ಭಾರತದ ವಿರುದ್ಧ ಕಣಕ್ಕಿಳಿಯಲು ನಾನು ರೆಡಿ: ಕಂಬ್ಯಾಕ್ ಸೂಚನೆ ನೀಡಿದ ವಾರ್ನರ್

David Warner: ಆಸ್ಟ್ರೇಲಿಯಾ ಪರ 205 ಬಾರಿ ಇನಿಂಗ್ಸ್ ಆರಂಭಸಿರುವ ಡೇವಿಡ್ ವಾರ್ನರ್ ಒಟ್ಟು 8786 ರನ್ ಕಲೆಹಾಕಿದ್ದಾರೆ. ಈ ಮೂಲಕ ಆಸ್ಟ್ರೇಲಿಯಾ ಪರ ಟೆಸ್ಟ್ ಕ್ರಿಕೆಟ್​ನಲ್ಲಿ ಅತ್ಯಧಿಕ ರನ್ ಬಾರಿಸಿದ ಆರಂಭಿಕ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇದೀಗ ಆಸ್ಟ್ರೇಲಿಯಾ ತಂಡವು ಬದಲಿ ಆರಂಭಿಕ ಆಟಗಾರನ ಹುಡುಕಾಟದಲ್ಲಿದೆ.

|

Updated on: Oct 23, 2024 | 12:14 PM

ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿರುವ ಡೇವಿಡ್ ವಾರ್ನರ್ ಇದೀಗ ತಮ್ಮ ನಿವೃತ್ತಿಯನ್ನು ಹಿಂಪಡೆಯುವ ಸೂಚನೆ ನೀಡಿದ್ದಾರೆ. ಅದು ಕೂಡ ಭಾರತ ವಿರುದ್ಧದ ಪ್ರತಿಷ್ಠಿತ ಟೆಸ್ಟ್ ಸರಣಿ ಆಡಲು ಎಂಬುದೇ ವಿಶೇಷ. ಅಂದರೆ ಮುಂಬರುವ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಆಯ್ಕೆಗೆ ತಾನು ಲಭ್ಯವಿರುವುದಾಗಿ ವಾರ್ನರ್ ತಿಳಿಸಿದ್ದಾರೆ.

ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿರುವ ಡೇವಿಡ್ ವಾರ್ನರ್ ಇದೀಗ ತಮ್ಮ ನಿವೃತ್ತಿಯನ್ನು ಹಿಂಪಡೆಯುವ ಸೂಚನೆ ನೀಡಿದ್ದಾರೆ. ಅದು ಕೂಡ ಭಾರತ ವಿರುದ್ಧದ ಪ್ರತಿಷ್ಠಿತ ಟೆಸ್ಟ್ ಸರಣಿ ಆಡಲು ಎಂಬುದೇ ವಿಶೇಷ. ಅಂದರೆ ಮುಂಬರುವ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಆಯ್ಕೆಗೆ ತಾನು ಲಭ್ಯವಿರುವುದಾಗಿ ವಾರ್ನರ್ ತಿಳಿಸಿದ್ದಾರೆ.

1 / 6
ನಾನು ಮುಂದಿನ ಶೀಲ್ಡ್​ಫೀಲ್ಡ್​ ಟೂರ್ನಿ ಆಡಲು ಸಿದ್ಧನಿದ್ದೇನೆ. ಅಲ್ಲದೆ ಮುಂಬರುವ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲೂ ಕಣಕ್ಕಿಳಿಯಲು ಬಯಸುತ್ತೇನೆ ಎಂದು ಡೇವಿಡ್ ವಾರ್ನರ್ ತಿಳಿಸಿದ್ದಾರೆ. ಈ ಮೂಲಕ ಆಸೀಸ್ ಆರಂಭಿಕ ದಾಂಡಿಗ ಟೆಸ್ಟ್ ಕ್ರಿಕೆಟ್​ಗೆ ಮರಳುವ ಇಚ್ಛೆಯನ್ನು ವ್ಯಕ್ತಪಡಿಸಿದ್ದಾರೆ.

