AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

David Warner: ಪ್ಯಾಟ್ ಕಮಿನ್ಸ್ ಬಳಿಕ ಆಸ್ಟ್ರೇಲಿಯಾ ತೆರಳಿದ ಡೇವಿಡ್ ವಾರ್ನರ್: ಕಾಂಗರೂ ಪಡೆಗೆ ದೊಡ್ಡ ಹಿನ್ನಡೆ

India vs Australia 3rd Test: ಸೋಮವಾರವಷ್ಟೆ ಆಸೀಸ್ ನಾಯಕ ಪ್ಯಾಟ್ ಕಮಿನ್ಸ್ ಆಸ್ಟ್ರೇಲಿಯಾಕ್ಕೆ ತೆರಳಿದ್ದರು. ಇದೀಗ ಸ್ಟಾರ್ ಆರಂಭಿಕ ಡೇವಿಡ್ ವಾರ್ನರ್ ಕೂಡ ತವರಿಗೆ ಪ್ರಯಾಣ ಬೆಳೆಸಿದ್ದಾರೆ. ಇವರು ಬಾರ್ಡರ್- ಗವಾಸ್ಕರ್ ಟೆಸ್ಟ್ ಸರಣಿಯಿಂದಲೇ ಹೊರಬಿದ್ದಿದ್ದಾರೆ.

Vinay Bhat
|

Updated on: Feb 21, 2023 | 12:21 PM

ಭಾರತ ಪ್ರವಾಸ ಬೆಳೆಸಿರುವ ಆಸ್ಟ್ರೇಲಿಯಾ ಕ್ರಿಕೆಟ್ ತಂಡಕ್ಕೆ ಒಂದಲ್ಲ ಒಂದು ಸಮಸ್ಯೆ ಎದುರಾಗುತ್ತಿದೆ. ಈಗಾಗಲೇ ನಾಲ್ಕು ಪಂದ್ಯಗಳ ಬಾರ್ಡರ್- ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಎರಡು ಪಂದ್ಯಗಳಲ್ಲಿ ಹೀನಾಯ ಸೋಲು ಕಂಡಿರುವ ಕಾಂಗರೂ ಪಡೆ ಆಘಾತದಲ್ಲಿದೆ. ಇದರ ನಡುವೆಯೂ ಶಾಕ್ ಮೇಲೆ ಶಾಕ್ ಅನುಭವಿಸುತ್ತಿದೆ.

ಭಾರತ ಪ್ರವಾಸ ಬೆಳೆಸಿರುವ ಆಸ್ಟ್ರೇಲಿಯಾ ಕ್ರಿಕೆಟ್ ತಂಡಕ್ಕೆ ಒಂದಲ್ಲ ಒಂದು ಸಮಸ್ಯೆ ಎದುರಾಗುತ್ತಿದೆ. ಈಗಾಗಲೇ ನಾಲ್ಕು ಪಂದ್ಯಗಳ ಬಾರ್ಡರ್- ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಎರಡು ಪಂದ್ಯಗಳಲ್ಲಿ ಹೀನಾಯ ಸೋಲು ಕಂಡಿರುವ ಕಾಂಗರೂ ಪಡೆ ಆಘಾತದಲ್ಲಿದೆ. ಇದರ ನಡುವೆಯೂ ಶಾಕ್ ಮೇಲೆ ಶಾಕ್ ಅನುಭವಿಸುತ್ತಿದೆ.

1 / 7
ಸೋಮವಾರವಷ್ಟೆ ಆಸೀಸ್ ನಾಯಕ ಪ್ಯಾಟ್ ಕಮಿನ್ಸ್ ಆಸ್ಟ್ರೇಲಿಯಾಕ್ಕೆ ತೆರಳಿದ್ದರು. ಇದೀಗ ಸ್ಟಾರ್ ಆರಂಭಿಕ ಡೇವಿಡ್ ವಾರ್ನರ್ ಕೂಡ ತವರಿಗೆ ಪ್ರಯಾಣ ಬೆಳೆಸಿದ್ದಾರೆ. ಇವರು ಬಾರ್ಡರ್- ಗವಾಸ್ಕರ್ ಟೆಸ್ಟ್ ಸರಣಿಯಿಂದಲೇ ಹೊರಬಿದ್ದಿದ್ದಾರೆ.

