AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಐಪಿಎಲ್​ನಿಂದಾಗಿ ಕ್ರಿಕೆಟ್​ನಲ್ಲಿ ಈ ದೊಡ್ಡ ಬದಲಾವಣೆ ಆಗಲಿದೆ’; ಡೇವಿಡ್ ವಾರ್ನರ್

David Warner: ತಮ್ಮ ಟೆಸ್ಟ್ ನಿವೃತ್ತಿಯ ಬಳಿಕ ತಮ್ಮ ಮನದಾಳವನ್ನು ಬಿಚ್ಚಿಟ್ಟ ವಾರ್ನರ್, ಭವಿಷ್ಯದಲ್ಲಿ ಕೋಚ್​ ಹುದ್ದೆಗೇರುವುದಾಗಿ ಹೇಳಿಕೊಂಡಿದ್ದಾರೆ. ಅಲ್ಲದೆ ಆಸೀಸ್ ಕ್ರಿಕೆಟಿಗರು ಹೆಸರುವಾಸಿಯಾಗಿರುವ ಸ್ಲೆಡ್ಡಿಂಗ್ ಬಗ್ಗೆಯೂ ವಾರ್ನರ್ ದೊಡ್ಡ ಹೇಳಿಕೆ ನೀಡಿದ್ದಾರೆ.

ಪೃಥ್ವಿಶಂಕರ
|

Updated on: Jan 07, 2024 | 4:31 PM

Share
ಪಾಕಿಸ್ತಾನ ವಿರುದ್ಧದ ಮೂರು ಟೆಸ್ಟ್ ಪಂದ್ಯಗಳ ಸರಣಿಯ ಅಂತ್ಯದೊಂದಿಗೆ ಆಸ್ಟ್ರೇಲಿಯಾದ ದಿಗ್ಗಜ ಆರಂಭಿಕ ಬ್ಯಾಟ್ಸ್‌ಮನ್ ಡೇವಿಡ್ ವಾರ್ನರ್ ಅವರ ಟೆಸ್ಟ್ ವೃತ್ತಿಜೀವನವೂ ಅಂತ್ಯಗೊಂಡಿದೆ. ಟೆಸ್ಟ್ ಮಾದರಿಯೊಂದಿಗೆ ಏಕದಿನ ಮಾದರಿಗೂ ವಾರ್ನರ್ ನಿವೃತ್ತಿ ಘೋಷಿಸಿದ್ದಾರೆ.

ಪಾಕಿಸ್ತಾನ ವಿರುದ್ಧದ ಮೂರು ಟೆಸ್ಟ್ ಪಂದ್ಯಗಳ ಸರಣಿಯ ಅಂತ್ಯದೊಂದಿಗೆ ಆಸ್ಟ್ರೇಲಿಯಾದ ದಿಗ್ಗಜ ಆರಂಭಿಕ ಬ್ಯಾಟ್ಸ್‌ಮನ್ ಡೇವಿಡ್ ವಾರ್ನರ್ ಅವರ ಟೆಸ್ಟ್ ವೃತ್ತಿಜೀವನವೂ ಅಂತ್ಯಗೊಂಡಿದೆ. ಟೆಸ್ಟ್ ಮಾದರಿಯೊಂದಿಗೆ ಏಕದಿನ ಮಾದರಿಗೂ ವಾರ್ನರ್ ನಿವೃತ್ತಿ ಘೋಷಿಸಿದ್ದಾರೆ.

1 / 6
ತಮ್ಮ ಕೊನೆಯ ಟೆಸ್ಟ್ ಪಂದ್ಯದಲ್ಲಿ ಅರ್ಧಶತಕದ ಇನ್ನಿಂಗ್ಸ್ ಆಡಿದ ಡೇವಿಡ್ ವಾರ್ನರ್ ತಮ್ಮ ತವರು ನೆಲವಾದ ಸಿಡ್ನಿಯಲ್ಲಿ ಟೆಸ್ಟ್​ ಕ್ರಿಕೆಟ್​ಗೆ ವಿದಾಯ ಹೇಳಿದರು. ಟೆಸ್ಟ್​ಗೂ ಮುನ್ನವೇ ಏಕದಿನಕ್ಕೆ ವಿದಾಯ ಹೇಳಿದ್ದ ವಾರ್ನರ್ ಟಿ20 ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅಲ್ಲದೆ ವಿಶ್ವದಾದ್ಯಂತ ನಡೆಯುವ ಟಿ20 ಲೀಗ್‌ಗಳಲ್ಲಿ ಆಡಲು ಲಭ್ಯವಿರುತ್ತಾರೆ.

