತ ಒಂದು ರನ್ ಹೆಚ್ಚಿಗೆ ಬಾರಿಸಿ ಅಂದರೆ 7 ರನ್ ಬಾರಿಸಿ ವಿಕೆಟ್ ಕೀಪರ್​ಗೆ ಕ್ಯಾಚಿತ್ತು ಔಟಾದರು. ಸಂಜು ಅವರ ಇನ್ನಿಂಗ್ಸ್​ನಲ್ಲಿ ಕೇವಲ 1 ಬೌಂಡರಿ ಮಾತ್ರ ಸೇರಿತ್ತು. ಸಂಜು ಬೇಗನೇ ಔಟಾದ ಕಾರಣ ಸಿಎಸ್​ಕೆ ತಂಡ 14 ರನ್​ಗಳಿಗೆ ತನ್ನ ಮೊದಲ ವಿಕೆಟ್ ಕಳೆದುಕೊಂಡಿತು.

3 / 5
ಸಂಜು ಸ್ಯಾಮ್ಸನ್ ಅವರ ವಿಕೆಟ್ ಬೇಗನೇ ಪತನವಾದರೂ ಆ ಬಳಿಕ ಜೊತೆಯಾಗಿರುವ ನಾಯಕ ರುತುರಾಜ್ ಹಾಗೂ ಯುವ ಬ್ಯಾಟ್ಸ್‌ಮನ್ ಆಯುಷ್ ಮ್ಹಾತ್ರೆ ತಂಡವನ್ನು ಶತಕದ ಗಡಿ ದಾಟಿಸಿದ್ದಾರೆ. ಇವರಿಬ್ಬರ ಜೊತೆಯಾಟದಿಂದಾಗಿ ಸಿಎಸ್​ಕೆ ಕೇವಲ 10 ಓವರ್​ಗಳಲ್ಲಿ 100 ರನ್ ಕಲೆಹಾಕಿದೆ.

ಸಂಜು ಸ್ಯಾಮ್ಸನ್ ಅವರ ವಿಕೆಟ್ ಬೇಗನೇ ಪತನವಾದರೂ ಆ ಬಳಿಕ ಜೊತೆಯಾಗಿರುವ ನಾಯಕ ರುತುರಾಜ್ ಹಾಗೂ ಯುವ ಬ್ಯಾಟ್ಸ್‌ಮನ್ ಆಯುಷ್ ಮ್ಹಾತ್ರೆ ತಂಡವನ್ನು ಶತಕದ ಗಡಿ ದಾಟಿಸಿದ್ದಾರೆ. ಇವರಿಬ್ಬರ ಜೊತೆಯಾಟದಿಂದಾಗಿ ಸಿಎಸ್​ಕೆ ಕೇವಲ 10 ಓವರ್​ಗಳಲ್ಲಿ 100 ರನ್ ಕಲೆಹಾಕಿದೆ.

4 / 5
ಸಿಎಸ್​ಕೆ ಪರ ಅಬ್ಬರದ ಇನ್ನಿಂಗ್ಸ್ ಆಡಿರುವ ಆಯುಷ್ ಮ್ಹಾತ್ರೆ ತಮ್ಮ ಐಪಿಎಲ್ ವೃತ್ತಿಜೀವನದ ಎರಡನೇ ಅರ್ಧಶತಕವನ್ನು ಸಹ ಪೂರೈಸಿದ್ದಾರೆ. ಕ್ರೀಸ್​ಗೆ ಬಂದಾಗಿನಿಂದ ಅಬ್ಬರದ ಇನ್ನಿಂಗ್ಸ್ ಆಡಿರುವ ಆಯುಷ್ ಕೇವಲ 29 ಎಸೆತಗಳಲ್ಲಿ ತಮ್ಮ ಅರ್ಧಶತಕ ಪೂರೈಸಿದರು. ಆಯುಷ್ ತಮ್ಮ ಇನ್ನಿಂಗ್ಸ್​ನಲ್ಲಿ ಇದುವರೆಗೆ 5 ಸಿಕ್ಸರ್ ಹಾಗೂ 4 ಬೌಂಡರಿಗಳನ್ನು ಬಾರಿಸಿದ್ದಾರೆ.

ಸಿಎಸ್​ಕೆ ಪರ ಅಬ್ಬರದ ಇನ್ನಿಂಗ್ಸ್ ಆಡಿರುವ ಆಯುಷ್ ಮ್ಹಾತ್ರೆ ತಮ್ಮ ಐಪಿಎಲ್ ವೃತ್ತಿಜೀವನದ ಎರಡನೇ ಅರ್ಧಶತಕವನ್ನು ಸಹ ಪೂರೈಸಿದ್ದಾರೆ. ಕ್ರೀಸ್​ಗೆ ಬಂದಾಗಿನಿಂದ ಅಬ್ಬರದ ಇನ್ನಿಂಗ್ಸ್ ಆಡಿರುವ ಆಯುಷ್ ಕೇವಲ 29 ಎಸೆತಗಳಲ್ಲಿ ತಮ್ಮ ಅರ್ಧಶತಕ ಪೂರೈಸಿದರು. ಆಯುಷ್ ತಮ್ಮ ಇನ್ನಿಂಗ್ಸ್​ನಲ್ಲಿ ಇದುವರೆಗೆ 5 ಸಿಕ್ಸರ್ ಹಾಗೂ 4 ಬೌಂಡರಿಗಳನ್ನು ಬಾರಿಸಿದ್ದಾರೆ.

5 / 5
Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