AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

40 ಎಸೆತಗಳ ದಾಖಲೆಯನ್ನು ಧೂಳೀಪಟ ಮಾಡಿದ ದಸುನ್ ಶಾನಕ!

ಸೇಂಟ್ ಲೂಸಿಯಾ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸೇಂಟ್ ಕಿಟ್ಸ್ ಅ್ಯಂಡ್ ನೆವಿಸ್ ಪೇಟ್ರಿಯಾಟ್ಸ್ ಪರ ದಸುನ್ ಶಾನಕ ವಿಸ್ಫೋಟಕ ಸೆಂಚುರಿ ಸಿಡಿಸಿದ್ದರು. ಈ ಶತಕದ ನೆರವಿನೊಂದಿಗೆ ಸೇಂಟ್ ಕಿಟ್ಸ್ ಅ್ಯಂಡ್ ನೆವಿಸ್ ಪೇಟ್ರಿಯಾಟ್ಸ್ 235 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಸೇಂಟ್ ಲೂಸಿಯಾ ಕಿಂಗ್ಸ್  ಕೇವಲ 98 ರನ್​ಗಳಿಗೆ ಆಲೌಟ್ ಆಗಿದೆ. 

ಝಾಹಿರ್ ಯೂಸುಫ್
|

Updated on: Sep 05, 2026 | 9:41 AM

Share
ಕೆರಿಬಿಯನ್ ಪ್ರೀಮಿಯರ್ ಲೀಗ್​ನಲ್ಲಿ ಹೊಸ ಇತಿಹಾಸ ನಿರ್ಮಾಣವಾಗಿದೆ. ಈ ಇತಿಹಾಸ ನಿರ್ಮಿಸಿದ್ದು ಮತ್ಯಾರೂ ಅಲ್ಲ. ಶ್ರೀಲಂಕಾದ ಸ್ಫೋಟಕ ದಾಂಡಿಗ ದಸುನ್ ಶಾನಕ. ಅದು ಕೂಡ ಸಿಡಿಲಬ್ಬರದ ಸೆಂಚುರಿ ಸಿಡುಸುವ ಮೂಲಕ. ಈ ಶತಕದೊಂದಿಗೆ ಸಿಪಿಎಲ್​ನಲ್ಲಿ ಅತೀ ವೇಗದ ಶತಕ ಬಾರಿಸಿದ ದಾಖಲೆಯನ್ನು ಶಾನಕ ತಮ್ಮದಾಗಿಸಿಕೊಂಡಿದ್ದಾರೆ. (PC: CPL)

ಕೆರಿಬಿಯನ್ ಪ್ರೀಮಿಯರ್ ಲೀಗ್​ನಲ್ಲಿ ಹೊಸ ಇತಿಹಾಸ ನಿರ್ಮಾಣವಾಗಿದೆ. ಈ ಇತಿಹಾಸ ನಿರ್ಮಿಸಿದ್ದು ಮತ್ಯಾರೂ ಅಲ್ಲ. ಶ್ರೀಲಂಕಾದ ಸ್ಫೋಟಕ ದಾಂಡಿಗ ದಸುನ್ ಶಾನಕ. ಅದು ಕೂಡ ಸಿಡಿಲಬ್ಬರದ ಸೆಂಚುರಿ ಸಿಡುಸುವ ಮೂಲಕ. ಈ ಶತಕದೊಂದಿಗೆ ಸಿಪಿಎಲ್​ನಲ್ಲಿ ಅತೀ ವೇಗದ ಶತಕ ಬಾರಿಸಿದ ದಾಖಲೆಯನ್ನು ಶಾನಕ ತಮ್ಮದಾಗಿಸಿಕೊಂಡಿದ್ದಾರೆ. (PC: CPL)

1 / 5
ಸೇಂಟ್ ಲೂಸಿಯಾ ಕಿಂಗ್ಸ್ ವಿರುದ್ಧದ ಈ ಪಂದ್ಯದಲ್ಲಿ ಸೇಂಟ್ ಕಿಟ್ಸ್ ಅ್ಯಂಡ್ ನೆವಿಸ್ ಪೇಟ್ರಿಯಾಟ್ಸ್ ಪರ ಕಣಕ್ಕಿಳಿದ ದಸುನ್ ಶಾನಕ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಈ ಸಿಡಿಲಬ್ಬರದೊಂದಿಗೆ ಕೇವಲ 39 ಎಸೆತಗಳಲ್ಲಿ ಶತಕ ಪೂರೈಸಿದ್ದಾರೆ. ಈ ಮೂಲಕ ಸಿಪಿಎಲ್​ನಲ್ಲಿ ಅತೀ ಕಡಿಮೆ ಎಸೆತಗಳಲ್ಲಿ ಸೆಂಚುರಿ ಸಿಡಿಸಿದ ಬ್ಯಾಟರ್ ಎಂಬ ದಾಖಲೆ ನಿರ್ಮಿಸಿದ್ದಾರೆ. (PC: CPL)

