AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

6,6,6,6,6: ಕಿಲ್ಲರ್ ಮಿಲ್ಲರ್ ತೂಫಾನ್​ಗೆ ನೈಟ್ ರೈಡರ್ಸ್​ ತತ್ತರ..!

CPL 2024: ಕೆರಿಬಿಯನ್ ಪ್ರೀಮಿಯರ್ ಲೀಗ್​ನ ಎಲಿಮಿನೇಟರ್ ಪಂದ್ಯದ ಮೊದಲ ಇನಿಂಗ್ಸ್​ ಮಳೆಯ ಕಾರಣ 19.1 ಓವರ್​ಗಳಿಗೆ ಸೀಮಿತವಾಗಿತ್ತು. ಈ 19.1 ಓವರ್​ಗಳಲ್ಲಿ ಟ್ರಿನ್​ಬಾಗೊ ನೈಟ್ ರೈಡರ್ಸ್ ತಂಡವು 168 ರನ್​​ ಕಲೆಹಾಕಿದ್ದರು. ಇದಾದ ಬಳಿಕ ಮಳೆ ಮುಂದುವರೆದಿದ್ದರಿಂದ ಫಲಿತಾಂಶ ನಿರ್ಧರಿಸಲು ಬಾರ್ಬಡೋಸ್ ತಂಡಕ್ಕೆ 5 ಓವರ್​ಗಳಲ್ಲಿ 60 ರನ್​ಗಳ ಗುರಿ ನೀಡಲಾಗಿತ್ತು.

ಝಾಹಿರ್ ಯೂಸುಫ್
|

Updated on: Oct 02, 2024 | 11:06 AM

Share
ಕೆರಿಬಿಯನ್ ಪ್ರೀಮಿಯರ್ ಲೀಗ್​ನ (CPL 2024) ಎಲಿಮಿನೇಟರ್ ಪಂದ್ಯದಲ್ಲಿ ಬಾರ್ಬಡೋಸ್ ರಾಯಲ್ಸ್ ತಂಡವು ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನ ರೂವಾರಿ ಸ್ಪೋಟಕ ದಾಂಡಿಗ ಡೇವಿಡ್ ಮಿಲ್ಲರ್. ಈ ಪಂದ್ಯದಲ್ಲಿ ಟಾಸ್ ಗೆದ್ದ ಟ್ರಿನ್​ಬಾಗೊ ನೈಟ್ ರೈಡರ್ಸ್ ತಂಡದ ನಾಯಕ ಕೀರನ್ ಪೊಲಾರ್ಡ್ ಬ್ಯಾಟಿಂಗ್ ಆಯ್ದುಕೊಂಡಿದ್ದರು.

ಕೆರಿಬಿಯನ್ ಪ್ರೀಮಿಯರ್ ಲೀಗ್​ನ (CPL 2024) ಎಲಿಮಿನೇಟರ್ ಪಂದ್ಯದಲ್ಲಿ ಬಾರ್ಬಡೋಸ್ ರಾಯಲ್ಸ್ ತಂಡವು ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನ ರೂವಾರಿ ಸ್ಪೋಟಕ ದಾಂಡಿಗ ಡೇವಿಡ್ ಮಿಲ್ಲರ್. ಈ ಪಂದ್ಯದಲ್ಲಿ ಟಾಸ್ ಗೆದ್ದ ಟ್ರಿನ್​ಬಾಗೊ ನೈಟ್ ರೈಡರ್ಸ್ ತಂಡದ ನಾಯಕ ಕೀರನ್ ಪೊಲಾರ್ಡ್ ಬ್ಯಾಟಿಂಗ್ ಆಯ್ದುಕೊಂಡಿದ್ದರು.

1 / 5
ಅದರಂತೆ ಇನಿಂಗ್ಸ್ ಆರಂಭಿಸಿದ ಟ್ರಿನ್​ಬಾಗೊ ನೈಟ್ ರೈಡರ್ಸ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕರಾದ ಜೇಸನ್ ರಾಯ್ (25) ಹಾಗೂ ಸುನಿಲ್ ನರೈನ್ (2) ಬೇಗನೆ ವಿಕೆಟ್ ಒಪ್ಪಿಸಿದ್ದರು. ಈ ಹಂತದಲ್ಲಿ ಕಣಕ್ಕಿಳಿದ ನಿಕೋಲಸ್ ಪೂರನ್ ಎಂದಿನಂತೆ ಈ ಬಾರಿ ಕೂಡ ಅಬ್ಬರಿಸಿದರು.