ಸೋಮವಾರವಷ್ಟೆ ಆಸೀಸ್ ನಾಯಕ ಪ್ಯಾಟ್ ಕಮಿನ್ಸ್ ಆಸ್ಟ್ರೇಲಿಯಾಕ್ಕೆ ತೆರಳಿದ್ದರು. ಇದೀಗ ಸ್ಟಾರ್ ಆರಂಭಿಕ ಡೇವಿಡ್ ವಾರ್ನರ್ ಕೂಡ ತವರಿಗೆ ಪ್ರಯಾಣ ಬೆಳೆಸಿದ್ದಾರೆ. ಇವರು ಬಾರ್ಡರ್- ಗವಾಸ್ಕರ್ ಟೆಸ್ಟ್ ಸರಣಿಯಿಂದಲೇ ಹೊರಬಿದ್ದಿದ್ದಾರೆ.

2 / 7
ವಾರ್ನರ್ ಅವರ ಮೊಣಕೈ ಮುರಿದ ಕಾರಣ ಇಂಜುರಿಗೆ ತುತ್ತಾಗಿದ್ದು ಮುಂದಿನ ಟೆಸ್ಟ್​ಗಳಿಗೆ ಲಭ್ಯವಿರುವುದಿಲ್ಲ ಎಂದು ಕ್ರಿಕೆಟ್ ಆಸ್ಟ್ರೇಲಿಯಾ ಹೇಳಿದೆ. ದ್ವಿತೀಯ ಟೆಸ್ಟ್​ನ ಮೊದಲ ದಿನ ವಾರ್ನರ್ ಬ್ಯಾಟಿಂಗ್ ಮಾಡುವಾಗ ಸಿರಾಜ್ ಹಾಗೂ ಶಮಿ ಎಸೆತದ ಬೌನ್ಸರ್​ಗಳು ಅನೇಕ ಬಾರಿ ಅವರ ದೇಹದ ಮೇಲೆಯೇ ಬಿತ್ತು. ಅದರಲ್ಲೂ ಒಂದು ಸಂದರ್ಭ ಚೆಂಡು ವಾರ್ನರ್ ಅವರ ಮೊಣಕೈಗೆ ಬಡಿದು ಪೆಟ್ಟುಬಿದ್ದಿತು. ಎರಡು ಬಾರಿ ಹೆಲ್ಮೆಟ್​ಗೆ ಬಡಿಯಿತು.

ವಾರ್ನರ್ ಅವರ ಮೊಣಕೈ ಮುರಿದ ಕಾರಣ ಇಂಜುರಿಗೆ ತುತ್ತಾಗಿದ್ದು ಮುಂದಿನ ಟೆಸ್ಟ್​ಗಳಿಗೆ ಲಭ್ಯವಿರುವುದಿಲ್ಲ ಎಂದು ಕ್ರಿಕೆಟ್ ಆಸ್ಟ್ರೇಲಿಯಾ ಹೇಳಿದೆ. ದ್ವಿತೀಯ ಟೆಸ್ಟ್​ನ ಮೊದಲ ದಿನ ವಾರ್ನರ್ ಬ್ಯಾಟಿಂಗ್ ಮಾಡುವಾಗ ಸಿರಾಜ್ ಹಾಗೂ ಶಮಿ ಎಸೆತದ ಬೌನ್ಸರ್​ಗಳು ಅನೇಕ ಬಾರಿ ಅವರ ದೇಹದ ಮೇಲೆಯೇ ಬಿತ್ತು. ಅದರಲ್ಲೂ ಒಂದು ಸಂದರ್ಭ ಚೆಂಡು ವಾರ್ನರ್ ಅವರ ಮೊಣಕೈಗೆ ಬಡಿದು ಪೆಟ್ಟುಬಿದ್ದಿತು. ಎರಡು ಬಾರಿ ಹೆಲ್ಮೆಟ್​ಗೆ ಬಡಿಯಿತು.

3 / 7
ಎರಡನೇ ಟೆಸ್ಟ್​ನ ಮೊದಲ ದಿನವೇ ಗಾಯಕ್ಕೆ ತುತ್ತಾಗಿದ್ದ ವಾರ್ನರ್ ನಂತರ ಭಾರತದ ಬ್ಯಾಟಿಂಗ್ ವೇಳೆ ಫೀಲ್ಡಿಂಗ್​ಗೂ ಬಂದಿರಲಿಲ್ಲ. ಇದೀಗ ಇವರ ಗಾಯದ ಪ್ರಮಾಣ ದೊಡ್ಡದಾಗಿರುವ ಕಾರಣ ಸರಣಿಯಿಂದಲೇ ಔಟಾಗಿದ್ದಾರೆ. ಈಗಾಗಲೇ ಇವರ ಸ್ಥಾನಕ್ಕೆ ಮ್ಯಾಟಟ್ ರೆನ್ಶಾ ಅವರನ್ನು ಆಯ್ಕೆ ಮಾಡಲಾಗಿದೆ.

