AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL ನಲ್ಲಿಲ್ಲ ಚಾನ್ಸ್… PSL ನತ್ತ ಮುಖ ಮಾಡಿದ ಡೇವಿಡ್ ವಾರ್ನರ್

David Warner: ಐಪಿಎಲ್ ಇತಿಹಾಸದಲ್ಲಿ ಅತೀ ಹೆಚ್ಚು ರನ್ ಕಲೆಹಾಕಿದ ವಿದೇಶಿ ಬ್ಯಾಟರ್​​ಗಳ ಪಟ್ಟಿಯಲ್ಲಿ ಡೇವಿಡ್ ವಾರ್ನರ್ ಹೆಸರು ಅಗ್ರಸ್ಥಾನದಲ್ಲಿದೆ. ಸನ್​ರೈಸರ್ಸ್ ಹೈದರಾಬಾದ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ಪರ ಕಣಕ್ಕಿಳಿದಿರುವ ವಾರ್ನರ್ ಒಟ್ಟು 6565 ರನ್ ಕಲೆಹಾಕಿದ್ದಾರೆ. ಈ ಮೂಲಕ ಐಪಿಎಲ್​ನಲ್ಲಿ ಅತೀ ಹೆಚ್ಚು ರನ್​ಗಳಿಸಿದ ವಿದೇಶಿ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಝಾಹಿರ್ ಯೂಸುಫ್
|

Updated on: Jan 02, 2025 | 12:08 PM

Share
ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಮೆಗಾ ಹರಾಜಿನಲ್ಲಿ ಬಿಕರಿಯಾಗದೇ ಉಳಿದ ಸ್ಟಾರ್ ಆಟಗಾರರಲ್ಲಿ ಡೇವಿಡ್ ವಾರ್ನರ್ ಕೂಡ ಒಬ್ಬರು. 2 ಕೋಟಿ ರೂ. ಮೂಲ ಬೆಲೆ ಘೋಷಿಸಿದ್ದ ವಾರ್ನರ್ ಅವರನ್ನು ಯಾವುದೇ ಫ್ರಾಂಚೈಸಿ ಖರೀದಿಸಿರಲಿಲ್ಲ. ಇತ್ತ ಐಪಿಎಲ್​ನಲ್ಲಿ ಅವಕಾಶ ಕೈ ತಪ್ಪುತ್ತಿದ್ದಂತೆ ವಾರ್ನರ್ ಪಿಎಸ್​ಎಲ್​ನತ್ತ ಮುಖ ಮಾಡಲು ನಿರ್ಧರಿಸಿದ್ದಾರೆ.

ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಮೆಗಾ ಹರಾಜಿನಲ್ಲಿ ಬಿಕರಿಯಾಗದೇ ಉಳಿದ ಸ್ಟಾರ್ ಆಟಗಾರರಲ್ಲಿ ಡೇವಿಡ್ ವಾರ್ನರ್ ಕೂಡ ಒಬ್ಬರು. 2 ಕೋಟಿ ರೂ. ಮೂಲ ಬೆಲೆ ಘೋಷಿಸಿದ್ದ ವಾರ್ನರ್ ಅವರನ್ನು ಯಾವುದೇ ಫ್ರಾಂಚೈಸಿ ಖರೀದಿಸಿರಲಿಲ್ಲ. ಇತ್ತ ಐಪಿಎಲ್​ನಲ್ಲಿ ಅವಕಾಶ ಕೈ ತಪ್ಪುತ್ತಿದ್ದಂತೆ ವಾರ್ನರ್ ಪಿಎಸ್​ಎಲ್​ನತ್ತ ಮುಖ ಮಾಡಲು ನಿರ್ಧರಿಸಿದ್ದಾರೆ.

1 / 5
ಹೌದು, ಐಪಿಎಲ್​ನಲ್ಲಿ ಅನ್​ಸೋಲ್ಡ್ ಆಗಿರುವ ಡೇವಿಡ್ ವಾರ್ನರ್ ಮುಂಬರುವ ಪಾಕಿಸ್ತಾನ್ ಸೂಪರ್ ಲೀಗ್​ಗಾಗಿ ಹೆಸರು ನೀಡಿದ್ದಾರೆ. ಪಿಎಸ್​ಎಲ್​ 2025ರ ಡ್ರಾಫ್ಟ್ ಪಟ್ಟಿಯಲ್ಲಿ ವಾರ್ನರ್ ಹೆಸರು ಕಾಣಿಸಿಕೊಂಡಿದ್ದು, ಈ ಮೂಲಕ ಪಾಕ್​ನಲ್ಲಿ ಟಿ20 ಲೀಗ್​ ಆಡಲು ಸಜ್ಜಾಗಿ ನಿಂತಿದ್ದಾರೆ.