ಅದರಂತೆ ಇನಿಂಗ್ಸ್ ಆರಂಭಿಸಿದ ಟ್ರಿನ್​ಬಾಗೊ ನೈಟ್ ರೈಡರ್ಸ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕರಾದ ಜೇಸನ್ ರಾಯ್ (25) ಹಾಗೂ ಸುನಿಲ್ ನರೈನ್ (2) ಬೇಗನೆ ವಿಕೆಟ್ ಒಪ್ಪಿಸಿದ್ದರು. ಈ ಹಂತದಲ್ಲಿ ಕಣಕ್ಕಿಳಿದ ನಿಕೋಲಸ್ ಪೂರನ್ ಎಂದಿನಂತೆ ಈ ಬಾರಿ ಕೂಡ ಅಬ್ಬರಿಸಿದರು.

2 / 5
ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಪೂರನ್ 60 ಎಸೆತಗಳಲ್ಲಿ 5 ಭರ್ಜರಿ ಸಿಕ್ಸ್ ಹಾಗೂ 6 ಫೋರ್​ಗಳೊಂದಿಗೆ ಅಜೇಯ 91 ರನ್ ಬಾರಿಸಿದರು. ಈ ಸ್ಪೋಟಕ ಇನಿಂಗ್ಸ್ ನೆರವಿನಿಂದ ಟ್ರಿನ್​ಬಾಗೊ ನೈಟ್ ರೈಡರ್ಸ್ ತಂಡವು 19.1 ಓವರ್​ಗಳಲ್ಲಿ 3 ವಿಕೆಟ್ ಕಳೆದುಕೊಂಡು 168 ರನ್​ ಕಲೆಹಾಕಿತು. ಈ ವೇಳೆ ಮಳೆ ಬಂದಿದ್ದರಿಂದ ಪಂದ್ಯವನ್ನು ಸ್ಥಗಿತಗೊಳಿಸಲಾಯಿತು.

ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಪೂರನ್ 60 ಎಸೆತಗಳಲ್ಲಿ 5 ಭರ್ಜರಿ ಸಿಕ್ಸ್ ಹಾಗೂ 6 ಫೋರ್​ಗಳೊಂದಿಗೆ ಅಜೇಯ 91 ರನ್ ಬಾರಿಸಿದರು. ಈ ಸ್ಪೋಟಕ ಇನಿಂಗ್ಸ್ ನೆರವಿನಿಂದ ಟ್ರಿನ್​ಬಾಗೊ ನೈಟ್ ರೈಡರ್ಸ್ ತಂಡವು 19.1 ಓವರ್​ಗಳಲ್ಲಿ 3 ವಿಕೆಟ್ ಕಳೆದುಕೊಂಡು 168 ರನ್​ ಕಲೆಹಾಕಿತು. ಈ ವೇಳೆ ಮಳೆ ಬಂದಿದ್ದರಿಂದ ಪಂದ್ಯವನ್ನು ಸ್ಥಗಿತಗೊಳಿಸಲಾಯಿತು.

3 / 5
ಮಳೆ ನಿಂತ ಬಳಿಕ ಡಕ್​ವರ್ತ್ ಲೂಯಿಸ್ ನಿಯಮದ ಪ್ರಕಾರ ಬಾರ್ಬಡೋಸ್ ರಾಯಲ್ಸ್ ತಂಡಕ್ಕೆ 5 ಓವರ್​ಗಳಲ್ಲಿ 60 ರನ್​ಗಳ ಗುರಿ ನೀಡಲಾಯಿತು. ಈ ಗುರಿಯನ್ನು ಬೆನ್ನತ್ತಿದ ಬಾರ್ಬಡೋಸ್ ತಂಡವು ಮೊದಲ ಓವರ್​ನಲ್ಲೇ ಕ್ವಿಂಟನ್ ಡಿಕಾಕ್ (4) ವಿಕೆಟ್ ಕಳೆದುಕೊಂಡಿತು.