ಎರಡನೇ ಟೆಸ್ಟ್​ನ ಮೊದಲ ದಿನವೇ ಗಾಯಕ್ಕೆ ತುತ್ತಾಗಿದ್ದ ವಾರ್ನರ್ ನಂತರ ಭಾರತದ ಬ್ಯಾಟಿಂಗ್ ವೇಳೆ ಫೀಲ್ಡಿಂಗ್​ಗೂ ಬಂದಿರಲಿಲ್ಲ. ಇದೀಗ ಇವರ ಗಾಯದ ಪ್ರಮಾಣ ದೊಡ್ಡದಾಗಿರುವ ಕಾರಣ ಸರಣಿಯಿಂದಲೇ ಔಟಾಗಿದ್ದಾರೆ. ಈಗಾಗಲೇ ಇವರ ಸ್ಥಾನಕ್ಕೆ ಮ್ಯಾಟಟ್ ರೆನ್ಶಾ ಅವರನ್ನು ಆಯ್ಕೆ ಮಾಡಲಾಗಿದೆ.

4 / 7
ಈಗಾಗಲೇ ಸತತ ಕಳಪೆ ಪ್ರದರ್ಶನದಿಂದ ಬಳಲುತ್ತಿರುವ ವಾರ್ನರ್​ಗೆ ಇದು ದೊಡ್ಡ ಹಿನ್ನಡೆ. ಮೊದಲ ಟೆಸ್ಟ್​ನಲ್ಲಿ 1 ರನ್ ಹಾಗೂ 10 ರನ್​ಗೆ ವಿಕೆಟ್ ಒಪ್ಪಿಸಿದರೆ, ದ್ವಿತೀಯ ಟೆಸ್ಟ್​ನ ಮೊದಲ ಇನ್ನಿಂಗ್ಸ್​ನಲ್ಲಿ 15 ರನ್​ಗೆ ಔಟಾಗಿದ್ದರು.

ಈಗಾಗಲೇ ಸತತ ಕಳಪೆ ಪ್ರದರ್ಶನದಿಂದ ಬಳಲುತ್ತಿರುವ ವಾರ್ನರ್​ಗೆ ಇದು ದೊಡ್ಡ ಹಿನ್ನಡೆ. ಮೊದಲ ಟೆಸ್ಟ್​ನಲ್ಲಿ 1 ರನ್ ಹಾಗೂ 10 ರನ್​ಗೆ ವಿಕೆಟ್ ಒಪ್ಪಿಸಿದರೆ, ದ್ವಿತೀಯ ಟೆಸ್ಟ್​ನ ಮೊದಲ ಇನ್ನಿಂಗ್ಸ್​ನಲ್ಲಿ 15 ರನ್​ಗೆ ಔಟಾಗಿದ್ದರು.

5 / 7
ಇತ್ತ ಆಸ್ಟ್ರೇಲಿಯಾ ನಾಯಕ ಪ್ಯಾಟ್ ಕಮಿನ್ಸ್ ಸೋಮವಾರ ಬೆಳಗ್ಗೆ ದಿಢಿರ್ ತಮ್ಮ ಮನೆಗೆ ತೆರಳಿದ್ದಾರೆ. ಕುಟುಂಬದಲ್ಲಿ ಅನಾರೋಗ್ಯ ಸಮಸ್ಯೆ ಕಂಡು ಬಂದಿರುವುದರಿಂದ ಅವರು ಆಸ್ಟ್ರೇಲಿಯಾಕ್ಕೆ ಪ್ರಯಾಣ ಬೆಳೆಸಿದ್ದಾರೆ ಎಂದು ವರದಿ ಆಗಿದೆ. ಕಮಿನ್ಸ್ ಕೆಲವು ದಿನಗಳ ಮಟ್ಟಿಗಷ್ಟೆ ಸಿಡ್ನಿಗೆ ತೆರಳಿದ್ದಾರೆ. ಮೂರನೇ ಟೆಸ್ಟ್ ಆರಂಭವಾಗುವ ಹೊತ್ತಿಗೆ ತಂಡ ಸೇರಿಕೊಳ್ಳುವ ನಿರೀಕ್ಷೆಯಿದೆ.

