AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಂ ಇಂಡಿಯಾ ವಿರುದ್ಧ ಈ ಸಾಧನೆ ಮಾಡಿದ ವಿಶ್ವದ ಮೊದಲ ಆಟಗಾರ ಡ್ಯಾರಿಲ್ ಮಿಚೆಲ್

Daryl Mitchell Masterclass: ಭಾರತ-ನ್ಯೂಜಿಲೆಂಡ್ ಏಕದಿನ ಸರಣಿಯಲ್ಲಿ ಡ್ಯಾರಿಲ್ ಮಿಚೆಲ್ ಭರ್ಜರಿ ಪ್ರದರ್ಶನ ನೀಡಿದ್ದಾರೆ. ಮೂರು ಪಂದ್ಯಗಳಲ್ಲಿ ಎರಡು ಶತಕ, ಒಂದು ಅರ್ಧಶತಕ ಸೇರಿದಂತೆ 352 ರನ್ ಗಳಿಸಿ ದಾಖಲೆ ಬರೆದಿದ್ದಾರೆ. ಭಾರತದ ವಿರುದ್ಧ ನಾಲ್ಕು ಬಾರಿ 130ಕ್ಕೂ ಹೆಚ್ಚು ರನ್ ಗಳಿಸಿದ ವಿಶ್ವದ ಮೊದಲ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇದು ಕಿವೀಸ್ ಆಟಗಾರನೊಬ್ಬ 3 ಪಂದ್ಯಗಳ ಸರಣಿಯಲ್ಲಿ ಗಳಿಸಿದ ಅತ್ಯಧಿಕ ರನ್.

ಪೃಥ್ವಿಶಂಕರ
|

Updated on:Jan 18, 2026 | 7:12 PM

Share
ಭಾರತ-ನ್ಯೂಜಿಲೆಂಡ್ ಏಕದಿನ ಸರಣಿಯಲ್ಲಿ ಕಿವೀಸ್ ಪರ ಸ್ಥಿರ ಪ್ರದರ್ಶನ ನೀಡಿದ ಆಟಗಾರನೆಂದರೆ ಅದು ಅನುಭವಿ ಡ್ಯಾರಿಲ್ ಮಿಚೆಲ್. ಈ ಸರಣಿಯಲ್ಲಿ ಆಡಿದ ಮೂರು ಪಂದ್ಯಗಳಲ್ಲೂ ಅವರು 1 ಅರ್ಧಶತಕ ಹಾಗೂ 2 ಶತಗಳನ್ನು ಬಾರಿಸಿದ್ದಾರೆ. ಮೂರನೇ ಪಂದ್ಯದಲ್ಲೂ ಅವರಿಂದ ಶತಕದ ಇನ್ನಿಂಗ್ಸ್ ಮೂಡಿಬಂತು.

ಭಾರತ-ನ್ಯೂಜಿಲೆಂಡ್ ಏಕದಿನ ಸರಣಿಯಲ್ಲಿ ಕಿವೀಸ್ ಪರ ಸ್ಥಿರ ಪ್ರದರ್ಶನ ನೀಡಿದ ಆಟಗಾರನೆಂದರೆ ಅದು ಅನುಭವಿ ಡ್ಯಾರಿಲ್ ಮಿಚೆಲ್. ಈ ಸರಣಿಯಲ್ಲಿ ಆಡಿದ ಮೂರು ಪಂದ್ಯಗಳಲ್ಲೂ ಅವರು 1 ಅರ್ಧಶತಕ ಹಾಗೂ 2 ಶತಗಳನ್ನು ಬಾರಿಸಿದ್ದಾರೆ. ಮೂರನೇ ಪಂದ್ಯದಲ್ಲೂ ಅವರಿಂದ ಶತಕದ ಇನ್ನಿಂಗ್ಸ್ ಮೂಡಿಬಂತು.