ನಾನು ಮುಂದಿನ ಶೀಲ್ಡ್​ಫೀಲ್ಡ್​ ಟೂರ್ನಿ ಆಡಲು ಸಿದ್ಧನಿದ್ದೇನೆ. ಅಲ್ಲದೆ ಮುಂಬರುವ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲೂ ಕಣಕ್ಕಿಳಿಯಲು ಬಯಸುತ್ತೇನೆ ಎಂದು ಡೇವಿಡ್ ವಾರ್ನರ್ ತಿಳಿಸಿದ್ದಾರೆ. ಈ ಮೂಲಕ ಆಸೀಸ್ ಆರಂಭಿಕ ದಾಂಡಿಗ ಟೆಸ್ಟ್ ಕ್ರಿಕೆಟ್​ಗೆ ಮರಳುವ ಇಚ್ಛೆಯನ್ನು ವ್ಯಕ್ತಪಡಿಸಿದ್ದಾರೆ.

2 / 6
ಡೇವಿಡ್ ವಾರ್ನರ್ ಇದೇ ವರ್ಷ ಜನವರಿ 6 ರಂದು ಸಿಡ್ನಿಯಲ್ಲಿ ನಡೆದ ಪಾಕಿಸ್ತಾನ್ ವಿರುದ್ಧದ ಟೆಸ್ಟ್​ ಪಂದ್ಯದ ಮೂಲಕ ದೀರ್ಘಾವಧಿಯ ಕ್ರಿಕೆಟ್​ಗೆ ವಿದಾಯ ಹೇಳಿದ್ದರು. ಇದೀಗ ಮತ್ತೆ ಆಸ್ಟ್ರೇಲಿಯಾ ಟೆಸ್ಟ್ ತಂಡದಲ್ಲಿ ಆಡಲು ಬಯುಸುವುದಾಗಿ ತಿಳಿಸಿದ್ದಾರೆ. ಇದರ ಬೆನ್ನಲ್ಲೇ 37 ವರ್ಷದ ವಾರ್ನರ್ ಅವರನ್ನು ಕ್ರಿಕೆಟ್ ಆಸ್ಟ್ರೇಲಿಯಾ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಗೆ ಆಯ್ಕೆ ಮಾಡಲಿದ್ದಾರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

ಡೇವಿಡ್ ವಾರ್ನರ್ ಇದೇ ವರ್ಷ ಜನವರಿ 6 ರಂದು ಸಿಡ್ನಿಯಲ್ಲಿ ನಡೆದ ಪಾಕಿಸ್ತಾನ್ ವಿರುದ್ಧದ ಟೆಸ್ಟ್​ ಪಂದ್ಯದ ಮೂಲಕ ದೀರ್ಘಾವಧಿಯ ಕ್ರಿಕೆಟ್​ಗೆ ವಿದಾಯ ಹೇಳಿದ್ದರು. ಇದೀಗ ಮತ್ತೆ ಆಸ್ಟ್ರೇಲಿಯಾ ಟೆಸ್ಟ್ ತಂಡದಲ್ಲಿ ಆಡಲು ಬಯುಸುವುದಾಗಿ ತಿಳಿಸಿದ್ದಾರೆ. ಇದರ ಬೆನ್ನಲ್ಲೇ 37 ವರ್ಷದ ವಾರ್ನರ್ ಅವರನ್ನು ಕ್ರಿಕೆಟ್ ಆಸ್ಟ್ರೇಲಿಯಾ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಗೆ ಆಯ್ಕೆ ಮಾಡಲಿದ್ದಾರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

