AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಫೋಟೋದಲ್ಲಿರುವ ಇಬ್ಬರು ಸ್ಟಾರ್ ಆಟಗಾರರನ್ನು ಗುರುತಿಸಬಲ್ಲಿರಾ?

Ashes Series 2021-22: ಯುವರಾಜ್ ಸಿಂಗ್-ಮೊಹಮ್ಮದ್ ಕೈಫ್, ವಿರಾಟ್ ಕೊಹ್ಲಿ- ರವೀಂದ್ರ ಜಡೇಜಾ ಅಂಡರ್​ 19 ತಂಡಗಳಿಂದಲೇ ಜೊತೆಯಾಗಿ ಕಾಣಿಸಿಕೊಂಡು ನಂತರ ಟೀಮ್ ಇಂಡಿಯಾಗೆ ಎಂಟ್ರಿ ಕೊಟ್ಟಿದ್ದರು.

TV9 Web
| Updated By: ಝಾಹಿರ್ ಯೂಸುಫ್

Updated on: Jan 15, 2022 | 4:49 PM

ಕ್ರಿಕೆಟ್​ ಅಂಗಳದಲ್ಲಿ ಬಾಲ್ಯದಲ್ಲಿ ಜೊತೆಯಾಗಿ ಇನಿಂಗ್ಸ್​ ಆರಂಭಿಸಿ ಆ ಬಳಿಕ ರಾಷ್ಟ್ರೀಯ ತಂಡದ ಪರ ಆಡಿದ ಕೆಲವೇ ಕೆಲವು ಆಟಗಾರರು ಮಾತ್ರ ಕಾಣ ಸಿಗುತ್ತಾರೆ. ಈ ಪಟ್ಟಿಯಲ್ಲಿ ಕೆಎಲ್ ರಾಹುಲ್ ಹಾಗೂ ಮಯಾಂಕ್ ಅಗರ್ವಾಲ್ ಹೆಸರು ಕೂಡ ಇದೆ. ಆದರೆ ಈ ಇಬ್ಬರು ಬಾಲ್ಯದಲ್ಲಿ ಜೊತೆಯಾಗಿ ಆಡಿರಲಿಲ್ಲ. ಇದಾಗ್ಯೂ ಇಬ್ಬರು ರಣಜಿ ಕ್ರಿಕೆಟ್​ನಲ್ಲಿ ಜೊತೆಯಾಗಿ ಆಡಿ ಆ ಬಳಿಕ ಟೀಮ್ ಇಂಡಿಯಾ ಪರ ಇನಿಂಗ್ಸ್​ ಆರಂಭಿಸಿದ್ದರು.

ಕ್ರಿಕೆಟ್​ ಅಂಗಳದಲ್ಲಿ ಬಾಲ್ಯದಲ್ಲಿ ಜೊತೆಯಾಗಿ ಇನಿಂಗ್ಸ್​ ಆರಂಭಿಸಿ ಆ ಬಳಿಕ ರಾಷ್ಟ್ರೀಯ ತಂಡದ ಪರ ಆಡಿದ ಕೆಲವೇ ಕೆಲವು ಆಟಗಾರರು ಮಾತ್ರ ಕಾಣ ಸಿಗುತ್ತಾರೆ. ಈ ಪಟ್ಟಿಯಲ್ಲಿ ಕೆಎಲ್ ರಾಹುಲ್ ಹಾಗೂ ಮಯಾಂಕ್ ಅಗರ್ವಾಲ್ ಹೆಸರು ಕೂಡ ಇದೆ. ಆದರೆ ಈ ಇಬ್ಬರು ಬಾಲ್ಯದಲ್ಲಿ ಜೊತೆಯಾಗಿ ಆಡಿರಲಿಲ್ಲ. ಇದಾಗ್ಯೂ ಇಬ್ಬರು ರಣಜಿ ಕ್ರಿಕೆಟ್​ನಲ್ಲಿ ಜೊತೆಯಾಗಿ ಆಡಿ ಆ ಬಳಿಕ ಟೀಮ್ ಇಂಡಿಯಾ ಪರ ಇನಿಂಗ್ಸ್​ ಆರಂಭಿಸಿದ್ದರು.