ಇತ್ತ ಆಸ್ಟ್ರೇಲಿಯಾ ನಾಯಕ ಪ್ಯಾಟ್ ಕಮಿನ್ಸ್ ಸೋಮವಾರ ಬೆಳಗ್ಗೆ ದಿಢಿರ್ ತಮ್ಮ ಮನೆಗೆ ತೆರಳಿದ್ದಾರೆ. ಕುಟುಂಬದಲ್ಲಿ ಅನಾರೋಗ್ಯ ಸಮಸ್ಯೆ ಕಂಡು ಬಂದಿರುವುದರಿಂದ ಅವರು ಆಸ್ಟ್ರೇಲಿಯಾಕ್ಕೆ ಪ್ರಯಾಣ ಬೆಳೆಸಿದ್ದಾರೆ ಎಂದು ವರದಿ ಆಗಿದೆ. ಕಮಿನ್ಸ್ ಕೆಲವು ದಿನಗಳ ಮಟ್ಟಿಗಷ್ಟೆ ಸಿಡ್ನಿಗೆ ತೆರಳಿದ್ದಾರೆ. ಮೂರನೇ ಟೆಸ್ಟ್ ಆರಂಭವಾಗುವ ಹೊತ್ತಿಗೆ ತಂಡ ಸೇರಿಕೊಳ್ಳುವ ನಿರೀಕ್ಷೆಯಿದೆ.

6 / 7
ಇಂಡೋ- ಆಸೀಸ್ ಮೂರನೇ ಟೆಸ್ಟ್ ಪಂದ್ಯ ಮಾರ್ಚ್ 1 ರಿಂದ ಮಾರ್ಚ್ 5 ರವರೆಗೆ ಇಂದೋರ್​ನ ಹೋಲ್ಕರ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. ನಾಗ್ಪುರದಲ್ಲಿ ನಡೆದ ಮೊದಲ ಟೆಸ್ಟ್​ ಪಂದ್ಯದಲ್ಲಿ ಭಾರತ ಇನ್ನಿಂಗ್ಸ್ ಹಾಗೂ 132 ರನ್​ಗಳ ಜಯ ಸಾಧಿಸಿತು. ಬಳಿಕ ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ 6 ವಿಕೆಟ್​ಗಳಿಂದ ಗೆದ್ದು ಬೀಗಿತ್ತು.

ಇಂಡೋ- ಆಸೀಸ್ ಮೂರನೇ ಟೆಸ್ಟ್ ಪಂದ್ಯ ಮಾರ್ಚ್ 1 ರಿಂದ ಮಾರ್ಚ್ 5 ರವರೆಗೆ ಇಂದೋರ್​ನ ಹೋಲ್ಕರ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. ನಾಗ್ಪುರದಲ್ಲಿ ನಡೆದ ಮೊದಲ ಟೆಸ್ಟ್​ ಪಂದ್ಯದಲ್ಲಿ ಭಾರತ ಇನ್ನಿಂಗ್ಸ್ ಹಾಗೂ 132 ರನ್​ಗಳ ಜಯ ಸಾಧಿಸಿತು. ಬಳಿಕ ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ 6 ವಿಕೆಟ್​ಗಳಿಂದ ಗೆದ್ದು ಬೀಗಿತ್ತು.