3 / 6
ಏಕೆಂದರೆ ಡೇವಿಡ್ ವಾರ್ನರ್ ನಿರ್ಗಮನದ ಬಳಿಕ ಆಸ್ಟ್ರೇಲಿಯಾ ಬದಲಿ ಆರಂಭಿಕನ ಹುಡುಕಾಟದಲ್ಲಿದೆ. ಈ ಹಿಂದೆ ಉಸ್ಮಾನ್ ಖ್ವಾಜಾ ಜೊತೆ ಆರಂಭಿಕನಾಗಿ ಸ್ಟೀವ್ ಸ್ಮಿತ್ ಅವರನ್ನು ಕಣಕ್ಕಿಳಿಸಿದರೂ ನಿರೀಕ್ಷಿತ ಯಶಸ್ಸು ಸಾಧಿಸಿಲ್ಲ. ಹೀಗಾಗಿ ಸ್ಮಿತ್ ಬಾರ್ಡರ್-ಗವಾಸ್ಕರ್ ಸರಣಿಯಲ್ಲಿ ಮತ್ತೆ 4ನೇ ಕ್ರಮಾಂಕದಲ್ಲೇ ಬ್ಯಾಟ್ ಬೀಸಲಿದ್ದಾರೆ.

ಏಕೆಂದರೆ ಡೇವಿಡ್ ವಾರ್ನರ್ ನಿರ್ಗಮನದ ಬಳಿಕ ಆಸ್ಟ್ರೇಲಿಯಾ ಬದಲಿ ಆರಂಭಿಕನ ಹುಡುಕಾಟದಲ್ಲಿದೆ. ಈ ಹಿಂದೆ ಉಸ್ಮಾನ್ ಖ್ವಾಜಾ ಜೊತೆ ಆರಂಭಿಕನಾಗಿ ಸ್ಟೀವ್ ಸ್ಮಿತ್ ಅವರನ್ನು ಕಣಕ್ಕಿಳಿಸಿದರೂ ನಿರೀಕ್ಷಿತ ಯಶಸ್ಸು ಸಾಧಿಸಿಲ್ಲ. ಹೀಗಾಗಿ ಸ್ಮಿತ್ ಬಾರ್ಡರ್-ಗವಾಸ್ಕರ್ ಸರಣಿಯಲ್ಲಿ ಮತ್ತೆ 4ನೇ ಕ್ರಮಾಂಕದಲ್ಲೇ ಬ್ಯಾಟ್ ಬೀಸಲಿದ್ದಾರೆ.

4 / 6
ಇತ್ತ ಆಸ್ಟ್ರೇಲಿಯಾ ತಂಡದ ಯಶಸ್ವಿ ಆರಂಭಿಕನಾಗಿ ಗುರುತಿಸಿಕೊಂಡಿರುವ ಡೇವಿಡ್ ವಾರ್ನರ್ ಅವರ ಪುನರಾಗಮನವು ತಂಡವನ್ನು ಬಲಿಷ್ಠಗೊಳಿಸುವುದರಲ್ಲಿ ಅನುಮಾನ ಇಲ್ಲ. ಹೀಗಾಗಿ 37 ವರ್ಷದ ಹಿರಿಯ ಆಟಗಾರನಿಗೆ ಕ್ರಿಕೆಟ್ ಆಸ್ಟ್ರೇಲಿಯಾ ಮತ್ತೆ ಅವಕಾಶ ನೀಡಲಿದೆಯಾ ಎಂಬುದೇ ಈಗ ಕುತೂಹಲ.

ಇತ್ತ ಆಸ್ಟ್ರೇಲಿಯಾ ತಂಡದ ಯಶಸ್ವಿ ಆರಂಭಿಕನಾಗಿ ಗುರುತಿಸಿಕೊಂಡಿರುವ ಡೇವಿಡ್ ವಾರ್ನರ್ ಅವರ ಪುನರಾಗಮನವು ತಂಡವನ್ನು ಬಲಿಷ್ಠಗೊಳಿಸುವುದರಲ್ಲಿ ಅನುಮಾನ ಇಲ್ಲ. ಹೀಗಾಗಿ 37 ವರ್ಷದ ಹಿರಿಯ ಆಟಗಾರನಿಗೆ ಕ್ರಿಕೆಟ್ ಆಸ್ಟ್ರೇಲಿಯಾ ಮತ್ತೆ ಅವಕಾಶ ನೀಡಲಿದೆಯಾ ಎಂಬುದೇ ಈಗ ಕುತೂಹಲ.

