AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Deepak Chahar: ಮಲೇಷ್ಯಾ ಏರ್​ಲೈನ್ಸ್​ಗೆ ಮನಬಂದಂತೆ ಬೈದ ದೀಪಕ್ ಚಹರ್: ಮೊದಲ ಏಕದಿನದಿಂದ ಔಟ್?

India vs Bangladesh ODI: ಭಾರತ ಹಾಗೂ ಬಾಂಗ್ಲಾದೇಶ ನಡುವಣ ಏಕದಿನ ಸರಣಿಗೆ ಕ್ಷಣಗಣನೆ ಶುರುವಾಗಿದೆ. ಆದರೆ, ದೀಪಕ್ ಚಹರ್ ಲಗೇಜ್ ಇನ್ನೂ ತಲುಪಿಲ್ಲ. ಈ ಬಗ್ಗೆ ಕೋಪಗೊಂಡ ಚಹರ್ ಟ್ವಿಟರ್​ನಲ್ಲಿ ಮಲೇಷ್ಯಾ ಏರ್​​ಲೈನ್ಸ್​ನ ಕಳಪೆ ಸೇವೆಯ ಬಗ್ಗೆ ಟ್ವೀಟ್ ಮಾಡಿದ್ದಾರೆ.

TV9 Web
| Edited By: |

Updated on:Dec 03, 2022 | 12:36 PM

Share
ಭಾರತ ಹಾಗೂ ಬಾಂಗ್ಲಾದೇಶ ನಡುವಣ ಏಕದಿನ ಸರಣಿಗೆ ಕ್ಷಣಗಣನೆ ಶುರುವಾಗಿದೆ. ಡಿಸೆಂಬರ್ 4 ಭಾನುವಾರದಂದು ಢಾಕಾದ ಶೇರ್ ಬಾಂಗ್ಲಾ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಮೊದಲ ಏಕದಿನ ಪಂದ್ಯ ಆಯೋಜಿಸಲಾಗಿದೆ. ಆದರೆ, ಇದಕ್ಕೂ ಮುನ್ನ ಟೀಮ್ ಇಂಡಿಯಾಕ್ಕೆ ಒಂದರ ಹಿಂದೆ ಒಂದರಂತೆ ಆಘಾತ ಉಂಟಾಗುತ್ತಿದೆ.

ಭಾರತ ಹಾಗೂ ಬಾಂಗ್ಲಾದೇಶ ನಡುವಣ ಏಕದಿನ ಸರಣಿಗೆ ಕ್ಷಣಗಣನೆ ಶುರುವಾಗಿದೆ. ಡಿಸೆಂಬರ್ 4 ಭಾನುವಾರದಂದು ಢಾಕಾದ ಶೇರ್ ಬಾಂಗ್ಲಾ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಮೊದಲ ಏಕದಿನ ಪಂದ್ಯ ಆಯೋಜಿಸಲಾಗಿದೆ. ಆದರೆ, ಇದಕ್ಕೂ ಮುನ್ನ ಟೀಮ್ ಇಂಡಿಯಾಕ್ಕೆ ಒಂದರ ಹಿಂದೆ ಒಂದರಂತೆ ಆಘಾತ ಉಂಟಾಗುತ್ತಿದೆ.

1 / 8
ಈಗಾಗಲೇ ಅನುಭವಿ ವೇಗಿ ಮೊಹಮ್ಮದ್ ಶಮಿ ಇಂಜುರಿಯಿಂದಾಗಿ ಏಕದಿನ ಸರಣಿಯಿಂದ ಹೊರಬಿದ್ದಿದ್ದಾರೆ. ಇವರ ಜಾಗಕ್ಕೆ ಉಮ್ರಾನ್ ಮಲಿಕ್ ಅವರನ್ನು ಬದಲಿ ಆಟಗಾರನಾಗಿ ಬಿಸಿಸಿಐ ಆಯ್ಕೆ ಮಾಡಿದೆ. ಇದರ ಬೆನ್ನಲ್ಲೇ ಆಲ್ರೌಂಡರ್ ದೀಪಕ್ ಚಹರ್​ಗೂ ದೊಡ್ಡ ಶಾಕ್ ಉಂಟಾಗಿದೆ.

ಈಗಾಗಲೇ ಅನುಭವಿ ವೇಗಿ ಮೊಹಮ್ಮದ್ ಶಮಿ ಇಂಜುರಿಯಿಂದಾಗಿ ಏಕದಿನ ಸರಣಿಯಿಂದ ಹೊರಬಿದ್ದಿದ್ದಾರೆ. ಇವರ ಜಾಗಕ್ಕೆ ಉಮ್ರಾನ್ ಮಲಿಕ್ ಅವರನ್ನು ಬದಲಿ ಆಟಗಾರನಾಗಿ ಬಿಸಿಸಿಐ ಆಯ್ಕೆ ಮಾಡಿದೆ. ಇದರ ಬೆನ್ನಲ್ಲೇ ಆಲ್ರೌಂಡರ್ ದೀಪಕ್ ಚಹರ್​ಗೂ ದೊಡ್ಡ ಶಾಕ್ ಉಂಟಾಗಿದೆ.