ಮಳೆ ನಿಂತ ಬಳಿಕ ಡಕ್​ವರ್ತ್ ಲೂಯಿಸ್ ನಿಯಮದ ಪ್ರಕಾರ ಬಾರ್ಬಡೋಸ್ ರಾಯಲ್ಸ್ ತಂಡಕ್ಕೆ 5 ಓವರ್​ಗಳಲ್ಲಿ 60 ರನ್​ಗಳ ಗುರಿ ನೀಡಲಾಯಿತು. ಈ ಗುರಿಯನ್ನು ಬೆನ್ನತ್ತಿದ ಬಾರ್ಬಡೋಸ್ ತಂಡವು ಮೊದಲ ಓವರ್​ನಲ್ಲೇ ಕ್ವಿಂಟನ್ ಡಿಕಾಕ್ (4) ವಿಕೆಟ್ ಕಳೆದುಕೊಂಡಿತು.

4 / 5
ಈ ವೇಳೆ ಕ್ರೀಸ್​ಗೆ ಆಗಮಿಸಿದ ಡೇವಿಡ್ ಮಿಲ್ಲರ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಮೈದಾನದ ಮೂಲೆ ಮೂಲೆಗೆ ಸಿಕ್ಸ್​ ಫೋರ್​ಗಳ ಸುರಿಮಳೆಗೈದ ಮಿಲ್ಲರ್ ಕೇವಲ 17 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಅಲ್ಲದೆ 5 ಭರ್ಜರಿ ಸಿಕ್ಸ್ ಹಾಗೂ 3 ಫೋರ್​ಗಳೊಂದಿಗೆ ಅಜೇಯ 50 ರನ್​ ಚಚ್ಚುವ ಮೂಲಕ 4.2 ಓವರ್​ಗಳಲ್ಲಿ ಬಾರ್ಬಡೋಸ್ ರಾಯಲ್ಸ್ ತಂಡವನ್ನು ಗೆಲುವಿನ ದಡ ಸೇರಿಸಿದರು. ಈ ಗೆಲುವಿನೊಂದಿಗೆ ಬಾರ್ಬಡೋಸ್ ರಾಯಲ್ಸ್ ಮುಂದಿನ ಹಂತಕ್ಕೇರಿದರೆ, ಟ್ರಿನ್​ಬಾಗೊ ನೈಟ್ ರೈಡರ್ಸ್ ಸಿಪಿಎಲ್ 2024 ರಿಂದ ಹೊರಬಿದ್ದಿದೆ.

ಈ ವೇಳೆ ಕ್ರೀಸ್​ಗೆ ಆಗಮಿಸಿದ ಡೇವಿಡ್ ಮಿಲ್ಲರ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಮೈದಾನದ ಮೂಲೆ ಮೂಲೆಗೆ ಸಿಕ್ಸ್​ ಫೋರ್​ಗಳ ಸುರಿಮಳೆಗೈದ ಮಿಲ್ಲರ್ ಕೇವಲ 17 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಅಲ್ಲದೆ 5 ಭರ್ಜರಿ ಸಿಕ್ಸ್ ಹಾಗೂ 3 ಫೋರ್​ಗಳೊಂದಿಗೆ ಅಜೇಯ 50 ರನ್​ ಚಚ್ಚುವ ಮೂಲಕ 4.2 ಓವರ್​ಗಳಲ್ಲಿ ಬಾರ್ಬಡೋಸ್ ರಾಯಲ್ಸ್ ತಂಡವನ್ನು ಗೆಲುವಿನ ದಡ ಸೇರಿಸಿದರು. ಈ ಗೆಲುವಿನೊಂದಿಗೆ ಬಾರ್ಬಡೋಸ್ ರಾಯಲ್ಸ್ ಮುಂದಿನ ಹಂತಕ್ಕೇರಿದರೆ, ಟ್ರಿನ್​ಬಾಗೊ ನೈಟ್ ರೈಡರ್ಸ್ ಸಿಪಿಎಲ್ 2024 ರಿಂದ ಹೊರಬಿದ್ದಿದೆ.

5 / 5
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