5 / 6
ಡೇವಿಡ್ ವಾರ್ನರ್ ಟೆಸ್ಟ್ ವೃತ್ತಿಜೀವನ: ಆಸ್ಟ್ರೇಲಿಯಾ ಪರ ಡೇವಿಡ್ ವಾರ್ನರ್ 112 ಟೆಸ್ಟ್ ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 205 ಇನಿಂಗ್ಸ್ ಆಡಿರುವ ಅವರು 3 ದ್ವಿಶತಕ, 26 ಶತಕ ಹಾಗೂ 37 ಅರ್ಧಶತಕಗಳೊಂದಿಗೆ ಒಟ್ಟು 8786 ರನ್ ಕಲೆಹಾಕಿದ್ದಾರೆ. ಇದೀಗ ಮತ್ತೆ ಟೆಸ್ಟ್ ಕ್ರಿಕೆಟ್​ಗೆ ಮರಳುವ ಇಚ್ಛೆಯನ್ನು ವ್ಯಕ್ತಪಡಿಸಿದ್ದು, ಅದರಂತೆ ಮುಂಬರುವ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ವಾರ್ನರ್ ಕಾಣಿಸಿಕೊಳ್ಳಲಿದ್ದಾರಾ ಕಾದು ನೋಡಬೇಕಿದೆ.

ಡೇವಿಡ್ ವಾರ್ನರ್ ಟೆಸ್ಟ್ ವೃತ್ತಿಜೀವನ: ಆಸ್ಟ್ರೇಲಿಯಾ ಪರ ಡೇವಿಡ್ ವಾರ್ನರ್ 112 ಟೆಸ್ಟ್ ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 205 ಇನಿಂಗ್ಸ್ ಆಡಿರುವ ಅವರು 3 ದ್ವಿಶತಕ, 26 ಶತಕ ಹಾಗೂ 37 ಅರ್ಧಶತಕಗಳೊಂದಿಗೆ ಒಟ್ಟು 8786 ರನ್ ಕಲೆಹಾಕಿದ್ದಾರೆ. ಇದೀಗ ಮತ್ತೆ ಟೆಸ್ಟ್ ಕ್ರಿಕೆಟ್​ಗೆ ಮರಳುವ ಇಚ್ಛೆಯನ್ನು ವ್ಯಕ್ತಪಡಿಸಿದ್ದು, ಅದರಂತೆ ಮುಂಬರುವ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ವಾರ್ನರ್ ಕಾಣಿಸಿಕೊಳ್ಳಲಿದ್ದಾರಾ ಕಾದು ನೋಡಬೇಕಿದೆ.