1 / 5
ಸರಣಿಯ ಅಂತಿಮ ಪಂದ್ಯದಲ್ಲಿ 131 ಎಸೆತಗಳನ್ನು ಎದುರಿಸಿದ ಮಿಚೆಲ್ 15 ಬೌಂಡರಿ ಮತ್ತು ಮೂರು ಸಿಕ್ಸರ್‌ಗಳೊಂದಿಗೆ 104.58 ರ ಸ್ಟ್ರೈಕ್ ರೇಟ್​ನಲ್ಲಿ137 ರನ್ ಗಳಿಸಿದರು ಡ್ಯಾರಿಲ್ ಮಿಚೆಲ್ ಹಿಂದಿನ ಪಂದ್ಯದಲ್ಲಿಯೂ ಶತಕ ಬಾರಿಸಿದ್ದರು. ಇದು ಭಾರತದ ವಿರುದ್ಧ ಅವರ ನಾಲ್ಕನೇ ಏಕದಿನ ಶತಕವಾಗಿದೆ.

ಸರಣಿಯ ಅಂತಿಮ ಪಂದ್ಯದಲ್ಲಿ 131 ಎಸೆತಗಳನ್ನು ಎದುರಿಸಿದ ಮಿಚೆಲ್ 15 ಬೌಂಡರಿ ಮತ್ತು ಮೂರು ಸಿಕ್ಸರ್‌ಗಳೊಂದಿಗೆ 104.58 ರ ಸ್ಟ್ರೈಕ್ ರೇಟ್​ನಲ್ಲಿ137 ರನ್ ಗಳಿಸಿದರು ಡ್ಯಾರಿಲ್ ಮಿಚೆಲ್ ಹಿಂದಿನ ಪಂದ್ಯದಲ್ಲಿಯೂ ಶತಕ ಬಾರಿಸಿದ್ದರು. ಇದು ಭಾರತದ ವಿರುದ್ಧ ಅವರ ನಾಲ್ಕನೇ ಏಕದಿನ ಶತಕವಾಗಿದೆ.

2 / 5
ಡ್ಯಾರಿಲ್ ಮಿಚೆಲ್ ಭಾರತದ ವಿರುದ್ಧ ಶತಕ ಗಳಿಸಿದಾಗಲೆಲ್ಲಾ 130 ಅಥವಾ ಅದಕ್ಕಿಂತ ಹೆಚ್ಚು ರನ್ ಗಳಿಸಿದ್ದಾರೆ ಎಂಬುದು ಗಮನಾರ್ಹ. ಅವರ ಕೊನೆಯ ಮೂರು ಸ್ಕೋರ್‌ಗಳು 130, 134 ಮತ್ತು ಅಜೇಯ 131 ಆಗಿದೆ. ಈ ಮೂಲಕ ಭಾರತದ ವಿರುದ್ಧ ಏಕದಿನ ಪಂದ್ಯಗಳಲ್ಲಿ ನಾಲ್ಕು ಬಾರಿ 130 ಅಥವಾ ಅದಕ್ಕಿಂತ ಹೆಚ್ಚು ರನ್ ಗಳಿಸಿದ ವಿಶ್ವದ ಮೊದಲ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ.

ಡ್ಯಾರಿಲ್ ಮಿಚೆಲ್ ಭಾರತದ ವಿರುದ್ಧ ಶತಕ ಗಳಿಸಿದಾಗಲೆಲ್ಲಾ 130 ಅಥವಾ ಅದಕ್ಕಿಂತ ಹೆಚ್ಚು ರನ್ ಗಳಿಸಿದ್ದಾರೆ ಎಂಬುದು ಗಮನಾರ್ಹ. ಅವರ ಕೊನೆಯ ಮೂರು ಸ್ಕೋರ್‌ಗಳು 130, 134 ಮತ್ತು ಅಜೇಯ 131 ಆಗಿದೆ. ಈ ಮೂಲಕ ಭಾರತದ ವಿರುದ್ಧ ಏಕದಿನ ಪಂದ್ಯಗಳಲ್ಲಿ ನಾಲ್ಕು ಬಾರಿ 130 ಅಥವಾ ಅದಕ್ಕಿಂತ ಹೆಚ್ಚು ರನ್ ಗಳಿಸಿದ ವಿಶ್ವದ ಮೊದಲ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ.