2 / 8
ದೀಪಕ್ ಚಹರ್ ಏಕದಿನ ಸರಣಿಗಾಗಿ ಬಾಂಗ್ಲಾದೇಶಕ್ಕೆ ಬಂದಿದ್ದಾರೆ. ಆದರೆ, ಇವರ ಲಗೇಜ್ ಇನ್ನೂ ತಲುಪಿಲ್ಲ. ಈ ಬಗ್ಗೆ ಕೋಪಗೊಂಡ ಚಹರ್ ಟ್ವಿಟರ್​ನಲ್ಲಿ ತಾವು ಪ್ರಯಾಣಿಸಿದ ಮಲೇಷ್ಯಾ ಏರ್​​ಲೈನ್ಸ್​ನ ಕಳಪೆ ಸೇವೆಯ ಬಗ್ಗೆ ಟ್ವೀಟ್ ಮಾಡಿದ್ದಾರೆ.

ದೀಪಕ್ ಚಹರ್ ಏಕದಿನ ಸರಣಿಗಾಗಿ ಬಾಂಗ್ಲಾದೇಶಕ್ಕೆ ಬಂದಿದ್ದಾರೆ. ಆದರೆ, ಇವರ ಲಗೇಜ್ ಇನ್ನೂ ತಲುಪಿಲ್ಲ. ಈ ಬಗ್ಗೆ ಕೋಪಗೊಂಡ ಚಹರ್ ಟ್ವಿಟರ್​ನಲ್ಲಿ ತಾವು ಪ್ರಯಾಣಿಸಿದ ಮಲೇಷ್ಯಾ ಏರ್​​ಲೈನ್ಸ್​ನ ಕಳಪೆ ಸೇವೆಯ ಬಗ್ಗೆ ಟ್ವೀಟ್ ಮಾಡಿದ್ದಾರೆ.

3 / 8
''ಮಲೇಷ್ಯಾ ಏರ್​​ಲೈನ್ಸ್​ನಲ್ಲಿ ಪ್ರಯಾಣ ಮಾಡಿದ ನನಗೆ ಕೆಟ್ಟ ಅನುಭವವಾಗಿದೆ. ಮೊದಲಿಗೆ ನಮ್ಮ ಗಮನಕ್ಕೇ ತರದೆ ಫ್ಲೈಟ್ ಅನ್ನು ಬದಲಾಯಿಸಿದರು. ಬ್ಯುಸಿನೆಸ್ ಕ್ಲಾಸ್​ನಲ್ಲಿ ಬಂದಿದ್ದರೂ ಯಾವುದೇ ತಿಂಡಿಗಳು ಇರಲಿಲ್ಲ. ಈಗ ಕಳೆದ 24 ಗಂಟೆಗಳಿಂದ ನನ್ನ ಲಗೆಜ್​ಗಾಗಿ ಕಾಯುತ್ತಿದ್ದೇನೆ. ಯೋಚಿಸಿ ನಾವು ನಾಳೆ ಮೊದಲ ಏಕದಿನ ಪಂದ್ಯವನ್ನು ಆಡಬೇಕಿದೆ,'' ಎಂದು ಬರೆದುಕೊಂಡಿದ್ದಾರೆ.

''ಮಲೇಷ್ಯಾ ಏರ್​​ಲೈನ್ಸ್​ನಲ್ಲಿ ಪ್ರಯಾಣ ಮಾಡಿದ ನನಗೆ ಕೆಟ್ಟ ಅನುಭವವಾಗಿದೆ. ಮೊದಲಿಗೆ ನಮ್ಮ ಗಮನಕ್ಕೇ ತರದೆ ಫ್ಲೈಟ್ ಅನ್ನು ಬದಲಾಯಿಸಿದರು. ಬ್ಯುಸಿನೆಸ್ ಕ್ಲಾಸ್​ನಲ್ಲಿ ಬಂದಿದ್ದರೂ ಯಾವುದೇ ತಿಂಡಿಗಳು ಇರಲಿಲ್ಲ. ಈಗ ಕಳೆದ 24 ಗಂಟೆಗಳಿಂದ ನನ್ನ ಲಗೆಜ್​ಗಾಗಿ ಕಾಯುತ್ತಿದ್ದೇನೆ. ಯೋಚಿಸಿ ನಾವು ನಾಳೆ ಮೊದಲ ಏಕದಿನ ಪಂದ್ಯವನ್ನು ಆಡಬೇಕಿದೆ,'' ಎಂದು ಬರೆದುಕೊಂಡಿದ್ದಾರೆ.