6 / 6
Follow us
ದಿವಾಕರ್ ಬಿಜೆಪಿ ಪರ ಕೆಲಸ ಮಾಡುತ್ತಿದ್ದಾರೆ, ಬಂಡಾಯವೆದ್ದಿಲ್ಲ: ರೆಡ್ಡಿ
ದಿವಾಕರ್ ಬಿಜೆಪಿ ಪರ ಕೆಲಸ ಮಾಡುತ್ತಿದ್ದಾರೆ, ಬಂಡಾಯವೆದ್ದಿಲ್ಲ: ರೆಡ್ಡಿ
ಬಿಜೆಪಿ ನಾಯಕ ಸಿಪಿ ಯೋಗೇಶ್ವರ್​ ಕಾಂಗ್ರೆಸ್​ ಸೇರ್ಪಡೆ, ಲೈವ್ ನೋಡಿ​
ಬಿಜೆಪಿ ನಾಯಕ ಸಿಪಿ ಯೋಗೇಶ್ವರ್​ ಕಾಂಗ್ರೆಸ್​ ಸೇರ್ಪಡೆ, ಲೈವ್ ನೋಡಿ​
ಯೋಗೇಶ್ವರ್ ಮನವೊಲಿಸಿದ ಸುರೇಶ್ ಬೆಳಗ್ಗೆಯೇ ಅಣ್ಣನ ಮನೆಯಲ್ಲಿ ಹಾಜರ್!
ಯೋಗೇಶ್ವರ್ ಮನವೊಲಿಸಿದ ಸುರೇಶ್ ಬೆಳಗ್ಗೆಯೇ ಅಣ್ಣನ ಮನೆಯಲ್ಲಿ ಹಾಜರ್!
ಕೊಹ್ಲಿ ಆರ್ಭಟಕ್ಕೆ 2 ವರ್ಷ: ಪಂದ್ಯ ಗೆದ್ದ ಬಳಿಕ ನಡೆದಿದ್ದೇನು?
ಕೊಹ್ಲಿ ಆರ್ಭಟಕ್ಕೆ 2 ವರ್ಷ: ಪಂದ್ಯ ಗೆದ್ದ ಬಳಿಕ ನಡೆದಿದ್ದೇನು?
‘ಬಿಗ್ ಬಾಸ್’ ಮನೆಯಲ್ಲಿ ಓಪನ್ ಆಗಿ ಶುರುವಾಯ್ತು ರಾಜಕೀಯ
‘ಬಿಗ್ ಬಾಸ್’ ಮನೆಯಲ್ಲಿ ಓಪನ್ ಆಗಿ ಶುರುವಾಯ್ತು ರಾಜಕೀಯ
ಧೈರ್ಯ ಸಾಹಸೇ ಲಕ್ಷ್ಮಿ ದೇವಿ ಮಂತ್ರದ ಹಿಂದಿನ ರಹಸ್ಯ ತಿಳಿಯಿರಿ
ಧೈರ್ಯ ಸಾಹಸೇ ಲಕ್ಷ್ಮಿ ದೇವಿ ಮಂತ್ರದ ಹಿಂದಿನ ರಹಸ್ಯ ತಿಳಿಯಿರಿ
Nithya Bhavishya: ಈ ರಾಶಿಯ ವ್ಯಾಪಾರಿಗಳು ಇಂದು ಶುಭ ಸುದ್ದಿ ಕೇಳುವರು
Nithya Bhavishya: ಈ ರಾಶಿಯ ವ್ಯಾಪಾರಿಗಳು ಇಂದು ಶುಭ ಸುದ್ದಿ ಕೇಳುವರು
ಸಹಿಸಲಾಗದ ನೋವಿನಿಂದ ಆಸ್ಪತ್ರೆಗೆ ಬಂದ ದರ್ಶನ್; ಮುಗಿಬಿದ್ದ ಅಭಿಮಾನಿಗಳು
ಸಹಿಸಲಾಗದ ನೋವಿನಿಂದ ಆಸ್ಪತ್ರೆಗೆ ಬಂದ ದರ್ಶನ್; ಮುಗಿಬಿದ್ದ ಅಭಿಮಾನಿಗಳು
ಮನೆಯೊಂದರ ಬೆಡ್​ರೂಂನಲ್ಲಿ 2 ಹಾವುಗಳ ಜಗಳ; ಬೆಚ್ಚಿ ಬೀಳಿಸುವ ವಿಡಿಯೋ ವೈರಲ್
ಮನೆಯೊಂದರ ಬೆಡ್​ರೂಂನಲ್ಲಿ 2 ಹಾವುಗಳ ಜಗಳ; ಬೆಚ್ಚಿ ಬೀಳಿಸುವ ವಿಡಿಯೋ ವೈರಲ್
ರಾತ್ರೋರಾತ್ರಿ ಬಳ್ಳಾರಿ ಜೈಲಿನಿಂದ ಆಂಬ್ಯುಲೆನ್ಸ್​ ಮೂಲಕ ದರ್ಶನ್ ಶಿಫ್ಟ್
ರಾತ್ರೋರಾತ್ರಿ ಬಳ್ಳಾರಿ ಜೈಲಿನಿಂದ ಆಂಬ್ಯುಲೆನ್ಸ್​ ಮೂಲಕ ದರ್ಶನ್ ಶಿಫ್ಟ್