ಸೇಂಟ್ ಲೂಸಿಯಾ ಕಿಂಗ್ಸ್ ವಿರುದ್ಧದ ಈ ಪಂದ್ಯದಲ್ಲಿ ಸೇಂಟ್ ಕಿಟ್ಸ್ ಅ್ಯಂಡ್ ನೆವಿಸ್ ಪೇಟ್ರಿಯಾಟ್ಸ್ ಪರ ಕಣಕ್ಕಿಳಿದ ದಸುನ್ ಶಾನಕ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಈ ಸಿಡಿಲಬ್ಬರದೊಂದಿಗೆ ಕೇವಲ 39 ಎಸೆತಗಳಲ್ಲಿ ಶತಕ ಪೂರೈಸಿದ್ದಾರೆ. ಈ ಮೂಲಕ ಸಿಪಿಎಲ್​ನಲ್ಲಿ ಅತೀ ಕಡಿಮೆ ಎಸೆತಗಳಲ್ಲಿ ಸೆಂಚುರಿ ಸಿಡಿಸಿದ ಬ್ಯಾಟರ್ ಎಂಬ ದಾಖಲೆ ನಿರ್ಮಿಸಿದ್ದಾರೆ. (PC: CPL)

2 / 5
ಇದಕ್ಕೂ ಮುನ್ನ ಈ ದಾಖಲೆ ಟಿಮ್ ಸೈಫರ್ಟ್, ಶಿಮ್ರಾನ್ ಹೆಟ್ಮೆಯರ್ ಹಾಗೂ ಆ್ಯಂಡ್ರೆ ರಸೆಲ್ ಹೆಸರಿನಲ್ಲಿತ್ತು. ಈ ಮೂವರು ದಾಂಡಿಗರು 40 ಎಸೆತಗಳಲ್ಲಿ ಸೆಂಚುರಿ ಸಿಡಿಸಿ ಕೆರಿಬಿಯನ್ ಪ್ರೀಮಿಯರ್ ಲೀಗ್​ನಲ್ಲಿ ಅತೀ ವೇಗದ ಶತಕ ಬಾರಿಸಿದ ದಾಖಲೆಯನ್ನು ನಿರ್ಮಿಸಿದ್ದರು. (PC: CPL)

ಇದಕ್ಕೂ ಮುನ್ನ ಈ ದಾಖಲೆ ಟಿಮ್ ಸೈಫರ್ಟ್, ಶಿಮ್ರಾನ್ ಹೆಟ್ಮೆಯರ್ ಹಾಗೂ ಆ್ಯಂಡ್ರೆ ರಸೆಲ್ ಹೆಸರಿನಲ್ಲಿತ್ತು. ಈ ಮೂವರು ದಾಂಡಿಗರು 40 ಎಸೆತಗಳಲ್ಲಿ ಸೆಂಚುರಿ ಸಿಡಿಸಿ ಕೆರಿಬಿಯನ್ ಪ್ರೀಮಿಯರ್ ಲೀಗ್​ನಲ್ಲಿ ಅತೀ ವೇಗದ ಶತಕ ಬಾರಿಸಿದ ದಾಖಲೆಯನ್ನು ನಿರ್ಮಿಸಿದ್ದರು. (PC: CPL)

3 / 5
ಇದೀಗ ದಸುನ್ ಶಾನಕ ಅವರ ಆರ್ಭಟದೊಂದಿಗೆ ಕೆರಿಬಿಯನ್ ಪ್ರೀಮಿಯರ್ ಲೀಗ್​ನಲ್ಲಿನ 40 ಎಸೆತಗಳ ದಾಖಲೆ ಧೂಳೀಪಟವಾಗಿದೆ. ಕೇವಲ 39 ಎಸೆತಗಳಲ್ಲಿ ಮೂರಂಕಿ ಮೊತ್ತ ಕಲೆಹಾಕುವ ಮೂಲಕ ದಸುನ್ ಶಾನಕ ಹೊಸ ಇತಿಹಾಸ ನಿರ್ಮಿಸುವಲ್ಲಿ ಯಶಸ್ವಿಯಾಗಿದ್ದಾರೆ. (PC: CPL)

