AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

6,6,6,6,6: ಕಿಲ್ಲರ್ ಮಿಲ್ಲರ್ ತೂಫಾನ್​ಗೆ ನೈಟ್ ರೈಡರ್ಸ್​ ತತ್ತರ..!

CPL 2024: ಕೆರಿಬಿಯನ್ ಪ್ರೀಮಿಯರ್ ಲೀಗ್​ನ ಎಲಿಮಿನೇಟರ್ ಪಂದ್ಯದ ಮೊದಲ ಇನಿಂಗ್ಸ್​ ಮಳೆಯ ಕಾರಣ 19.1 ಓವರ್​ಗಳಿಗೆ ಸೀಮಿತವಾಗಿತ್ತು. ಈ 19.1 ಓವರ್​ಗಳಲ್ಲಿ ಟ್ರಿನ್​ಬಾಗೊ ನೈಟ್ ರೈಡರ್ಸ್ ತಂಡವು 168 ರನ್​​ ಕಲೆಹಾಕಿದ್ದರು. ಇದಾದ ಬಳಿಕ ಮಳೆ ಮುಂದುವರೆದಿದ್ದರಿಂದ ಫಲಿತಾಂಶ ನಿರ್ಧರಿಸಲು ಬಾರ್ಬಡೋಸ್ ತಂಡಕ್ಕೆ 5 ಓವರ್​ಗಳಲ್ಲಿ 60 ರನ್​ಗಳ ಗುರಿ ನೀಡಲಾಗಿತ್ತು.

ಝಾಹಿರ್ ಯೂಸುಫ್
|

Updated on: Oct 02, 2024 | 11:06 AM

ಕೆರಿಬಿಯನ್ ಪ್ರೀಮಿಯರ್ ಲೀಗ್​ನ (CPL 2024) ಎಲಿಮಿನೇಟರ್ ಪಂದ್ಯದಲ್ಲಿ ಬಾರ್ಬಡೋಸ್ ರಾಯಲ್ಸ್ ತಂಡವು ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನ ರೂವಾರಿ ಸ್ಪೋಟಕ ದಾಂಡಿಗ ಡೇವಿಡ್ ಮಿಲ್ಲರ್. ಈ ಪಂದ್ಯದಲ್ಲಿ ಟಾಸ್ ಗೆದ್ದ ಟ್ರಿನ್​ಬಾಗೊ ನೈಟ್ ರೈಡರ್ಸ್ ತಂಡದ ನಾಯಕ ಕೀರನ್ ಪೊಲಾರ್ಡ್ ಬ್ಯಾಟಿಂಗ್ ಆಯ್ದುಕೊಂಡಿದ್ದರು.

ಕೆರಿಬಿಯನ್ ಪ್ರೀಮಿಯರ್ ಲೀಗ್​ನ (CPL 2024) ಎಲಿಮಿನೇಟರ್ ಪಂದ್ಯದಲ್ಲಿ ಬಾರ್ಬಡೋಸ್ ರಾಯಲ್ಸ್ ತಂಡವು ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನ ರೂವಾರಿ ಸ್ಪೋಟಕ ದಾಂಡಿಗ ಡೇವಿಡ್ ಮಿಲ್ಲರ್. ಈ ಪಂದ್ಯದಲ್ಲಿ ಟಾಸ್ ಗೆದ್ದ ಟ್ರಿನ್​ಬಾಗೊ ನೈಟ್ ರೈಡರ್ಸ್ ತಂಡದ ನಾಯಕ ಕೀರನ್ ಪೊಲಾರ್ಡ್ ಬ್ಯಾಟಿಂಗ್ ಆಯ್ದುಕೊಂಡಿದ್ದರು.

1 / 5
ಅದರಂತೆ ಇನಿಂಗ್ಸ್ ಆರಂಭಿಸಿದ ಟ್ರಿನ್​ಬಾಗೊ ನೈಟ್ ರೈಡರ್ಸ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕರಾದ ಜೇಸನ್ ರಾಯ್ (25) ಹಾಗೂ ಸುನಿಲ್ ನರೈನ್ (2) ಬೇಗನೆ ವಿಕೆಟ್ ಒಪ್ಪಿಸಿದ್ದರು. ಈ ಹಂತದಲ್ಲಿ ಕಣಕ್ಕಿಳಿದ ನಿಕೋಲಸ್ ಪೂರನ್ ಎಂದಿನಂತೆ ಈ ಬಾರಿ ಕೂಡ ಅಬ್ಬರಿಸಿದರು.