ತಮ್ಮ ಕೊನೆಯ ಟೆಸ್ಟ್ ಪಂದ್ಯದಲ್ಲಿ ಅರ್ಧಶತಕದ ಇನ್ನಿಂಗ್ಸ್ ಆಡಿದ ಡೇವಿಡ್ ವಾರ್ನರ್ ತಮ್ಮ ತವರು ನೆಲವಾದ ಸಿಡ್ನಿಯಲ್ಲಿ ಟೆಸ್ಟ್​ ಕ್ರಿಕೆಟ್​ಗೆ ವಿದಾಯ ಹೇಳಿದರು. ಟೆಸ್ಟ್​ಗೂ ಮುನ್ನವೇ ಏಕದಿನಕ್ಕೆ ವಿದಾಯ ಹೇಳಿದ್ದ ವಾರ್ನರ್ ಟಿ20 ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅಲ್ಲದೆ ವಿಶ್ವದಾದ್ಯಂತ ನಡೆಯುವ ಟಿ20 ಲೀಗ್‌ಗಳಲ್ಲಿ ಆಡಲು ಲಭ್ಯವಿರುತ್ತಾರೆ.

2 / 6
ಇನ್ನು ತಮ್ಮ ಟೆಸ್ಟ್ ನಿವೃತ್ತಿಯ ಬಳಿಕ ತಮ್ಮ ಮನದಾಳವನ್ನು ಬಿಚ್ಚಿಟ್ಟ ವಾರ್ನರ್, ಭವಿಷ್ಯದಲ್ಲಿ ಕೋಚ್​ ಹುದ್ದೆಗೇರುವುದಾಗಿ ಹೇಳಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು ಹೌದು, ನಾನು ಭವಿಷ್ಯದಲ್ಲಿ ಕೋಚಿಂಗ್‌ಗೆ ಸೇರಲು ಬಯಸುತ್ತೇನೆ ಎಂದಿದ್ದಾರೆ. ಅಲ್ಲದೆ ಆಸೀಸ್ ಕ್ರಿಕೆಟಿಗರು ಹೆಸರುವಾಸಿಯಾಗಿರುವ ಸ್ಲೆಡ್ಡಿಂಗ್ ಬಗ್ಗೆಯೂ ವಾರ್ನರ್ ದೊಡ್ಡ ಹೇಳಿಕೆ ನೀಡಿದ್ದಾರೆ.

ಇನ್ನು ತಮ್ಮ ಟೆಸ್ಟ್ ನಿವೃತ್ತಿಯ ಬಳಿಕ ತಮ್ಮ ಮನದಾಳವನ್ನು ಬಿಚ್ಚಿಟ್ಟ ವಾರ್ನರ್, ಭವಿಷ್ಯದಲ್ಲಿ ಕೋಚ್​ ಹುದ್ದೆಗೇರುವುದಾಗಿ ಹೇಳಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು ಹೌದು, ನಾನು ಭವಿಷ್ಯದಲ್ಲಿ ಕೋಚಿಂಗ್‌ಗೆ ಸೇರಲು ಬಯಸುತ್ತೇನೆ ಎಂದಿದ್ದಾರೆ. ಅಲ್ಲದೆ ಆಸೀಸ್ ಕ್ರಿಕೆಟಿಗರು ಹೆಸರುವಾಸಿಯಾಗಿರುವ ಸ್ಲೆಡ್ಡಿಂಗ್ ಬಗ್ಗೆಯೂ ವಾರ್ನರ್ ದೊಡ್ಡ ಹೇಳಿಕೆ ನೀಡಿದ್ದಾರೆ.