3 / 5
ಏಕದಿನ ಪಂದ್ಯಗಳಲ್ಲಿ ಒಂದೇ ತಂಡದ ವಿರುದ್ಧ ಈ ಸಾಧನೆ ಮಾಡಿದ ಕೇವಲ ನಾಲ್ಕನೇ ಬ್ಯಾಟ್ಸ್‌ಮನ್ ಕೂಡ ಅವರು. ರೋಹಿತ್ ಆಸ್ಟ್ರೇಲಿಯಾ ವಿರುದ್ಧ ಈ ಸಾಧನೆ ಮಾಡಿದ್ದರೆ, ಸಚಿನ್ ತೆಂಡೂಲ್ಕರ್ ಆಸ್ಟ್ರೇಲಿಯಾ ವಿರುದ್ಧ ಐದು ಬಾರಿ 130 ಅಥವಾ ಅದಕ್ಕಿಂತ ಹೆಚ್ಚು ರನ್ ಗಳಿಸಿದ್ದಾರೆ.

ಏಕದಿನ ಪಂದ್ಯಗಳಲ್ಲಿ ಒಂದೇ ತಂಡದ ವಿರುದ್ಧ ಈ ಸಾಧನೆ ಮಾಡಿದ ಕೇವಲ ನಾಲ್ಕನೇ ಬ್ಯಾಟ್ಸ್‌ಮನ್ ಕೂಡ ಅವರು. ರೋಹಿತ್ ಆಸ್ಟ್ರೇಲಿಯಾ ವಿರುದ್ಧ ಈ ಸಾಧನೆ ಮಾಡಿದ್ದರೆ, ಸಚಿನ್ ತೆಂಡೂಲ್ಕರ್ ಆಸ್ಟ್ರೇಲಿಯಾ ವಿರುದ್ಧ ಐದು ಬಾರಿ 130 ಅಥವಾ ಅದಕ್ಕಿಂತ ಹೆಚ್ಚು ರನ್ ಗಳಿಸಿದ್ದಾರೆ.

4 / 5
ಈ ಸರಣಿಯಲ್ಲಿ, ಡ್ಯಾರಿಲ್ ಮಿಚೆಲ್ ಮೂರು ಪಂದ್ಯಗಳಲ್ಲಿ ಎರಡು ಶತಕಗಳು ಮತ್ತು ಒಂದು ಅರ್ಧಶತಕ ಸೇರಿದಂತೆ ಒಟ್ಟು 352 ರನ್ ಕಲೆಹಾಕಿದ್ದಾರೆ. ಇದು ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ನ್ಯೂಜಿಲೆಂಡ್ ಆಟಗಾರನೊಬ್ಬ ಗಳಿಸಿದ ಅತಿ ಹೆಚ್ಚು ರನ್​ಗಳ ದಾಖಲೆಯಾಗಿದೆ.

ಈ ಸರಣಿಯಲ್ಲಿ, ಡ್ಯಾರಿಲ್ ಮಿಚೆಲ್ ಮೂರು ಪಂದ್ಯಗಳಲ್ಲಿ ಎರಡು ಶತಕಗಳು ಮತ್ತು ಒಂದು ಅರ್ಧಶತಕ ಸೇರಿದಂತೆ ಒಟ್ಟು 352 ರನ್ ಕಲೆಹಾಕಿದ್ದಾರೆ. ಇದು ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ನ್ಯೂಜಿಲೆಂಡ್ ಆಟಗಾರನೊಬ್ಬ ಗಳಿಸಿದ ಅತಿ ಹೆಚ್ಚು ರನ್​ಗಳ ದಾಖಲೆಯಾಗಿದೆ.

5 / 5

Published On - 7:11 pm, Sun, 18 January 26

ಪೃಥ್ವಿಶಂಕರ
ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