ಅದರಂತೆ ಇನಿಂಗ್ಸ್ ಆರಂಭಿಸಿದ ಟ್ರಿನ್​ಬಾಗೊ ನೈಟ್ ರೈಡರ್ಸ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕರಾದ ಜೇಸನ್ ರಾಯ್ (25) ಹಾಗೂ ಸುನಿಲ್ ನರೈನ್ (2) ಬೇಗನೆ ವಿಕೆಟ್ ಒಪ್ಪಿಸಿದ್ದರು. ಈ ಹಂತದಲ್ಲಿ ಕಣಕ್ಕಿಳಿದ ನಿಕೋಲಸ್ ಪೂರನ್ ಎಂದಿನಂತೆ ಈ ಬಾರಿ ಕೂಡ ಅಬ್ಬರಿಸಿದರು.

2 / 5
ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಪೂರನ್ 60 ಎಸೆತಗಳಲ್ಲಿ 5 ಭರ್ಜರಿ ಸಿಕ್ಸ್ ಹಾಗೂ 6 ಫೋರ್​ಗಳೊಂದಿಗೆ ಅಜೇಯ 91 ರನ್ ಬಾರಿಸಿದರು. ಈ ಸ್ಪೋಟಕ ಇನಿಂಗ್ಸ್ ನೆರವಿನಿಂದ ಟ್ರಿನ್​ಬಾಗೊ ನೈಟ್ ರೈಡರ್ಸ್ ತಂಡವು 19.1 ಓವರ್​ಗಳಲ್ಲಿ 3 ವಿಕೆಟ್ ಕಳೆದುಕೊಂಡು 168 ರನ್​ ಕಲೆಹಾಕಿತು. ಈ ವೇಳೆ ಮಳೆ ಬಂದಿದ್ದರಿಂದ ಪಂದ್ಯವನ್ನು ಸ್ಥಗಿತಗೊಳಿಸಲಾಯಿತು.

ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಪೂರನ್ 60 ಎಸೆತಗಳಲ್ಲಿ 5 ಭರ್ಜರಿ ಸಿಕ್ಸ್ ಹಾಗೂ 6 ಫೋರ್​ಗಳೊಂದಿಗೆ ಅಜೇಯ 91 ರನ್ ಬಾರಿಸಿದರು. ಈ ಸ್ಪೋಟಕ ಇನಿಂಗ್ಸ್ ನೆರವಿನಿಂದ ಟ್ರಿನ್​ಬಾಗೊ ನೈಟ್ ರೈಡರ್ಸ್ ತಂಡವು 19.1 ಓವರ್​ಗಳಲ್ಲಿ 3 ವಿಕೆಟ್ ಕಳೆದುಕೊಂಡು 168 ರನ್​ ಕಲೆಹಾಕಿತು. ಈ ವೇಳೆ ಮಳೆ ಬಂದಿದ್ದರಿಂದ ಪಂದ್ಯವನ್ನು ಸ್ಥಗಿತಗೊಳಿಸಲಾಯಿತು.

3 / 5
ಮಳೆ ನಿಂತ ಬಳಿಕ ಡಕ್​ವರ್ತ್ ಲೂಯಿಸ್ ನಿಯಮದ ಪ್ರಕಾರ ಬಾರ್ಬಡೋಸ್ ರಾಯಲ್ಸ್ ತಂಡಕ್ಕೆ 5 ಓವರ್​ಗಳಲ್ಲಿ 60 ರನ್​ಗಳ ಗುರಿ ನೀಡಲಾಯಿತು. ಈ ಗುರಿಯನ್ನು ಬೆನ್ನತ್ತಿದ ಬಾರ್ಬಡೋಸ್ ತಂಡವು ಮೊದಲ ಓವರ್​ನಲ್ಲೇ ಕ್ವಿಂಟನ್ ಡಿಕಾಕ್ (4) ವಿಕೆಟ್ ಕಳೆದುಕೊಂಡಿತು.