3 / 6
ಐಪಿಎಲ್‌ನಂತಹ ದೇಶೀಯ ಸ್ಪರ್ಧೆಗಳಲ್ಲಿ ಆಟಗಾರರು ಪರಸ್ಪರ ಡ್ರೆಸ್ಸಿಂಗ್ ರೂಮ್‌ಗಳನ್ನು ಹಂಚಿಕೊಳ್ಳುವುದರಿಂದ ಮುಂದಿನ ದಶಕದಲ್ಲಿ ಸ್ಲೆಡ್ಜಿಂಗ್ ಕ್ರಿಕೆಟ್‌ನಿಂದ ದೂರವಾಗಲಿದೆ ಎಂದು ಡೇವಿಡ್ ವಾರ್ನರ್ ಅಭಿಪ್ರಾಯಪಟ್ಟಿದ್ದಾರೆ. ನಾನು ತಂಡಕ್ಕೆ ಬಂದಾಗ ಎದುರಾಳಿ ಆಟಗಾರರಿಗೆ ಕಿರುಕುಳ ನೀಡುವುದು ಮತ್ತು ಬ್ಯಾಟಿಂಗ್ ಮಾಡುವಾಗ ಅವರ ಗಮನವನ್ನು ಬೇರೆಡೆ ಸೆಳೆಯುವುದು ನನ್ನ ಕೆಲಸವಾಗಿತ್ತು ಎಂದು ವಾರ್ನರ್ ಹೇಳಿದ್ದಾರೆ.

ಐಪಿಎಲ್‌ನಂತಹ ದೇಶೀಯ ಸ್ಪರ್ಧೆಗಳಲ್ಲಿ ಆಟಗಾರರು ಪರಸ್ಪರ ಡ್ರೆಸ್ಸಿಂಗ್ ರೂಮ್‌ಗಳನ್ನು ಹಂಚಿಕೊಳ್ಳುವುದರಿಂದ ಮುಂದಿನ ದಶಕದಲ್ಲಿ ಸ್ಲೆಡ್ಜಿಂಗ್ ಕ್ರಿಕೆಟ್‌ನಿಂದ ದೂರವಾಗಲಿದೆ ಎಂದು ಡೇವಿಡ್ ವಾರ್ನರ್ ಅಭಿಪ್ರಾಯಪಟ್ಟಿದ್ದಾರೆ. ನಾನು ತಂಡಕ್ಕೆ ಬಂದಾಗ ಎದುರಾಳಿ ಆಟಗಾರರಿಗೆ ಕಿರುಕುಳ ನೀಡುವುದು ಮತ್ತು ಬ್ಯಾಟಿಂಗ್ ಮಾಡುವಾಗ ಅವರ ಗಮನವನ್ನು ಬೇರೆಡೆ ಸೆಳೆಯುವುದು ನನ್ನ ಕೆಲಸವಾಗಿತ್ತು ಎಂದು ವಾರ್ನರ್ ಹೇಳಿದ್ದಾರೆ.

4 / 6
ಐಪಿಎಲ್‌ನಂತಹ ಫ್ರಾಂಚೈಸಿ ಟಿ20 ಲೀಗ್‌ಗಳಲ್ಲಿ ಆಟಗಾರರು ಎದುರಾಳಿ ದೇಶಗಳ ಆಟಗಾರರೊಂದಿಗೆ ಡ್ರೆಸ್ಸಿಂಗ್ ರೂಮ್‌ಗಳನ್ನು ಹಂಚಿಕೊಳ್ಳುತ್ತಾರೆ. ಇದರಿಂದಾಗಿ ಸ್ಲೆಡ್ಜಿಂಗ್ ಶೀಘ್ರದಲ್ಲೇ ಕೊನೆಗೊಳ್ಳಲಿದೆ. ಭವಿಷ್ಯದಲ್ಲಿ ನೀವು ಸ್ಲೆಡ್ಡಿಂಗ್ ಅಥವಾ ಅಂತಹದನ್ನು ನೋಡುತ್ತೀರಿ ಎಂದು ನಾನು ಭಾವಿಸುವುದಿಲ್ಲ ಎಂದು ವಾರ್ನರ್ ಹೇಳಿದ್ದಾರೆ.