ಇದೀಗ ದಸುನ್ ಶಾನಕ ಅವರ ಆರ್ಭಟದೊಂದಿಗೆ ಕೆರಿಬಿಯನ್ ಪ್ರೀಮಿಯರ್ ಲೀಗ್​ನಲ್ಲಿನ 40 ಎಸೆತಗಳ ದಾಖಲೆ ಧೂಳೀಪಟವಾಗಿದೆ. ಕೇವಲ 39 ಎಸೆತಗಳಲ್ಲಿ ಮೂರಂಕಿ ಮೊತ್ತ ಕಲೆಹಾಕುವ ಮೂಲಕ ದಸುನ್ ಶಾನಕ ಹೊಸ ಇತಿಹಾಸ ನಿರ್ಮಿಸುವಲ್ಲಿ ಯಶಸ್ವಿಯಾಗಿದ್ದಾರೆ. (PC: CPL)

4 / 5
ಇನ್ನು ಈ ಪಂದ್ಯದಲ್ಲಿ ಕೇವಲ 43 ಎಸೆತಗಳನ್ನು ಎದುರಿಸಿದ ಶಾನಕ 8 ಬೌಂಡರಿ ಹಾಗೂ 12 ಭರ್ಜರಿ ಸಿಕ್ಸರ್‌ಗಳ ನೆರವಿನಿಂದ ಅಜೇಯ 121 ರನ್ ಚಚ್ಚಿದರು. ಈ ಸ್ಫೋಟಕ ಸೆಂಚುರಿ ನೆರವಿನೊಂದಿಗೆ ಸೇಂಟ್ ಕಿಟ್ಸ್ ಅ್ಯಂಡ್ ನೆವಿಸ್ ಪೇಟ್ರಿಯಾಟ್ಸ್ ತಂಡವು 20 ಓವರ್​ಗಳಲ್ಲಿ 235 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಸೇಂಟ್ ಲೂಸಿಯಾ ಕಿಂಗ್ಸ್ 13.5 ಓವರ್​ಗಳಲ್ಲಿ ಕೇವಲ 98 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಪೇಟ್ರಿಯಾಟ್ಸ್ ಪಡೆ 137 ರನ್​ಗಳ ಭರ್ಜರಿ ಜಯ ಸಾಧಿಸಿದೆ. (PC: CPL)

ಇನ್ನು ಈ ಪಂದ್ಯದಲ್ಲಿ ಕೇವಲ 43 ಎಸೆತಗಳನ್ನು ಎದುರಿಸಿದ ಶಾನಕ 8 ಬೌಂಡರಿ ಹಾಗೂ 12 ಭರ್ಜರಿ ಸಿಕ್ಸರ್‌ಗಳ ನೆರವಿನಿಂದ ಅಜೇಯ 121 ರನ್ ಚಚ್ಚಿದರು. ಈ ಸ್ಫೋಟಕ ಸೆಂಚುರಿ ನೆರವಿನೊಂದಿಗೆ ಸೇಂಟ್ ಕಿಟ್ಸ್ ಅ್ಯಂಡ್ ನೆವಿಸ್ ಪೇಟ್ರಿಯಾಟ್ಸ್ ತಂಡವು 20 ಓವರ್​ಗಳಲ್ಲಿ 235 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಸೇಂಟ್ ಲೂಸಿಯಾ ಕಿಂಗ್ಸ್ 13.5 ಓವರ್​ಗಳಲ್ಲಿ ಕೇವಲ 98 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಪೇಟ್ರಿಯಾಟ್ಸ್ ಪಡೆ 137 ರನ್​ಗಳ ಭರ್ಜರಿ ಜಯ ಸಾಧಿಸಿದೆ. (PC: CPL)