ಹೌದು, ಐಪಿಎಲ್​ನಲ್ಲಿ ಅನ್​ಸೋಲ್ಡ್ ಆಗಿರುವ ಡೇವಿಡ್ ವಾರ್ನರ್ ಮುಂಬರುವ ಪಾಕಿಸ್ತಾನ್ ಸೂಪರ್ ಲೀಗ್​ಗಾಗಿ ಹೆಸರು ನೀಡಿದ್ದಾರೆ. ಪಿಎಸ್​ಎಲ್​ 2025ರ ಡ್ರಾಫ್ಟ್ ಪಟ್ಟಿಯಲ್ಲಿ ವಾರ್ನರ್ ಹೆಸರು ಕಾಣಿಸಿಕೊಂಡಿದ್ದು, ಈ ಮೂಲಕ ಪಾಕ್​ನಲ್ಲಿ ಟಿ20 ಲೀಗ್​ ಆಡಲು ಸಜ್ಜಾಗಿ ನಿಂತಿದ್ದಾರೆ.

2 / 5
ಇಂಟ್ರೆಸ್ಟಿಂಗ್ ವಿಷಯ ಎಂದರೆ 2019 ರಲ್ಲಿ ಪಾಕಿಸ್ತಾನ್ ಸೂಪರ್​ ಲೀಗ್​ಗೆ ಡೇವಿಡ್ ವಾರ್ನರ್ ಅವರನ್ನು ಆಯ್ಕೆ ಮಾಡಲಾಗಿತ್ತು. ಆದರೆ ಐಪಿಎಲ್​ ಕಾರಣ ಆಸೀಸ್ ದಾಂಡಿಗ ಪಿಎಸ್​ಎಲ್​ನಿಂದ ಹಿಂದೆ ಸರಿದಿದ್ದರು. ಇದೀಗ ಐಪಿಎಲ್​​ನಲ್ಲಿ ಅವಕಾಶ ಸಿಗದ ಹಿನ್ನಲೆ ಪಾಕಿಸ್ತಾನ್ ಸೂಪರ್​ ಲೀಗ್​ನತ್ತ ಮುಖ ಮಾಡಿದ್ದಾರೆ.

ಇಂಟ್ರೆಸ್ಟಿಂಗ್ ವಿಷಯ ಎಂದರೆ 2019 ರಲ್ಲಿ ಪಾಕಿಸ್ತಾನ್ ಸೂಪರ್​ ಲೀಗ್​ಗೆ ಡೇವಿಡ್ ವಾರ್ನರ್ ಅವರನ್ನು ಆಯ್ಕೆ ಮಾಡಲಾಗಿತ್ತು. ಆದರೆ ಐಪಿಎಲ್​ ಕಾರಣ ಆಸೀಸ್ ದಾಂಡಿಗ ಪಿಎಸ್​ಎಲ್​ನಿಂದ ಹಿಂದೆ ಸರಿದಿದ್ದರು. ಇದೀಗ ಐಪಿಎಲ್​​ನಲ್ಲಿ ಅವಕಾಶ ಸಿಗದ ಹಿನ್ನಲೆ ಪಾಕಿಸ್ತಾನ್ ಸೂಪರ್​ ಲೀಗ್​ನತ್ತ ಮುಖ ಮಾಡಿದ್ದಾರೆ.