1 / 5
ಇನ್ನು ಸಚಿನ್ ತೆಂಡೂಲ್ಕರ್-ವಿನೋದ್ ಕಾಂಬ್ಳಿ ಕೂಡ ಬಾಲ್ಯದಲ್ಲಿ ಜೊತೆಯಾಗಿ ಆ ಬಳಿಕ ಟೀಮ್ ಇಂಡಿಯಾವನ್ನು ಪ್ರತಿನಿಧಿಸಿದ್ದರು. ಇನ್ನು ಯುವರಾಜ್ ಸಿಂಗ್-ಮೊಹಮ್ಮದ್ ಕೈಫ್, ವಿರಾಟ್ ಕೊಹ್ಲಿ- ರವೀಂದ್ರ ಜಡೇಜಾ  ಅಂಡರ್​ 19 ತಂಡಗಳಿಂದಲೇ ಜೊತೆಯಾಗಿ ಕಾಣಿಸಿಕೊಂಡು ನಂತರ ಟೀಮ್ ಇಂಡಿಯಾಗೆ ಎಂಟ್ರಿ ಕೊಟ್ಟಿದ್ದರು.

ಇನ್ನು ಸಚಿನ್ ತೆಂಡೂಲ್ಕರ್-ವಿನೋದ್ ಕಾಂಬ್ಳಿ ಕೂಡ ಬಾಲ್ಯದಲ್ಲಿ ಜೊತೆಯಾಗಿ ಆ ಬಳಿಕ ಟೀಮ್ ಇಂಡಿಯಾವನ್ನು ಪ್ರತಿನಿಧಿಸಿದ್ದರು. ಇನ್ನು ಯುವರಾಜ್ ಸಿಂಗ್-ಮೊಹಮ್ಮದ್ ಕೈಫ್, ವಿರಾಟ್ ಕೊಹ್ಲಿ- ರವೀಂದ್ರ ಜಡೇಜಾ ಅಂಡರ್​ 19 ತಂಡಗಳಿಂದಲೇ ಜೊತೆಯಾಗಿ ಕಾಣಿಸಿಕೊಂಡು ನಂತರ ಟೀಮ್ ಇಂಡಿಯಾಗೆ ಎಂಟ್ರಿ ಕೊಟ್ಟಿದ್ದರು.

2 / 5
ಇದಾಗ್ಯೂ ಪುಟ್ಟ ಬಾಲಕರಾಗಿದ್ದಾಗ ಜೊತೆಯಾಗಿ ಆಡಿ ಆ ಬಳಿಕ ರಾಷ್ಟ್ರೀಯ ತಂಡದ ಪರ ಇನಿಂಗ್ಸ್​ ಆರಂಭಿಸಿದ ಅಪರೂಪದ ಕ್ಷಣಕ್ಕೆ ಹೊಬಾರ್ಟ್ ಮೈದಾನ ಸಾಕ್ಷಿಯಾಗಿತ್ತು. ಹೌದು, ಆ್ಯಶಸ್ ಸರಣಿಯ ಕೊನೆಯ ಪಂದ್ಯದಲ್ಲಿ ಆಸ್ಟ್ರೇಲಿಯಾ ಪರ ಡೇವಿಡ್ ವಾರ್ನರ್ ಹಾಗೂ ಉಸ್ಮಾನ್ ಖ್ವಾಜಾ ಇನಿಂಗ್ಸ್ ಆರಂಭಿಸಿದ್ದರು.

ಇದಾಗ್ಯೂ ಪುಟ್ಟ ಬಾಲಕರಾಗಿದ್ದಾಗ ಜೊತೆಯಾಗಿ ಆಡಿ ಆ ಬಳಿಕ ರಾಷ್ಟ್ರೀಯ ತಂಡದ ಪರ ಇನಿಂಗ್ಸ್​ ಆರಂಭಿಸಿದ ಅಪರೂಪದ ಕ್ಷಣಕ್ಕೆ ಹೊಬಾರ್ಟ್ ಮೈದಾನ ಸಾಕ್ಷಿಯಾಗಿತ್ತು. ಹೌದು, ಆ್ಯಶಸ್ ಸರಣಿಯ ಕೊನೆಯ ಪಂದ್ಯದಲ್ಲಿ ಆಸ್ಟ್ರೇಲಿಯಾ ಪರ ಡೇವಿಡ್ ವಾರ್ನರ್ ಹಾಗೂ ಉಸ್ಮಾನ್ ಖ್ವಾಜಾ ಇನಿಂಗ್ಸ್ ಆರಂಭಿಸಿದ್ದರು.