ಐಪಿಎಲ್‌ನಂತಹ ಫ್ರಾಂಚೈಸಿ ಟಿ20 ಲೀಗ್‌ಗಳಲ್ಲಿ ಆಟಗಾರರು ಎದುರಾಳಿ ದೇಶಗಳ ಆಟಗಾರರೊಂದಿಗೆ ಡ್ರೆಸ್ಸಿಂಗ್ ರೂಮ್‌ಗಳನ್ನು ಹಂಚಿಕೊಳ್ಳುತ್ತಾರೆ. ಇದರಿಂದಾಗಿ ಸ್ಲೆಡ್ಜಿಂಗ್ ಶೀಘ್ರದಲ್ಲೇ ಕೊನೆಗೊಳ್ಳಲಿದೆ. ಭವಿಷ್ಯದಲ್ಲಿ ನೀವು ಸ್ಲೆಡ್ಡಿಂಗ್ ಅಥವಾ ಅಂತಹದನ್ನು ನೋಡುತ್ತೀರಿ ಎಂದು ನಾನು ಭಾವಿಸುವುದಿಲ್ಲ ಎಂದು ವಾರ್ನರ್ ಹೇಳಿದ್ದಾರೆ.

5 / 6
ಡೇವಿಡ್ ವಾರ್ನರ್ ಅವರ ವೃತ್ತಿಜೀವನದ ಬಗ್ಗೆ ಹೇಳುವುದಾದರೆ.. ಆಸ್ಟ್ರೇಲಿಯಾ ಪರ ಎಲ್ಲಾ ಮೂರು ಸ್ವರೂಪಗಳಲ್ಲಿ ಆಡಿರುವ ವಾರ್ನರ್ 112 ಟೆಸ್ಟ್ ಪಂದ್ಯಗಳಲ್ಲಿ 26 ಶತಕ ಸಹಿತ 8695 ರನ್ ಗಳಿಸಿದ್ದಾರೆ. ಇದಲ್ಲದೆ 161 ಏಕದಿನ ಪಂದ್ಯಗಳಲ್ಲಿ 6932 ರನ್ ಮತ್ತು 99 ಟಿ20 ಪಂದ್ಯಗಳಲ್ಲಿ 3894 ರನ್ ಗಳಿಸಿದ್ದಾರೆ. ಏಕದಿನ ಕ್ರಿಕೆಟ್‌ನಲ್ಲಿ ವಾರ್ನರ್ 22 ಶತಕಗಳನ್ನು ಸಿಡಿಸಿದ್ದಾರೆ.

ಡೇವಿಡ್ ವಾರ್ನರ್ ಅವರ ವೃತ್ತಿಜೀವನದ ಬಗ್ಗೆ ಹೇಳುವುದಾದರೆ.. ಆಸ್ಟ್ರೇಲಿಯಾ ಪರ ಎಲ್ಲಾ ಮೂರು ಸ್ವರೂಪಗಳಲ್ಲಿ ಆಡಿರುವ ವಾರ್ನರ್ 112 ಟೆಸ್ಟ್ ಪಂದ್ಯಗಳಲ್ಲಿ 26 ಶತಕ ಸಹಿತ 8695 ರನ್ ಗಳಿಸಿದ್ದಾರೆ. ಇದಲ್ಲದೆ 161 ಏಕದಿನ ಪಂದ್ಯಗಳಲ್ಲಿ 6932 ರನ್ ಮತ್ತು 99 ಟಿ20 ಪಂದ್ಯಗಳಲ್ಲಿ 3894 ರನ್ ಗಳಿಸಿದ್ದಾರೆ. ಏಕದಿನ ಕ್ರಿಕೆಟ್‌ನಲ್ಲಿ ವಾರ್ನರ್ 22 ಶತಕಗಳನ್ನು ಸಿಡಿಸಿದ್ದಾರೆ.

