AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

David Warner: ಡೇವಿಡ್ ವಾರ್ನರ್ ನಿವೃತ್ತಿ ಘೋಷಣೆ

David Warner: ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟಿ20 ಪಂದ್ಯದ ಮೂಲಕ ಟಿ20 ಕ್ರಿಕೆಟ್​ನಲ್ಲಿ ಡೇವಿಡ್ ವಾರ್ನರ್ 100 ಪಂದ್ಯಗಳನ್ನಾಡಿದ ವಿಶೇಷ ಸಾಧಕರ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ. ಈ ಸಾಧನೆಯ ಬೆನ್ನಲ್ಲೇ ಇದೀಗ ಚುಟುಕು ಕ್ರಿಕೆಟ್​ಗೂ ವಿದಾಯ ಹೇಳಲು ಮುಂದಾಗಿರುವುದಾಗಿ ವಾರ್ನರ್ ತಿಳಿಸಿದ್ದಾರೆ.

TV9 Web
| Edited By: |

Updated on: Feb 10, 2024 | 10:07 AM

Share
ಏಕದಿನ ಮತ್ತು ಟೆಸ್ಟ್ ಕ್ರಿಕೆಟ್​ಗೆ ವಿದಾಯ ಹೇಳಿರುವ ಆಸ್ಟ್ರೇಲಿಯಾ ತಂಡದ ಸ್ಟಾರ್ ಆಟಗಾರ ಡೇವಿಡ್ ವಾರ್ನರ್ (David Warner) ಇದೀಗ ಟಿ20 ಕ್ರಿಕೆಟ್​ಗೂ ನಿವೃತ್ತಿ ಹೇಳುವುದಾಗಿ ತಿಳಿಸಿದ್ದಾರೆ. ಅದಕ್ಕೂ ಮುನ್ನ ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯಲು ಬಯಸಿದ್ದಾರೆ.

ಏಕದಿನ ಮತ್ತು ಟೆಸ್ಟ್ ಕ್ರಿಕೆಟ್​ಗೆ ವಿದಾಯ ಹೇಳಿರುವ ಆಸ್ಟ್ರೇಲಿಯಾ ತಂಡದ ಸ್ಟಾರ್ ಆಟಗಾರ ಡೇವಿಡ್ ವಾರ್ನರ್ (David Warner) ಇದೀಗ ಟಿ20 ಕ್ರಿಕೆಟ್​ಗೂ ನಿವೃತ್ತಿ ಹೇಳುವುದಾಗಿ ತಿಳಿಸಿದ್ದಾರೆ. ಅದಕ್ಕೂ ಮುನ್ನ ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯಲು ಬಯಸಿದ್ದಾರೆ.

1 / 5
ಅಂದರೆ ಮುಂಬರುವ ಟಿ20 ವಿಶ್ವಕಪ್​ ಮೂಲಕ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸುವುದಾಗಿ ಡೇವಿಡ್ ವಾರ್ನರ್ ತಿಳಿಸಿದ್ದಾರೆ. ಇದರೊಂದಿಗೆ 2024 ರಲ್ಲಿ ವಾರ್ನರ್ ಅವರ ಅಂತಾರಾಷ್ಟ್ರೀಯ ವೃತ್ತಿಜೀವನ ಕೊನೆಗೊಳ್ಳುವುದು ಖಚಿತವಾದಂತಾಗಿದೆ.

ಅಂದರೆ ಮುಂಬರುವ ಟಿ20 ವಿಶ್ವಕಪ್​ ಮೂಲಕ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸುವುದಾಗಿ ಡೇವಿಡ್ ವಾರ್ನರ್ ತಿಳಿಸಿದ್ದಾರೆ. ಇದರೊಂದಿಗೆ 2024 ರಲ್ಲಿ ವಾರ್ನರ್ ಅವರ ಅಂತಾರಾಷ್ಟ್ರೀಯ ವೃತ್ತಿಜೀವನ ಕೊನೆಗೊಳ್ಳುವುದು ಖಚಿತವಾದಂತಾಗಿದೆ.

2 / 5
ಆಸ್ಟ್ರೇಲಿಯಾ ಪರ 100ನೇ ಟಿ20 ಪಂದ್ಯವಾಡಿದ ಬಳಿಕ ಮಾತನಾಡಿದ ಡೇವಿಡ್ ವಾರ್ನರ್, ವೆಸ್ಟ್ ಇಂಡೀಸ್ ವಿರುದ್ಧದ ಈ ಪ್ರದರ್ಶನ ಖುಷಿ ನೀಡಿದೆ. ಇನ್ನು ನನ್ನ ಮುಂದಿರುವುದು ಕೇವಲ ತಿಂಗಳು ಮಾತ್ರ. ಹೀಗಾಗಿ ಇದೇ ಫಾರ್ಮ್ ಅನ್ನು ಮುಂದುವರೆಸಲು ಬಯಸುತ್ತೇನೆ. ಏಕೆಂದರೆ ಟಿ20 ವಿಶ್ವಕಪ್​ ಬಳಿಕ ನಾನು ಟಿ20 ಕ್ರಿಕೆಟ್​ಗೂ ವಿದಾಯ ಹೇಳುತ್ತಿದ್ದೇನೆ ವಾರ್ನರ್ ತಿಳಿಸಿದ್ದಾರೆ.