4 / 8
ದೀಪಕ್ ಚಹರ್ ಕಿಟ್ ಹಾಗೂ ಎಲ್ಲ ಸಾಮಗ್ರಿಗಳು ಇನ್ನೂ ಅವರ ಕೈಸೇರಿಲ್ಲ. ಹೀಗಾಗಿ ಅಭ್ಯಾಸ ಕೂಡ ಮಾಡಲು ಸಾಧ್ಯವಾಗಿಲ್ಲ. ಇಂದುಕೂಡ ಅವರ ಲಗೆಜ್ ಬಾರದಿದ್ದಲ್ಲಿ ಮೊದಲ ಏಕದಿನ ಪಂದ್ಯದಲ್ಲಿ ಆಡುವುದು ಅನುಮಾನ ಎನ್ನಲಾಗುತ್ತಿದೆ. ಚಹರ್ ಟ್ವೀಟ್​ಗೆ ಟ್ವಿಟರ್​ನಲ್ಲಿ ಸಾಕಷ್ಟು ಪ್ರತಿಕ್ರಿಯೆಗಳು ಕೇಳಿಬರುತ್ತಿದೆ.

ದೀಪಕ್ ಚಹರ್ ಕಿಟ್ ಹಾಗೂ ಎಲ್ಲ ಸಾಮಗ್ರಿಗಳು ಇನ್ನೂ ಅವರ ಕೈಸೇರಿಲ್ಲ. ಹೀಗಾಗಿ ಅಭ್ಯಾಸ ಕೂಡ ಮಾಡಲು ಸಾಧ್ಯವಾಗಿಲ್ಲ. ಇಂದುಕೂಡ ಅವರ ಲಗೆಜ್ ಬಾರದಿದ್ದಲ್ಲಿ ಮೊದಲ ಏಕದಿನ ಪಂದ್ಯದಲ್ಲಿ ಆಡುವುದು ಅನುಮಾನ ಎನ್ನಲಾಗುತ್ತಿದೆ. ಚಹರ್ ಟ್ವೀಟ್​ಗೆ ಟ್ವಿಟರ್​ನಲ್ಲಿ ಸಾಕಷ್ಟು ಪ್ರತಿಕ್ರಿಯೆಗಳು ಕೇಳಿಬರುತ್ತಿದೆ.

5 / 8
ದೀಪಕ್ ಚಹರ್ ಟ್ವೀಟ್ ಬೆನ್ನಲ್ಲೇ ಮಲೇಷ್ಯಾ ಏರ್​​ಲೈನ್ಸ್​ ಇದಕ್ಕೆ ಪ್ರತಿಕ್ರಿಯೆ ನೀಡಿದ್ದು ಕ್ಷಮೆ ಕೋರಿದೆ. ''ನಮ್ಮನ್ನು ಸಂಪರ್ಕಿಸಿದ್ದಕ್ಕೆ ಧನ್ಯವಾದ. ನಿಮಗೆ ಈರೀತಿಯ ಅನುಭವ ಆಗಿದ್ದಕ್ಕೆ ಕ್ಷಮೆ ಕೋರುತ್ತೇವೆ. ಮಲೇಷಿಯಾ ಏರ್‌ಲೈನ್ಸ್​ನ ಎಲ್ಲಾ ವಿಮಾನಗಳು ಸರಿಯಾದ ಸಮಯಕ್ಕೆ ಕಾರ್ಯನಿರ್ವಹಿಸುತ್ತದೆಯೇ ಎಂದು ಖಚಿತಪಡಿಸಿಕೊಳ್ಳಲು ನಮ್ಮ ಕೈಲಾದಷ್ಟು ಪ್ರಯತ್ನಿಸುತ್ತೇವೆ. ಆದಾಗ್ಯೂ, ನಮ್ಮ ತಂಡದಿಂದ ತಪ್ಪಾಗಿದೆ,'' ಎಂದು ಹೇಳಿದೆ.

ದೀಪಕ್ ಚಹರ್ ಟ್ವೀಟ್ ಬೆನ್ನಲ್ಲೇ ಮಲೇಷ್ಯಾ ಏರ್​​ಲೈನ್ಸ್​ ಇದಕ್ಕೆ ಪ್ರತಿಕ್ರಿಯೆ ನೀಡಿದ್ದು ಕ್ಷಮೆ ಕೋರಿದೆ. ''ನಮ್ಮನ್ನು ಸಂಪರ್ಕಿಸಿದ್ದಕ್ಕೆ ಧನ್ಯವಾದ. ನಿಮಗೆ ಈರೀತಿಯ ಅನುಭವ ಆಗಿದ್ದಕ್ಕೆ ಕ್ಷಮೆ ಕೋರುತ್ತೇವೆ. ಮಲೇಷಿಯಾ ಏರ್‌ಲೈನ್ಸ್​ನ ಎಲ್ಲಾ ವಿಮಾನಗಳು ಸರಿಯಾದ ಸಮಯಕ್ಕೆ ಕಾರ್ಯನಿರ್ವಹಿಸುತ್ತದೆಯೇ ಎಂದು ಖಚಿತಪಡಿಸಿಕೊಳ್ಳಲು ನಮ್ಮ ಕೈಲಾದಷ್ಟು ಪ್ರಯತ್ನಿಸುತ್ತೇವೆ. ಆದಾಗ್ಯೂ, ನಮ್ಮ ತಂಡದಿಂದ ತಪ್ಪಾಗಿದೆ,'' ಎಂದು ಹೇಳಿದೆ.