3 / 5
ಅದರಂತೆ ಇದೀಗ 5 ವರ್ಷಗಳ ಬಳಿಕ ಪಾಕಿಸ್ತಾನ್ ಸೂಪರ್ ಲೀಗ್ ಡ್ರಾಫ್ಟ್ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಡೇವಿಡ್ ವಾರ್ನರ್ ಅವರನ್ನು ಮುಂದಿನ ಸೀಸನ್​ಗಾಗಿ ಯಾವ ತಂಡ ಆಯ್ಕೆ ಮಾಡಲಿದೆ ಎಂಬುದನ್ನು ಕಾದು ನೋಡಬೇಕಿದೆ. ಹೀಗೆ ಆಯ್ಕೆಯಾದರೆ ಈ ಬಾರಿಯ ಐಪಿಎಲ್​ ಅವಧಿಯಲ್ಲಿ ಡೇವಿಡ್ ವಾರ್ನರ್ ಪಾಕ್​ನಲ್ಲಿ ಪಿಎಸ್​ಎಲ್​ನಲ್ಲಿ ಕಣಕ್ಕಿಳಿಯುವುದನ್ನು ನೋಡಬಹುದು.

ಅದರಂತೆ ಇದೀಗ 5 ವರ್ಷಗಳ ಬಳಿಕ ಪಾಕಿಸ್ತಾನ್ ಸೂಪರ್ ಲೀಗ್ ಡ್ರಾಫ್ಟ್ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಡೇವಿಡ್ ವಾರ್ನರ್ ಅವರನ್ನು ಮುಂದಿನ ಸೀಸನ್​ಗಾಗಿ ಯಾವ ತಂಡ ಆಯ್ಕೆ ಮಾಡಲಿದೆ ಎಂಬುದನ್ನು ಕಾದು ನೋಡಬೇಕಿದೆ. ಹೀಗೆ ಆಯ್ಕೆಯಾದರೆ ಈ ಬಾರಿಯ ಐಪಿಎಲ್​ ಅವಧಿಯಲ್ಲಿ ಡೇವಿಡ್ ವಾರ್ನರ್ ಪಾಕ್​ನಲ್ಲಿ ಪಿಎಸ್​ಎಲ್​ನಲ್ಲಿ ಕಣಕ್ಕಿಳಿಯುವುದನ್ನು ನೋಡಬಹುದು.

4 / 5
ಅಂದಹಾಗೆ ಡೇವಿಡ್ ವಾರ್ನರ್ ಐಪಿಎಲ್ ಇತಿಹಾಸದ ಅತ್ಯಂತ ಯಶಸ್ವಿ ವಿದೇಶಿ ಆಟಗಾರ ಎಂಬುದು ವಿಶೇಷ. ಡೆಲ್ಲಿ ಕ್ಯಾಪಿಟಲ್ಸ್, ಸನ್​ರೈಸರ್ಸ್ ಹೈದರಾಬಾದ್ ಪರ ಕಣಕ್ಕಿಳಿದಿರುವ ವಾರ್ನರ್ 184 ಪಂದ್ಯಗಳನ್ನಾಡಿದ್ದು, ಈ ವೇಳೆ 4 ಶತಕ ಹಾಗೂ 62 ಅರ್ಧಶತಕಗಳೊಂದಿಗೆ ಒಟ್ಟು 6565 ರನ್ ಕಲೆಹಾಕಿದ್ದಾರೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲಿ ಅತ್ಯಧಿಕ ರನ್ ಗಳಿಸಿದ ವಿದೇಶಿ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಅಂದಹಾಗೆ ಡೇವಿಡ್ ವಾರ್ನರ್ ಐಪಿಎಲ್ ಇತಿಹಾಸದ ಅತ್ಯಂತ ಯಶಸ್ವಿ ವಿದೇಶಿ ಆಟಗಾರ ಎಂಬುದು ವಿಶೇಷ. ಡೆಲ್ಲಿ ಕ್ಯಾಪಿಟಲ್ಸ್, ಸನ್​ರೈಸರ್ಸ್ ಹೈದರಾಬಾದ್ ಪರ ಕಣಕ್ಕಿಳಿದಿರುವ ವಾರ್ನರ್ 184 ಪಂದ್ಯಗಳನ್ನಾಡಿದ್ದು, ಈ ವೇಳೆ 4 ಶತಕ ಹಾಗೂ 62 ಅರ್ಧಶತಕಗಳೊಂದಿಗೆ ಒಟ್ಟು 6565 ರನ್ ಕಲೆಹಾಕಿದ್ದಾರೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲಿ ಅತ್ಯಧಿಕ ರನ್ ಗಳಿಸಿದ ವಿದೇಶಿ ಬ್ಯಾಟರ್ ಎನಿಸಿಕೊಂಡಿದ್ದಾರೆ.

5 / 5
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