ಆಸ್ಟ್ರೇಲಿಯಾ ಪರ 100ನೇ ಟಿ20 ಪಂದ್ಯವಾಡಿದ ಬಳಿಕ ಮಾತನಾಡಿದ ಡೇವಿಡ್ ವಾರ್ನರ್, ವೆಸ್ಟ್ ಇಂಡೀಸ್ ವಿರುದ್ಧದ ಈ ಪ್ರದರ್ಶನ ಖುಷಿ ನೀಡಿದೆ. ಇನ್ನು ನನ್ನ ಮುಂದಿರುವುದು ಕೇವಲ ತಿಂಗಳು ಮಾತ್ರ. ಹೀಗಾಗಿ ಇದೇ ಫಾರ್ಮ್ ಅನ್ನು ಮುಂದುವರೆಸಲು ಬಯಸುತ್ತೇನೆ. ಏಕೆಂದರೆ ಟಿ20 ವಿಶ್ವಕಪ್​ ಬಳಿಕ ನಾನು ಟಿ20 ಕ್ರಿಕೆಟ್​ಗೂ ವಿದಾಯ ಹೇಳುತ್ತಿದ್ದೇನೆ ವಾರ್ನರ್ ತಿಳಿಸಿದ್ದಾರೆ.

3 / 5
37ರ ವರ್ಷದ ವಾರ್ನರ್ ಜನವರಿ 1 ರಂದು ಏಕದಿನ ಕ್ರಿಕೆಟ್​ಗೆ ವಿದಾಯ ಹೇಳಿದ್ದರು. ಅಲ್ಲದೆ ಜನವರಿ 6 ರಂದು ಕೊನೆಯ ಪಂದ್ಯವಾಡುವ ಮೂಲಕ ಟೆಸ್ಟ್ ಕ್ರಿಕೆಟ್​ಗೂ ಗುಡ್ ಬೈ ಹೇಳಿದ್ದರು. ಇದೀಗ ಮುಂಬರುವ ಟಿ20 ವಿಶ್ವಕಪ್​ ಮೂಲಕ ಚುಟುಕು ಕ್ರಿಕೆಟ್​ಗೂ ಡೇವಿಡ್ ವಾರ್ನರ್ ನಿವೃತ್ತಿ ಘೋಷಿಸಿದ್ದಾರೆ.

37ರ ವರ್ಷದ ವಾರ್ನರ್ ಜನವರಿ 1 ರಂದು ಏಕದಿನ ಕ್ರಿಕೆಟ್​ಗೆ ವಿದಾಯ ಹೇಳಿದ್ದರು. ಅಲ್ಲದೆ ಜನವರಿ 6 ರಂದು ಕೊನೆಯ ಪಂದ್ಯವಾಡುವ ಮೂಲಕ ಟೆಸ್ಟ್ ಕ್ರಿಕೆಟ್​ಗೂ ಗುಡ್ ಬೈ ಹೇಳಿದ್ದರು. ಇದೀಗ ಮುಂಬರುವ ಟಿ20 ವಿಶ್ವಕಪ್​ ಮೂಲಕ ಚುಟುಕು ಕ್ರಿಕೆಟ್​ಗೂ ಡೇವಿಡ್ ವಾರ್ನರ್ ನಿವೃತ್ತಿ ಘೋಷಿಸಿದ್ದಾರೆ.

4 / 5
ಟಿ20 ವಿಶ್ವಕಪ್​ನಲ್ಲಿ ಆಸ್ಟ್ರೇಲಿಯಾ ತಂಡವು ಬಿ ಗ್ರೂಪ್​ನಲ್ಲಿದ್ದು, ಈ ಗುಂಪಿನಲ್ಲಿ ಇಂಗ್ಲೆಂಡ್, ನಮೀಬಿಯಾ, ಒಮಾನ್ ಮತ್ತು ಸ್ಕಾಟ್ಲೆಂಡ್​ ತಂಡಗಳಿವೆ. ಈ ತಂಡಗಳ ವಿರುದ್ಧ ಆಸ್ಟ್ರೇಲಿಯಾ ಭರ್ಜರಿ ಪ್ರದರ್ಶನ ನೀಡುವ ನಿರೀಕ್ಷೆಯಿದೆ. ಈ ನಿರೀಕ್ಷೆಯೊಂದಿಗೆ ಕಣಕ್ಕಿಳಿಯಲಿರುವ ಆಸ್ಟ್ರೇಲಿಯಾ ತಂಡವು ವಾರ್ನರ್​ಗೆ ವಿಶ್ವಕಪ್ ಗೆಲುವಿನ ವಿದಾಯ ನೀಡಲಿದ್ದಾರಾ ಕಾದು ನೋಡಬೇಕಿದೆ.

ಟಿ20 ವಿಶ್ವಕಪ್​ನಲ್ಲಿ ಆಸ್ಟ್ರೇಲಿಯಾ ತಂಡವು ಬಿ ಗ್ರೂಪ್​ನಲ್ಲಿದ್ದು, ಈ ಗುಂಪಿನಲ್ಲಿ ಇಂಗ್ಲೆಂಡ್, ನಮೀಬಿಯಾ, ಒಮಾನ್ ಮತ್ತು ಸ್ಕಾಟ್ಲೆಂಡ್​ ತಂಡಗಳಿವೆ. ಈ ತಂಡಗಳ ವಿರುದ್ಧ ಆಸ್ಟ್ರೇಲಿಯಾ ಭರ್ಜರಿ ಪ್ರದರ್ಶನ ನೀಡುವ ನಿರೀಕ್ಷೆಯಿದೆ. ಈ ನಿರೀಕ್ಷೆಯೊಂದಿಗೆ ಕಣಕ್ಕಿಳಿಯಲಿರುವ ಆಸ್ಟ್ರೇಲಿಯಾ ತಂಡವು ವಾರ್ನರ್​ಗೆ ವಿಶ್ವಕಪ್ ಗೆಲುವಿನ ವಿದಾಯ ನೀಡಲಿದ್ದಾರಾ ಕಾದು ನೋಡಬೇಕಿದೆ.

5 / 5
Web contact
Web contact

TV9 Kannada

Read More
Follow Us
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​