6 / 6
Follow Us
ಜನಿವಾರ ಕತ್ತರಿಸಿ ಕಸದ ಬುಟ್ಟಿಗೆ ಎಸೆದರು: ವಿದ್ಯಾರ್ಥಿ ಗಂಭೀರ ಆರೋಪ
ಜನಿವಾರ ಕತ್ತರಿಸಿ ಕಸದ ಬುಟ್ಟಿಗೆ ಎಸೆದರು: ವಿದ್ಯಾರ್ಥಿ ಗಂಭೀರ ಆರೋಪ
ತೆಲಂಗಾಳದಲ್ಲಿ ತಂದೆ ಮಗಳ ರಾಜಕೀಯ ಜಿದ್ದು: ಹೊಸ ಪಕ್ಷ ಘೋಷಿಸಿದ ಕವಿತಾ!
ತೆಲಂಗಾಳದಲ್ಲಿ ತಂದೆ ಮಗಳ ರಾಜಕೀಯ ಜಿದ್ದು: ಹೊಸ ಪಕ್ಷ ಘೋಷಿಸಿದ ಕವಿತಾ!
ಖರ್ಗೆ ಉಸ್ತುವಾರಿಯ ಕಲಬುರಗಿ ಜಿಲ್ಲೆ ಡಿಸಿ ಕಚೇರಿಯಲ್ಲೇ ಇಲ್ಲ ಕುಡಿಯುವ ನೀರು
ಖರ್ಗೆ ಉಸ್ತುವಾರಿಯ ಕಲಬುರಗಿ ಜಿಲ್ಲೆ ಡಿಸಿ ಕಚೇರಿಯಲ್ಲೇ ಇಲ್ಲ ಕುಡಿಯುವ ನೀರು
ವಿನಯ್ ಕುಲಕರ್ಣಿ ಬೆಂಬಲಕ್ಕೆ ನಿಂತ ಅಭಿಮಾನಿಗಳು!
ವಿನಯ್ ಕುಲಕರ್ಣಿ ಬೆಂಬಲಕ್ಕೆ ನಿಂತ ಅಭಿಮಾನಿಗಳು!
ರಣವೀರ್ ಸಿಂಗ್ ದೈವಕ್ಕೆ ಅವಮಾನ ಮಾಡಿದ ಪ್ರಕರಣ ಇತ್ಯರ್ಥ; ಷರತ್ತುಗಳೇನು?
ರಣವೀರ್ ಸಿಂಗ್ ದೈವಕ್ಕೆ ಅವಮಾನ ಮಾಡಿದ ಪ್ರಕರಣ ಇತ್ಯರ್ಥ; ಷರತ್ತುಗಳೇನು?
ಜನಿವಾರ ಕತ್ತರಿಸಿ ಕಸದ ಬುಟ್ಟಿಗೆ ಹಾಕಿದ್ರು: ಅಳಲು ತೋಡಿಕೊಂಡ ವಿದ್ಯಾರ್ಥಿ
ಜನಿವಾರ ಕತ್ತರಿಸಿ ಕಸದ ಬುಟ್ಟಿಗೆ ಹಾಕಿದ್ರು: ಅಳಲು ತೋಡಿಕೊಂಡ ವಿದ್ಯಾರ್ಥಿ
ಜೀವಾವಧಿ ಶಿಕ್ಷೆಗೆ ತಡೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ವಿನಯ್ ಕುಲಕರ್ಣಿ!
ಜೀವಾವಧಿ ಶಿಕ್ಷೆಗೆ ತಡೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ವಿನಯ್ ಕುಲಕರ್ಣಿ!
ದೆಹಲಿಯಲ್ಲಿ ಡಿಕೆಬಿಗಿ ಪಟ್ಟು: ಮೇ ಮೊದಲ ವಾರವೇ ದೊಡ್ಡ ಬೆಳವಣಿಗೆ ಸಾಧ್ಯತೆ?
ದೆಹಲಿಯಲ್ಲಿ ಡಿಕೆಬಿಗಿ ಪಟ್ಟು: ಮೇ ಮೊದಲ ವಾರವೇ ದೊಡ್ಡ ಬೆಳವಣಿಗೆ ಸಾಧ್ಯತೆ?
ಮಣಿಪಾಲ: ಪಬ್ಲಿಕ್​ನಲ್ಲೇ ಯುವಜೋಡಿಯ ಸರಸ ಸಲ್ಲಾಪ! ವಿಡಿಯೋ ವೈರಲ್
ಮಣಿಪಾಲ: ಪಬ್ಲಿಕ್​ನಲ್ಲೇ ಯುವಜೋಡಿಯ ಸರಸ ಸಲ್ಲಾಪ! ವಿಡಿಯೋ ವೈರಲ್
ಶರಬತ್​ನಂತೆಯೇ ಕಾಣ್ಸುತ್ತೆ, ಕುಡಿದ್ರೆ ಇಡೀ ದಿನ ನಶೆಯಲ್ಲಿ ತೇಲಾಡೋದು ಪಕ್ಕಾ
ಶರಬತ್​ನಂತೆಯೇ ಕಾಣ್ಸುತ್ತೆ, ಕುಡಿದ್ರೆ ಇಡೀ ದಿನ ನಶೆಯಲ್ಲಿ ತೇಲಾಡೋದು ಪಕ್ಕಾ