5 / 5
Follow Us
ಕೃಷ್ಣ ಜನ್ಮಾಷ್ಟಮಿ 2026: ಉಡುಪಿ ಶ್ರೀಕೃಷ್ಣ ಮಠದಲ್ಲಿ ಅರ್ಘ್ಯ ಪ್ರದಾನ
ಕೃಷ್ಣ ಜನ್ಮಾಷ್ಟಮಿ 2026: ಉಡುಪಿ ಶ್ರೀಕೃಷ್ಣ ಮಠದಲ್ಲಿ ಅರ್ಘ್ಯ ಪ್ರದಾನ
ಬೆಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ ಭಾರಿ ಪ್ರಮಾಣದ ಸ್ಫೋಟಕ ಜಪ್ತಿ
ಬೆಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ ಭಾರಿ ಪ್ರಮಾಣದ ಸ್ಫೋಟಕ ಜಪ್ತಿ
ಇಂದು ಈ ರಾಶಿಯವರಿಗಿದೆ ಐದು ಗ್ರಹಗಳ ಶುಭಫಲ!
ಇಂದು ಈ ರಾಶಿಯವರಿಗಿದೆ ಐದು ಗ್ರಹಗಳ ಶುಭಫಲ!
ಕಣ್ಣೀರಿಡುತ್ತಾ ಕೆಎಸ್‌ಆರ್‌ಟಿಸಿ ಬಸ್​​ಗೆ ಮುತ್ತನ್ನಿಟ್ಟ ಕೇರಳದ ಚಾಲಕ
ಕಣ್ಣೀರಿಡುತ್ತಾ ಕೆಎಸ್‌ಆರ್‌ಟಿಸಿ ಬಸ್​​ಗೆ ಮುತ್ತನ್ನಿಟ್ಟ ಕೇರಳದ ಚಾಲಕ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ದಕ್ಷಿಣದ ಗೋವರ್ಧನಗಿರಿ ಎಂದು ಕರೆಯುವುದೇಕೆ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ದಕ್ಷಿಣದ ಗೋವರ್ಧನಗಿರಿ ಎಂದು ಕರೆಯುವುದೇಕೆ
ಟಿವಿ9 ಇಂಪ್ಯಾಕ್ಟ್: 8 ವರ್ಷದಿಂದ ಆಗದ ಕೆಲಸ ಕೇವಲ ಹತ್ತು ದಿನದಲ್ಲೇ ಆಯ್ತು!
ಟಿವಿ9 ಇಂಪ್ಯಾಕ್ಟ್: 8 ವರ್ಷದಿಂದ ಆಗದ ಕೆಲಸ ಕೇವಲ ಹತ್ತು ದಿನದಲ್ಲೇ ಆಯ್ತು!
ಬಿಗ್ ಬಾಸ್ ಸ್ಪರ್ಧಿಗಳ ವಿಡಿಯೋ ಹಂಚಿಕೊಂಡ ಕಲರ್ಸ್ ಕನ್ನಡ; ಯಾರು ಗೊತ್ತಾಯ್ತಾ
ಬಿಗ್ ಬಾಸ್ ಸ್ಪರ್ಧಿಗಳ ವಿಡಿಯೋ ಹಂಚಿಕೊಂಡ ಕಲರ್ಸ್ ಕನ್ನಡ; ಯಾರು ಗೊತ್ತಾಯ್ತಾ
ದೆಹಲಿಯಲ್ಲಿ ಧಾರಾಕಾರ ಮಳೆ; ರಸ್ತೆಯಲ್ಲಿ ನಿಂತ ನೀರಿನಲ್ಲಿ ಈಜಾಡಿದ ಮಕ್ಕಳು
ದೆಹಲಿಯಲ್ಲಿ ಧಾರಾಕಾರ ಮಳೆ; ರಸ್ತೆಯಲ್ಲಿ ನಿಂತ ನೀರಿನಲ್ಲಿ ಈಜಾಡಿದ ಮಕ್ಕಳು
ವಿಚ್ಛೇದನದ ಬಗ್ಗೆ ಕೇಳಿದ್ದಕ್ಕೆ ದುನಿಯಾ ವಿಜಯ್ ನೀಡಿದ ಪ್ರತಿಕ್ರಿಯೆ ಏನು?
ವಿಚ್ಛೇದನದ ಬಗ್ಗೆ ಕೇಳಿದ್ದಕ್ಕೆ ದುನಿಯಾ ವಿಜಯ್ ನೀಡಿದ ಪ್ರತಿಕ್ರಿಯೆ ಏನು?
ಉದ್ಯಾನವನಗಳ ಸಂರಕ್ಷಣಾ ತಿದ್ದುಪಡಿ ವಿಧೇಯಕ ಸರ್ಕಾರಕ್ಕೆ ವಾಪಸ್
ಉದ್ಯಾನವನಗಳ ಸಂರಕ್ಷಣಾ ತಿದ್ದುಪಡಿ ವಿಧೇಯಕ ಸರ್ಕಾರಕ್ಕೆ ವಾಪಸ್