3 / 5
ಈ ಇಬ್ಬರು ಆಟಗಾರರು ಬಾಲ್ಯದಿಂದಲೇ ಜೊತೆಯಾಗಿ ಕ್ರಿಕೆಟ್ ಆಡುತ್ತಾ ಬೆಳೆದವರು ಎಂಬುದು ವಿಶೇಷ. ಹೀಗಾಗಿ ಇಂತಹದೊಂದು ಅಪರೂಪದ ಕ್ಷಣವನ್ನು ಡೇವಿಡ್ ವಾರ್ನರ್ ಹಂಚಿಕೊಂಡಿದ್ದರು. ಉಸ್ಮಾನ್ ಖ್ವಾಜಾ ಜೊತೆಗಿನ ಬಾಲ್ಯದ ಚಿತ್ರವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡ ವಾರ್ನರ್, 90 ರ ದಶಕದಲ್ಲಿ ನಮಗೆ ಎಲ್ಲವೂ ಸುಲಭದಂತೆ ತೋರುತ್ತಿತ್ತು ಉಸ್ಮಾನ್... ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಈ ಇಬ್ಬರು ಆಟಗಾರರು ಬಾಲ್ಯದಿಂದಲೇ ಜೊತೆಯಾಗಿ ಕ್ರಿಕೆಟ್ ಆಡುತ್ತಾ ಬೆಳೆದವರು ಎಂಬುದು ವಿಶೇಷ. ಹೀಗಾಗಿ ಇಂತಹದೊಂದು ಅಪರೂಪದ ಕ್ಷಣವನ್ನು ಡೇವಿಡ್ ವಾರ್ನರ್ ಹಂಚಿಕೊಂಡಿದ್ದರು. ಉಸ್ಮಾನ್ ಖ್ವಾಜಾ ಜೊತೆಗಿನ ಬಾಲ್ಯದ ಚಿತ್ರವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡ ವಾರ್ನರ್, 90 ರ ದಶಕದಲ್ಲಿ ನಮಗೆ ಎಲ್ಲವೂ ಸುಲಭದಂತೆ ತೋರುತ್ತಿತ್ತು ಉಸ್ಮಾನ್... ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

4 / 5
ಈ ಮೂಲಕ ಬಾಲ್ಯದಲ್ಲಿ ಜೊತೆಯಾಗಿ ಆಡಿ, ಅದೇ ಜೋಡಿ ಆಸ್ಟ್ರೇಲಿಯಾ ತಂಡದ ಪರ ಆರಂಭಿಕರಾಗಿ ಕಣಕ್ಕಿಳಿಯುತ್ತಿರುವ ಅಪರೂಪದ ಕ್ಷಣವನ್ನು ಡೇವಿಡ್ ವಾರ್ನರ್ ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದಾರೆ. ಇದೀಗ ಡೇವಿಡ್ ವಾರ್ನರ್ ಹಾಗೂ ಉಸ್ಮಾನ್ ಖ್ವಾಜಾ ಅವರ ಈ ಬಾಲ್ಯದ ಫೋಟೋ ಸಿಕ್ಕಾಪಟ್ಟೆ ವೈರಲ್ ಆಗಿದ್ದು, ಇಬ್ಬರು ಎಡಗೈ ದಾಂಡಿಗರ ಗೆಳೆತನಕ್ಕೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಈ ಮೂಲಕ ಬಾಲ್ಯದಲ್ಲಿ ಜೊತೆಯಾಗಿ ಆಡಿ, ಅದೇ ಜೋಡಿ ಆಸ್ಟ್ರೇಲಿಯಾ ತಂಡದ ಪರ ಆರಂಭಿಕರಾಗಿ ಕಣಕ್ಕಿಳಿಯುತ್ತಿರುವ ಅಪರೂಪದ ಕ್ಷಣವನ್ನು ಡೇವಿಡ್ ವಾರ್ನರ್ ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದಾರೆ. ಇದೀಗ ಡೇವಿಡ್ ವಾರ್ನರ್ ಹಾಗೂ ಉಸ್ಮಾನ್ ಖ್ವಾಜಾ ಅವರ ಈ ಬಾಲ್ಯದ ಫೋಟೋ ಸಿಕ್ಕಾಪಟ್ಟೆ ವೈರಲ್ ಆಗಿದ್ದು, ಇಬ್ಬರು ಎಡಗೈ ದಾಂಡಿಗರ ಗೆಳೆತನಕ್ಕೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

5 / 5
Follow us
ಪುರುಷರು ಸಾಷ್ಟಾಂಗ, ಸ್ತ್ರೀಯರು ಪಂಚಾಂಗ ನಮಸ್ಕಾರ ಏಕೆ ಮಾಡಬೇಕು?
ಪುರುಷರು ಸಾಷ್ಟಾಂಗ, ಸ್ತ್ರೀಯರು ಪಂಚಾಂಗ ನಮಸ್ಕಾರ ಏಕೆ ಮಾಡಬೇಕು?
Daily horoscope: ಈ ರಾಶಿಯವರು ಧಾರ್ಮಿಕ ಕಾರ್ಯಕ್ರಮಗಳಿಗೆ ಭೇಟಿಕೊಡುವರು
Daily horoscope: ಈ ರಾಶಿಯವರು ಧಾರ್ಮಿಕ ಕಾರ್ಯಕ್ರಮಗಳಿಗೆ ಭೇಟಿಕೊಡುವರು
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