7 / 7
Follow us
ದೃಷ್ಟಿಹೀನ ಮಕ್ಕಳು ಹುಟ್ಟುಹಬ್ಬದ ಶುಭಾಶಯ ಕೋರಿದಾಗ ಕಣ್ಣೀರಿಟ್ಟ ರಾಷ್ಟ್ರಪತಿ
ದೃಷ್ಟಿಹೀನ ಮಕ್ಕಳು ಹುಟ್ಟುಹಬ್ಬದ ಶುಭಾಶಯ ಕೋರಿದಾಗ ಕಣ್ಣೀರಿಟ್ಟ ರಾಷ್ಟ್ರಪತಿ
‘ಪಪ್ಪಿ’ ಸಿನಿಮಾಗೆ 50 ದಿನದ ಸಂಭ್ರಮ; ವೇದಿಕೆಯಲ್ಲಿ ಬಾಲ ನಟರ ಡೈಲಾಗ್
‘ಪಪ್ಪಿ’ ಸಿನಿಮಾಗೆ 50 ದಿನದ ಸಂಭ್ರಮ; ವೇದಿಕೆಯಲ್ಲಿ ಬಾಲ ನಟರ ಡೈಲಾಗ್
ಸಿಎಂ ಮತ್ತು ಡಿಸಿಎಂ ಜೊತೆ ಹಲವಾರು ಸಚಿವರು ನಾಳೆ ತುಮಕೂರು ಆಗಮನ
ಸಿಎಂ ಮತ್ತು ಡಿಸಿಎಂ ಜೊತೆ ಹಲವಾರು ಸಚಿವರು ನಾಳೆ ತುಮಕೂರು ಆಗಮನ
ಬೆನ್ನು ನೋವಿಗೆ ಕಾರಣವೇನು? ಯೋಗದ ಮೂಲಕ ಪರಿಹರಿಸಿಕೊಳ್ಳುವುದು ಹೇಗೆ?
ಬೆನ್ನು ನೋವಿಗೆ ಕಾರಣವೇನು? ಯೋಗದ ಮೂಲಕ ಪರಿಹರಿಸಿಕೊಳ್ಳುವುದು ಹೇಗೆ?
ಐದು ದಿನಗಳ ಕಾಲ ಸುಟ್ಟ ಗಾಯಗಳೊಂದಿಗೆ ಜೀವನ್ಮರಣ ಹೋರಾಟ ನಡೆಸಿದ ಬಾಲಕ
ಐದು ದಿನಗಳ ಕಾಲ ಸುಟ್ಟ ಗಾಯಗಳೊಂದಿಗೆ ಜೀವನ್ಮರಣ ಹೋರಾಟ ನಡೆಸಿದ ಬಾಲಕ
ವಿದ್ಯುತ್ ಚಿತಾಗಾರದ ಕರೆಂಟ್ ಬಿಲ್ ಬಾಕಿ: ಬಡವಾಯ್ತೇ ಬಿಟಿಡಿಎ
ವಿದ್ಯುತ್ ಚಿತಾಗಾರದ ಕರೆಂಟ್ ಬಿಲ್ ಬಾಕಿ: ಬಡವಾಯ್ತೇ ಬಿಟಿಡಿಎ
ದಿನಕ್ಕೆ 10 ಗಂಟೆ ಕೆಲಸದ ಅವಧಿ ಬಗ್ಗೆ ಸಚಿವ ಸಂತೋಷ್ ಲಾಡ್ ಹೇಳಿದ್ದಿಷ್ಟು!
ದಿನಕ್ಕೆ 10 ಗಂಟೆ ಕೆಲಸದ ಅವಧಿ ಬಗ್ಗೆ ಸಚಿವ ಸಂತೋಷ್ ಲಾಡ್ ಹೇಳಿದ್ದಿಷ್ಟು!
ತನ್ನ ಸಿಗ್ನೇಚರ್ ಸ್ಟೆಪ್​ ಹಾಕುತ್ತಾ ಕುಣಿದು ರಂಜಿಸಿದ ಲೆಜೆಂಡರಿ ಸ್ಟಾರ್
ತನ್ನ ಸಿಗ್ನೇಚರ್ ಸ್ಟೆಪ್​ ಹಾಕುತ್ತಾ ಕುಣಿದು ರಂಜಿಸಿದ ಲೆಜೆಂಡರಿ ಸ್ಟಾರ್
ಇಲ್ಲಿಂದ ಮೇಲೆತ್ತಿ ಎಂಬಂತೆ ಅಸಾಹಯಕತೆಯಿಂದ ಜನರತ್ತ ನೋಡುತ್ತಿರುವ ನಾಯಿ
ಇಲ್ಲಿಂದ ಮೇಲೆತ್ತಿ ಎಂಬಂತೆ ಅಸಾಹಯಕತೆಯಿಂದ ಜನರತ್ತ ನೋಡುತ್ತಿರುವ ನಾಯಿ
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಭೂಕುಸಿತ; ಹಲವು ರಸ್ತೆಗಳು ಬಂದ್
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಭೂಕುಸಿತ; ಹಲವು ರಸ್ತೆಗಳು ಬಂದ್