6 / 8
ವಿಮಾನದಲ್ಲಿ ಪ್ರಯಾಣಿಸುವವರಿಗೆ ಈರೀತಿಯ ಅನುಭವ ಆಗುತ್ತಿರುವುದು ಇದೇ ಮೊದಲೇನಲ್ಲ. ಸಾಮಾನ್ಯ ಪ್ರಯಾಣಿಕರು ಪ್ರತಿದಿನ ಇಂಥಹ ಸಮಸ್ಯೆ ಎದುರಿಸುತ್ತಾರೆ. ಆದರೆ, ಸೆಲೆಬ್ರಿಟಿಗಳು ಈ ಬಗ್ಗೆ ಧ್ವನಿ ಎತ್ತಿ ಹೇಳಿದಾಗ ದೊಡ್ಡ ಮಟ್ಟದಲ್ಲಿ ಸುದ್ದಿಯಾಗುತ್ತದೆ.

ವಿಮಾನದಲ್ಲಿ ಪ್ರಯಾಣಿಸುವವರಿಗೆ ಈರೀತಿಯ ಅನುಭವ ಆಗುತ್ತಿರುವುದು ಇದೇ ಮೊದಲೇನಲ್ಲ. ಸಾಮಾನ್ಯ ಪ್ರಯಾಣಿಕರು ಪ್ರತಿದಿನ ಇಂಥಹ ಸಮಸ್ಯೆ ಎದುರಿಸುತ್ತಾರೆ. ಆದರೆ, ಸೆಲೆಬ್ರಿಟಿಗಳು ಈ ಬಗ್ಗೆ ಧ್ವನಿ ಎತ್ತಿ ಹೇಳಿದಾಗ ದೊಡ್ಡ ಮಟ್ಟದಲ್ಲಿ ಸುದ್ದಿಯಾಗುತ್ತದೆ.

7 / 8
ಬಾಂಗ್ಲಾದೇಶ ವಿರುದ್ಧ ಭಾರತ ಮೂರು ಪಂದ್ಯಗಳ ಏಕದಿನ ಮತ್ತು ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿದೆ. ಡಿಸೆಂಬರ್ 4 ರಂದು ಮೊದಲ ಏಕದಿನ ಪಂದ್ಯ ನಡೆಯಲಿದೆ. ರೋಹಿತ್ ಶರ್ಮಾ ನಾಯಕನಾಗಿ ತಂಡವನ್ನು ಮುನ್ನಡೆಸುತ್ತಿದ್ದು ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಧವನ್​ರಂತಹ ಸ್ಟಾರ್ ಆಟಗಾರರಿದ್ದಾರೆ. ಈ ಸರಣಿಯಿಂದ ಆಲ್ರೌಂಡರ್ ಹಾರ್ದಿಕ್ ಪಾಂಡ್ಯಗೆ ವಿಶ್ರಾಂತಿ ನೀಡಲಾಗಿದೆ.

ಬಾಂಗ್ಲಾದೇಶ ವಿರುದ್ಧ ಭಾರತ ಮೂರು ಪಂದ್ಯಗಳ ಏಕದಿನ ಮತ್ತು ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿದೆ. ಡಿಸೆಂಬರ್ 4 ರಂದು ಮೊದಲ ಏಕದಿನ ಪಂದ್ಯ ನಡೆಯಲಿದೆ. ರೋಹಿತ್ ಶರ್ಮಾ ನಾಯಕನಾಗಿ ತಂಡವನ್ನು ಮುನ್ನಡೆಸುತ್ತಿದ್ದು ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಧವನ್​ರಂತಹ ಸ್ಟಾರ್ ಆಟಗಾರರಿದ್ದಾರೆ. ಈ ಸರಣಿಯಿಂದ ಆಲ್ರೌಂಡರ್ ಹಾರ್ದಿಕ್ ಪಾಂಡ್ಯಗೆ ವಿಶ್ರಾಂತಿ ನೀಡಲಾಗಿದೆ.

8 / 8

Published On - 12:36 pm, Sat, 3 December 22

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