ಮಳೆ ನಿಂತ ಬಳಿಕ ಡಕ್​ವರ್ತ್ ಲೂಯಿಸ್ ನಿಯಮದ ಪ್ರಕಾರ ಬಾರ್ಬಡೋಸ್ ರಾಯಲ್ಸ್ ತಂಡಕ್ಕೆ 5 ಓವರ್​ಗಳಲ್ಲಿ 60 ರನ್​ಗಳ ಗುರಿ ನೀಡಲಾಯಿತು. ಈ ಗುರಿಯನ್ನು ಬೆನ್ನತ್ತಿದ ಬಾರ್ಬಡೋಸ್ ತಂಡವು ಮೊದಲ ಓವರ್​ನಲ್ಲೇ ಕ್ವಿಂಟನ್ ಡಿಕಾಕ್ (4) ವಿಕೆಟ್ ಕಳೆದುಕೊಂಡಿತು.

4 / 5
ಈ ವೇಳೆ ಕ್ರೀಸ್​ಗೆ ಆಗಮಿಸಿದ ಡೇವಿಡ್ ಮಿಲ್ಲರ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಮೈದಾನದ ಮೂಲೆ ಮೂಲೆಗೆ ಸಿಕ್ಸ್​ ಫೋರ್​ಗಳ ಸುರಿಮಳೆಗೈದ ಮಿಲ್ಲರ್ ಕೇವಲ 17 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಅಲ್ಲದೆ 5 ಭರ್ಜರಿ ಸಿಕ್ಸ್ ಹಾಗೂ 3 ಫೋರ್​ಗಳೊಂದಿಗೆ ಅಜೇಯ 50 ರನ್​ ಚಚ್ಚುವ ಮೂಲಕ 4.2 ಓವರ್​ಗಳಲ್ಲಿ ಬಾರ್ಬಡೋಸ್ ರಾಯಲ್ಸ್ ತಂಡವನ್ನು ಗೆಲುವಿನ ದಡ ಸೇರಿಸಿದರು. ಈ ಗೆಲುವಿನೊಂದಿಗೆ ಬಾರ್ಬಡೋಸ್ ರಾಯಲ್ಸ್ ಮುಂದಿನ ಹಂತಕ್ಕೇರಿದರೆ, ಟ್ರಿನ್​ಬಾಗೊ ನೈಟ್ ರೈಡರ್ಸ್ ಸಿಪಿಎಲ್ 2024 ರಿಂದ ಹೊರಬಿದ್ದಿದೆ.

ಈ ವೇಳೆ ಕ್ರೀಸ್​ಗೆ ಆಗಮಿಸಿದ ಡೇವಿಡ್ ಮಿಲ್ಲರ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಮೈದಾನದ ಮೂಲೆ ಮೂಲೆಗೆ ಸಿಕ್ಸ್​ ಫೋರ್​ಗಳ ಸುರಿಮಳೆಗೈದ ಮಿಲ್ಲರ್ ಕೇವಲ 17 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಅಲ್ಲದೆ 5 ಭರ್ಜರಿ ಸಿಕ್ಸ್ ಹಾಗೂ 3 ಫೋರ್​ಗಳೊಂದಿಗೆ ಅಜೇಯ 50 ರನ್​ ಚಚ್ಚುವ ಮೂಲಕ 4.2 ಓವರ್​ಗಳಲ್ಲಿ ಬಾರ್ಬಡೋಸ್ ರಾಯಲ್ಸ್ ತಂಡವನ್ನು ಗೆಲುವಿನ ದಡ ಸೇರಿಸಿದರು. ಈ ಗೆಲುವಿನೊಂದಿಗೆ ಬಾರ್ಬಡೋಸ್ ರಾಯಲ್ಸ್ ಮುಂದಿನ ಹಂತಕ್ಕೇರಿದರೆ, ಟ್ರಿನ್​ಬಾಗೊ ನೈಟ್ ರೈಡರ್ಸ್ ಸಿಪಿಎಲ್ 2024 ರಿಂದ ಹೊರಬಿದ್ದಿದೆ.

5 / 5
Follow us
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